Homeಅಂಕಣಗಳುಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

- Advertisement -
- Advertisement -

ಅಮೃತ ಮಹೋತ್ಸವದ ಪ್ರಚಾರಕ್ಕಾಗಿ ಸರಕಾರ ಕೊಟ್ಟ ಜಾಹೀರಾತಿನಲ್ಲಿ ನೆಹರು ಫೋಟೋನೇ ಇಲ್ಲದಂತೆ ಮಾಡಿ ಆ ಜಾಗಕ್ಕೆ ವೀರ ಸಾವರ್ಕರನ ಫೋಟೋವನ್ನ ಬೊಮ್ಮಾಯಿ ಹಾಕಿಸಿದ್ದಾರಂತಲ್ಲಾ. ಇದರಿಂದ ಕುಪಿತಗೊಂಡಿರುವ ಸ್ವಾತಂತ್ರ್ಯವೀರ ಲಿಂಗಾಯಿತರು, ಸಕಲರಿಗೂ ಲೇಸನ್ನ ಬಯಸುವ ದಯವೇ ಧರ್ಮದ ಮೂಲವೆಂದು, ಜಗತ್ತಿಗೆ ಸಾರಿದ ಬಸವಧರ್ಮದಲ್ಲಿ ಹುಟ್ಟಿದ ಈ ಬೊಮ್ಮಾಯಿ ಇತಿಹಾಸವನ್ನು ತಿರುಚಿ ಬಸವಕುಲಕೆ ಅವಮಾನ ಮಾಡಿಬಿಟ್ಟಿದ್ದಾರೆ. ನೆಹರು ಜೈಲಲ್ಲಿ ಇದ್ದಷ್ಟೇ ವರ್ಷ ಪ್ರಧಾನಿಯಾಗಿದ್ದರು. ಯೋಜನೆಗಳ ಮುಖಾಂತರ ಬಡ ಭಾರತವನ್ನ ಅಭಿವೃದ್ಧಿಪಥಕ್ಕೆ ತಂದು ನಿಲ್ಲಿಸಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವ ದೇಶದಲ್ಲಿ ಕಾಲೂರುವಂತೆ ಮಾಡಿದರು. ಲೋಕಸಭೆಯಲ್ಲಿ ಅವರನ್ನು ಟೀಕಿಸಿ ಮಾತನಾಡುವುದನ್ನ ಸಹಿಸಿಕೊಂಡರು; ತನ್ನ ಜನ್ಮದಿನವನ್ನ ಮಕ್ಕಳ ದಿನಾಚರಣೆಯನ್ನಾಗಿಸಿದರು; ಅವರು ಬದುಕಿದಷ್ಟೂ ದಿನ ಈ ದೇಶದ ಸರ್ವ ಜನಾಂಗಕ್ಕೂ ಪ್ರಧಾನಿಯಾಗಿದ್ದರೂ. ದಯಾಪರನಾದ ನೆಹರು ವ್ಯಕ್ತಿತ್ವವನ್ನ ದ್ವೇಷಿಸುವ ಬಿಜೆಪಿಗಳು ಎಂದಿನಂತೆ ತಮ್ಮ ಸಂಚಿನಿಂದ ಲಿಂಗಾಯಿತರ ಬೊಮ್ಮಾಯಿಯಿಂದ ನೆಹರುಗೆ ಅವಮಾನ ಮಾಡಿಸಿ ಆ ಮುಖಾಂತರ ಲಿಂಗಾಯಿತರಿಗೇ ಈ ಆರೆಸೆಸ್ಸಿಗರು ಅವಮಾನ ಮಾಡಿಸಿದ್ದಾರೆಂದು ಶರಣ ಸಮೂಹ ಸಿಟ್ಟಾಗಿದೆಯಂತಲ್ಲಾ, ಥೂತ್ತೇರಿ.

****

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸರಕಾರವನ್ನು ಮಾಧುಸ್ವಾಮಿ ಎಂಬ ಮಂತ್ರಿ ’ಇದು ತೆವಳಿಕೊಂಡು ನಡೆಯುತ್ತಿರುವ ಸರಕಾರ; ಅಂತೂ ಹೇಗೋ ದಡಮುಟ್ಟಿ ಮನೆಗೆ ಹೋಗುತ್ತೇವೆ’ ಎಂದು ಬಣ್ಣಿಸಿರುವ ಮಾತನ್ನು ಕರ್ನಾಟಕದ ಜನಸ್ತೋಮ ಇಡಿಯಾಗಿ ಸ್ವೀಕರಿಸಿ ಒಂದು ತಿದ್ದುಪಡಿ ಮಾಡಿಕೊಂಡಿದೆಯಂತಲ್ಲಾ. ಆ ತಿದ್ದುಪಡಿ ಯಾವುದೆಂದರೆ ಇದು ತೆವಳುತ್ತಿರುವ ಸರಕಾರವಲ್ಲಾ, ಕುಂಟುತ್ತಿರುವ ಸರಕಾರ ಎಂದರೆ ಸರಿಯಾಗುತ್ತಿತ್ತು ಎಂದು. ಸದರಿ ಮಾಧುಸ್ವಾಮಿ ಮಾತು ಈವರೆಗೂ ವಿರೋಧಪಕ್ಷಗಳಿಗೇ ಹೊಳೆದಿರಲಿಲ್ಲವಂತಲ್ಲಾ. ಅದಕ್ಕೆ ಕಾರಣ ಸರಕಾರ ತೆವಳುತ್ತಿದೆಯೋ ಕುಂಟುತ್ತಿದೆಯೋ ಎಂಬುದು ಆಡಳಿತದ ಭಾಗವಾಗಿದ್ದವರಿಗೆ ಹೊಳೆಯುತ್ತದೆಯೇ ಹೊರತು, ಹೊರಗಿನವರಿಗೆ ತಿಳಿಯಲಾರದು. ಇಂತಹ ಸರಕಾರ ಜತೆಗಿಟ್ಟುಕೊಂಡು ಸ್ವಾತಂತ್ರ್ಯದ ಅಮೃತೋತ್ಸವಕ್ಕಾಗಿ ಪಾರ್ಟಿಯ ನಿಷ್ಟಾವಂತ ಕಾರ್ಯಕರ್ತರು ಕೈತುಂಬಾ ಬಾವುಟ ಹಿಡಿದು ಮನೆಮನೆಗೆ ಹಂಚುತ್ತಾ ಹೋಗುತ್ತಿರುವಾಗ ಮಳೆಗೆ ಮನೆಬಿದ್ದ ಜಾಗಕ್ಕೆ ಹೋಗಿ, ಮನೆ ಕಳೆದುಕೊಂಡು ಅಳುತ್ತಿದ್ದ ಮಹಿಳೆಗೆ ಬಾವುಟಕೊಟ್ಟು “ಇದನ್ನ ನಿನ್ನ ಮನೆ ಮೇಲಕ್ಕೆ ಕಟ್ಟಕ್ಕ” ಎನ್ನಲಾಗಿ ಆ ಮಹಿಳೆ ಸಿಟ್ಟುಗೊಂಡು “ಅಯ್ಯಾ ನಿನ್ನ ಮನೆಹಾಳಾಗ ನಿನಿಗೇನು ಕಣ್ಣು ಇಂಗಿಹೋಗವಾ? ಮನೆ ಕಳಕಂಡು ಅಳುತಾಯಿದ್ರೆ ಬಾವುಟ ಹಾರಿಸು ಅಂತ ಬಂದಿದ್ದಯಲ್ಲಾ ಥೂ ನಿನ್ನ ಜನ್ಮಕ್ಕೆ” ಅಂದಾಗ ಸಾರಿ ಕಣಕ್ಕ ಎಂದು ಜಾಗ ಖಾಲಿಮಾಡಿದನಂರಲ್ಲಾ, ಥೂತ್ತೇರಿ.

****

ಸಂಘಿಗಳು ನಿಜ ಶ್ರದ್ಧೆಯನ್ನು ತೊರೆದು ಸಂಭ್ರಮವನ್ನ ಸೃಷ್ಟಿಮಾಡಿಕೊಂಡು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ ಹಿಂದೆಂದೂ ಕಂಡು ಕೇಳರಿಯದಿದ್ದ ಜಲ ಪ್ರಳಯಕ್ಕೆ ದೇಶ ತುತ್ತಾಗಿ ಹೋಗಿದೆ. ಮನೆಯ ಗೋಡೆಗಳು ಕುಸಿದಿವೆ; ಹಸುಗೂಸುಗಳೂ ಅಸುನೀಗಿವೆ; ಸೇತುವೆಗಳು ಕೊಚ್ಚಿಹೋಗಿವೆ; ಗುಡ್ಡಗಳು ಕುಸಿದು ಹೋಗಿವೆ; ಸಂತ್ರಸ್ತ ಜನರ ಕಣ್ಣೀರು ಮಳೆ ಹನಿಗಳೊಂದಿಗೆ ಸೇರಿಹೋಗಿವೆ. ಇಂತಹ ಮಳೆಯ ನಡುವೆ ಶಾಲೆಗೆ ಹೋದ ಹೆಣ್ಣು ಮಗುವೊಂದು ದಬ್ಬೆಯಿಂದ ಕಟ್ಟಿದ ಸೇತುವೆ ಮೇಲೆ ನಡೆದು ಬರುವಾಗ ಆಯತಪ್ಪಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಆ ಮನೆಯಲ್ಲಿ ದುಃಖ ಶಾಶ್ವತವಾಗಿಹೋಯ್ತು. ಈ ಸಂಬಂಧದಾಗಿ ಆ ಪ್ರದೇಶದ ಜನ ನಾಯಕನನ್ನ ಮಾತನಾಡಿಸಿದರೆ ನನ್ನ ಅವಧಿಯಲ್ಲಿ ಸೇತುವೆ ಆಗಿಲ್ಲ ನಿಜ ಆದರೆ ಎಪ್ಪತ್ತು ವರ್ಷ ದೇಶ ಆಳಿದವರು ಏನು ಮಾಡಿದ್ದಾರೆ. ಹೋಗಲಿ ಅವರ ಅವಧಿಯಲ್ಲಿ ಇಂತಹ ಮಳೆ ಬಂದಿತ್ತೆ ಎಂದು ಮಾತನಾಡಿದಾನಲ್ಲಾ. ಈ ಮೂರ್ಖ ಬಿಜೆಪಿ ಎಮ್ಮೆಲ್ಲೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ದೇಶದ ಯಾವುದೇ ಸಮಸ್ಯೆಯನ್ನು ಮುಸುಡಿಗೆ ಹಿಡಿದರೂ ಕೂಡ ಎಪ್ಪತ್ತು ವರ್ಷ ಆಳಿದವರು ಏನು ಮಾಡುತ್ತಿದ್ದರು ಎನ್ನುತ್ತವೆ. ಇದೇ ಮೋದಿ ಕಾಂಗ್ರೆಸ್ಸಿಗೆ ಅರವತ್ತು ವರ್ಷ ಅಧಿಕಾರ ಕೊಟ್ಟಿರಿ, ನೀವು ನನಗೆ ಕೇವಲ ಅರವತ್ತು ದಿವಸ ಕೊಡಿ ಎಂದಿದ್ದರು. ಇಲ್ಲಿ ಕಾಂಗ್ರೆಸ್ಸೇತರ ಮೊರಾರ್ಜಿ, ವಾಜಪೇಯಿ, ದೇವೇಗೌಡರು, ಗುಜ್ರಾಲ್ ಆಡಳಿತವಿದ್ದ ಲೆಕ್ಕ ಈ ಬಿಜೆಪಿಗಳಿಗೇ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

****

ಈ ಬಿಜೆಪಿಗಳು ಸಾವರ್ಕರ್ ಚಿತ್ರವನ್ನು ಸ್ವತಂತ್ರ ಹೋರಾಟಗಾರರ ಸಾಲಿಗೆ ತಂದು ಅಂಟಿಸತೊಡಗಿವೆ. ಅಂಡಮಾನ್ ದ್ವೀಪದ ಕೊಠಡಿಯಲ್ಲಿರಲಾಗದೆ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಕೊಟ್ಟು ಭಾರತಕ್ಕೆ ಬಂದು ಪುರೋಹಿತಶಾಹಿ ಧರ್ಮದ ಪುನರುತ್ಥಾನ ಕೈಂಕರ್ಯದಲ್ಲಿ ನಿರತರಾದ ಸಾವರ್ಕರ್ ಮಾನ ಉಳಿಸಲು ಆರೆಸೆಸ್ಸಿಗರು ವೀರ ಪದವನ್ನ ಸೇರಿಸಿದರು. ಅಂಡಮಾನ್ ಜೈಲಿನ ಕೊಠಡಿಯಲ್ಲೇ ಆಯಸ್ಸು ಮುಗಿಸಿ ನೀರು ಪಾಲಾದ ಅಸಂಖ್ಯಾತ ಜನರ್‍ಯಾರು ವೀರರಲ್ಲ. ಸೋತು ಶರಣಾದ ಸಾವರ್ಕರ್ ವೀರ! ಇಂತಹ ವೀರನ ಚಿತ್ರ ತಂದು ಹದಿನೇಳು ವರ್ಷ ಪ್ರಧಾನಿಯಾಗಿದ್ದ ನೆಹರು ಚಿತ್ರದ ಜಾಗದಲ್ಲಿ ಅಂಟಿಸಿವೆ ಮತ್ತು ತಮ್ಮ ಕೃತ್ಯವನ್ನ ಸಮರ್ಥಿಸಿವೆ. ಇತಿಹಾಸವನ್ನೇ ಅಳಿಸಿಹಾಕುವ ಈ ಕಾರ್ಯದ ವಿರುದ್ಧ ಕನ್ನಡದ ಯಾವ ಸಾಹಿತಿಯೂ ತುಟಿಬಿಚ್ಚಿಲ್ಲ. ಬಹುಶಃ ಈ ರಣಮಳೆಯಲ್ಲಿ ಒಳಸೇರಿಕೊಂಡು ಕೃತಿ ರಚನೆಯಲ್ಲಿ ತೊಡಗಿರಬಹುದು. ಇನ್ನ ಪಠ್ಯಪುಸ್ತಕ ತಿದ್ದಿ ದಕ್ಕಿಸಿಕೊಂಡ ತಿಪಟೂರಿನ ನಾಗೇಶ್ ಎಂಬ ಸಚಿವನ ಹಿಂಬಾಲಕರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಥಾದಲ್ಲಿ ರಾಷ್ಟ್ರಧ್ವಜಕ್ಕಿಂತ ತಮ್ಮ ಸಂಘದ ಧ್ವಜವನ್ನೇ ಎತ್ತರದಲ್ಲಿ ಹಾರಿಸುತ್ತ ಹೋಗಿದ್ದು ನೋಡಿದ ತಿಪಟೂರಿನ ಜನ ಮನುಷ್ಯನಿಗೆ ಹುಚ್ಚು ಕೆರಳಿದರೆ ಏನಾಗುತ್ತವೆ ಎಂಬುದಕ್ಕೆ ಈ ಜನಗಳೇ ಉದಾಹರಣೆಯೆಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...