Homeಅಂಕಣಗಳುಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

- Advertisement -
- Advertisement -

ಈನಾಡಿಗೆ ದುಃಖಕರವಾದ ಸಂಗತಿಯೊಂದು ಹೊರಬಿದ್ದಿದೆಯಲ್ಲಾ. ನಮ್ಮ ಧೀಮಂತ ನಾಯಕ ಎಡೂರಪ್ಪನವರು ವಿಧಾನಸಭಾ ಅಧಿವೇಶನದಲ್ಲಿ ತಮ್ಮ ಕಡೆಯ ಭಾಷಣವನ್ನು ಭಾವುಕವಾಗಿ ಮುಗಿಸಿ ದುಃಖತಪ್ತ ನಡಿಗೆಯಿಂದ ಹೊರನಡೆದಿದ್ದಾರೆ. ಅವರ ಜೊತೆ ಕರ್ನಾಟಕ ಕಂಡ ಅತ್ಯಂತ ದಕ್ಷ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಎಡೂರಪ್ಪನ ವಾಹನದವರೆಗೂ ಕಂಪನಿ ಕೊಟ್ಟಿರುವುದು ವಿಶೇಷ. ಎಡೂರಪ್ಪನವರ ಆಡಳಿತ ಅವಧಿಯ ದಾಖಲೆಗಳಲ್ಲಿ ಮೊದಲನೆಯದು ಯಾವುದೆಂದರೆ ತಾವು ಮಾಡಿದ ಉಪಕಾರಕ್ಕೆ ಪ್ರತಿಯಾಗಿ ಪಡೆದ ಚಿಲ್ಲರೆ ಕಾಣಿಕೆಯನ್ನು ಚೆಕ್ ಮುಖಾಂತರ ಪಡೆದ ಆರೋಪದಲ್ಲಿ ಜೈಲಿಗೆ ಹೋದದ್ದು ಮತ್ತು ಜೈಲಿನಿಂದ ಹೊರಬಂದದ್ದು; ಬಿಡುಗಡೆಯಾದಾಗ ಅವರ ಮನೆಯವರು ಚಪ್ಪಾಳೆ ಹೊಡೆದು ಕುಣಿದದ್ದು ಇದೇ ಬಿಜೆಪಿ ಜನರ ಸಂತಸವಾಗಿ ಪ್ರಕಟವಾಯ್ತು. ಏಕೆಂದರೆ ಎಡೂರಪ್ಪ ಮಾತ್ರ ನಮ್ಮನ್ನ ಗೆಲ್ಲಿಸಬಲ್ಲರು ಎಂದು ತಿಳಿದಿದ್ದ ಕುಲಬಾಂಧವರಿಗೆ ಅವರ ಬಿಡುಗಡೆ ಸಂಭ್ರಮವುಂಟು ಮಾಡಿದ್ದು ಸಹಜ. ಆದರೇನು ಎಡೂರಪ್ಪ ಬಿಜೆಪಿಯಿಂದ ಸಿಡಿದು ಕೆಜಿಪಿ ಮಾಡಿಕೊಂಡು ಬಿಜೆಪಿಯನ್ನ ಮಕಾಡೆ ಮಲಗಿಸಿದ್ದು ಈಗ ಇತಿಹಾಸ. ಎಡೂರಪ್ಪನವರ ಶಕ್ತಿಯರಿತ ಬಿಜೆಪಿಗಳು ಮತ್ತೆ ಪಾರ್ಟಿಗೆ ಸೇರಿಸಿಕೊಂಡು ಕಾಂಗೈ ಮತ್ತು ಜೆಡಿಎಸ್‌ನಿಂದ ಮಾರಿಕೊಂಡವರನ್ನು ಕೊಂಡು ಇತಿಹಾಸ ಕಂಡರಿಯದ ಆಡಳಿತ ನೀಡಿದ್ದು ಅಲ್ಲದೆ, ಬೊಮ್ಮಾಯಿಯವರನ್ನು ತಂದು ಕರ್ನಾಟಕದ ಮೇಲೆ ಹೇರಿದ್ದೂ ಒಂದು ದಾಖಲೆಯಂತಲ್ಲಾ, ಥೂತ್ತೇರಿ.

*****

ಹಾಗೆ ನೋಡಿದರೆ ಎಡೂರಪ್ಪನ ಚರಿತ್ರೆ ಇನ್ನೂ ಮುಗಿದಿಲ್ಲ. ’ನಾನು ಸಕ್ರಿಯನಾಗಿ ಈ ನಾಡನ್ನು ತಿರುಗಿ ಪಾರ್ಟಿಯನ್ನು ಪವರ್ರಿಗೆ ತರುತ್ತೇನೆ. ಅದಕ್ಕಾಗಿ ವಿರೋಧಪಕ್ಷದವರ ಸಹಕಾರ ಪಡೆಯುತ್ತೇನೆ’ ಎಂದಿದ್ದಾರೆ. ಎಡೂರಪ್ಪನ ಒಬ್ಬ ಮಗ ಸಂಸದ, ಮತ್ತೊಬ್ಬ ಕೇಸರಿ ಪಾರ್ಟಿಯ ಉಪಾಧ್ಯಕ್ಷ. ಅವರ ಭವಿಷ್ಯ ಬಹಳ ಮುಖ್ಯ ವಿಷಯ. ಇಂತಿರುವಾಗ ಬಿಜೆಪಿಗಳು ವಂಶಾಡಳಿತದ ಬಗ್ಗೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಿಯೇ ಇಲ್ಲ. ಏಕೆಂದರೆ ಸತ್ಯ ಮರೆಮಾಚಿ ಸದಾ ಸುಳ್ಳು ಒದರುವಂತೆ ಆ ಪಾರ್ಟಿಯೇ ಟ್ರೇನಿಂಗ್ ಕೊಟ್ಟಿದೆ. ಆ ಪಾರ್ಟಿಯಿಂದ ಆಗಿರುವ ಪ್ರಧಾನಿಯೇ ಬಹಿರಂಗವಾಗಿ ಹೇಳಿರುವ ಸುಳ್ಳು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ದೆಹಲಿಯ ಕನ್ನಡ ಸಾಂಸ್ಕೃತಿಕ ವೇದಿಕೆಯೊಂದರಲ್ಲಿ, ಕರ್ನಾಟಕಕ್ಕೆ ಅತ್ಯಧಿಕ ಅನುದಾನ ಕೊಟ್ಟಿದ್ದೇನೆ ಎಂದುಬಿಟ್ಟಿದ್ದಾರೆ ಪ್ರಧಾನಿ. ಬೆಚ್ಚಿಬಿದ್ದ ದೆಹಲಿ ಕನ್ನಡಿಗರು ಪ್ರಧಾನಿಯನ್ನ ಮಿಕಮಿಕ ನೋಡಿದರಂತೆ. ಏಕೆಂದರೆ ಕರ್ನಾಟಕ ಇತಿಹಾಸದಲ್ಲೇ ಕಂಡುಕಾಣದಿದ್ದಂತಹ ಪ್ರವಾಹಕ್ಕೆ ಸಿಕ್ಕಿ ತತ್ತರಿಸಿದಾಗ ಇಲ್ಲಿನ ಸರಕಾರ ಕೇಳಿದ 35 ಸಾವಿರ ಕೋಟಿಯ ಬದಲು ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ ನಾಲ್ಕೈದು ಸಾವಿರ ಕೋಟಿ. ಇನ್ನು ಜಿಎಸ್‌ಟಿ ಬಾಬ್ತಿನ ದೊಡ್ಡ ಪಾಲನ್ನ ಕೊಟ್ಟೆ ಇಲ್ಲ. ಕರ್ನಾಟಕವನ್ನ ಕೊಳ್ಳೆ ಹೊಡೆದು ಇತರ ರಾಜ್ಯಗಳಿಗೆ ಹಂಚುವುದನ್ನು ವಿರೋಧಿಸಿ ಬಿಜೆಪಿಗಳೇ ಮಾತನಾಡುತ್ತಿರುವಾಗ ಸತ್ಯದ ತಲೆಮೇಲೆ ಹೊಡೆದಂತೆ ಸುಳ್ಳು ಹೇಳಿದ ಪ್ರಧಾನಿಯನ್ನು ನೋಡಿ ಬಿಜೆಪಿಗಳೇ ದಂಗುಬಡಿದು ತತ್ತರಿಸಿಹೋದರಂತಲ್ಲಾ. ಯಾರದ್ದೇನಾದರೂ ಅಗಲಿ, ನನಗೆ ನನ್ನದೇ ಚಿಂತೆ ಅಂತ, ವೇದಿಕೆ ಮೇಲೆ ಕರೆಯದಿದ್ದಕ್ಕೆ ಸಿಟ್ಟಾದ ಸಾಹಿತ್ಯ ಪರಿಷತ್ ಜೋಶಿಯ ಮಂತ್ರಿ ಸ್ಥಾನಮಾನ ವ್ಯರ್ಥವಾಗಿ ಹೋಯ್ತಂತಲ್ಲ, ಥೂತ್ತೇರಿ.

*****

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬಂತು. ನರೇಂದ್ರ ಮೋದಿಯವರು ನಿಲ್ದಾಣವನ್ನು ಉದ್ಘಾಟಿಸಿದರು. ಆದರೆ ಬಿಜೆಪಿಗಳಿಗೆ ಜನ ಸೇರುವ ಅನುಮಾನ ಮೊದಲೇ ಕಾಡಿದ್ದರಿಂದ ಶಿವಮೊಗ್ಗದ ಬಡಾವಣೆಗಳಿಗೆ ಬಸ್ಸು ಕಳಿಸಿದರು. ಹಳ್ಳಿಹಳ್ಳಿಗೆ ವಾಹನಗಳನ್ನು ಕಳಿಸಿದರು. ಜೊತೆಗೆ ಕೈಗೆ ಕಾಸು ಕೊಟ್ಟು ಊಟ ಕೊಟ್ಟರು. ಆದರೆ, ಶಾಲಾ ಮಕ್ಕಳನ್ನ ತಂದು ಕುರ್ಚಿಗೆ ಕಟ್ಟಿಹಾಕಿದಂತೆ ಕೂರಿಸಿದ್ದು ಮಾತ್ರ ಅಕ್ಷಮ್ಯ ಅಪರಾಧ. ಏಕೆಂದರೆ ಶಾಲೆಯ ಮಕ್ಕಳನ್ನ ಕಳುಹಿಸಲು ಹಿಂಜರಿದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕ್ರಮ ಜರುಗಿಸುವುದಾಗಿ ಬೆದರಿಸಿ ಮಕ್ಕಳನ್ನ ಹಿಂಸೆಗೆ ದೂಡಿದ್ದು ಮಕ್ಕಳ ದ್ವೇಷಿಗಳು ಮಾಡಿದ ಕೆಲಸ. ಏರೊಪ್ಲೇನ್ ನೋಡಿ ಊಟಮಾಡಿ ಬರುವ ಕೆಲಸ ಕೆಲವೇ ಕೆಲವು ಮಕ್ಕಳಿಗೆ ಸಂಭ್ರಮವಾಗಿ ಕಂಡರೂ ಈ ಬಿಜೆಪಿಗಳು ಮಕ್ಕಳ ಮನಸ್ಸನ್ನು ಕೆಡಿಸಲು ಕೈಹಾಕಿರುವುದು ಮಾತ್ರ ಅಕ್ಷಮ್ಯ. ವಾಸ್ತವ ಸ್ಥಿತಿ ಏನೆಂದರೆ ಶಿವಮೊಗ್ಗ ಜಿಲ್ಲೆಯ ಹಲವು ಹಳ್ಳಿಗಳ ಕಾಡುದಾರಿಯಲ್ಲಿ ಮಕ್ಕಳು ಶಾಲೆಗಾಗಿ ನಡೆಯುತ್ತಾರೆ, ಸರಿಯಾದ ರಸ್ತೆಗಳಿಲ್ಲ, ಸರಿಯಾದ ಸಮಯಕ್ಕೆ ಬರುವ ಬಸ್ಸುಗಳಿಲ್ಲ, ಮಲೆನಾಡಿನ ಜೀವನಾಡಿಯಾಗಿದ್ದ ಸಹಕಾರ ಸಾರಿಗೆ ಕಳ್ಳರ ಕೈಗೆ ಸಿಕ್ಕ ಫಲವಾಗಿ ನೂರಾರು ಬಸ್ಸುಗಳು ನಿಂತುಹೋಗಿವೆ.

ಇದನ್ನೂ ಓದಿ: ಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

ಅವುಗಳ ಮೇಲೆ ಗಿಡ ಬೆಳೆದಿದೆ. ವಿಮಾನ ನಿಲ್ದಾಣದ ಉದ್ಘಾಟನೆಗೆ ಖರ್ಚು ಮಾಡಿದ ಕಾಲು ಭಾಗವನ್ನ ವ್ಯಯಿಸಿದ್ದರೆ ಸಹಕಾರ ಸಾರಿಗೆಗೆ ಜೀವ ಬರುತ್ತಿತ್ತು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಖರ್ಚಾದ ಅರ್ಧ ಹಣಕ್ಕೆ ವಿಐಎಸ್‌ಎಲ್ ಸ್ಟೀಲ್ ಫ್ಯಾಕ್ಟರಿ ನಡೆಯುತ್ತಿತ್ತು, ಅದರ ಕಾಲು ಭಾಗಕ್ಕೆ ಎಂಪಿಎಂ ಕಾಗದ ಕಾರ್ಖಾನೆ ಚಾಲು ಆಗುತ್ತಿತ್ತು, ಬಡವರನ್ನು ಕಂಡರಾಗದ ಬಿಜೆಪಿಗಳಿಗೆ ಇವೆಲ್ಲಾ ಹೊಳೆಯುವುದಿಲ್ಲ. ಇದೆಲ್ಲಾ ಏನಾದರಾಗಲಿ, ಇನ್ನುಮುಂದೆ ಎಡೂರಪ್ಪ, ರಾಘವೇಂದ್ರ, ವಿಜ್ಯೇಂದ್ರ, ಈಶ್ವರಪ್ಪ, ಆತನ ಮಗ ಇವರೆಲ್ಲಾ ವಿಮಾನದಲ್ಲೇ ಶಿವಮೊಗ್ಗಕ್ಕೆ ಹೋಗುವುದಂತಲ್ಲಾ, ಥೂತ್ತೇರಿ

*****

ಮುಸ್ಲಿಂ ವಿದ್ವಾಂಸರೊಬ್ಬರು ಬ್ರಾಹ್ಮಣರ ಆಳ್ವಿಕೆಯಲ್ಲಿ ಆ ದೇಶ ಬಲಿಷ್ಠವಾಗುತ್ತದೆ ಎಂದಿದ್ದಾರೆ. ಈ ಮುಸ್ಲಿಂ ವಿದ್ವಾಂಸರ ಅಭದ್ರತೆಯ ಮಾತು ಕನಿಕರವೆನಿಸುತ್ತದೆ. ಮುಸಲ್ಮಾನನೊಬ್ಬ ಬ್ರಾಹ್ಮಣನನ್ನ ಹೊಗಳುವುದು, ಬ್ರಾಹ್ಮಣನು ಮುಸ್ಲಿಮರು ಹೇಗಿರಬೇಕೆಂಬ ಸೂಚನೆ ಕೊಡುವುದೇ ಈ ದೇಶದ ದುರಂತ; ಎಂದಾದರೂ ಬ್ರಾಹ್ಮಣರ ಆಳ್ವಿಕೆಯಲ್ಲಿ ಈ ದೇಶ ಎಂದು ಬಲಿಷ್ಠವಾಗಿತ್ತೇ ಎಂಬ ಬಗ್ಗೆ ಸಾಕ್ಷ್ಯಾಧಾರ ತೋರಿದ್ದರೆ ಚೆನ್ನಾಗಿತ್ತು. ಶತಮಾನಗಳ ಕಾಲ ಜಾತಿಯ ಶ್ರೇಣಿಕರಣದಿಂದ ಬಹುಸಂಖ್ಯಾತ ಶೂದ್ರ-ದಲಿತ ಶಕ್ತಿಯ ಅಂತಃಸತ್ವವೇ ನಾಶವಾಗಿ ಅವರೆಲ್ಲಾ ಗುಲಾಮರಂತೆ ಬದುಕುವಂತಾದಾಗ ವಿದೇಶಿಯರು ಈ ದೇಶಕ್ಕೆ ದಾಳಿ ಮಾಡಿ ಆಳತೊಡಗಿದರು. ಆಗ ’ಬುದ್ಧಿವಂತ’ರಾದ ಬ್ರಾಹ್ಮಣರು ವಿದೇಶಿ ಜನರ ಆಸ್ಥಾನದಲ್ಲಿ ಮಂತ್ರಿಗಳಾಗಿ ಕರಣಿಕರಾಗಿ ಆಸ್ಥಾನದ ವಿದೂಶಕರಾಗಿ ಅರಾಮವಾಗಿರತೊಡಗಿದ್ದು ಈಗ ಇತಿಹಾಸ. ಇನ್ನು ಬ್ರಿಟಿಷರು ಬಂದಾಗ ಇಂಗ್ಲಿಷ್ ಕಲಿತುಕೊಂಡು ಡಿ.ಸಿಗಳಾಗಿ, ಎಸ್ಪಿಗಳಾಗಿ ಬ್ರಿಟಿಷರ ಆಜ್ಞೆಯಂತೆ ನಮ್ಮವರನ್ನೇ ಬಗ್ಗುಬಡಿದು ಸೆರೆವಾಸಕ್ಕೆ ದೂಡಿದವರೂ ಇವರಲ್ಲಿದ್ದರು; ಬ್ರಾಹ್ಮಣ್ಯ ಪ್ರತಿಪಾದಿಸಿದ ಧರ್ಮ, ಅಸ್ಪೃಶ್ಯತೆ ಆಚರಿಸಿದ್ದರಿಂದ, ಅದಕ್ಕೆ ಸಿಕ್ಕಿದ ಜನ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಮೀಸಲಾತಿಯಿಂದ ಅಂತಹವರನ್ನು ಮೇಲೆತ್ತಬೇಕೆಂಬ ಕಾರ್ಯಕ್ರಮಕ್ಕೆ ಕೂಡ ಬೆಂಕಿಹಚ್ಚಿ ಸದ್ದಿಲ್ಲದೆ ಹತ್ತು ಪರಸೆಂಟ್ ಮೀಸಲಾತಿಯನ್ನು ಲಪಟಾಯಿಸಿದ್ದಾರೆ; ದಲಿತರೆಂದೂ ಮೇಲೆ ಬರದಂತೆ ನೋಡಿಕೊಳ್ಳಬೇಕು, ಸರಕಾರದ ಸಹಾಯಧನ ಅಥವಾ ಮೀಸಲಾತಿ ಕೊಡಬಾರದು, ಅವರು ಮೇಲೇಳದಂತೆ ನಮ್ಮ ಪಾದ ನೋಡಿಕೊಂಡು ಬದುಕಬೇಕೆಂದು ಹೇಳಿಹೋಗಿರುವ ಆರೆಸ್ಸೆಸಿನ ಗೋಳವಲಕರ ಮುಸ್ಲಿಮರನ್ನ ಎರಡನೇ ದರ್ಜೆ ಪ್ರಜೆಗಳನ್ನಾಗಿಸಿ ಎಂದಿದ್ದಾನೆ. ನೀವು ವಿದ್ವಾಂಸರಾದರೂ ಅವರ ಭಾಗಕ್ಕೆ ಎರಡನೇ ದರ್ಜೆ ಪ್ರಜೆ ಎಂಬುದು ಗೊತ್ತಿರಲಿ. ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...