Homeಅಂಕಣಗಳುಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

- Advertisement -
- Advertisement -

ಈನಾಡಿಗೆ ದುಃಖಕರವಾದ ಸಂಗತಿಯೊಂದು ಹೊರಬಿದ್ದಿದೆಯಲ್ಲಾ. ನಮ್ಮ ಧೀಮಂತ ನಾಯಕ ಎಡೂರಪ್ಪನವರು ವಿಧಾನಸಭಾ ಅಧಿವೇಶನದಲ್ಲಿ ತಮ್ಮ ಕಡೆಯ ಭಾಷಣವನ್ನು ಭಾವುಕವಾಗಿ ಮುಗಿಸಿ ದುಃಖತಪ್ತ ನಡಿಗೆಯಿಂದ ಹೊರನಡೆದಿದ್ದಾರೆ. ಅವರ ಜೊತೆ ಕರ್ನಾಟಕ ಕಂಡ ಅತ್ಯಂತ ದಕ್ಷ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಎಡೂರಪ್ಪನ ವಾಹನದವರೆಗೂ ಕಂಪನಿ ಕೊಟ್ಟಿರುವುದು ವಿಶೇಷ. ಎಡೂರಪ್ಪನವರ ಆಡಳಿತ ಅವಧಿಯ ದಾಖಲೆಗಳಲ್ಲಿ ಮೊದಲನೆಯದು ಯಾವುದೆಂದರೆ ತಾವು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಪಡೆದ ಚಿಲ್ಲರೆ ಕಾಣಿಕೆಯನ್ನು ಚೆಕ್ ಮುಖಾಂತರ ಪಡೆದ ಆರೋಪದಲ್ಲಿ ಜೈಲಿಗೆ ಹೋದದ್ದು ಮತ್ತು ಜೈಲಿನಿಂದ ಹೊರಬಂದದ್ದು; ಬಿಡುಗಡೆಯಾದಾಗ ಅವರ ಮನೆಯವರು ಚಪ್ಪಾಳೆ ಹೊಡೆದು ಕುಣಿದದ್ದು ಇದೇ ಬಿಜೆಪಿ ಜನರ ಸಂತಸವಾಗಿ ಪ್ರಕಟವಾಯ್ತು. ಏಕೆಂದರೆ ಎಡೂರಪ್ಪ ಮಾತ್ರ ನಮ್ಮನ್ನ ಗೆಲ್ಲಿಸಬಲ್ಲರು ಎಂದು ತಿಳಿದಿದ್ದ ಕುಲಬಾಂಧವರಿಗೆ ಅವರ ಬಿಡುಗಡೆ ಸಂಭ್ರಮವುಂಟು ಮಾಡಿದ್ದು ಸಹಜ. ಆದರೇನು ಎಡೂರಪ್ಪ ಬಿಜೆಪಿಯಿಂದ ಸಿಡಿದು ಕೆಜಿಪಿ ಮಾಡಿಕೊಂಡು ಬಿಜೆಪಿಯನ್ನ ಮಕಾಡೆ ಮಲಗಿಸಿದ್ದು ಈಗ ಇತಿಹಾಸ. ಎಡೂರಪ್ಪನವರ ಶಕ್ತಿಯರಿತ ಬಿಜೆಪಿಗಳು ಮತ್ತೆ ಪಾರ್ಟಿಗೆ ಸೇರಿಸಿಕೊಂಡು ಕಾಂಗೈ ಮತ್ತು ಜೆಡಿಎಸ್‌ನಿಂದ ಮಾರಿಕೊಂಡವರನ್ನು ಕೊಂಡು ಇತಿಹಾಸ ಕಂಡರಿಯದ ಆಡಳಿತ ನೀಡಿದ್ದು ಅಲ್ಲದೆ, ಬೊಮ್ಮಾಯಿಯವರನ್ನು ತಂದು ಕರ್ನಾಟಕದ ಮೇಲೆ ಹೇರಿದ್ದೂ ಒಂದು ದಾಖಲೆಯಂತಲ್ಲಾ, ಥೂತ್ತೇರಿ.

*****

ಹಾಗೆ ನೋಡಿದರೆ ಎಡೂರಪ್ಪನ ಚರಿತ್ರೆ ಇನ್ನೂ ಮುಗಿದಿಲ್ಲ. ’ನಾನು ಸಕ್ರಿಯನಾಗಿ ಈ ನಾಡನ್ನು ತಿರುಗಿ ಪಾರ್ಟಿಯನ್ನು ಪವರ್ರಿಗೆ ತರುತ್ತೇನೆ. ಅದಕ್ಕಾಗಿ ವಿರೋಧಪಕ್ಷದವರ ಸಹಕಾರ ಪಡೆಯುತ್ತೇನೆ’ ಎಂದಿದ್ದಾರೆ. ಎಡೂರಪ್ಪನ ಒಬ್ಬ ಮಗ ಸಂಸದ, ಮತ್ತೊಬ್ಬ ಕೇಸರಿ ಪಾರ್ಟಿಯ ಉಪಾಧ್ಯಕ್ಷ. ಅವರ ಭವಿಷ್ಯ ಬಹಳ ಮುಖ್ಯ ವಿಷಯ. ಇಂತಿರುವಾಗ ಬಿಜೆಪಿಗಳು ವಂಶಾಡಳಿತದ ಬಗ್ಗೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಿಯೇ ಇಲ್ಲ. ಏಕೆಂದರೆ ಸತ್ಯ ಮರೆಮಾಚಿ ಸದಾ ಸುಳ್ಳು ಒದರುವಂತೆ ಆ ಪಾರ್ಟಿಯೇ ಟ್ರೇನಿಂಗ್ ಕೊಟ್ಟಿದೆ. ಆ ಪಾರ್ಟಿಯಿಂದ ಆಗಿರುವ ಪ್ರಧಾನಿಯೇ ಬಹಿರಂಗವಾಗಿ ಹೇಳಿರುವ ಸುಳ್ಳು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ದೆಹಲಿಯ ಕನ್ನಡ ಸಾಂಸ್ಕೃತಿಕ ವೇದಿಕೆಯೊಂದರಲ್ಲಿ, ಕರ್ನಾಟಕಕ್ಕೆ ಅತ್ಯಧಿಕ ಅನುದಾನ ಕೊಟ್ಟಿದ್ದೇನೆ ಎಂದುಬಿಟ್ಟಿದ್ದಾರೆ ಪ್ರಧಾನಿ. ಬೆಚ್ಚಿಬಿದ್ದ ದೆಹಲಿ ಕನ್ನಡಿಗರು ಪ್ರಧಾನಿಯನ್ನ ಮಿಕಮಿಕ ನೋಡಿದರಂತೆ. ಏಕೆಂದರೆ ಕರ್ನಾಟಕ ಇತಿಹಾಸದಲ್ಲೇ ಕಂಡುಕಾಣದಿದ್ದಂತಹ ಪ್ರವಾಹಕ್ಕೆ ಸಿಕ್ಕಿ ತತ್ತರಿಸಿದಾಗ ಇಲ್ಲಿನ ಸರಕಾರ ಕೇಳಿದ 35 ಸಾವಿರ ಕೋಟಿಯ ಬದಲು ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ ನಾಲ್ಕೈದು ಸಾವಿರ ಕೋಟಿ. ಇನ್ನು ಜಿಎಸ್‌ಟಿ ಬಾಬ್ತಿನ ದೊಡ್ಡ ಪಾಲನ್ನ ಕೊಟ್ಟೆ ಇಲ್ಲ. ಕರ್ನಾಟಕವನ್ನ ಕೊಳ್ಳೆ ಹೊಡೆದು ಇತರ ರಾಜ್ಯಗಳಿಗೆ ಹಂಚುವುದನ್ನು ವಿರೋಧಿಸಿ ಬಿಜೆಪಿಗಳೇ ಮಾತನಾಡುತ್ತಿರುವಾಗ ಸತ್ಯದ ತಲೆಮೇಲೆ ಹೊಡೆದಂತೆ ಸುಳ್ಳು ಹೇಳಿದ ಪ್ರಧಾನಿಯನ್ನು ನೋಡಿ ಬಿಜೆಪಿಗಳೇ ದಂಗುಬಡಿದು ತತ್ತರಿಸಿಹೋದರಂತಲ್ಲಾ. ಯಾರದ್ದೇನಾದರೂ ಅಗಲಿ, ನನಗೆ ನನ್ನದೇ ಚಿಂತೆ ಅಂತ, ವೇದಿಕೆ ಮೇಲೆ ಕರೆಯದಿದ್ದಕ್ಕೆ ಸಿಟ್ಟಾದ ಸಾಹಿತ್ಯ ಪರಿಷತ್ ಜೋಶಿಯ ಮಂತ್ರಿ ಸ್ಥಾನಮಾನ ವ್ಯರ್ಥವಾಗಿ ಹೋಯ್ತಂತಲ್ಲ, ಥೂತ್ತೇರಿ.

*****

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬಂತು. ನರೇಂದ್ರ ಮೋದಿಯವರು ನಿಲ್ದಾಣವನ್ನು ಉದ್ಘಾಟಿಸಿದರು. ಆದರೆ ಬಿಜೆಪಿಗಳಿಗೆ ಜನ ಸೇರುವ ಅನುಮಾನ ಮೊದಲೇ ಕಾಡಿದ್ದರಿಂದ ಶಿವಮೊಗ್ಗದ ಬಡಾವಣೆಗಳಿಗೆ ಬಸ್ಸು ಕಳಿಸಿದರು. ಹಳ್ಳಿಹಳ್ಳಿಗೆ ವಾಹನಗಳನ್ನು ಕಳಿಸಿದರು. ಜೊತೆಗೆ ಕೈಗೆ ಕಾಸು ಕೊಟ್ಟು ಊಟ ಕೊಟ್ಟರು. ಆದರೆ, ಶಾಲಾ ಮಕ್ಕಳನ್ನ ತಂದು ಕುರ್ಚಿಗೆ ಕಟ್ಟಿಹಾಕಿದಂತೆ ಕೂರಿಸಿದ್ದು ಮಾತ್ರ ಅಕ್ಷಮ್ಯ ಅಪರಾಧ. ಏಕೆಂದರೆ ಶಾಲೆಯ ಮಕ್ಕಳನ್ನ ಕಳುಹಿಸಲು ಹಿಂಜರಿದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕ್ರಮ ಜರುಗಿಸುವುದಾಗಿ ಬೆದರಿಸಿ ಮಕ್ಕಳನ್ನ ಹಿಂಸೆಗೆ ದೂಡಿದ್ದು ಮಕ್ಕಳ ದ್ವೇಷಿಗಳು ಮಾಡಿದ ಕೆಲಸ. ಏರೊಪ್ಲೇನ್ ನೋಡಿ ಊಟಮಾಡಿ ಬರುವ ಕೆಲಸ ಕೆಲವೇ ಕೆಲವು ಮಕ್ಕಳಿಗೆ ಸಂಭ್ರಮವಾಗಿ ಕಂಡರೂ ಈ ಬಿಜೆಪಿಗಳು ಮಕ್ಕಳ ಮನಸ್ಸನ್ನು ಕೆಡಿಸಲು ಕೈಹಾಕಿರುವುದು ಮಾತ್ರ ಅಕ್ಷಮ್ಯ. ವಾಸ್ತವ ಸ್ಥಿತಿ ಏನೆಂದರೆ ಶಿವಮೊಗ್ಗ ಜಿಲ್ಲೆಯ ಹಲವು ಹಳ್ಳಿಗಳ ಕಾಡುದಾರಿಯಲ್ಲಿ ಮಕ್ಕಳು ಶಾಲೆಗಾಗಿ ನಡೆಯುತ್ತಾರೆ, ಸರಿಯಾದ ರಸ್ತೆಗಳಿಲ್ಲ, ಸರಿಯಾದ ಸಮಯಕ್ಕೆ ಬರುವ ಬಸ್ಸುಗಳಿಲ್ಲ, ಮಲೆನಾಡಿನ ಜೀವನಾಡಿಯಾಗಿದ್ದ ಸಹಕಾರ ಸಾರಿಗೆ ಕಳ್ಳರ ಕೈಗೆ ಸಿಕ್ಕ ಫಲವಾಗಿ ನೂರಾರು ಬಸ್ಸುಗಳು ನಿಂತುಹೋಗಿವೆ.

ಇದನ್ನೂ ಓದಿ: ಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

ಅವುಗಳ ಮೇಲೆ ಗಿಡ ಬೆಳೆದಿದೆ. ವಿಮಾನ ನಿಲ್ದಾಣದ ಉದ್ಘಾಟನೆಗೆ ಖರ್ಚು ಮಾಡಿದ ಕಾಲು ಭಾಗವನ್ನ ವ್ಯಯಿಸಿದ್ದರೆ ಸಹಕಾರ ಸಾರಿಗೆಗೆ ಜೀವ ಬರುತ್ತಿತ್ತು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಖರ್ಚಾದ ಅರ್ಧ ಹಣಕ್ಕೆ ವಿಐಎಸ್‌ಎಲ್ ಸ್ಟೀಲ್ ಫ್ಯಾಕ್ಟರಿ ನಡೆಯುತ್ತಿತ್ತು, ಅದರ ಕಾಲು ಭಾಗಕ್ಕೆ ಎಂಪಿಎಂ ಕಾಗದ ಕಾರ್ಖಾನೆ ಚಾಲು ಆಗುತ್ತಿತ್ತು, ಬಡವರನ್ನು ಕಂಡರಾಗದ ಬಿಜೆಪಿಗಳಿಗೆ ಇವೆಲ್ಲಾ ಹೊಳೆಯುವುದಿಲ್ಲ. ಇದೆಲ್ಲಾ ಏನಾದರಾಗಲಿ, ಇನ್ನುಮುಂದೆ ಎಡೂರಪ್ಪ, ರಾಘವೇಂದ್ರ, ವಿಜ್ಯೇಂದ್ರ, ಈಶ್ವರಪ್ಪ, ಆತನ ಮಗ ಇವರೆಲ್ಲಾ ವಿಮಾನದಲ್ಲೇ ಶಿವಮೊಗ್ಗಕ್ಕೆ ಹೋಗುವುದಂತಲ್ಲಾ, ಥೂತ್ತೇರಿ

*****

ಮುಸ್ಲಿಂ ವಿದ್ವಾಂಸರೊಬ್ಬರು ಬ್ರಾಹ್ಮಣರ ಆಳ್ವಿಕೆಯಲ್ಲಿ ಆ ದೇಶ ಬಲಿಷ್ಠವಾಗುತ್ತದೆ ಎಂದಿದ್ದಾರೆ. ಈ ಮುಸ್ಲಿಂ ವಿದ್ವಾಂಸರ ಅಭದ್ರತೆಯ ಮಾತು ಕನಿಕರವೆನಿಸುತ್ತದೆ. ಮುಸಲ್ಮಾನನೊಬ್ಬ ಬ್ರಾಹ್ಮಣನನ್ನ ಹೊಗಳುವುದು, ಬ್ರಾಹ್ಮಣನು ಮುಸ್ಲಿಮರು ಹೇಗಿರಬೇಕೆಂಬ ಸೂಚನೆ ಕೊಡುವುದೇ ಈ ದೇಶದ ದುರಂತ; ಎಂದಾದರೂ ಬ್ರಾಹ್ಮಣರ ಆಳ್ವಿಕೆಯಲ್ಲಿ ಈ ದೇಶ ಎಂದು ಬಲಿಷ್ಠವಾಗಿತ್ತೇ ಎಂಬ ಬಗ್ಗೆ ಸಾಕ್ಷ್ಯಾಧಾರ ತೋರಿದ್ದರೆ ಚೆನ್ನಾಗಿತ್ತು. ಶತಮಾನಗಳ ಕಾಲ ಜಾತಿಯ ಶ್ರೇಣಿಕರಣದಿಂದ ಬಹುಸಂಖ್ಯಾತ ಶೂದ್ರ-ದಲಿತ ಶಕ್ತಿಯ ಅಂತಃಸತ್ವವೇ ನಾಶವಾಗಿ ಅವರೆಲ್ಲಾ ಗುಲಾಮರಂತೆ ಬದುಕುವಂತಾದಾಗ ವಿದೇಶಿಯರು ಈ ದೇಶಕ್ಕೆ ದಾಳಿ ಮಾಡಿ ಆಳತೊಡಗಿದರು. ಆಗ ’ಬುದ್ಧಿವಂತ’ರಾದ ಬ್ರಾಹ್ಮಣರು ವಿದೇಶಿ ಜನರ ಆಸ್ಥಾನದಲ್ಲಿ ಮಂತ್ರಿಗಳಾಗಿ ಕರಣಿಕರಾಗಿ ಆಸ್ಥಾನದ ವಿದೂಶಕರಾಗಿ ಅರಾಮವಾಗಿರತೊಡಗಿದ್ದು ಈಗ ಇತಿಹಾಸ. ಇನ್ನು ಬ್ರಿಟಿಷರು ಬಂದಾಗ ಇಂಗ್ಲಿಷ್ ಕಲಿತುಕೊಂಡು ಡಿ.ಸಿಗಳಾಗಿ, ಎಸ್ಪಿಗಳಾಗಿ ಬ್ರಿಟಿಷರ ಆಜ್ಞೆಯಂತೆ ನಮ್ಮವರನ್ನೇ ಬಗ್ಗುಬಡಿದು ಸೆರೆವಾಸಕ್ಕೆ ದೂಡಿದವರೂ ಇವರಲ್ಲಿದ್ದರು; ಬ್ರಾಹ್ಮಣ್ಯ ಪ್ರತಿಪಾದಿಸಿದ ಧರ್ಮ, ಅಸ್ಪೃಶ್ಯತೆ ಆಚರಿಸಿದ್ದರಿಂದ, ಅದಕ್ಕೆ ಸಿಕ್ಕಿದ ಜನ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಮೀಸಲಾತಿಯಿಂದ ಅಂತಹವರನ್ನು ಮೇಲೆತ್ತಬೇಕೆಂಬ ಕಾರ್ಯಕ್ರಮಕ್ಕೆ ಕೂಡ ಬೆಂಕಿಹಚ್ಚಿ ಸದ್ದಿಲ್ಲದೆ ಹತ್ತು ಪರಸೆಂಟ್ ಮೀಸಲಾತಿಯನ್ನು ಲಪಟಾಯಿಸಿದ್ದಾರೆ; ದಲಿತರೆಂದೂ ಮೇಲೆ ಬರದಂತೆ ನೋಡಿಕೊಳ್ಳಬೇಕು, ಸರಕಾರದ ಸಹಾಯಧನ ಅಥವಾ ಮೀಸಲಾತಿ ಕೊಡಬಾರದು, ಅವರು ಮೇಲೇಳದಂತೆ ನಮ್ಮ ಪಾದ ನೋಡಿಕೊಂಡು ಬದುಕಬೇಕೆಂದು ಹೇಳಿಹೋಗಿರುವ ಆರೆಸ್ಸೆಸಿನ ಗೋಳವಲಕರ ಮುಸ್ಲಿಮರನ್ನ ಎರಡನೇ ದರ್ಜೆ ಪ್ರಜೆಗಳನ್ನಾಗಿಸಿ ಎಂದಿದ್ದಾನೆ. ನೀವು ವಿದ್ವಾಂಸರಾದರೂ ಅವರ ಭಾಗಕ್ಕೆ ಎರಡನೇ ದರ್ಜೆ ಪ್ರಜೆ ಎಂಬುದು ಗೊತ್ತಿರಲಿ. ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...