Homeಅಂಕಣಗಳುಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

- Advertisement -
- Advertisement -

ಈನಾಡಿಗೆ ದುಃಖಕರವಾದ ಸಂಗತಿಯೊಂದು ಹೊರಬಿದ್ದಿದೆಯಲ್ಲಾ. ನಮ್ಮ ಧೀಮಂತ ನಾಯಕ ಎಡೂರಪ್ಪನವರು ವಿಧಾನಸಭಾ ಅಧಿವೇಶನದಲ್ಲಿ ತಮ್ಮ ಕಡೆಯ ಭಾಷಣವನ್ನು ಭಾವುಕವಾಗಿ ಮುಗಿಸಿ ದುಃಖತಪ್ತ ನಡಿಗೆಯಿಂದ ಹೊರನಡೆದಿದ್ದಾರೆ. ಅವರ ಜೊತೆ ಕರ್ನಾಟಕ ಕಂಡ ಅತ್ಯಂತ ದಕ್ಷ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಎಡೂರಪ್ಪನ ವಾಹನದವರೆಗೂ ಕಂಪನಿ ಕೊಟ್ಟಿರುವುದು ವಿಶೇಷ. ಎಡೂರಪ್ಪನವರ ಆಡಳಿತ ಅವಧಿಯ ದಾಖಲೆಗಳಲ್ಲಿ ಮೊದಲನೆಯದು ಯಾವುದೆಂದರೆ ತಾವು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಪಡೆದ ಚಿಲ್ಲರೆ ಕಾಣಿಕೆಯನ್ನು ಚೆಕ್ ಮುಖಾಂತರ ಪಡೆದ ಆರೋಪದಲ್ಲಿ ಜೈಲಿಗೆ ಹೋದದ್ದು ಮತ್ತು ಜೈಲಿನಿಂದ ಹೊರಬಂದದ್ದು; ಬಿಡುಗಡೆಯಾದಾಗ ಅವರ ಮನೆಯವರು ಚಪ್ಪಾಳೆ ಹೊಡೆದು ಕುಣಿದದ್ದು ಇದೇ ಬಿಜೆಪಿ ಜನರ ಸಂತಸವಾಗಿ ಪ್ರಕಟವಾಯ್ತು. ಏಕೆಂದರೆ ಎಡೂರಪ್ಪ ಮಾತ್ರ ನಮ್ಮನ್ನ ಗೆಲ್ಲಿಸಬಲ್ಲರು ಎಂದು ತಿಳಿದಿದ್ದ ಕುಲಬಾಂಧವರಿಗೆ ಅವರ ಬಿಡುಗಡೆ ಸಂಭ್ರಮವುಂಟು ಮಾಡಿದ್ದು ಸಹಜ. ಆದರೇನು ಎಡೂರಪ್ಪ ಬಿಜೆಪಿಯಿಂದ ಸಿಡಿದು ಕೆಜಿಪಿ ಮಾಡಿಕೊಂಡು ಬಿಜೆಪಿಯನ್ನ ಮಕಾಡೆ ಮಲಗಿಸಿದ್ದು ಈಗ ಇತಿಹಾಸ. ಎಡೂರಪ್ಪನವರ ಶಕ್ತಿಯರಿತ ಬಿಜೆಪಿಗಳು ಮತ್ತೆ ಪಾರ್ಟಿಗೆ ಸೇರಿಸಿಕೊಂಡು ಕಾಂಗೈ ಮತ್ತು ಜೆಡಿಎಸ್‌ನಿಂದ ಮಾರಿಕೊಂಡವರನ್ನು ಕೊಂಡು ಇತಿಹಾಸ ಕಂಡರಿಯದ ಆಡಳಿತ ನೀಡಿದ್ದು ಅಲ್ಲದೆ, ಬೊಮ್ಮಾಯಿಯವರನ್ನು ತಂದು ಕರ್ನಾಟಕದ ಮೇಲೆ ಹೇರಿದ್ದೂ ಒಂದು ದಾಖಲೆಯಂತಲ್ಲಾ, ಥೂತ್ತೇರಿ.

*****

ಹಾಗೆ ನೋಡಿದರೆ ಎಡೂರಪ್ಪನ ಚರಿತ್ರೆ ಇನ್ನೂ ಮುಗಿದಿಲ್ಲ. ’ನಾನು ಸಕ್ರಿಯನಾಗಿ ಈ ನಾಡನ್ನು ತಿರುಗಿ ಪಾರ್ಟಿಯನ್ನು ಪವರ್ರಿಗೆ ತರುತ್ತೇನೆ. ಅದಕ್ಕಾಗಿ ವಿರೋಧಪಕ್ಷದವರ ಸಹಕಾರ ಪಡೆಯುತ್ತೇನೆ’ ಎಂದಿದ್ದಾರೆ. ಎಡೂರಪ್ಪನ ಒಬ್ಬ ಮಗ ಸಂಸದ, ಮತ್ತೊಬ್ಬ ಕೇಸರಿ ಪಾರ್ಟಿಯ ಉಪಾಧ್ಯಕ್ಷ. ಅವರ ಭವಿಷ್ಯ ಬಹಳ ಮುಖ್ಯ ವಿಷಯ. ಇಂತಿರುವಾಗ ಬಿಜೆಪಿಗಳು ವಂಶಾಡಳಿತದ ಬಗ್ಗೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಿಯೇ ಇಲ್ಲ. ಏಕೆಂದರೆ ಸತ್ಯ ಮರೆಮಾಚಿ ಸದಾ ಸುಳ್ಳು ಒದರುವಂತೆ ಆ ಪಾರ್ಟಿಯೇ ಟ್ರೇನಿಂಗ್ ಕೊಟ್ಟಿದೆ. ಆ ಪಾರ್ಟಿಯಿಂದ ಆಗಿರುವ ಪ್ರಧಾನಿಯೇ ಬಹಿರಂಗವಾಗಿ ಹೇಳಿರುವ ಸುಳ್ಳು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ದೆಹಲಿಯ ಕನ್ನಡ ಸಾಂಸ್ಕೃತಿಕ ವೇದಿಕೆಯೊಂದರಲ್ಲಿ, ಕರ್ನಾಟಕಕ್ಕೆ ಅತ್ಯಧಿಕ ಅನುದಾನ ಕೊಟ್ಟಿದ್ದೇನೆ ಎಂದುಬಿಟ್ಟಿದ್ದಾರೆ ಪ್ರಧಾನಿ. ಬೆಚ್ಚಿಬಿದ್ದ ದೆಹಲಿ ಕನ್ನಡಿಗರು ಪ್ರಧಾನಿಯನ್ನ ಮಿಕಮಿಕ ನೋಡಿದರಂತೆ. ಏಕೆಂದರೆ ಕರ್ನಾಟಕ ಇತಿಹಾಸದಲ್ಲೇ ಕಂಡುಕಾಣದಿದ್ದಂತಹ ಪ್ರವಾಹಕ್ಕೆ ಸಿಕ್ಕಿ ತತ್ತರಿಸಿದಾಗ ಇಲ್ಲಿನ ಸರಕಾರ ಕೇಳಿದ 35 ಸಾವಿರ ಕೋಟಿಯ ಬದಲು ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ ನಾಲ್ಕೈದು ಸಾವಿರ ಕೋಟಿ. ಇನ್ನು ಜಿಎಸ್‌ಟಿ ಬಾಬ್ತಿನ ದೊಡ್ಡ ಪಾಲನ್ನ ಕೊಟ್ಟೆ ಇಲ್ಲ. ಕರ್ನಾಟಕವನ್ನ ಕೊಳ್ಳೆ ಹೊಡೆದು ಇತರ ರಾಜ್ಯಗಳಿಗೆ ಹಂಚುವುದನ್ನು ವಿರೋಧಿಸಿ ಬಿಜೆಪಿಗಳೇ ಮಾತನಾಡುತ್ತಿರುವಾಗ ಸತ್ಯದ ತಲೆಮೇಲೆ ಹೊಡೆದಂತೆ ಸುಳ್ಳು ಹೇಳಿದ ಪ್ರಧಾನಿಯನ್ನು ನೋಡಿ ಬಿಜೆಪಿಗಳೇ ದಂಗುಬಡಿದು ತತ್ತರಿಸಿಹೋದರಂತಲ್ಲಾ. ಯಾರದ್ದೇನಾದರೂ ಅಗಲಿ, ನನಗೆ ನನ್ನದೇ ಚಿಂತೆ ಅಂತ, ವೇದಿಕೆ ಮೇಲೆ ಕರೆಯದಿದ್ದಕ್ಕೆ ಸಿಟ್ಟಾದ ಸಾಹಿತ್ಯ ಪರಿಷತ್ ಜೋಶಿಯ ಮಂತ್ರಿ ಸ್ಥಾನಮಾನ ವ್ಯರ್ಥವಾಗಿ ಹೋಯ್ತಂತಲ್ಲ, ಥೂತ್ತೇರಿ.

*****

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬಂತು. ನರೇಂದ್ರ ಮೋದಿಯವರು ನಿಲ್ದಾಣವನ್ನು ಉದ್ಘಾಟಿಸಿದರು. ಆದರೆ ಬಿಜೆಪಿಗಳಿಗೆ ಜನ ಸೇರುವ ಅನುಮಾನ ಮೊದಲೇ ಕಾಡಿದ್ದರಿಂದ ಶಿವಮೊಗ್ಗದ ಬಡಾವಣೆಗಳಿಗೆ ಬಸ್ಸು ಕಳಿಸಿದರು. ಹಳ್ಳಿಹಳ್ಳಿಗೆ ವಾಹನಗಳನ್ನು ಕಳಿಸಿದರು. ಜೊತೆಗೆ ಕೈಗೆ ಕಾಸು ಕೊಟ್ಟು ಊಟ ಕೊಟ್ಟರು. ಆದರೆ, ಶಾಲಾ ಮಕ್ಕಳನ್ನ ತಂದು ಕುರ್ಚಿಗೆ ಕಟ್ಟಿಹಾಕಿದಂತೆ ಕೂರಿಸಿದ್ದು ಮಾತ್ರ ಅಕ್ಷಮ್ಯ ಅಪರಾಧ. ಏಕೆಂದರೆ ಶಾಲೆಯ ಮಕ್ಕಳನ್ನ ಕಳುಹಿಸಲು ಹಿಂಜರಿದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕ್ರಮ ಜರುಗಿಸುವುದಾಗಿ ಬೆದರಿಸಿ ಮಕ್ಕಳನ್ನ ಹಿಂಸೆಗೆ ದೂಡಿದ್ದು ಮಕ್ಕಳ ದ್ವೇಷಿಗಳು ಮಾಡಿದ ಕೆಲಸ. ಏರೊಪ್ಲೇನ್ ನೋಡಿ ಊಟಮಾಡಿ ಬರುವ ಕೆಲಸ ಕೆಲವೇ ಕೆಲವು ಮಕ್ಕಳಿಗೆ ಸಂಭ್ರಮವಾಗಿ ಕಂಡರೂ ಈ ಬಿಜೆಪಿಗಳು ಮಕ್ಕಳ ಮನಸ್ಸನ್ನು ಕೆಡಿಸಲು ಕೈಹಾಕಿರುವುದು ಮಾತ್ರ ಅಕ್ಷಮ್ಯ. ವಾಸ್ತವ ಸ್ಥಿತಿ ಏನೆಂದರೆ ಶಿವಮೊಗ್ಗ ಜಿಲ್ಲೆಯ ಹಲವು ಹಳ್ಳಿಗಳ ಕಾಡುದಾರಿಯಲ್ಲಿ ಮಕ್ಕಳು ಶಾಲೆಗಾಗಿ ನಡೆಯುತ್ತಾರೆ, ಸರಿಯಾದ ರಸ್ತೆಗಳಿಲ್ಲ, ಸರಿಯಾದ ಸಮಯಕ್ಕೆ ಬರುವ ಬಸ್ಸುಗಳಿಲ್ಲ, ಮಲೆನಾಡಿನ ಜೀವನಾಡಿಯಾಗಿದ್ದ ಸಹಕಾರ ಸಾರಿಗೆ ಕಳ್ಳರ ಕೈಗೆ ಸಿಕ್ಕ ಫಲವಾಗಿ ನೂರಾರು ಬಸ್ಸುಗಳು ನಿಂತುಹೋಗಿವೆ.

ಇದನ್ನೂ ಓದಿ: ಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

ಅವುಗಳ ಮೇಲೆ ಗಿಡ ಬೆಳೆದಿದೆ. ವಿಮಾನ ನಿಲ್ದಾಣದ ಉದ್ಘಾಟನೆಗೆ ಖರ್ಚು ಮಾಡಿದ ಕಾಲು ಭಾಗವನ್ನ ವ್ಯಯಿಸಿದ್ದರೆ ಸಹಕಾರ ಸಾರಿಗೆಗೆ ಜೀವ ಬರುತ್ತಿತ್ತು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಖರ್ಚಾದ ಅರ್ಧ ಹಣಕ್ಕೆ ವಿಐಎಸ್‌ಎಲ್ ಸ್ಟೀಲ್ ಫ್ಯಾಕ್ಟರಿ ನಡೆಯುತ್ತಿತ್ತು, ಅದರ ಕಾಲು ಭಾಗಕ್ಕೆ ಎಂಪಿಎಂ ಕಾಗದ ಕಾರ್ಖಾನೆ ಚಾಲು ಆಗುತ್ತಿತ್ತು, ಬಡವರನ್ನು ಕಂಡರಾಗದ ಬಿಜೆಪಿಗಳಿಗೆ ಇವೆಲ್ಲಾ ಹೊಳೆಯುವುದಿಲ್ಲ. ಇದೆಲ್ಲಾ ಏನಾದರಾಗಲಿ, ಇನ್ನುಮುಂದೆ ಎಡೂರಪ್ಪ, ರಾಘವೇಂದ್ರ, ವಿಜ್ಯೇಂದ್ರ, ಈಶ್ವರಪ್ಪ, ಆತನ ಮಗ ಇವರೆಲ್ಲಾ ವಿಮಾನದಲ್ಲೇ ಶಿವಮೊಗ್ಗಕ್ಕೆ ಹೋಗುವುದಂತಲ್ಲಾ, ಥೂತ್ತೇರಿ

*****

ಮುಸ್ಲಿಂ ವಿದ್ವಾಂಸರೊಬ್ಬರು ಬ್ರಾಹ್ಮಣರ ಆಳ್ವಿಕೆಯಲ್ಲಿ ಆ ದೇಶ ಬಲಿಷ್ಠವಾಗುತ್ತದೆ ಎಂದಿದ್ದಾರೆ. ಈ ಮುಸ್ಲಿಂ ವಿದ್ವಾಂಸರ ಅಭದ್ರತೆಯ ಮಾತು ಕನಿಕರವೆನಿಸುತ್ತದೆ. ಮುಸಲ್ಮಾನನೊಬ್ಬ ಬ್ರಾಹ್ಮಣನನ್ನ ಹೊಗಳುವುದು, ಬ್ರಾಹ್ಮಣನು ಮುಸ್ಲಿಮರು ಹೇಗಿರಬೇಕೆಂಬ ಸೂಚನೆ ಕೊಡುವುದೇ ಈ ದೇಶದ ದುರಂತ; ಎಂದಾದರೂ ಬ್ರಾಹ್ಮಣರ ಆಳ್ವಿಕೆಯಲ್ಲಿ ಈ ದೇಶ ಎಂದು ಬಲಿಷ್ಠವಾಗಿತ್ತೇ ಎಂಬ ಬಗ್ಗೆ ಸಾಕ್ಷ್ಯಾಧಾರ ತೋರಿದ್ದರೆ ಚೆನ್ನಾಗಿತ್ತು. ಶತಮಾನಗಳ ಕಾಲ ಜಾತಿಯ ಶ್ರೇಣಿಕರಣದಿಂದ ಬಹುಸಂಖ್ಯಾತ ಶೂದ್ರ-ದಲಿತ ಶಕ್ತಿಯ ಅಂತಃಸತ್ವವೇ ನಾಶವಾಗಿ ಅವರೆಲ್ಲಾ ಗುಲಾಮರಂತೆ ಬದುಕುವಂತಾದಾಗ ವಿದೇಶಿಯರು ಈ ದೇಶಕ್ಕೆ ದಾಳಿ ಮಾಡಿ ಆಳತೊಡಗಿದರು. ಆಗ ’ಬುದ್ಧಿವಂತ’ರಾದ ಬ್ರಾಹ್ಮಣರು ವಿದೇಶಿ ಜನರ ಆಸ್ಥಾನದಲ್ಲಿ ಮಂತ್ರಿಗಳಾಗಿ ಕರಣಿಕರಾಗಿ ಆಸ್ಥಾನದ ವಿದೂಶಕರಾಗಿ ಅರಾಮವಾಗಿರತೊಡಗಿದ್ದು ಈಗ ಇತಿಹಾಸ. ಇನ್ನು ಬ್ರಿಟಿಷರು ಬಂದಾಗ ಇಂಗ್ಲಿಷ್ ಕಲಿತುಕೊಂಡು ಡಿ.ಸಿಗಳಾಗಿ, ಎಸ್ಪಿಗಳಾಗಿ ಬ್ರಿಟಿಷರ ಆಜ್ಞೆಯಂತೆ ನಮ್ಮವರನ್ನೇ ಬಗ್ಗುಬಡಿದು ಸೆರೆವಾಸಕ್ಕೆ ದೂಡಿದವರೂ ಇವರಲ್ಲಿದ್ದರು; ಬ್ರಾಹ್ಮಣ್ಯ ಪ್ರತಿಪಾದಿಸಿದ ಧರ್ಮ, ಅಸ್ಪೃಶ್ಯತೆ ಆಚರಿಸಿದ್ದರಿಂದ, ಅದಕ್ಕೆ ಸಿಕ್ಕಿದ ಜನ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಮೀಸಲಾತಿಯಿಂದ ಅಂತಹವರನ್ನು ಮೇಲೆತ್ತಬೇಕೆಂಬ ಕಾರ್ಯಕ್ರಮಕ್ಕೆ ಕೂಡ ಬೆಂಕಿಹಚ್ಚಿ ಸದ್ದಿಲ್ಲದೆ ಹತ್ತು ಪರಸೆಂಟ್ ಮೀಸಲಾತಿಯನ್ನು ಲಪಟಾಯಿಸಿದ್ದಾರೆ; ದಲಿತರೆಂದೂ ಮೇಲೆ ಬರದಂತೆ ನೋಡಿಕೊಳ್ಳಬೇಕು, ಸರಕಾರದ ಸಹಾಯಧನ ಅಥವಾ ಮೀಸಲಾತಿ ಕೊಡಬಾರದು, ಅವರು ಮೇಲೇಳದಂತೆ ನಮ್ಮ ಪಾದ ನೋಡಿಕೊಂಡು ಬದುಕಬೇಕೆಂದು ಹೇಳಿಹೋಗಿರುವ ಆರೆಸ್ಸೆಸಿನ ಗೋಳವಲಕರ ಮುಸ್ಲಿಮರನ್ನ ಎರಡನೇ ದರ್ಜೆ ಪ್ರಜೆಗಳನ್ನಾಗಿಸಿ ಎಂದಿದ್ದಾನೆ. ನೀವು ವಿದ್ವಾಂಸರಾದರೂ ಅವರ ಭಾಗಕ್ಕೆ ಎರಡನೇ ದರ್ಜೆ ಪ್ರಜೆ ಎಂಬುದು ಗೊತ್ತಿರಲಿ. ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...