Homeಅಂಕಣಗಳುಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

- Advertisement -
- Advertisement -

ಈನಾಡಿಗೆ ದುಃಖಕರವಾದ ಸಂಗತಿಯೊಂದು ಹೊರಬಿದ್ದಿದೆಯಲ್ಲಾ. ನಮ್ಮ ಧೀಮಂತ ನಾಯಕ ಎಡೂರಪ್ಪನವರು ವಿಧಾನಸಭಾ ಅಧಿವೇಶನದಲ್ಲಿ ತಮ್ಮ ಕಡೆಯ ಭಾಷಣವನ್ನು ಭಾವುಕವಾಗಿ ಮುಗಿಸಿ ದುಃಖತಪ್ತ ನಡಿಗೆಯಿಂದ ಹೊರನಡೆದಿದ್ದಾರೆ. ಅವರ ಜೊತೆ ಕರ್ನಾಟಕ ಕಂಡ ಅತ್ಯಂತ ದಕ್ಷ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಎಡೂರಪ್ಪನ ವಾಹನದವರೆಗೂ ಕಂಪನಿ ಕೊಟ್ಟಿರುವುದು ವಿಶೇಷ. ಎಡೂರಪ್ಪನವರ ಆಡಳಿತ ಅವಧಿಯ ದಾಖಲೆಗಳಲ್ಲಿ ಮೊದಲನೆಯದು ಯಾವುದೆಂದರೆ ತಾವು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಪಡೆದ ಚಿಲ್ಲರೆ ಕಾಣಿಕೆಯನ್ನು ಚೆಕ್ ಮುಖಾಂತರ ಪಡೆದ ಆರೋಪದಲ್ಲಿ ಜೈಲಿಗೆ ಹೋದದ್ದು ಮತ್ತು ಜೈಲಿನಿಂದ ಹೊರಬಂದದ್ದು; ಬಿಡುಗಡೆಯಾದಾಗ ಅವರ ಮನೆಯವರು ಚಪ್ಪಾಳೆ ಹೊಡೆದು ಕುಣಿದದ್ದು ಇದೇ ಬಿಜೆಪಿ ಜನರ ಸಂತಸವಾಗಿ ಪ್ರಕಟವಾಯ್ತು. ಏಕೆಂದರೆ ಎಡೂರಪ್ಪ ಮಾತ್ರ ನಮ್ಮನ್ನ ಗೆಲ್ಲಿಸಬಲ್ಲರು ಎಂದು ತಿಳಿದಿದ್ದ ಕುಲಬಾಂಧವರಿಗೆ ಅವರ ಬಿಡುಗಡೆ ಸಂಭ್ರಮವುಂಟು ಮಾಡಿದ್ದು ಸಹಜ. ಆದರೇನು ಎಡೂರಪ್ಪ ಬಿಜೆಪಿಯಿಂದ ಸಿಡಿದು ಕೆಜಿಪಿ ಮಾಡಿಕೊಂಡು ಬಿಜೆಪಿಯನ್ನ ಮಕಾಡೆ ಮಲಗಿಸಿದ್ದು ಈಗ ಇತಿಹಾಸ. ಎಡೂರಪ್ಪನವರ ಶಕ್ತಿಯರಿತ ಬಿಜೆಪಿಗಳು ಮತ್ತೆ ಪಾರ್ಟಿಗೆ ಸೇರಿಸಿಕೊಂಡು ಕಾಂಗೈ ಮತ್ತು ಜೆಡಿಎಸ್‌ನಿಂದ ಮಾರಿಕೊಂಡವರನ್ನು ಕೊಂಡು ಇತಿಹಾಸ ಕಂಡರಿಯದ ಆಡಳಿತ ನೀಡಿದ್ದು ಅಲ್ಲದೆ, ಬೊಮ್ಮಾಯಿಯವರನ್ನು ತಂದು ಕರ್ನಾಟಕದ ಮೇಲೆ ಹೇರಿದ್ದೂ ಒಂದು ದಾಖಲೆಯಂತಲ್ಲಾ, ಥೂತ್ತೇರಿ.

*****

ಹಾಗೆ ನೋಡಿದರೆ ಎಡೂರಪ್ಪನ ಚರಿತ್ರೆ ಇನ್ನೂ ಮುಗಿದಿಲ್ಲ. ’ನಾನು ಸಕ್ರಿಯನಾಗಿ ಈ ನಾಡನ್ನು ತಿರುಗಿ ಪಾರ್ಟಿಯನ್ನು ಪವರ್ರಿಗೆ ತರುತ್ತೇನೆ. ಅದಕ್ಕಾಗಿ ವಿರೋಧಪಕ್ಷದವರ ಸಹಕಾರ ಪಡೆಯುತ್ತೇನೆ’ ಎಂದಿದ್ದಾರೆ. ಎಡೂರಪ್ಪನ ಒಬ್ಬ ಮಗ ಸಂಸದ, ಮತ್ತೊಬ್ಬ ಕೇಸರಿ ಪಾರ್ಟಿಯ ಉಪಾಧ್ಯಕ್ಷ. ಅವರ ಭವಿಷ್ಯ ಬಹಳ ಮುಖ್ಯ ವಿಷಯ. ಇಂತಿರುವಾಗ ಬಿಜೆಪಿಗಳು ವಂಶಾಡಳಿತದ ಬಗ್ಗೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಿಯೇ ಇಲ್ಲ. ಏಕೆಂದರೆ ಸತ್ಯ ಮರೆಮಾಚಿ ಸದಾ ಸುಳ್ಳು ಒದರುವಂತೆ ಆ ಪಾರ್ಟಿಯೇ ಟ್ರೇನಿಂಗ್ ಕೊಟ್ಟಿದೆ. ಆ ಪಾರ್ಟಿಯಿಂದ ಆಗಿರುವ ಪ್ರಧಾನಿಯೇ ಬಹಿರಂಗವಾಗಿ ಹೇಳಿರುವ ಸುಳ್ಳು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ದೆಹಲಿಯ ಕನ್ನಡ ಸಾಂಸ್ಕೃತಿಕ ವೇದಿಕೆಯೊಂದರಲ್ಲಿ, ಕರ್ನಾಟಕಕ್ಕೆ ಅತ್ಯಧಿಕ ಅನುದಾನ ಕೊಟ್ಟಿದ್ದೇನೆ ಎಂದುಬಿಟ್ಟಿದ್ದಾರೆ ಪ್ರಧಾನಿ. ಬೆಚ್ಚಿಬಿದ್ದ ದೆಹಲಿ ಕನ್ನಡಿಗರು ಪ್ರಧಾನಿಯನ್ನ ಮಿಕಮಿಕ ನೋಡಿದರಂತೆ. ಏಕೆಂದರೆ ಕರ್ನಾಟಕ ಇತಿಹಾಸದಲ್ಲೇ ಕಂಡುಕಾಣದಿದ್ದಂತಹ ಪ್ರವಾಹಕ್ಕೆ ಸಿಕ್ಕಿ ತತ್ತರಿಸಿದಾಗ ಇಲ್ಲಿನ ಸರಕಾರ ಕೇಳಿದ 35 ಸಾವಿರ ಕೋಟಿಯ ಬದಲು ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ ನಾಲ್ಕೈದು ಸಾವಿರ ಕೋಟಿ. ಇನ್ನು ಜಿಎಸ್‌ಟಿ ಬಾಬ್ತಿನ ದೊಡ್ಡ ಪಾಲನ್ನ ಕೊಟ್ಟೆ ಇಲ್ಲ. ಕರ್ನಾಟಕವನ್ನ ಕೊಳ್ಳೆ ಹೊಡೆದು ಇತರ ರಾಜ್ಯಗಳಿಗೆ ಹಂಚುವುದನ್ನು ವಿರೋಧಿಸಿ ಬಿಜೆಪಿಗಳೇ ಮಾತನಾಡುತ್ತಿರುವಾಗ ಸತ್ಯದ ತಲೆಮೇಲೆ ಹೊಡೆದಂತೆ ಸುಳ್ಳು ಹೇಳಿದ ಪ್ರಧಾನಿಯನ್ನು ನೋಡಿ ಬಿಜೆಪಿಗಳೇ ದಂಗುಬಡಿದು ತತ್ತರಿಸಿಹೋದರಂತಲ್ಲಾ. ಯಾರದ್ದೇನಾದರೂ ಅಗಲಿ, ನನಗೆ ನನ್ನದೇ ಚಿಂತೆ ಅಂತ, ವೇದಿಕೆ ಮೇಲೆ ಕರೆಯದಿದ್ದಕ್ಕೆ ಸಿಟ್ಟಾದ ಸಾಹಿತ್ಯ ಪರಿಷತ್ ಜೋಶಿಯ ಮಂತ್ರಿ ಸ್ಥಾನಮಾನ ವ್ಯರ್ಥವಾಗಿ ಹೋಯ್ತಂತಲ್ಲ, ಥೂತ್ತೇರಿ.

*****

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬಂತು. ನರೇಂದ್ರ ಮೋದಿಯವರು ನಿಲ್ದಾಣವನ್ನು ಉದ್ಘಾಟಿಸಿದರು. ಆದರೆ ಬಿಜೆಪಿಗಳಿಗೆ ಜನ ಸೇರುವ ಅನುಮಾನ ಮೊದಲೇ ಕಾಡಿದ್ದರಿಂದ ಶಿವಮೊಗ್ಗದ ಬಡಾವಣೆಗಳಿಗೆ ಬಸ್ಸು ಕಳಿಸಿದರು. ಹಳ್ಳಿಹಳ್ಳಿಗೆ ವಾಹನಗಳನ್ನು ಕಳಿಸಿದರು. ಜೊತೆಗೆ ಕೈಗೆ ಕಾಸು ಕೊಟ್ಟು ಊಟ ಕೊಟ್ಟರು. ಆದರೆ, ಶಾಲಾ ಮಕ್ಕಳನ್ನ ತಂದು ಕುರ್ಚಿಗೆ ಕಟ್ಟಿಹಾಕಿದಂತೆ ಕೂರಿಸಿದ್ದು ಮಾತ್ರ ಅಕ್ಷಮ್ಯ ಅಪರಾಧ. ಏಕೆಂದರೆ ಶಾಲೆಯ ಮಕ್ಕಳನ್ನ ಕಳುಹಿಸಲು ಹಿಂಜರಿದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕ್ರಮ ಜರುಗಿಸುವುದಾಗಿ ಬೆದರಿಸಿ ಮಕ್ಕಳನ್ನ ಹಿಂಸೆಗೆ ದೂಡಿದ್ದು ಮಕ್ಕಳ ದ್ವೇಷಿಗಳು ಮಾಡಿದ ಕೆಲಸ. ಏರೊಪ್ಲೇನ್ ನೋಡಿ ಊಟಮಾಡಿ ಬರುವ ಕೆಲಸ ಕೆಲವೇ ಕೆಲವು ಮಕ್ಕಳಿಗೆ ಸಂಭ್ರಮವಾಗಿ ಕಂಡರೂ ಈ ಬಿಜೆಪಿಗಳು ಮಕ್ಕಳ ಮನಸ್ಸನ್ನು ಕೆಡಿಸಲು ಕೈಹಾಕಿರುವುದು ಮಾತ್ರ ಅಕ್ಷಮ್ಯ. ವಾಸ್ತವ ಸ್ಥಿತಿ ಏನೆಂದರೆ ಶಿವಮೊಗ್ಗ ಜಿಲ್ಲೆಯ ಹಲವು ಹಳ್ಳಿಗಳ ಕಾಡುದಾರಿಯಲ್ಲಿ ಮಕ್ಕಳು ಶಾಲೆಗಾಗಿ ನಡೆಯುತ್ತಾರೆ, ಸರಿಯಾದ ರಸ್ತೆಗಳಿಲ್ಲ, ಸರಿಯಾದ ಸಮಯಕ್ಕೆ ಬರುವ ಬಸ್ಸುಗಳಿಲ್ಲ, ಮಲೆನಾಡಿನ ಜೀವನಾಡಿಯಾಗಿದ್ದ ಸಹಕಾರ ಸಾರಿಗೆ ಕಳ್ಳರ ಕೈಗೆ ಸಿಕ್ಕ ಫಲವಾಗಿ ನೂರಾರು ಬಸ್ಸುಗಳು ನಿಂತುಹೋಗಿವೆ.

ಇದನ್ನೂ ಓದಿ: ಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

ಅವುಗಳ ಮೇಲೆ ಗಿಡ ಬೆಳೆದಿದೆ. ವಿಮಾನ ನಿಲ್ದಾಣದ ಉದ್ಘಾಟನೆಗೆ ಖರ್ಚು ಮಾಡಿದ ಕಾಲು ಭಾಗವನ್ನ ವ್ಯಯಿಸಿದ್ದರೆ ಸಹಕಾರ ಸಾರಿಗೆಗೆ ಜೀವ ಬರುತ್ತಿತ್ತು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಖರ್ಚಾದ ಅರ್ಧ ಹಣಕ್ಕೆ ವಿಐಎಸ್‌ಎಲ್ ಸ್ಟೀಲ್ ಫ್ಯಾಕ್ಟರಿ ನಡೆಯುತ್ತಿತ್ತು, ಅದರ ಕಾಲು ಭಾಗಕ್ಕೆ ಎಂಪಿಎಂ ಕಾಗದ ಕಾರ್ಖಾನೆ ಚಾಲು ಆಗುತ್ತಿತ್ತು, ಬಡವರನ್ನು ಕಂಡರಾಗದ ಬಿಜೆಪಿಗಳಿಗೆ ಇವೆಲ್ಲಾ ಹೊಳೆಯುವುದಿಲ್ಲ. ಇದೆಲ್ಲಾ ಏನಾದರಾಗಲಿ, ಇನ್ನುಮುಂದೆ ಎಡೂರಪ್ಪ, ರಾಘವೇಂದ್ರ, ವಿಜ್ಯೇಂದ್ರ, ಈಶ್ವರಪ್ಪ, ಆತನ ಮಗ ಇವರೆಲ್ಲಾ ವಿಮಾನದಲ್ಲೇ ಶಿವಮೊಗ್ಗಕ್ಕೆ ಹೋಗುವುದಂತಲ್ಲಾ, ಥೂತ್ತೇರಿ

*****

ಮುಸ್ಲಿಂ ವಿದ್ವಾಂಸರೊಬ್ಬರು ಬ್ರಾಹ್ಮಣರ ಆಳ್ವಿಕೆಯಲ್ಲಿ ಆ ದೇಶ ಬಲಿಷ್ಠವಾಗುತ್ತದೆ ಎಂದಿದ್ದಾರೆ. ಈ ಮುಸ್ಲಿಂ ವಿದ್ವಾಂಸರ ಅಭದ್ರತೆಯ ಮಾತು ಕನಿಕರವೆನಿಸುತ್ತದೆ. ಮುಸಲ್ಮಾನನೊಬ್ಬ ಬ್ರಾಹ್ಮಣನನ್ನ ಹೊಗಳುವುದು, ಬ್ರಾಹ್ಮಣನು ಮುಸ್ಲಿಮರು ಹೇಗಿರಬೇಕೆಂಬ ಸೂಚನೆ ಕೊಡುವುದೇ ಈ ದೇಶದ ದುರಂತ; ಎಂದಾದರೂ ಬ್ರಾಹ್ಮಣರ ಆಳ್ವಿಕೆಯಲ್ಲಿ ಈ ದೇಶ ಎಂದು ಬಲಿಷ್ಠವಾಗಿತ್ತೇ ಎಂಬ ಬಗ್ಗೆ ಸಾಕ್ಷ್ಯಾಧಾರ ತೋರಿದ್ದರೆ ಚೆನ್ನಾಗಿತ್ತು. ಶತಮಾನಗಳ ಕಾಲ ಜಾತಿಯ ಶ್ರೇಣಿಕರಣದಿಂದ ಬಹುಸಂಖ್ಯಾತ ಶೂದ್ರ-ದಲಿತ ಶಕ್ತಿಯ ಅಂತಃಸತ್ವವೇ ನಾಶವಾಗಿ ಅವರೆಲ್ಲಾ ಗುಲಾಮರಂತೆ ಬದುಕುವಂತಾದಾಗ ವಿದೇಶಿಯರು ಈ ದೇಶಕ್ಕೆ ದಾಳಿ ಮಾಡಿ ಆಳತೊಡಗಿದರು. ಆಗ ’ಬುದ್ಧಿವಂತ’ರಾದ ಬ್ರಾಹ್ಮಣರು ವಿದೇಶಿ ಜನರ ಆಸ್ಥಾನದಲ್ಲಿ ಮಂತ್ರಿಗಳಾಗಿ ಕರಣಿಕರಾಗಿ ಆಸ್ಥಾನದ ವಿದೂಶಕರಾಗಿ ಅರಾಮವಾಗಿರತೊಡಗಿದ್ದು ಈಗ ಇತಿಹಾಸ. ಇನ್ನು ಬ್ರಿಟಿಷರು ಬಂದಾಗ ಇಂಗ್ಲಿಷ್ ಕಲಿತುಕೊಂಡು ಡಿ.ಸಿಗಳಾಗಿ, ಎಸ್ಪಿಗಳಾಗಿ ಬ್ರಿಟಿಷರ ಆಜ್ಞೆಯಂತೆ ನಮ್ಮವರನ್ನೇ ಬಗ್ಗುಬಡಿದು ಸೆರೆವಾಸಕ್ಕೆ ದೂಡಿದವರೂ ಇವರಲ್ಲಿದ್ದರು; ಬ್ರಾಹ್ಮಣ್ಯ ಪ್ರತಿಪಾದಿಸಿದ ಧರ್ಮ, ಅಸ್ಪೃಶ್ಯತೆ ಆಚರಿಸಿದ್ದರಿಂದ, ಅದಕ್ಕೆ ಸಿಕ್ಕಿದ ಜನ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಮೀಸಲಾತಿಯಿಂದ ಅಂತಹವರನ್ನು ಮೇಲೆತ್ತಬೇಕೆಂಬ ಕಾರ್ಯಕ್ರಮಕ್ಕೆ ಕೂಡ ಬೆಂಕಿಹಚ್ಚಿ ಸದ್ದಿಲ್ಲದೆ ಹತ್ತು ಪರಸೆಂಟ್ ಮೀಸಲಾತಿಯನ್ನು ಲಪಟಾಯಿಸಿದ್ದಾರೆ; ದಲಿತರೆಂದೂ ಮೇಲೆ ಬರದಂತೆ ನೋಡಿಕೊಳ್ಳಬೇಕು, ಸರಕಾರದ ಸಹಾಯಧನ ಅಥವಾ ಮೀಸಲಾತಿ ಕೊಡಬಾರದು, ಅವರು ಮೇಲೇಳದಂತೆ ನಮ್ಮ ಪಾದ ನೋಡಿಕೊಂಡು ಬದುಕಬೇಕೆಂದು ಹೇಳಿಹೋಗಿರುವ ಆರೆಸ್ಸೆಸಿನ ಗೋಳವಲಕರ ಮುಸ್ಲಿಮರನ್ನ ಎರಡನೇ ದರ್ಜೆ ಪ್ರಜೆಗಳನ್ನಾಗಿಸಿ ಎಂದಿದ್ದಾನೆ. ನೀವು ವಿದ್ವಾಂಸರಾದರೂ ಅವರ ಭಾಗಕ್ಕೆ ಎರಡನೇ ದರ್ಜೆ ಪ್ರಜೆ ಎಂಬುದು ಗೊತ್ತಿರಲಿ. ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....