Homeಅಂಕಣಗಳುಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

- Advertisement -
- Advertisement -

ಅಮೃತ ಮಹೋತ್ಸವದ ಪ್ರಚಾರಕ್ಕಾಗಿ ಸರಕಾರ ಕೊಟ್ಟ ಜಾಹೀರಾತಿನಲ್ಲಿ ನೆಹರು ಫೋಟೋನೇ ಇಲ್ಲದಂತೆ ಮಾಡಿ ಆ ಜಾಗಕ್ಕೆ ವೀರ ಸಾವರ್ಕರನ ಫೋಟೋವನ್ನ ಬೊಮ್ಮಾಯಿ ಹಾಕಿಸಿದ್ದಾರಂತಲ್ಲಾ. ಇದರಿಂದ ಕುಪಿತಗೊಂಡಿರುವ ಸ್ವಾತಂತ್ರ್ಯವೀರ ಲಿಂಗಾಯಿತರು, ಸಕಲರಿಗೂ ಲೇಸನ್ನ ಬಯಸುವ ದಯವೇ ಧರ್ಮದ ಮೂಲವೆಂದು, ಜಗತ್ತಿಗೆ ಸಾರಿದ ಬಸವಧರ್ಮದಲ್ಲಿ ಹುಟ್ಟಿದ ಈ ಬೊಮ್ಮಾಯಿ ಇತಿಹಾಸವನ್ನು ತಿರುಚಿ ಬಸವಕುಲಕೆ ಅವಮಾನ ಮಾಡಿಬಿಟ್ಟಿದ್ದಾರೆ. ನೆಹರು ಜೈಲಲ್ಲಿ ಇದ್ದಷ್ಟೇ ವರ್ಷ ಪ್ರಧಾನಿಯಾಗಿದ್ದರು. ಯೋಜನೆಗಳ ಮುಖಾಂತರ ಬಡ ಭಾರತವನ್ನ ಅಭಿವೃದ್ಧಿಪಥಕ್ಕೆ ತಂದು ನಿಲ್ಲಿಸಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವ ದೇಶದಲ್ಲಿ ಕಾಲೂರುವಂತೆ ಮಾಡಿದರು. ಲೋಕಸಭೆಯಲ್ಲಿ ಅವರನ್ನು ಟೀಕಿಸಿ ಮಾತನಾಡುವುದನ್ನ ಸಹಿಸಿಕೊಂಡರು; ತನ್ನ ಜನ್ಮದಿನವನ್ನ ಮಕ್ಕಳ ದಿನಾಚರಣೆಯನ್ನಾಗಿಸಿದರು; ಅವರು ಬದುಕಿದಷ್ಟೂ ದಿನ ಈ ದೇಶದ ಸರ್ವ ಜನಾಂಗಕ್ಕೂ ಪ್ರಧಾನಿಯಾಗಿದ್ದರೂ. ದಯಾಪರನಾದ ನೆಹರು ವ್ಯಕ್ತಿತ್ವವನ್ನ ದ್ವೇಷಿಸುವ ಬಿಜೆಪಿಗಳು ಎಂದಿನಂತೆ ತಮ್ಮ ಸಂಚಿನಿಂದ ಲಿಂಗಾಯಿತರ ಬೊಮ್ಮಾಯಿಯಿಂದ ನೆಹರುಗೆ ಅವಮಾನ ಮಾಡಿಸಿ ಆ ಮುಖಾಂತರ ಲಿಂಗಾಯಿತರಿಗೇ ಈ ಆರೆಸೆಸ್ಸಿಗರು ಅವಮಾನ ಮಾಡಿಸಿದ್ದಾರೆಂದು ಶರಣ ಸಮೂಹ ಸಿಟ್ಟಾಗಿದೆಯಂತಲ್ಲಾ, ಥೂತ್ತೇರಿ.

****

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸರಕಾರವನ್ನು ಮಾಧುಸ್ವಾಮಿ ಎಂಬ ಮಂತ್ರಿ ’ಇದು ತೆವಳಿಕೊಂಡು ನಡೆಯುತ್ತಿರುವ ಸರಕಾರ; ಅಂತೂ ಹೇಗೋ ದಡಮುಟ್ಟಿ ಮನೆಗೆ ಹೋಗುತ್ತೇವೆ’ ಎಂದು ಬಣ್ಣಿಸಿರುವ ಮಾತನ್ನು ಕರ್ನಾಟಕದ ಜನಸ್ತೋಮ ಇಡಿಯಾಗಿ ಸ್ವೀಕರಿಸಿ ಒಂದು ತಿದ್ದುಪಡಿ ಮಾಡಿಕೊಂಡಿದೆಯಂತಲ್ಲಾ. ಆ ತಿದ್ದುಪಡಿ ಯಾವುದೆಂದರೆ ಇದು ತೆವಳುತ್ತಿರುವ ಸರಕಾರವಲ್ಲಾ, ಕುಂಟುತ್ತಿರುವ ಸರಕಾರ ಎಂದರೆ ಸರಿಯಾಗುತ್ತಿತ್ತು ಎಂದು. ಸದರಿ ಮಾಧುಸ್ವಾಮಿ ಮಾತು ಈವರೆಗೂ ವಿರೋಧಪಕ್ಷಗಳಿಗೇ ಹೊಳೆದಿರಲಿಲ್ಲವಂತಲ್ಲಾ. ಅದಕ್ಕೆ ಕಾರಣ ಸರಕಾರ ತೆವಳುತ್ತಿದೆಯೋ ಕುಂಟುತ್ತಿದೆಯೋ ಎಂಬುದು ಆಡಳಿತದ ಭಾಗವಾಗಿದ್ದವರಿಗೆ ಹೊಳೆಯುತ್ತದೆಯೇ ಹೊರತು, ಹೊರಗಿನವರಿಗೆ ತಿಳಿಯಲಾರದು. ಇಂತಹ ಸರಕಾರ ಜತೆಗಿಟ್ಟುಕೊಂಡು ಸ್ವಾತಂತ್ರ್ಯದ ಅಮೃತೋತ್ಸವಕ್ಕಾಗಿ ಪಾರ್ಟಿಯ ನಿಷ್ಟಾವಂತ ಕಾರ್ಯಕರ್ತರು ಕೈತುಂಬಾ ಬಾವುಟ ಹಿಡಿದು ಮನೆಮನೆಗೆ ಹಂಚುತ್ತಾ ಹೋಗುತ್ತಿರುವಾಗ ಮಳೆಗೆ ಮನೆಬಿದ್ದ ಜಾಗಕ್ಕೆ ಹೋಗಿ, ಮನೆ ಕಳೆದುಕೊಂಡು ಅಳುತ್ತಿದ್ದ ಮಹಿಳೆಗೆ ಬಾವುಟಕೊಟ್ಟು “ಇದನ್ನ ನಿನ್ನ ಮನೆ ಮೇಲಕ್ಕೆ ಕಟ್ಟಕ್ಕ” ಎನ್ನಲಾಗಿ ಆ ಮಹಿಳೆ ಸಿಟ್ಟುಗೊಂಡು “ಅಯ್ಯಾ ನಿನ್ನ ಮನೆಹಾಳಾಗ ನಿನಿಗೇನು ಕಣ್ಣು ಇಂಗಿಹೋಗವಾ? ಮನೆ ಕಳಕಂಡು ಅಳುತಾಯಿದ್ರೆ ಬಾವುಟ ಹಾರಿಸು ಅಂತ ಬಂದಿದ್ದಯಲ್ಲಾ ಥೂ ನಿನ್ನ ಜನ್ಮಕ್ಕೆ” ಅಂದಾಗ ಸಾರಿ ಕಣಕ್ಕ ಎಂದು ಜಾಗ ಖಾಲಿಮಾಡಿದನಂರಲ್ಲಾ, ಥೂತ್ತೇರಿ.

****

ಸಂಘಿಗಳು ನಿಜ ಶ್ರದ್ಧೆಯನ್ನು ತೊರೆದು ಸಂಭ್ರಮವನ್ನ ಸೃಷ್ಟಿಮಾಡಿಕೊಂಡು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ ಹಿಂದೆಂದೂ ಕಂಡು ಕೇಳರಿಯದಿದ್ದ ಜಲ ಪ್ರಳಯಕ್ಕೆ ದೇಶ ತುತ್ತಾಗಿ ಹೋಗಿದೆ. ಮನೆಯ ಗೋಡೆಗಳು ಕುಸಿದಿವೆ; ಹಸುಗೂಸುಗಳೂ ಅಸುನೀಗಿವೆ; ಸೇತುವೆಗಳು ಕೊಚ್ಚಿಹೋಗಿವೆ; ಗುಡ್ಡಗಳು ಕುಸಿದು ಹೋಗಿವೆ; ಸಂತ್ರಸ್ತ ಜನರ ಕಣ್ಣೀರು ಮಳೆ ಹನಿಗಳೊಂದಿಗೆ ಸೇರಿಹೋಗಿವೆ. ಇಂತಹ ಮಳೆಯ ನಡುವೆ ಶಾಲೆಗೆ ಹೋದ ಹೆಣ್ಣು ಮಗುವೊಂದು ದಬ್ಬೆಯಿಂದ ಕಟ್ಟಿದ ಸೇತುವೆ ಮೇಲೆ ನಡೆದು ಬರುವಾಗ ಆಯತಪ್ಪಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಆ ಮನೆಯಲ್ಲಿ ದುಃಖ ಶಾಶ್ವತವಾಗಿಹೋಯ್ತು. ಈ ಸಂಬಂಧದಾಗಿ ಆ ಪ್ರದೇಶದ ಜನ ನಾಯಕನನ್ನ ಮಾತನಾಡಿಸಿದರೆ ನನ್ನ ಅವಧಿಯಲ್ಲಿ ಸೇತುವೆ ಆಗಿಲ್ಲ ನಿಜ ಆದರೆ ಎಪ್ಪತ್ತು ವರ್ಷ ದೇಶ ಆಳಿದವರು ಏನು ಮಾಡಿದ್ದಾರೆ. ಹೋಗಲಿ ಅವರ ಅವಧಿಯಲ್ಲಿ ಇಂತಹ ಮಳೆ ಬಂದಿತ್ತೆ ಎಂದು ಮಾತನಾಡಿದಾನಲ್ಲಾ. ಈ ಮೂರ್ಖ ಬಿಜೆಪಿ ಎಮ್ಮೆಲ್ಲೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ದೇಶದ ಯಾವುದೇ ಸಮಸ್ಯೆಯನ್ನು ಮುಸುಡಿಗೆ ಹಿಡಿದರೂ ಕೂಡ ಎಪ್ಪತ್ತು ವರ್ಷ ಆಳಿದವರು ಏನು ಮಾಡುತ್ತಿದ್ದರು ಎನ್ನುತ್ತವೆ. ಇದೇ ಮೋದಿ ಕಾಂಗ್ರೆಸ್ಸಿಗೆ ಅರವತ್ತು ವರ್ಷ ಅಧಿಕಾರ ಕೊಟ್ಟಿರಿ, ನೀವು ನನಗೆ ಕೇವಲ ಅರವತ್ತು ದಿವಸ ಕೊಡಿ ಎಂದಿದ್ದರು. ಇಲ್ಲಿ ಕಾಂಗ್ರೆಸ್ಸೇತರ ಮೊರಾರ್ಜಿ, ವಾಜಪೇಯಿ, ದೇವೇಗೌಡರು, ಗುಜ್ರಾಲ್ ಆಡಳಿತವಿದ್ದ ಲೆಕ್ಕ ಈ ಬಿಜೆಪಿಗಳಿಗೇ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

****

ಈ ಬಿಜೆಪಿಗಳು ಸಾವರ್ಕರ್ ಚಿತ್ರವನ್ನು ಸ್ವತಂತ್ರ ಹೋರಾಟಗಾರರ ಸಾಲಿಗೆ ತಂದು ಅಂಟಿಸತೊಡಗಿವೆ. ಅಂಡಮಾನ್ ದ್ವೀಪದ ಕೊಠಡಿಯಲ್ಲಿರಲಾಗದೆ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಕೊಟ್ಟು ಭಾರತಕ್ಕೆ ಬಂದು ಪುರೋಹಿತಶಾಹಿ ಧರ್ಮದ ಪುನರುತ್ಥಾನ ಕೈಂಕರ್ಯದಲ್ಲಿ ನಿರತರಾದ ಸಾವರ್ಕರ್ ಮಾನ ಉಳಿಸಲು ಆರೆಸೆಸ್ಸಿಗರು ವೀರ ಪದವನ್ನ ಸೇರಿಸಿದರು. ಅಂಡಮಾನ್ ಜೈಲಿನ ಕೊಠಡಿಯಲ್ಲೇ ಆಯಸ್ಸು ಮುಗಿಸಿ ನೀರು ಪಾಲಾದ ಅಸಂಖ್ಯಾತ ಜನರ್‍ಯಾರು ವೀರರಲ್ಲ. ಸೋತು ಶರಣಾದ ಸಾವರ್ಕರ್ ವೀರ! ಇಂತಹ ವೀರನ ಚಿತ್ರ ತಂದು ಹದಿನೇಳು ವರ್ಷ ಪ್ರಧಾನಿಯಾಗಿದ್ದ ನೆಹರು ಚಿತ್ರದ ಜಾಗದಲ್ಲಿ ಅಂಟಿಸಿವೆ ಮತ್ತು ತಮ್ಮ ಕೃತ್ಯವನ್ನ ಸಮರ್ಥಿಸಿವೆ. ಇತಿಹಾಸವನ್ನೇ ಅಳಿಸಿಹಾಕುವ ಈ ಕಾರ್ಯದ ವಿರುದ್ಧ ಕನ್ನಡದ ಯಾವ ಸಾಹಿತಿಯೂ ತುಟಿಬಿಚ್ಚಿಲ್ಲ. ಬಹುಶಃ ಈ ರಣಮಳೆಯಲ್ಲಿ ಒಳಸೇರಿಕೊಂಡು ಕೃತಿ ರಚನೆಯಲ್ಲಿ ತೊಡಗಿರಬಹುದು. ಇನ್ನ ಪಠ್ಯಪುಸ್ತಕ ತಿದ್ದಿ ದಕ್ಕಿಸಿಕೊಂಡ ತಿಪಟೂರಿನ ನಾಗೇಶ್ ಎಂಬ ಸಚಿವನ ಹಿಂಬಾಲಕರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಥಾದಲ್ಲಿ ರಾಷ್ಟ್ರಧ್ವಜಕ್ಕಿಂತ ತಮ್ಮ ಸಂಘದ ಧ್ವಜವನ್ನೇ ಎತ್ತರದಲ್ಲಿ ಹಾರಿಸುತ್ತ ಹೋಗಿದ್ದು ನೋಡಿದ ತಿಪಟೂರಿನ ಜನ ಮನುಷ್ಯನಿಗೆ ಹುಚ್ಚು ಕೆರಳಿದರೆ ಏನಾಗುತ್ತವೆ ಎಂಬುದಕ್ಕೆ ಈ ಜನಗಳೇ ಉದಾಹರಣೆಯೆಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮುರುಘಾ ಶರಣರ ಮರುಳು ಮಾತು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...