Homeಅಂಕಣಗಳುಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

- Advertisement -
- Advertisement -

ಅಮೃತ ಮಹೋತ್ಸವದ ಪ್ರಚಾರಕ್ಕಾಗಿ ಸರಕಾರ ಕೊಟ್ಟ ಜಾಹೀರಾತಿನಲ್ಲಿ ನೆಹರು ಫೋಟೋನೇ ಇಲ್ಲದಂತೆ ಮಾಡಿ ಆ ಜಾಗಕ್ಕೆ ವೀರ ಸಾವರ್ಕರನ ಫೋಟೋವನ್ನ ಬೊಮ್ಮಾಯಿ ಹಾಕಿಸಿದ್ದಾರಂತಲ್ಲಾ. ಇದರಿಂದ ಕುಪಿತಗೊಂಡಿರುವ ಸ್ವಾತಂತ್ರ್ಯವೀರ ಲಿಂಗಾಯಿತರು, ಸಕಲರಿಗೂ ಲೇಸನ್ನ ಬಯಸುವ ದಯವೇ ಧರ್ಮದ ಮೂಲವೆಂದು, ಜಗತ್ತಿಗೆ ಸಾರಿದ ಬಸವಧರ್ಮದಲ್ಲಿ ಹುಟ್ಟಿದ ಈ ಬೊಮ್ಮಾಯಿ ಇತಿಹಾಸವನ್ನು ತಿರುಚಿ ಬಸವಕುಲಕೆ ಅವಮಾನ ಮಾಡಿಬಿಟ್ಟಿದ್ದಾರೆ. ನೆಹರು ಜೈಲಲ್ಲಿ ಇದ್ದಷ್ಟೇ ವರ್ಷ ಪ್ರಧಾನಿಯಾಗಿದ್ದರು. ಯೋಜನೆಗಳ ಮುಖಾಂತರ ಬಡ ಭಾರತವನ್ನ ಅಭಿವೃದ್ಧಿಪಥಕ್ಕೆ ತಂದು ನಿಲ್ಲಿಸಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವ ದೇಶದಲ್ಲಿ ಕಾಲೂರುವಂತೆ ಮಾಡಿದರು. ಲೋಕಸಭೆಯಲ್ಲಿ ಅವರನ್ನು ಟೀಕಿಸಿ ಮಾತನಾಡುವುದನ್ನ ಸಹಿಸಿಕೊಂಡರು; ತನ್ನ ಜನ್ಮದಿನವನ್ನ ಮಕ್ಕಳ ದಿನಾಚರಣೆಯನ್ನಾಗಿಸಿದರು; ಅವರು ಬದುಕಿದಷ್ಟೂ ದಿನ ಈ ದೇಶದ ಸರ್ವ ಜನಾಂಗಕ್ಕೂ ಪ್ರಧಾನಿಯಾಗಿದ್ದರೂ. ದಯಾಪರನಾದ ನೆಹರು ವ್ಯಕ್ತಿತ್ವವನ್ನ ದ್ವೇಷಿಸುವ ಬಿಜೆಪಿಗಳು ಎಂದಿನಂತೆ ತಮ್ಮ ಸಂಚಿನಿಂದ ಲಿಂಗಾಯಿತರ ಬೊಮ್ಮಾಯಿಯಿಂದ ನೆಹರುಗೆ ಅವಮಾನ ಮಾಡಿಸಿ ಆ ಮುಖಾಂತರ ಲಿಂಗಾಯಿತರಿಗೇ ಈ ಆರೆಸೆಸ್ಸಿಗರು ಅವಮಾನ ಮಾಡಿಸಿದ್ದಾರೆಂದು ಶರಣ ಸಮೂಹ ಸಿಟ್ಟಾಗಿದೆಯಂತಲ್ಲಾ, ಥೂತ್ತೇರಿ.

****

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸರಕಾರವನ್ನು ಮಾಧುಸ್ವಾಮಿ ಎಂಬ ಮಂತ್ರಿ ’ಇದು ತೆವಳಿಕೊಂಡು ನಡೆಯುತ್ತಿರುವ ಸರಕಾರ; ಅಂತೂ ಹೇಗೋ ದಡಮುಟ್ಟಿ ಮನೆಗೆ ಹೋಗುತ್ತೇವೆ’ ಎಂದು ಬಣ್ಣಿಸಿರುವ ಮಾತನ್ನು ಕರ್ನಾಟಕದ ಜನಸ್ತೋಮ ಇಡಿಯಾಗಿ ಸ್ವೀಕರಿಸಿ ಒಂದು ತಿದ್ದುಪಡಿ ಮಾಡಿಕೊಂಡಿದೆಯಂತಲ್ಲಾ. ಆ ತಿದ್ದುಪಡಿ ಯಾವುದೆಂದರೆ ಇದು ತೆವಳುತ್ತಿರುವ ಸರಕಾರವಲ್ಲಾ, ಕುಂಟುತ್ತಿರುವ ಸರಕಾರ ಎಂದರೆ ಸರಿಯಾಗುತ್ತಿತ್ತು ಎಂದು. ಸದರಿ ಮಾಧುಸ್ವಾಮಿ ಮಾತು ಈವರೆಗೂ ವಿರೋಧಪಕ್ಷಗಳಿಗೇ ಹೊಳೆದಿರಲಿಲ್ಲವಂತಲ್ಲಾ. ಅದಕ್ಕೆ ಕಾರಣ ಸರಕಾರ ತೆವಳುತ್ತಿದೆಯೋ ಕುಂಟುತ್ತಿದೆಯೋ ಎಂಬುದು ಆಡಳಿತದ ಭಾಗವಾಗಿದ್ದವರಿಗೆ ಹೊಳೆಯುತ್ತದೆಯೇ ಹೊರತು, ಹೊರಗಿನವರಿಗೆ ತಿಳಿಯಲಾರದು. ಇಂತಹ ಸರಕಾರ ಜತೆಗಿಟ್ಟುಕೊಂಡು ಸ್ವಾತಂತ್ರ್ಯದ ಅಮೃತೋತ್ಸವಕ್ಕಾಗಿ ಪಾರ್ಟಿಯ ನಿಷ್ಟಾವಂತ ಕಾರ್ಯಕರ್ತರು ಕೈತುಂಬಾ ಬಾವುಟ ಹಿಡಿದು ಮನೆಮನೆಗೆ ಹಂಚುತ್ತಾ ಹೋಗುತ್ತಿರುವಾಗ ಮಳೆಗೆ ಮನೆಬಿದ್ದ ಜಾಗಕ್ಕೆ ಹೋಗಿ, ಮನೆ ಕಳೆದುಕೊಂಡು ಅಳುತ್ತಿದ್ದ ಮಹಿಳೆಗೆ ಬಾವುಟಕೊಟ್ಟು “ಇದನ್ನ ನಿನ್ನ ಮನೆ ಮೇಲಕ್ಕೆ ಕಟ್ಟಕ್ಕ” ಎನ್ನಲಾಗಿ ಆ ಮಹಿಳೆ ಸಿಟ್ಟುಗೊಂಡು “ಅಯ್ಯಾ ನಿನ್ನ ಮನೆಹಾಳಾಗ ನಿನಿಗೇನು ಕಣ್ಣು ಇಂಗಿಹೋಗವಾ? ಮನೆ ಕಳಕಂಡು ಅಳುತಾಯಿದ್ರೆ ಬಾವುಟ ಹಾರಿಸು ಅಂತ ಬಂದಿದ್ದಯಲ್ಲಾ ಥೂ ನಿನ್ನ ಜನ್ಮಕ್ಕೆ” ಅಂದಾಗ ಸಾರಿ ಕಣಕ್ಕ ಎಂದು ಜಾಗ ಖಾಲಿಮಾಡಿದನಂರಲ್ಲಾ, ಥೂತ್ತೇರಿ.

****

ಸಂಘಿಗಳು ನಿಜ ಶ್ರದ್ಧೆಯನ್ನು ತೊರೆದು ಸಂಭ್ರಮವನ್ನ ಸೃಷ್ಟಿಮಾಡಿಕೊಂಡು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ ಹಿಂದೆಂದೂ ಕಂಡು ಕೇಳರಿಯದಿದ್ದ ಜಲ ಪ್ರಳಯಕ್ಕೆ ದೇಶ ತುತ್ತಾಗಿ ಹೋಗಿದೆ. ಮನೆಯ ಗೋಡೆಗಳು ಕುಸಿದಿವೆ; ಹಸುಗೂಸುಗಳೂ ಅಸುನೀಗಿವೆ; ಸೇತುವೆಗಳು ಕೊಚ್ಚಿಹೋಗಿವೆ; ಗುಡ್ಡಗಳು ಕುಸಿದು ಹೋಗಿವೆ; ಸಂತ್ರಸ್ತ ಜನರ ಕಣ್ಣೀರು ಮಳೆ ಹನಿಗಳೊಂದಿಗೆ ಸೇರಿಹೋಗಿವೆ. ಇಂತಹ ಮಳೆಯ ನಡುವೆ ಶಾಲೆಗೆ ಹೋದ ಹೆಣ್ಣು ಮಗುವೊಂದು ದಬ್ಬೆಯಿಂದ ಕಟ್ಟಿದ ಸೇತುವೆ ಮೇಲೆ ನಡೆದು ಬರುವಾಗ ಆಯತಪ್ಪಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಆ ಮನೆಯಲ್ಲಿ ದುಃಖ ಶಾಶ್ವತವಾಗಿಹೋಯ್ತು. ಈ ಸಂಬಂಧದಾಗಿ ಆ ಪ್ರದೇಶದ ಜನ ನಾಯಕನನ್ನ ಮಾತನಾಡಿಸಿದರೆ ನನ್ನ ಅವಧಿಯಲ್ಲಿ ಸೇತುವೆ ಆಗಿಲ್ಲ ನಿಜ ಆದರೆ ಎಪ್ಪತ್ತು ವರ್ಷ ದೇಶ ಆಳಿದವರು ಏನು ಮಾಡಿದ್ದಾರೆ. ಹೋಗಲಿ ಅವರ ಅವಧಿಯಲ್ಲಿ ಇಂತಹ ಮಳೆ ಬಂದಿತ್ತೆ ಎಂದು ಮಾತನಾಡಿದಾನಲ್ಲಾ. ಈ ಮೂರ್ಖ ಬಿಜೆಪಿ ಎಮ್ಮೆಲ್ಲೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ದೇಶದ ಯಾವುದೇ ಸಮಸ್ಯೆಯನ್ನು ಮುಸುಡಿಗೆ ಹಿಡಿದರೂ ಕೂಡ ಎಪ್ಪತ್ತು ವರ್ಷ ಆಳಿದವರು ಏನು ಮಾಡುತ್ತಿದ್ದರು ಎನ್ನುತ್ತವೆ. ಇದೇ ಮೋದಿ ಕಾಂಗ್ರೆಸ್ಸಿಗೆ ಅರವತ್ತು ವರ್ಷ ಅಧಿಕಾರ ಕೊಟ್ಟಿರಿ, ನೀವು ನನಗೆ ಕೇವಲ ಅರವತ್ತು ದಿವಸ ಕೊಡಿ ಎಂದಿದ್ದರು. ಇಲ್ಲಿ ಕಾಂಗ್ರೆಸ್ಸೇತರ ಮೊರಾರ್ಜಿ, ವಾಜಪೇಯಿ, ದೇವೇಗೌಡರು, ಗುಜ್ರಾಲ್ ಆಡಳಿತವಿದ್ದ ಲೆಕ್ಕ ಈ ಬಿಜೆಪಿಗಳಿಗೇ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

****

ಈ ಬಿಜೆಪಿಗಳು ಸಾವರ್ಕರ್ ಚಿತ್ರವನ್ನು ಸ್ವತಂತ್ರ ಹೋರಾಟಗಾರರ ಸಾಲಿಗೆ ತಂದು ಅಂಟಿಸತೊಡಗಿವೆ. ಅಂಡಮಾನ್ ದ್ವೀಪದ ಕೊಠಡಿಯಲ್ಲಿರಲಾಗದೆ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಕೊಟ್ಟು ಭಾರತಕ್ಕೆ ಬಂದು ಪುರೋಹಿತಶಾಹಿ ಧರ್ಮದ ಪುನರುತ್ಥಾನ ಕೈಂಕರ್ಯದಲ್ಲಿ ನಿರತರಾದ ಸಾವರ್ಕರ್ ಮಾನ ಉಳಿಸಲು ಆರೆಸೆಸ್ಸಿಗರು ವೀರ ಪದವನ್ನ ಸೇರಿಸಿದರು. ಅಂಡಮಾನ್ ಜೈಲಿನ ಕೊಠಡಿಯಲ್ಲೇ ಆಯಸ್ಸು ಮುಗಿಸಿ ನೀರು ಪಾಲಾದ ಅಸಂಖ್ಯಾತ ಜನರ್‍ಯಾರು ವೀರರಲ್ಲ. ಸೋತು ಶರಣಾದ ಸಾವರ್ಕರ್ ವೀರ! ಇಂತಹ ವೀರನ ಚಿತ್ರ ತಂದು ಹದಿನೇಳು ವರ್ಷ ಪ್ರಧಾನಿಯಾಗಿದ್ದ ನೆಹರು ಚಿತ್ರದ ಜಾಗದಲ್ಲಿ ಅಂಟಿಸಿವೆ ಮತ್ತು ತಮ್ಮ ಕೃತ್ಯವನ್ನ ಸಮರ್ಥಿಸಿವೆ. ಇತಿಹಾಸವನ್ನೇ ಅಳಿಸಿಹಾಕುವ ಈ ಕಾರ್ಯದ ವಿರುದ್ಧ ಕನ್ನಡದ ಯಾವ ಸಾಹಿತಿಯೂ ತುಟಿಬಿಚ್ಚಿಲ್ಲ. ಬಹುಶಃ ಈ ರಣಮಳೆಯಲ್ಲಿ ಒಳಸೇರಿಕೊಂಡು ಕೃತಿ ರಚನೆಯಲ್ಲಿ ತೊಡಗಿರಬಹುದು. ಇನ್ನ ಪಠ್ಯಪುಸ್ತಕ ತಿದ್ದಿ ದಕ್ಕಿಸಿಕೊಂಡ ತಿಪಟೂರಿನ ನಾಗೇಶ್ ಎಂಬ ಸಚಿವನ ಹಿಂಬಾಲಕರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಥಾದಲ್ಲಿ ರಾಷ್ಟ್ರಧ್ವಜಕ್ಕಿಂತ ತಮ್ಮ ಸಂಘದ ಧ್ವಜವನ್ನೇ ಎತ್ತರದಲ್ಲಿ ಹಾರಿಸುತ್ತ ಹೋಗಿದ್ದು ನೋಡಿದ ತಿಪಟೂರಿನ ಜನ ಮನುಷ್ಯನಿಗೆ ಹುಚ್ಚು ಕೆರಳಿದರೆ ಏನಾಗುತ್ತವೆ ಎಂಬುದಕ್ಕೆ ಈ ಜನಗಳೇ ಉದಾಹರಣೆಯೆಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....