Homeಅಂಕಣಗಳುಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

- Advertisement -
- Advertisement -

ಅಮೃತ ಮಹೋತ್ಸವದ ಪ್ರಚಾರಕ್ಕಾಗಿ ಸರಕಾರ ಕೊಟ್ಟ ಜಾಹೀರಾತಿನಲ್ಲಿ ನೆಹರು ಫೋಟೋನೇ ಇಲ್ಲದಂತೆ ಮಾಡಿ ಆ ಜಾಗಕ್ಕೆ ವೀರ ಸಾವರ್ಕರನ ಫೋಟೋವನ್ನ ಬೊಮ್ಮಾಯಿ ಹಾಕಿಸಿದ್ದಾರಂತಲ್ಲಾ. ಇದರಿಂದ ಕುಪಿತಗೊಂಡಿರುವ ಸ್ವಾತಂತ್ರ್ಯವೀರ ಲಿಂಗಾಯಿತರು, ಸಕಲರಿಗೂ ಲೇಸನ್ನ ಬಯಸುವ ದಯವೇ ಧರ್ಮದ ಮೂಲವೆಂದು, ಜಗತ್ತಿಗೆ ಸಾರಿದ ಬಸವಧರ್ಮದಲ್ಲಿ ಹುಟ್ಟಿದ ಈ ಬೊಮ್ಮಾಯಿ ಇತಿಹಾಸವನ್ನು ತಿರುಚಿ ಬಸವಕುಲಕೆ ಅವಮಾನ ಮಾಡಿಬಿಟ್ಟಿದ್ದಾರೆ. ನೆಹರು ಜೈಲಲ್ಲಿ ಇದ್ದಷ್ಟೇ ವರ್ಷ ಪ್ರಧಾನಿಯಾಗಿದ್ದರು. ಯೋಜನೆಗಳ ಮುಖಾಂತರ ಬಡ ಭಾರತವನ್ನ ಅಭಿವೃದ್ಧಿಪಥಕ್ಕೆ ತಂದು ನಿಲ್ಲಿಸಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವ ದೇಶದಲ್ಲಿ ಕಾಲೂರುವಂತೆ ಮಾಡಿದರು. ಲೋಕಸಭೆಯಲ್ಲಿ ಅವರನ್ನು ಟೀಕಿಸಿ ಮಾತನಾಡುವುದನ್ನ ಸಹಿಸಿಕೊಂಡರು; ತನ್ನ ಜನ್ಮದಿನವನ್ನ ಮಕ್ಕಳ ದಿನಾಚರಣೆಯನ್ನಾಗಿಸಿದರು; ಅವರು ಬದುಕಿದಷ್ಟೂ ದಿನ ಈ ದೇಶದ ಸರ್ವ ಜನಾಂಗಕ್ಕೂ ಪ್ರಧಾನಿಯಾಗಿದ್ದರೂ. ದಯಾಪರನಾದ ನೆಹರು ವ್ಯಕ್ತಿತ್ವವನ್ನ ದ್ವೇಷಿಸುವ ಬಿಜೆಪಿಗಳು ಎಂದಿನಂತೆ ತಮ್ಮ ಸಂಚಿನಿಂದ ಲಿಂಗಾಯಿತರ ಬೊಮ್ಮಾಯಿಯಿಂದ ನೆಹರುಗೆ ಅವಮಾನ ಮಾಡಿಸಿ ಆ ಮುಖಾಂತರ ಲಿಂಗಾಯಿತರಿಗೇ ಈ ಆರೆಸೆಸ್ಸಿಗರು ಅವಮಾನ ಮಾಡಿಸಿದ್ದಾರೆಂದು ಶರಣ ಸಮೂಹ ಸಿಟ್ಟಾಗಿದೆಯಂತಲ್ಲಾ, ಥೂತ್ತೇರಿ.

****

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸರಕಾರವನ್ನು ಮಾಧುಸ್ವಾಮಿ ಎಂಬ ಮಂತ್ರಿ ’ಇದು ತೆವಳಿಕೊಂಡು ನಡೆಯುತ್ತಿರುವ ಸರಕಾರ; ಅಂತೂ ಹೇಗೋ ದಡಮುಟ್ಟಿ ಮನೆಗೆ ಹೋಗುತ್ತೇವೆ’ ಎಂದು ಬಣ್ಣಿಸಿರುವ ಮಾತನ್ನು ಕರ್ನಾಟಕದ ಜನಸ್ತೋಮ ಇಡಿಯಾಗಿ ಸ್ವೀಕರಿಸಿ ಒಂದು ತಿದ್ದುಪಡಿ ಮಾಡಿಕೊಂಡಿದೆಯಂತಲ್ಲಾ. ಆ ತಿದ್ದುಪಡಿ ಯಾವುದೆಂದರೆ ಇದು ತೆವಳುತ್ತಿರುವ ಸರಕಾರವಲ್ಲಾ, ಕುಂಟುತ್ತಿರುವ ಸರಕಾರ ಎಂದರೆ ಸರಿಯಾಗುತ್ತಿತ್ತು ಎಂದು. ಸದರಿ ಮಾಧುಸ್ವಾಮಿ ಮಾತು ಈವರೆಗೂ ವಿರೋಧಪಕ್ಷಗಳಿಗೇ ಹೊಳೆದಿರಲಿಲ್ಲವಂತಲ್ಲಾ. ಅದಕ್ಕೆ ಕಾರಣ ಸರಕಾರ ತೆವಳುತ್ತಿದೆಯೋ ಕುಂಟುತ್ತಿದೆಯೋ ಎಂಬುದು ಆಡಳಿತದ ಭಾಗವಾಗಿದ್ದವರಿಗೆ ಹೊಳೆಯುತ್ತದೆಯೇ ಹೊರತು, ಹೊರಗಿನವರಿಗೆ ತಿಳಿಯಲಾರದು. ಇಂತಹ ಸರಕಾರ ಜತೆಗಿಟ್ಟುಕೊಂಡು ಸ್ವಾತಂತ್ರ್ಯದ ಅಮೃತೋತ್ಸವಕ್ಕಾಗಿ ಪಾರ್ಟಿಯ ನಿಷ್ಟಾವಂತ ಕಾರ್ಯಕರ್ತರು ಕೈತುಂಬಾ ಬಾವುಟ ಹಿಡಿದು ಮನೆಮನೆಗೆ ಹಂಚುತ್ತಾ ಹೋಗುತ್ತಿರುವಾಗ ಮಳೆಗೆ ಮನೆಬಿದ್ದ ಜಾಗಕ್ಕೆ ಹೋಗಿ, ಮನೆ ಕಳೆದುಕೊಂಡು ಅಳುತ್ತಿದ್ದ ಮಹಿಳೆಗೆ ಬಾವುಟಕೊಟ್ಟು “ಇದನ್ನ ನಿನ್ನ ಮನೆ ಮೇಲಕ್ಕೆ ಕಟ್ಟಕ್ಕ” ಎನ್ನಲಾಗಿ ಆ ಮಹಿಳೆ ಸಿಟ್ಟುಗೊಂಡು “ಅಯ್ಯಾ ನಿನ್ನ ಮನೆಹಾಳಾಗ ನಿನಿಗೇನು ಕಣ್ಣು ಇಂಗಿಹೋಗವಾ? ಮನೆ ಕಳಕಂಡು ಅಳುತಾಯಿದ್ರೆ ಬಾವುಟ ಹಾರಿಸು ಅಂತ ಬಂದಿದ್ದಯಲ್ಲಾ ಥೂ ನಿನ್ನ ಜನ್ಮಕ್ಕೆ” ಅಂದಾಗ ಸಾರಿ ಕಣಕ್ಕ ಎಂದು ಜಾಗ ಖಾಲಿಮಾಡಿದನಂರಲ್ಲಾ, ಥೂತ್ತೇರಿ.

****

ಸಂಘಿಗಳು ನಿಜ ಶ್ರದ್ಧೆಯನ್ನು ತೊರೆದು ಸಂಭ್ರಮವನ್ನ ಸೃಷ್ಟಿಮಾಡಿಕೊಂಡು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ ಹಿಂದೆಂದೂ ಕಂಡು ಕೇಳರಿಯದಿದ್ದ ಜಲ ಪ್ರಳಯಕ್ಕೆ ದೇಶ ತುತ್ತಾಗಿ ಹೋಗಿದೆ. ಮನೆಯ ಗೋಡೆಗಳು ಕುಸಿದಿವೆ; ಹಸುಗೂಸುಗಳೂ ಅಸುನೀಗಿವೆ; ಸೇತುವೆಗಳು ಕೊಚ್ಚಿಹೋಗಿವೆ; ಗುಡ್ಡಗಳು ಕುಸಿದು ಹೋಗಿವೆ; ಸಂತ್ರಸ್ತ ಜನರ ಕಣ್ಣೀರು ಮಳೆ ಹನಿಗಳೊಂದಿಗೆ ಸೇರಿಹೋಗಿವೆ. ಇಂತಹ ಮಳೆಯ ನಡುವೆ ಶಾಲೆಗೆ ಹೋದ ಹೆಣ್ಣು ಮಗುವೊಂದು ದಬ್ಬೆಯಿಂದ ಕಟ್ಟಿದ ಸೇತುವೆ ಮೇಲೆ ನಡೆದು ಬರುವಾಗ ಆಯತಪ್ಪಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಆ ಮನೆಯಲ್ಲಿ ದುಃಖ ಶಾಶ್ವತವಾಗಿಹೋಯ್ತು. ಈ ಸಂಬಂಧದಾಗಿ ಆ ಪ್ರದೇಶದ ಜನ ನಾಯಕನನ್ನ ಮಾತನಾಡಿಸಿದರೆ ನನ್ನ ಅವಧಿಯಲ್ಲಿ ಸೇತುವೆ ಆಗಿಲ್ಲ ನಿಜ ಆದರೆ ಎಪ್ಪತ್ತು ವರ್ಷ ದೇಶ ಆಳಿದವರು ಏನು ಮಾಡಿದ್ದಾರೆ. ಹೋಗಲಿ ಅವರ ಅವಧಿಯಲ್ಲಿ ಇಂತಹ ಮಳೆ ಬಂದಿತ್ತೆ ಎಂದು ಮಾತನಾಡಿದಾನಲ್ಲಾ. ಈ ಮೂರ್ಖ ಬಿಜೆಪಿ ಎಮ್ಮೆಲ್ಲೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ದೇಶದ ಯಾವುದೇ ಸಮಸ್ಯೆಯನ್ನು ಮುಸುಡಿಗೆ ಹಿಡಿದರೂ ಕೂಡ ಎಪ್ಪತ್ತು ವರ್ಷ ಆಳಿದವರು ಏನು ಮಾಡುತ್ತಿದ್ದರು ಎನ್ನುತ್ತವೆ. ಇದೇ ಮೋದಿ ಕಾಂಗ್ರೆಸ್ಸಿಗೆ ಅರವತ್ತು ವರ್ಷ ಅಧಿಕಾರ ಕೊಟ್ಟಿರಿ, ನೀವು ನನಗೆ ಕೇವಲ ಅರವತ್ತು ದಿವಸ ಕೊಡಿ ಎಂದಿದ್ದರು. ಇಲ್ಲಿ ಕಾಂಗ್ರೆಸ್ಸೇತರ ಮೊರಾರ್ಜಿ, ವಾಜಪೇಯಿ, ದೇವೇಗೌಡರು, ಗುಜ್ರಾಲ್ ಆಡಳಿತವಿದ್ದ ಲೆಕ್ಕ ಈ ಬಿಜೆಪಿಗಳಿಗೇ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

****

ಈ ಬಿಜೆಪಿಗಳು ಸಾವರ್ಕರ್ ಚಿತ್ರವನ್ನು ಸ್ವತಂತ್ರ ಹೋರಾಟಗಾರರ ಸಾಲಿಗೆ ತಂದು ಅಂಟಿಸತೊಡಗಿವೆ. ಅಂಡಮಾನ್ ದ್ವೀಪದ ಕೊಠಡಿಯಲ್ಲಿರಲಾಗದೆ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಕೊಟ್ಟು ಭಾರತಕ್ಕೆ ಬಂದು ಪುರೋಹಿತಶಾಹಿ ಧರ್ಮದ ಪುನರುತ್ಥಾನ ಕೈಂಕರ್ಯದಲ್ಲಿ ನಿರತರಾದ ಸಾವರ್ಕರ್ ಮಾನ ಉಳಿಸಲು ಆರೆಸೆಸ್ಸಿಗರು ವೀರ ಪದವನ್ನ ಸೇರಿಸಿದರು. ಅಂಡಮಾನ್ ಜೈಲಿನ ಕೊಠಡಿಯಲ್ಲೇ ಆಯಸ್ಸು ಮುಗಿಸಿ ನೀರು ಪಾಲಾದ ಅಸಂಖ್ಯಾತ ಜನರ್‍ಯಾರು ವೀರರಲ್ಲ. ಸೋತು ಶರಣಾದ ಸಾವರ್ಕರ್ ವೀರ! ಇಂತಹ ವೀರನ ಚಿತ್ರ ತಂದು ಹದಿನೇಳು ವರ್ಷ ಪ್ರಧಾನಿಯಾಗಿದ್ದ ನೆಹರು ಚಿತ್ರದ ಜಾಗದಲ್ಲಿ ಅಂಟಿಸಿವೆ ಮತ್ತು ತಮ್ಮ ಕೃತ್ಯವನ್ನ ಸಮರ್ಥಿಸಿವೆ. ಇತಿಹಾಸವನ್ನೇ ಅಳಿಸಿಹಾಕುವ ಈ ಕಾರ್ಯದ ವಿರುದ್ಧ ಕನ್ನಡದ ಯಾವ ಸಾಹಿತಿಯೂ ತುಟಿಬಿಚ್ಚಿಲ್ಲ. ಬಹುಶಃ ಈ ರಣಮಳೆಯಲ್ಲಿ ಒಳಸೇರಿಕೊಂಡು ಕೃತಿ ರಚನೆಯಲ್ಲಿ ತೊಡಗಿರಬಹುದು. ಇನ್ನ ಪಠ್ಯಪುಸ್ತಕ ತಿದ್ದಿ ದಕ್ಕಿಸಿಕೊಂಡ ತಿಪಟೂರಿನ ನಾಗೇಶ್ ಎಂಬ ಸಚಿವನ ಹಿಂಬಾಲಕರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಥಾದಲ್ಲಿ ರಾಷ್ಟ್ರಧ್ವಜಕ್ಕಿಂತ ತಮ್ಮ ಸಂಘದ ಧ್ವಜವನ್ನೇ ಎತ್ತರದಲ್ಲಿ ಹಾರಿಸುತ್ತ ಹೋಗಿದ್ದು ನೋಡಿದ ತಿಪಟೂರಿನ ಜನ ಮನುಷ್ಯನಿಗೆ ಹುಚ್ಚು ಕೆರಳಿದರೆ ಏನಾಗುತ್ತವೆ ಎಂಬುದಕ್ಕೆ ಈ ಜನಗಳೇ ಉದಾಹರಣೆಯೆಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...