Homeಅಂಕಣಗಳುಮೋದಿ ಸಾಧನೆ ಹಳ್ಳಿಗೆ ತಲುಪಿಸಿ ಎಂದ ಭೈರಪ್ಪ!

ಮೋದಿ ಸಾಧನೆ ಹಳ್ಳಿಗೆ ತಲುಪಿಸಿ ಎಂದ ಭೈರಪ್ಪ!

- Advertisement -
- Advertisement -

ಕೂದಲೆಳೆ ಅಂತರದಲ್ಲಿ ಘನಘೋರ ಅಪಾಯ ತಪ್ಪಿತು ಎನ್ನುವಂತೆ ಸಿದ್ದರಾಮಯ್ಯ ವಿಕೃತ ಭಟ್ಟನ ಪುಸ್ತಕದ ಬಿಡುಗಡೆ ಸಮಾರಂಭಕ್ಕೆ ತಪ್ಪಿಸಿಕೊಂಡು ಬುದ್ಧಿಜೀವಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರಲ್ಲಾ. ಅದಕ್ಕೆ ಹೇಳುವುದು ಜನರ ನಡುವೆ ಇರುವ ನಾಯಕ ತಪ್ಪು ಮಾಡಲಾರ ಎಂದು. ಇದಕ್ಕೊಂದು ಐತಿಹಾಸಿಕ ಉದಾಹರಣೆ ಬಸವಣ್ಣ ಅವರು ನಡೆಸಿದ ಕ್ರಾಂತಿಕಾರಿ ಚಳವಳಿ; ಈ ಶರಣ ಕ್ರಾಂತಿಯ ಬಗ್ಗೆ ಆಕ್ರೋಶಗೊಂಡ ಪುರೋಹಿತರು ಗಲಭೆ ನಡೆಸುತ್ತಾರೆ. ಅಲ್ಲೊಂದು ಕೊಲೆಯಾಗುತ್ತದೆ, ದೂರು ಬಿಜ್ಜಳನ ಬಳಿಗೆ ಹೋಗುತ್ತದೆ. ವಿಚಾರಣೆ ನಡೆಯುತ್ತದೆ. ಬಿಜ್ಜಳ ಕೊಲೆಯ ವಿಷಯದಲ್ಲಿ ಸಂಶಯಗೊಂಡು ಈ ಕೊಲೆ ಮಾಡಿದವರಾರು ಎಂದು ತನ್ನ ಆಸ್ಥಾನದಲ್ಲಿ ಪ್ರಶ್ನಿಸುತ್ತಾನೆ. ಅದಕ್ಕೆ ಬಸವಣ್ಣ ಪುರೋಹಿತಶಾಹಿಗಳು ಎನ್ನುತ್ತಾನೆ. ಆಗ ಬಿಜ್ಜಳ ಅದು ಹೇಗೆ ಹೇಳುತ್ತೀರಿ ಎಂದಾಗ, ಅದಕ್ಕೆ ಬಸವಣ್ಣ, ನಾನು ಜನಗಳ ನಡುವೆ ಇದ್ದೇನೆ ಎನ್ನುತ್ತಾನೆ. ಬಿಜ್ಜಳ ಮರುಮಾತನಾಡುವುದಿಲ್ಲ. ಈ ಐತಿಹಾಸಿಕ ಘಟನೆಯ ಸತ್ಯವನ್ನು ನಮ್ಮ ರಾಜಕಾರಣಿಗಳು ಪಾಲಿಸಿದ್ದಾದರೆ ವಿಕೃತ ಭಟ್ಟನಂತರವರ ಬಲೆಗೆ ಬೀಳಲಾರರು. ಅಕಸ್ಮಾತ್ ಬಿದ್ದರೆ ಸರ್ವನಾಶ ಗ್ಯಾರಂಟಿಯಂತಲ್ಲಾ, ಥೂತ್ತೇರಿ.

******

ಕಾದಂಬರಿ ಕಾರ್ಖಾನೆಯಾದ ಆರೆಸ್ಸೆಸ್ ಲೇಖಕ ಎಸ್.ಎಲ್ ಭೈರಪ್ಪನವರು ಯುವ ಮಾಣಿಗಳಿಗೊಂದು ಅದ್ಭುತವಾದಂತಹ ಕರೆ ಕೊಟ್ಟಿದ್ದಾರಲ್ಲಾ. ಅದೇನೆಂದರೆ ವಿದ್ಯಾವಂತ ಯುವ ಜನ ಹಳ್ಳಿಹಳ್ಳಿಗಳಿಗೆ ಹೋಗಿ ಮೋದಿ ಮಾಡಿದ ಒಳ್ಳೆ ಕೆಲಸಗಳನ್ನ ಅಲ್ಲಿನ ಗ್ರಾಮವಾಸಿಗಳಿಗೆ ಮನವರಿಕೆ ಮಾಡಿ ಎಂದು. ಎಂದಿನಂತೆ ವಿದ್ಯಾವಂತರು ಹಳ್ಳಿಗೆ ಹೋಗಿ ಹೇಳುವ ಮೋದಿ ಸಾಧನೆ ಪಟ್ಟಿ ಮಾಡಲಾಗಿ ಅವು ಇಂತಿವೆಯಲ್ಲಾ.

  • ಒಂದನೆಯದಾಗಿ ಹಿಂದುಮುಂದು ನೋಡದೆ ನೋಟು ಬ್ಯಾನು ಮಾಡಿ ದೇಶದ ಉದ್ದಗಲಕ್ಕೂ ಅಲ್ಲೋಲಕಲ್ಲೋಲವಾಗಿ ನೂರಾರು ಜನ ಸತ್ತು, ಸಾವಿರಾರು ಸಣ್ಣ ಉದ್ಯಮಗಳು ಕಣ್ಮರೆಯಾದದ್ದು.
  • ಎರಡನೆಯದಾಗಿ ಜಿಎಸ್‌ಟಿ ಎಂಬ ಮನೆಹಾಳ ತೆರಿಗೆ ವಸೂಲಿಯಿಂದಲೂ ಸಣ್ಣಪುಟ್ಟ ಉದ್ಯಮ ಬಾಗಿಲು ಹಾಕಿ ಬಡವರು ತಿನ್ನುವ ಕಡ್ಲೆಪುರಿ ಮೇಲೂ ಜಿಎಸ್‌ಟಿ ಬಂದಿದ್ದು.
  • ಸಿಎಎ ಕಾನೂನು ತರಲು ಹೊರಟು ಇಡೀ ಭಾರತದ ಮುಸ್ಲಿಮರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವಂತೆ ಮಾಡಿದ್ದು.
  • ಕೃಷಿಕಾಯ್ದೆ ತಂದು ದೆಹಲಿ ಗಡಿಯಲ್ಲಿ ಹೋರಾಟನಿರತ 750 ಜನ ರೈತರು ಸಾಯುವಂತೆ ಮಾಡಿದ್ದು.
  • ಸಾವಿರಾರು ಕೋಟಿ ಒಪ್ಪಂದದ ರಫೇಲ್ ಹಗರಣ ಮುಚ್ಚಿಹಾಕಿ, ತ್ವರಿತವಾಗಿ ಮಾಡಿದ ಒಪ್ಪಂದ ಎಂದು ಬಿಂಬಿಸಿದ್ದು.
  • ಭಾರತದ ಸುಮಾರು ಹನ್ನೆರಡು ಉದ್ಯಮಗಳನ್ನು ಮಾರಿದ್ದೂ ಅಲ್ಲದೆ, ವಿಶೇಷ ಘಟಕವಾಗಿದ್ದ ರೈಲ್ವೆ ಇಲಾಖೆಯನ್ನ ಮುಗಿಸಲು ಪ್ರಯತ್ನಿಸುತ್ತಿರುವುದು; ಅವುಗಳ ಬಣ್ಣ ಬದಲಿಸಿ ಸೀಟಿನ ಅಳತೆ ಕಡಿಮೆ ಮಾಡಿ ಪ್ರಯಾಣಿಕರನ್ನ ಹಿಂಸಿಸುತ್ತಿರುವುದು.
  • ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಗೆ ದಾಳಿಯಿಟ್ಟು ಒಂದು ಡಜನ್ ರೋಡ್ ಶೋ ಮಾಡಿ ಸೋತ ಸಿಟ್ಟಿಗೆ ಕರ್ನಾಟಕದ ಪಾಲಿನ ಅಕ್ಕಿ ನಿಲ್ಲಿಸಿದ್ದಲ್ಲದೆ ಇತಿಹಾಸದಲ್ಲಿ ದಾಖಲಾಗುವಂತೆ ವಿರೋಧಪಕ್ಷದ ನಾಯಕರನ್ನೆ ನೇಮಿಸದಿದ್ದುದು.
  • ನಮ್ಮದೇ ದೇಶದ ಭುಜದಂತಿರುವ ಮಣಿಪುರ ಎರಡು ತಿಂಗಳಿಂದ ಉರಿಯುತ್ತಿದ್ದರೂ ಆ ಕಡೆ ತಿರುಗಿಯೂ ನೋಡದೆ ಅಮೆರಿಕದಲ್ಲಿ ಯೋಗ ಮಾಡುತ್ತ ಕುಳಿತದ್ದು.

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ಕಡೆಗೂ ಮೋದಿ ಬಾಯಿ ಬಿಟ್ಟಿದ್ದು ಯಾವಾಗೆಂದರೆ ನಿಸ್ಸಹಾಯಕ ಹೆಣ್ಣುಮಕ್ಕಳನ್ನು ಬೆತ್ತಲೆ ಮಾಡಿ ಅವರನ್ನ ಅತ್ಯಾಚಾರ ಮಾಡಿ ಕೊಲೆ ಮಾಡಿದ ವಿಡಿಯೋ ತುಣುಕೊಂದು ತಿಂಗಳುಗಳ ನಂತರ ವೈರಲ್ ಆದಾಗ! ಇಂತಹ ಮೋದಿಯ ಸಾಧನೆಗಳನ್ನ ಹಳ್ಳಿಹಳ್ಳಿಗೆ ಹೋಗಿ ಹೇಳಿ ಎಂದು ಕರೆಕೊಡುತ್ತಿರುವ ಭೈರಪ್ಪರಿಗೆ ವಯೋಸಹಜ ಮರೆವೇನೂ ಇಲ್ಲ, ಆದರೆ ದಶಕಗಳಿಂದ ಸಂಘ ಪರಿವಾರದಿಂದ ತರಬೇತು ಪಡೆದಿರುವ ಮಿದುಳು ಹಾಗೆ ಕೆಲಸ ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಈಚೆಗೆ ಚಂದ್ರಯಾನ ಉಡಾವಣೆಯಾಗಿದೆ. ಇಸ್ರೊ ಅಧ್ಯಕ್ಷ ಸೋಮನಾಥ್ ಸಾರಥ್ಯದಲ್ಲಿ ಎಂಟು ಜನ ವಿಜ್ಞಾನಿಗಳೆಂಬುವರು ತಿರುಪತಿಯಲ್ಲಿ ನಿಂತು ಭಯ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ತಿಮ್ಮಪ್ಪ ಇಡೀ ಕರ್ನಾಟಕದ ಸಕಲಿಷ್ಟು ಜಾತಿಗಳ ದೇವರಾದ್ದರಿಂದ ಜನರಿಗೆಲ್ಲಾ ಈ ಚಂದ್ರಯಾನ ಉಡಾವಣೆಯಿಂದ ಒಳ್ಳೆಯದಾಗುತ್ತದಂತೆ. ಇವರ ಇಂಗಿತವನ್ನ ಆಡಿಕೊಳ್ಳುವುದಾದರೆ ಚಂದ್ರನ ಮೇಲೆ ಈ ಯಂತ್ರ ಕಾಲೂರಿದ ಕ್ಷಣದಿಂದಲೇ ಭಾರತದಲ್ಲಿ ಬಿಜೆಪಿಗಳ ಹಾವಳಿಯಿಂದ ಕ್ಷೆಭೆಗೊಂಡಿರುವ ಮನಸ್ಸುಗಳು ಶಾಂತಗೊಳ್ಳಲಿವೆ. ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ. ರೈತರು ಯಾವ ಸಮಸ್ಯೆಗಳು ಇಲ್ಲದೆ ಸಂತೃಪ್ತ ಜೀವನ ನಡೆಸುತ್ತಾರೆ. ಇತ್ಯಾದಿ ಸಮಸ್ಯೆಗಳಿಗೆಲ್ಲಾ ಸಂಜೀವಿನಿಯಾಗಿ ಚಂದ್ರನ ನೆಲೆಯಿಂದಲೇ ಛೂಮಂತ್ರ ಕಾಳಿ ಮಾಡುವ ಈ ಯಂತ್ರ ಪುರೋಹಿತಶಾಹಿಗಳಿಗೆ ಹೆಮ್ಮೆಯ ಸಾಧನೆ. ಪುರಾಣ ಸದೃಶ ಕಥೆ ಹೆಣೆಯುವುದರಲ್ಲಿ ನಿಸ್ಸೀಮರಾದ ಇವರು ಟಿ.ವಿಯೊಳಕ್ಕೂ ಬಂದು ಕೂತಿರುವುದಲ್ಲದೆ, ವಿಜ್ಞಾನಕ್ಕೂ ತಿರುಪತಿ ಭಕ್ತಿಗೂ ಏನು ಸಂಬಂಧ ಎಂದವರ ಮೇಲೆ ಎಗರಿ ಬೀಳತೊಡಗಿವೆ. ಇದಂತಿರಲಿ ಹಿಂದಿನ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಪುರೋಹಿತರೊಬ್ಬರು, ತಿರುಪತಿ ದರ್ಶನ ಪಡೆದ ವಿಜ್ಞಾನಿಗಳನ್ನ ಆಡಿಕೊಂಡಿದ್ದಕ್ಕೆ ಸಿಟ್ಟುಗೊಂಡು, ಹುಲಿಕುಂಟೆ ಮೂರ್ತಿ ಮೇಲೆ ನರಿಯಂತೆ ಎಗರಾಡಿದ್ದಾರಲ್ಲಾ. ಈತನ ನಡವಳಿಕೆ ನೋಡಿದರೆ ಚಕ್ರತೀರ್ಥ ವಕ್ರತೀರ್ಥ ನಾಗೇಶ ಇತ್ಯಾದಿಗಳ ಸಂಬಂಧಿಯಾಗಿರುವುದರಲ್ಲಿ ಯಾವ ಸಂಶಯವೂ ಇಲ್ಲ. ಬಿಜೆಪಿಗಳ ಮಂದೆಯಲ್ಲಿ ಈತ ಪರವಾಗಿಲ್ಲ ಎಂದು ನಮ್ಮ ಎಂ.ಪಿ ಪ್ರಕಾಶರು ವಾದಿಸುತ್ತಿದ್ದುದಲ್ಲದೆ, ತಮ್ಮ ಊರಿಗೂ ಕರೆದಿದ್ದರು. ಆದರೀಗ ಈತ ತನ್ನ ಚರ್ಮದೊಳಕ್ಕೆ ಸೇರಿಸಿಕೊಂಡಿರುವ ಜನಿವಾರದ ಅನಾವರಣ ಮಾಡಿದ್ದಾರೆ. ಅದೂ ಹುಲಿಕುಂಟೆ ಮೂರ್ತಿಯವರನ್ನ ಕೆಣಕಿ. ಅಂತೂ ಹುಲಿಕುಂಟೆ ಮೂರ್ತಿಗೆ ಥ್ಯಾಂಕ್ಸ್, ಥೂತ್ತೇರಿ.

******

ಕರ್ನಾಟಕದಲ್ಲಿ ಹೊಸದಾಗಿ ರಚನೆಗೊಂಡ ಸರಕಾರ ವಿರೋಧಪಕ್ಷಗಳ ವಿಕೃತ ದಾಳಿಯಿಂದ ಚೇತರಿಸಿಕೊಳ್ಳುತ್ತಿದೆ. ಇಂತಹ ಸಮಯದಲ್ಲಿ ಹರಿಪ್ರಸಾದ್ ಎಂಬ ಮಹಾನಾಯಕರು ನಮ್ಮ ಜನಾಂಗವನ್ನು ಕಡೆಗಣಿಸಿದರೆ ಮುಖ್ಯಮಂತ್ರಿಯನ್ನು ಇಳಿಸುವುದೂ ಗೊತ್ತು ಎಂದು ಹೇಳಿ ಕುಮಾರಣ್ಣ ಮತ್ತು ಬೊಮ್ಮಾಯಿಗೆ ರೋಮಾಂಚನವುಂಟುಮಾಡಿದ್ದಾರಲ್ಲಾ. ಹರಿಪ್ರಸಾದ್ ಎಲ್ಲ ಜನಾಂಗ ಎಂದಿದ್ದರೆ ಇಂತ ಅಣಕ ಬರೆಯುವ ಅಗತ್ಯವಿರಲಿಲ್ಲ. ಆದರೆ ಅವರು ತನ್ನ ಜನಾಂಗದ ಹೆಸರನ್ನು ಎಳೆದು ತಂದಿರುವುದರಿಂದ ಕೆಲ ಮಾಹಿತಿಯನ್ನ ಮುಖಕ್ಕೆ ಹಿಡಿಯುವ ಅಗತ್ಯವಂತಲ್ಲ.

1995ರಲ್ಲಿ ಈ ನಾಡಿನ ಎರಡನೇ ಬಹುದೊಡ್ಡ ಸಂಖ್ಯೆಯಾದ ಒಕ್ಕಲಿಗರ ಪೈಕಿ ಕೇವಲ ಎರಡು ಜನ ಎಂ.ಪಿಗಳಿದ್ದರೆ ಹರಿಪ್ರಸಾದರ ಸಮುದಾಯದ ಪೈಕಿ ಐದು ಜನ ಎಂ.ಪಿ ಗಳಿದ್ದರು. ಹಲವು ವ್ಯವಹಾರಗಳಲ್ಲೂ ಅವರು ಪ್ರಧಾನವಾಗಿ ಇದ್ದರು. ಕನ್ನಡ ಚಿತ್ರರಂಗದಲ್ಲೂ ಅನೇಕ ಗಣ್ಯರಿದ್ದರು. ಪತ್ರಿಕಾರಂಗದಲ್ಲೂ ಪ್ರಧಾನವಾಗಿ ಮುಂಚೂಣಿಯಲ್ಲಿದ್ದರು. ಹೀಗೆ ಸರಕಾರ, ಸಿನಿಮಾ, ಮಾಧ್ಯಮ ಮತ್ತು ಉದ್ಯಮದಲ್ಲಿದ್ದ ಹರಿಪ್ರಸಾದರ ಸಮುದಾಯದ ಜನ ತುಂಬ ಘನತೆಯಿಂದ ನಡೆದುಕೊಂಡು ಈ ನಾಡಿನ ಕೀರ್ತಿಯನ್ನ ಬೆಳಗಿದರು. ಈಗ ಅಂತವರ ಹೆಸರಿಗೆ ಮಸಿ ಬಳಿಯುತ್ತಿರುವ ಹರಿಪ್ರಸಾದ್ ಅವರಿಗೆ ಸೈರಣೆ ಬೇಕಾಗಿದೆಯಂತಲ್ಲಾ. ಅದೂ ಜವಾಬ್ದಾರಿಯುತ ಸೈರಣೆ ಮುಖ್ಯ. ಇಲ್ಲವಾದರೆ ’ಬಂ’ನಂತೆ ಜೆಡಿಎಸ್‌ಗೆ ಹೋಗಿ ಕಡೆಗಣನೆಗೆ ಒಳಗಾಗಬೇಕಾಗುತ್ತಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...