Homeಮುಖಪುಟಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

ಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ಮಾಹಿತಿ ತಂತ್ರಜ್ಞಾನ ನಿಯಮಗಳು, 2021ಕ್ಕೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮತ್ತು ಬಿಬಿಸಿ ಸಾಕ್ಷ್ಯಚಿತ್ರ ತಡೆಗೆ ಐಟಿ ನಿಯಮಗಳ ಅಡಿಯಲ್ಲಿನ ತುರ್ತು ಅಧಿಕಾರವನ್ನು ದುಪಯೋಗ ಮಾಡಿಕೊಂಡಿರುವುದನ್ನು ಖಂಡಿಸಿ ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್‌ಎಜೆ) ಮತ್ತು ದೆಹಲಿ ಪತ್ರಕರ್ತರ ಒಕ್ಕೂಟ (ಡಿಯುಜೆ) ಜಂಟಿ ಹೇಳಿಕೆ ನೀಡಿವೆ.

ಡಿಯುಜೆ ಅಧ್ಯಕ್ಷ ಎಸ್.ಕೆ.ಪಾಂಡೆ ಮತ್ತು ಪ್ರಧಾನ ಕಾರ್ಯದರ್ಶಿ ಸುಜಾತಾ ಮಾಧೋಕ್, ಎನ್‌ಎಜೆ ಪ್ರಧಾನ ಕಾರ್ಯದರ್ಶಿ ಎನ್. ಕೊಂಡಯ್ಯ, ಆಂಧ್ರಪ್ರದೇಶ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಎಪಿಡಬ್ಲ್ಯುಜೆಎಫ್‌) ಪ್ರಧಾನ ಕಾರ್ಯದರ್ಶಿ ಜಿ.ಆಂಜನೇಯುಲು ಅವರು ಸರ್ಕಾರದ ನಿಲುವುಗಳನ್ನು ಖಂಡಿಸಿದ್ದು, “ತುರ್ತು ಪರಿಸ್ಥಿತಿ ಕಾಲದ ಕ್ರಮಗಳನ್ನು ಜರುಗಿಸಲು ಸಾಧ್ಯವಿಲ್ಲ; ಪ್ರೆಸ್‌ ಇನ್ಫಾರ್ಮೆಷನ್ ಬ್ಯೂರೊ (ಪಿಐಬಿ) ಎಂದಿಗೂ ಪೊಲೀಸ್ ಇನ್‌ಫಾರ್ಮೆಷನ್ ಬ್ಯುರೊ ಆಗಿ ಬದಲಾಗಬಾರದು” ಎಂದು ಎಚ್ಚರಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಸರ್ಕಾರದ ಘಟಕವಾದ ‘ಪಿಐಬಿ’ ಯಾವ ಸುದ್ದಿಯನ್ನು ನಕಲಿ ಎನ್ನುತ್ತದೆಯೋ ಅದನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕಾನೂನು ತರಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಟಿದೆ.

“ಮಾಧ್ಯಮಗಳಿಗೆ ಸರ್ಕಾರಿ ಸುದ್ದಿಗಳನ್ನು ಒದಗಿಸುವುದು ಪಿಐಬಿಯ ಕೆಲಸವಾಗಿದೆ. ಆ ಜವಾಬ್ದಾರಿಯಲ್ಲಿಯೇ ಮುಂದುವರಿಯಬೇಕು. ಮಾಧ್ಯಮಗಳ ಮೇಲೆ ನಿಗಾ ಇಡುವುದು, ಸೆನ್ಸಾರ್ ಮಾಡುವುದು ಮತ್ತು ಸರ್ಕಾರಕ್ಕೆ ಅನನುಕೂಲಕರವಾದ ಯಾವುದೇ ಮಾಹಿತಿಯನ್ನು ‘ನಕಲಿ ಸುದ್ದಿ’ ಎಂದು ಗುರುತಿಸುವ ಕೆಲಸವನ್ನು ಪಿಐಪಿ ಮಾಡುವುದಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ನಡೆಯನ್ನು ‘ವಿಷಾದನೀಯ’ ಎಂದು ಪತ್ರಕರ್ತ ಸಂಸ್ಥೆಗಳು ಬಣ್ಣಿಸಿವೆ.

“ಮಾಧ್ಯಮ ವ್ಯಕ್ತಿಗಳಿಗೆ ಸರ್ಕಾರದ ಅಧಿಕೃತ ಮಾಹಿತಿಗಳನ್ನು ಸುಲಭವಾಗಿ ದೊರಕಿಸುವುದು ಪಿಐಬಿಯ ಕೆಲಸವಾಗಿದೆ. ಸರ್ಕಾರಿ ವಿಷಯಗಳ ಬಗ್ಗೆ ಮಾನ್ಯತೆ ಪಡೆದ ವಿಶೇಷ ವರದಿಗಾರರು ಕೇಳಿದಾಗ ಪಿಐಬಿ ಕೆಲವು ಸಂದರ್ಭಗಳಲ್ಲಿ ನಿರಾಕರಿಸಿರುವುದು ಆಘಾತಕಾರಿಯಾಗಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಐಟಿ ನಿಯಮಗಳು, 2021ರ ಕರಡು ತಿದ್ದುಪಡಿಗಳನ್ನು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ. “ಇದು ಅತ್ಯಂತ ಅನಿಯಂತ್ರಿತ ಮತ್ತು ಏಕಪಕ್ಷೀಯ” ಎಂದು ಬಣ್ಣಿಸಿವೆ.

ಇದಲ್ಲದೆ, ಐಟಿ ನಿಯಮಗಳಿಗೆ ತರುತ್ತಿರುವ ಇತ್ತೀಚಿನ ತಿದ್ದುಪಡಿಯು ಪಿಐಬಿ ಮಾತ್ರವಲ್ಲದೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೆನ್ಸಾರ್‌ಶಿಪ್ ಅಧಿಕಾರವನ್ನು ನೀಡುತ್ತಿದೆ. ಇವುಗಳು ಆಕ್ಷೇಪಿಸಿದ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ತೆಗೆದುಹಾಕಬೇಕಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಇದು ಸಣ್ಣ, ಸ್ವತಂತ್ರ ಡಿಜಿಟಲ್ ಮಾಧ್ಯಮಗಳನ್ನು ಸೆನ್ಸಾರ್ ಮಾಡುವ ಗುರಿಯನ್ನು ಹೊಂದಿರುವ ಕ್ರಮವೆಂದು ತೋರುತ್ತದೆ” ಎಂದು ಪತ್ರಿಕಾ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಒಕ್ಕೂಟಗಳ ಮೇಲೆ ಹೆಚ್ಚುತ್ತಿರುವ ದಾಳಿಯಿಂದ ತೀವ್ರವಾಗಿ ನೊಂದಿರುವುದಾಗಿ ಪತ್ರಕರ್ತರ ಸಂಸ್ಥೆಗಳು ತಿಳಿಸಿವೆ. “ಇದು ಪತ್ರಿಕಾ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಮೇಲಿನ ನಿರಂತರ ದಾಳಿಯ ಭಾಗವಾಗಿದೆ” ಎಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...