Homeಅಂಕಣಗಳುಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

- Advertisement -
- Advertisement -

ಈನಾಡಿಗೆ ದುಃಖಕರವಾದ ಸಂಗತಿಯೊಂದು ಹೊರಬಿದ್ದಿದೆಯಲ್ಲಾ. ನಮ್ಮ ಧೀಮಂತ ನಾಯಕ ಎಡೂರಪ್ಪನವರು ವಿಧಾನಸಭಾ ಅಧಿವೇಶನದಲ್ಲಿ ತಮ್ಮ ಕಡೆಯ ಭಾಷಣವನ್ನು ಭಾವುಕವಾಗಿ ಮುಗಿಸಿ ದುಃಖತಪ್ತ ನಡಿಗೆಯಿಂದ ಹೊರನಡೆದಿದ್ದಾರೆ. ಅವರ ಜೊತೆ ಕರ್ನಾಟಕ ಕಂಡ ಅತ್ಯಂತ ದಕ್ಷ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಎಡೂರಪ್ಪನ ವಾಹನದವರೆಗೂ ಕಂಪನಿ ಕೊಟ್ಟಿರುವುದು ವಿಶೇಷ. ಎಡೂರಪ್ಪನವರ ಆಡಳಿತ ಅವಧಿಯ ದಾಖಲೆಗಳಲ್ಲಿ ಮೊದಲನೆಯದು ಯಾವುದೆಂದರೆ ತಾವು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಪಡೆದ ಚಿಲ್ಲರೆ ಕಾಣಿಕೆಯನ್ನು ಚೆಕ್ ಮುಖಾಂತರ ಪಡೆದ ಆರೋಪದಲ್ಲಿ ಜೈಲಿಗೆ ಹೋದದ್ದು ಮತ್ತು ಜೈಲಿನಿಂದ ಹೊರಬಂದದ್ದು; ಬಿಡುಗಡೆಯಾದಾಗ ಅವರ ಮನೆಯವರು ಚಪ್ಪಾಳೆ ಹೊಡೆದು ಕುಣಿದದ್ದು ಇದೇ ಬಿಜೆಪಿ ಜನರ ಸಂತಸವಾಗಿ ಪ್ರಕಟವಾಯ್ತು. ಏಕೆಂದರೆ ಎಡೂರಪ್ಪ ಮಾತ್ರ ನಮ್ಮನ್ನ ಗೆಲ್ಲಿಸಬಲ್ಲರು ಎಂದು ತಿಳಿದಿದ್ದ ಕುಲಬಾಂಧವರಿಗೆ ಅವರ ಬಿಡುಗಡೆ ಸಂಭ್ರಮವುಂಟು ಮಾಡಿದ್ದು ಸಹಜ. ಆದರೇನು ಎಡೂರಪ್ಪ ಬಿಜೆಪಿಯಿಂದ ಸಿಡಿದು ಕೆಜಿಪಿ ಮಾಡಿಕೊಂಡು ಬಿಜೆಪಿಯನ್ನ ಮಕಾಡೆ ಮಲಗಿಸಿದ್ದು ಈಗ ಇತಿಹಾಸ. ಎಡೂರಪ್ಪನವರ ಶಕ್ತಿಯರಿತ ಬಿಜೆಪಿಗಳು ಮತ್ತೆ ಪಾರ್ಟಿಗೆ ಸೇರಿಸಿಕೊಂಡು ಕಾಂಗೈ ಮತ್ತು ಜೆಡಿಎಸ್‌ನಿಂದ ಮಾರಿಕೊಂಡವರನ್ನು ಕೊಂಡು ಇತಿಹಾಸ ಕಂಡರಿಯದ ಆಡಳಿತ ನೀಡಿದ್ದು ಅಲ್ಲದೆ, ಬೊಮ್ಮಾಯಿಯವರನ್ನು ತಂದು ಕರ್ನಾಟಕದ ಮೇಲೆ ಹೇರಿದ್ದೂ ಒಂದು ದಾಖಲೆಯಂತಲ್ಲಾ, ಥೂತ್ತೇರಿ.

*****

ಹಾಗೆ ನೋಡಿದರೆ ಎಡೂರಪ್ಪನ ಚರಿತ್ರೆ ಇನ್ನೂ ಮುಗಿದಿಲ್ಲ. ’ನಾನು ಸಕ್ರಿಯನಾಗಿ ಈ ನಾಡನ್ನು ತಿರುಗಿ ಪಾರ್ಟಿಯನ್ನು ಪವರ್ರಿಗೆ ತರುತ್ತೇನೆ. ಅದಕ್ಕಾಗಿ ವಿರೋಧಪಕ್ಷದವರ ಸಹಕಾರ ಪಡೆಯುತ್ತೇನೆ’ ಎಂದಿದ್ದಾರೆ. ಎಡೂರಪ್ಪನ ಒಬ್ಬ ಮಗ ಸಂಸದ, ಮತ್ತೊಬ್ಬ ಕೇಸರಿ ಪಾರ್ಟಿಯ ಉಪಾಧ್ಯಕ್ಷ. ಅವರ ಭವಿಷ್ಯ ಬಹಳ ಮುಖ್ಯ ವಿಷಯ. ಇಂತಿರುವಾಗ ಬಿಜೆಪಿಗಳು ವಂಶಾಡಳಿತದ ಬಗ್ಗೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಿಯೇ ಇಲ್ಲ. ಏಕೆಂದರೆ ಸತ್ಯ ಮರೆಮಾಚಿ ಸದಾ ಸುಳ್ಳು ಒದರುವಂತೆ ಆ ಪಾರ್ಟಿಯೇ ಟ್ರೇನಿಂಗ್ ಕೊಟ್ಟಿದೆ. ಆ ಪಾರ್ಟಿಯಿಂದ ಆಗಿರುವ ಪ್ರಧಾನಿಯೇ ಬಹಿರಂಗವಾಗಿ ಹೇಳಿರುವ ಸುಳ್ಳು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ದೆಹಲಿಯ ಕನ್ನಡ ಸಾಂಸ್ಕೃತಿಕ ವೇದಿಕೆಯೊಂದರಲ್ಲಿ, ಕರ್ನಾಟಕಕ್ಕೆ ಅತ್ಯಧಿಕ ಅನುದಾನ ಕೊಟ್ಟಿದ್ದೇನೆ ಎಂದುಬಿಟ್ಟಿದ್ದಾರೆ ಪ್ರಧಾನಿ. ಬೆಚ್ಚಿಬಿದ್ದ ದೆಹಲಿ ಕನ್ನಡಿಗರು ಪ್ರಧಾನಿಯನ್ನ ಮಿಕಮಿಕ ನೋಡಿದರಂತೆ. ಏಕೆಂದರೆ ಕರ್ನಾಟಕ ಇತಿಹಾಸದಲ್ಲೇ ಕಂಡುಕಾಣದಿದ್ದಂತಹ ಪ್ರವಾಹಕ್ಕೆ ಸಿಕ್ಕಿ ತತ್ತರಿಸಿದಾಗ ಇಲ್ಲಿನ ಸರಕಾರ ಕೇಳಿದ 35 ಸಾವಿರ ಕೋಟಿಯ ಬದಲು ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ ನಾಲ್ಕೈದು ಸಾವಿರ ಕೋಟಿ. ಇನ್ನು ಜಿಎಸ್‌ಟಿ ಬಾಬ್ತಿನ ದೊಡ್ಡ ಪಾಲನ್ನ ಕೊಟ್ಟೆ ಇಲ್ಲ. ಕರ್ನಾಟಕವನ್ನ ಕೊಳ್ಳೆ ಹೊಡೆದು ಇತರ ರಾಜ್ಯಗಳಿಗೆ ಹಂಚುವುದನ್ನು ವಿರೋಧಿಸಿ ಬಿಜೆಪಿಗಳೇ ಮಾತನಾಡುತ್ತಿರುವಾಗ ಸತ್ಯದ ತಲೆಮೇಲೆ ಹೊಡೆದಂತೆ ಸುಳ್ಳು ಹೇಳಿದ ಪ್ರಧಾನಿಯನ್ನು ನೋಡಿ ಬಿಜೆಪಿಗಳೇ ದಂಗುಬಡಿದು ತತ್ತರಿಸಿಹೋದರಂತಲ್ಲಾ. ಯಾರದ್ದೇನಾದರೂ ಅಗಲಿ, ನನಗೆ ನನ್ನದೇ ಚಿಂತೆ ಅಂತ, ವೇದಿಕೆ ಮೇಲೆ ಕರೆಯದಿದ್ದಕ್ಕೆ ಸಿಟ್ಟಾದ ಸಾಹಿತ್ಯ ಪರಿಷತ್ ಜೋಶಿಯ ಮಂತ್ರಿ ಸ್ಥಾನಮಾನ ವ್ಯರ್ಥವಾಗಿ ಹೋಯ್ತಂತಲ್ಲ, ಥೂತ್ತೇರಿ.

*****

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬಂತು. ನರೇಂದ್ರ ಮೋದಿಯವರು ನಿಲ್ದಾಣವನ್ನು ಉದ್ಘಾಟಿಸಿದರು. ಆದರೆ ಬಿಜೆಪಿಗಳಿಗೆ ಜನ ಸೇರುವ ಅನುಮಾನ ಮೊದಲೇ ಕಾಡಿದ್ದರಿಂದ ಶಿವಮೊಗ್ಗದ ಬಡಾವಣೆಗಳಿಗೆ ಬಸ್ಸು ಕಳಿಸಿದರು. ಹಳ್ಳಿಹಳ್ಳಿಗೆ ವಾಹನಗಳನ್ನು ಕಳಿಸಿದರು. ಜೊತೆಗೆ ಕೈಗೆ ಕಾಸು ಕೊಟ್ಟು ಊಟ ಕೊಟ್ಟರು. ಆದರೆ, ಶಾಲಾ ಮಕ್ಕಳನ್ನ ತಂದು ಕುರ್ಚಿಗೆ ಕಟ್ಟಿಹಾಕಿದಂತೆ ಕೂರಿಸಿದ್ದು ಮಾತ್ರ ಅಕ್ಷಮ್ಯ ಅಪರಾಧ. ಏಕೆಂದರೆ ಶಾಲೆಯ ಮಕ್ಕಳನ್ನ ಕಳುಹಿಸಲು ಹಿಂಜರಿದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕ್ರಮ ಜರುಗಿಸುವುದಾಗಿ ಬೆದರಿಸಿ ಮಕ್ಕಳನ್ನ ಹಿಂಸೆಗೆ ದೂಡಿದ್ದು ಮಕ್ಕಳ ದ್ವೇಷಿಗಳು ಮಾಡಿದ ಕೆಲಸ. ಏರೊಪ್ಲೇನ್ ನೋಡಿ ಊಟಮಾಡಿ ಬರುವ ಕೆಲಸ ಕೆಲವೇ ಕೆಲವು ಮಕ್ಕಳಿಗೆ ಸಂಭ್ರಮವಾಗಿ ಕಂಡರೂ ಈ ಬಿಜೆಪಿಗಳು ಮಕ್ಕಳ ಮನಸ್ಸನ್ನು ಕೆಡಿಸಲು ಕೈಹಾಕಿರುವುದು ಮಾತ್ರ ಅಕ್ಷಮ್ಯ. ವಾಸ್ತವ ಸ್ಥಿತಿ ಏನೆಂದರೆ ಶಿವಮೊಗ್ಗ ಜಿಲ್ಲೆಯ ಹಲವು ಹಳ್ಳಿಗಳ ಕಾಡುದಾರಿಯಲ್ಲಿ ಮಕ್ಕಳು ಶಾಲೆಗಾಗಿ ನಡೆಯುತ್ತಾರೆ, ಸರಿಯಾದ ರಸ್ತೆಗಳಿಲ್ಲ, ಸರಿಯಾದ ಸಮಯಕ್ಕೆ ಬರುವ ಬಸ್ಸುಗಳಿಲ್ಲ, ಮಲೆನಾಡಿನ ಜೀವನಾಡಿಯಾಗಿದ್ದ ಸಹಕಾರ ಸಾರಿಗೆ ಕಳ್ಳರ ಕೈಗೆ ಸಿಕ್ಕ ಫಲವಾಗಿ ನೂರಾರು ಬಸ್ಸುಗಳು ನಿಂತುಹೋಗಿವೆ.

ಇದನ್ನೂ ಓದಿ: ಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

ಅವುಗಳ ಮೇಲೆ ಗಿಡ ಬೆಳೆದಿದೆ. ವಿಮಾನ ನಿಲ್ದಾಣದ ಉದ್ಘಾಟನೆಗೆ ಖರ್ಚು ಮಾಡಿದ ಕಾಲು ಭಾಗವನ್ನ ವ್ಯಯಿಸಿದ್ದರೆ ಸಹಕಾರ ಸಾರಿಗೆಗೆ ಜೀವ ಬರುತ್ತಿತ್ತು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಖರ್ಚಾದ ಅರ್ಧ ಹಣಕ್ಕೆ ವಿಐಎಸ್‌ಎಲ್ ಸ್ಟೀಲ್ ಫ್ಯಾಕ್ಟರಿ ನಡೆಯುತ್ತಿತ್ತು, ಅದರ ಕಾಲು ಭಾಗಕ್ಕೆ ಎಂಪಿಎಂ ಕಾಗದ ಕಾರ್ಖಾನೆ ಚಾಲು ಆಗುತ್ತಿತ್ತು, ಬಡವರನ್ನು ಕಂಡರಾಗದ ಬಿಜೆಪಿಗಳಿಗೆ ಇವೆಲ್ಲಾ ಹೊಳೆಯುವುದಿಲ್ಲ. ಇದೆಲ್ಲಾ ಏನಾದರಾಗಲಿ, ಇನ್ನುಮುಂದೆ ಎಡೂರಪ್ಪ, ರಾಘವೇಂದ್ರ, ವಿಜ್ಯೇಂದ್ರ, ಈಶ್ವರಪ್ಪ, ಆತನ ಮಗ ಇವರೆಲ್ಲಾ ವಿಮಾನದಲ್ಲೇ ಶಿವಮೊಗ್ಗಕ್ಕೆ ಹೋಗುವುದಂತಲ್ಲಾ, ಥೂತ್ತೇರಿ

*****

ಮುಸ್ಲಿಂ ವಿದ್ವಾಂಸರೊಬ್ಬರು ಬ್ರಾಹ್ಮಣರ ಆಳ್ವಿಕೆಯಲ್ಲಿ ಆ ದೇಶ ಬಲಿಷ್ಠವಾಗುತ್ತದೆ ಎಂದಿದ್ದಾರೆ. ಈ ಮುಸ್ಲಿಂ ವಿದ್ವಾಂಸರ ಅಭದ್ರತೆಯ ಮಾತು ಕನಿಕರವೆನಿಸುತ್ತದೆ. ಮುಸಲ್ಮಾನನೊಬ್ಬ ಬ್ರಾಹ್ಮಣನನ್ನ ಹೊಗಳುವುದು, ಬ್ರಾಹ್ಮಣನು ಮುಸ್ಲಿಮರು ಹೇಗಿರಬೇಕೆಂಬ ಸೂಚನೆ ಕೊಡುವುದೇ ಈ ದೇಶದ ದುರಂತ; ಎಂದಾದರೂ ಬ್ರಾಹ್ಮಣರ ಆಳ್ವಿಕೆಯಲ್ಲಿ ಈ ದೇಶ ಎಂದು ಬಲಿಷ್ಠವಾಗಿತ್ತೇ ಎಂಬ ಬಗ್ಗೆ ಸಾಕ್ಷ್ಯಾಧಾರ ತೋರಿದ್ದರೆ ಚೆನ್ನಾಗಿತ್ತು. ಶತಮಾನಗಳ ಕಾಲ ಜಾತಿಯ ಶ್ರೇಣಿಕರಣದಿಂದ ಬಹುಸಂಖ್ಯಾತ ಶೂದ್ರ-ದಲಿತ ಶಕ್ತಿಯ ಅಂತಃಸತ್ವವೇ ನಾಶವಾಗಿ ಅವರೆಲ್ಲಾ ಗುಲಾಮರಂತೆ ಬದುಕುವಂತಾದಾಗ ವಿದೇಶಿಯರು ಈ ದೇಶಕ್ಕೆ ದಾಳಿ ಮಾಡಿ ಆಳತೊಡಗಿದರು. ಆಗ ’ಬುದ್ಧಿವಂತ’ರಾದ ಬ್ರಾಹ್ಮಣರು ವಿದೇಶಿ ಜನರ ಆಸ್ಥಾನದಲ್ಲಿ ಮಂತ್ರಿಗಳಾಗಿ ಕರಣಿಕರಾಗಿ ಆಸ್ಥಾನದ ವಿದೂಶಕರಾಗಿ ಅರಾಮವಾಗಿರತೊಡಗಿದ್ದು ಈಗ ಇತಿಹಾಸ. ಇನ್ನು ಬ್ರಿಟಿಷರು ಬಂದಾಗ ಇಂಗ್ಲಿಷ್ ಕಲಿತುಕೊಂಡು ಡಿ.ಸಿಗಳಾಗಿ, ಎಸ್ಪಿಗಳಾಗಿ ಬ್ರಿಟಿಷರ ಆಜ್ಞೆಯಂತೆ ನಮ್ಮವರನ್ನೇ ಬಗ್ಗುಬಡಿದು ಸೆರೆವಾಸಕ್ಕೆ ದೂಡಿದವರೂ ಇವರಲ್ಲಿದ್ದರು; ಬ್ರಾಹ್ಮಣ್ಯ ಪ್ರತಿಪಾದಿಸಿದ ಧರ್ಮ, ಅಸ್ಪೃಶ್ಯತೆ ಆಚರಿಸಿದ್ದರಿಂದ, ಅದಕ್ಕೆ ಸಿಕ್ಕಿದ ಜನ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಮೀಸಲಾತಿಯಿಂದ ಅಂತಹವರನ್ನು ಮೇಲೆತ್ತಬೇಕೆಂಬ ಕಾರ್ಯಕ್ರಮಕ್ಕೆ ಕೂಡ ಬೆಂಕಿಹಚ್ಚಿ ಸದ್ದಿಲ್ಲದೆ ಹತ್ತು ಪರಸೆಂಟ್ ಮೀಸಲಾತಿಯನ್ನು ಲಪಟಾಯಿಸಿದ್ದಾರೆ; ದಲಿತರೆಂದೂ ಮೇಲೆ ಬರದಂತೆ ನೋಡಿಕೊಳ್ಳಬೇಕು, ಸರಕಾರದ ಸಹಾಯಧನ ಅಥವಾ ಮೀಸಲಾತಿ ಕೊಡಬಾರದು, ಅವರು ಮೇಲೇಳದಂತೆ ನಮ್ಮ ಪಾದ ನೋಡಿಕೊಂಡು ಬದುಕಬೇಕೆಂದು ಹೇಳಿಹೋಗಿರುವ ಆರೆಸ್ಸೆಸಿನ ಗೋಳವಲಕರ ಮುಸ್ಲಿಮರನ್ನ ಎರಡನೇ ದರ್ಜೆ ಪ್ರಜೆಗಳನ್ನಾಗಿಸಿ ಎಂದಿದ್ದಾನೆ. ನೀವು ವಿದ್ವಾಂಸರಾದರೂ ಅವರ ಭಾಗಕ್ಕೆ ಎರಡನೇ ದರ್ಜೆ ಪ್ರಜೆ ಎಂಬುದು ಗೊತ್ತಿರಲಿ. ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...