Homeಅಂಕಣಗಳುಮೋದಿ ಸಾಧನೆ ಹಳ್ಳಿಗೆ ತಲುಪಿಸಿ ಎಂದ ಭೈರಪ್ಪ!

ಮೋದಿ ಸಾಧನೆ ಹಳ್ಳಿಗೆ ತಲುಪಿಸಿ ಎಂದ ಭೈರಪ್ಪ!

- Advertisement -
- Advertisement -

ಕೂದಲೆಳೆ ಅಂತರದಲ್ಲಿ ಘನಘೋರ ಅಪಾಯ ತಪ್ಪಿತು ಎನ್ನುವಂತೆ ಸಿದ್ದರಾಮಯ್ಯ ವಿಕೃತ ಭಟ್ಟನ ಪುಸ್ತಕದ ಬಿಡುಗಡೆ ಸಮಾರಂಭಕ್ಕೆ ತಪ್ಪಿಸಿಕೊಂಡು ಬುದ್ಧಿಜೀವಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರಲ್ಲಾ. ಅದಕ್ಕೆ ಹೇಳುವುದು ಜನರ ನಡುವೆ ಇರುವ ನಾಯಕ ತಪ್ಪು ಮಾಡಲಾರ ಎಂದು. ಇದಕ್ಕೊಂದು ಐತಿಹಾಸಿಕ ಉದಾಹರಣೆ ಬಸವಣ್ಣ ಅವರು ನಡೆಸಿದ ಕ್ರಾಂತಿಕಾರಿ ಚಳವಳಿ; ಈ ಶರಣ ಕ್ರಾಂತಿಯ ಬಗ್ಗೆ ಆಕ್ರೋಶಗೊಂಡ ಪುರೋಹಿತರು ಗಲಭೆ ನಡೆಸುತ್ತಾರೆ. ಅಲ್ಲೊಂದು ಕೊಲೆಯಾಗುತ್ತದೆ, ದೂರು ಬಿಜ್ಜಳನ ಬಳಿಗೆ ಹೋಗುತ್ತದೆ. ವಿಚಾರಣೆ ನಡೆಯುತ್ತದೆ. ಬಿಜ್ಜಳ ಕೊಲೆಯ ವಿಷಯದಲ್ಲಿ ಸಂಶಯಗೊಂಡು ಈ ಕೊಲೆ ಮಾಡಿದವರಾರು ಎಂದು ತನ್ನ ಆಸ್ಥಾನದಲ್ಲಿ ಪ್ರಶ್ನಿಸುತ್ತಾನೆ. ಅದಕ್ಕೆ ಬಸವಣ್ಣ ಪುರೋಹಿತಶಾಹಿಗಳು ಎನ್ನುತ್ತಾನೆ. ಆಗ ಬಿಜ್ಜಳ ಅದು ಹೇಗೆ ಹೇಳುತ್ತೀರಿ ಎಂದಾಗ, ಅದಕ್ಕೆ ಬಸವಣ್ಣ, ನಾನು ಜನಗಳ ನಡುವೆ ಇದ್ದೇನೆ ಎನ್ನುತ್ತಾನೆ. ಬಿಜ್ಜಳ ಮರುಮಾತನಾಡುವುದಿಲ್ಲ. ಈ ಐತಿಹಾಸಿಕ ಘಟನೆಯ ಸತ್ಯವನ್ನು ನಮ್ಮ ರಾಜಕಾರಣಿಗಳು ಪಾಲಿಸಿದ್ದಾದರೆ ವಿಕೃತ ಭಟ್ಟನಂತರವರ ಬಲೆಗೆ ಬೀಳಲಾರರು. ಅಕಸ್ಮಾತ್ ಬಿದ್ದರೆ ಸರ್ವನಾಶ ಗ್ಯಾರಂಟಿಯಂತಲ್ಲಾ, ಥೂತ್ತೇರಿ.

******

ಕಾದಂಬರಿ ಕಾರ್ಖಾನೆಯಾದ ಆರೆಸ್ಸೆಸ್ ಲೇಖಕ ಎಸ್.ಎಲ್ ಭೈರಪ್ಪನವರು ಯುವ ಮಾಣಿಗಳಿಗೊಂದು ಅದ್ಭುತವಾದಂತಹ ಕರೆ ಕೊಟ್ಟಿದ್ದಾರಲ್ಲಾ. ಅದೇನೆಂದರೆ ವಿದ್ಯಾವಂತ ಯುವ ಜನ ಹಳ್ಳಿಹಳ್ಳಿಗಳಿಗೆ ಹೋಗಿ ಮೋದಿ ಮಾಡಿದ ಒಳ್ಳೆ ಕೆಲಸಗಳನ್ನ ಅಲ್ಲಿನ ಗ್ರಾಮವಾಸಿಗಳಿಗೆ ಮನವರಿಕೆ ಮಾಡಿ ಎಂದು. ಎಂದಿನಂತೆ ವಿದ್ಯಾವಂತರು ಹಳ್ಳಿಗೆ ಹೋಗಿ ಹೇಳುವ ಮೋದಿ ಸಾಧನೆ ಪಟ್ಟಿ ಮಾಡಲಾಗಿ ಅವು ಇಂತಿವೆಯಲ್ಲಾ.

  • ಒಂದನೆಯದಾಗಿ ಹಿಂದುಮುಂದು ನೋಡದೆ ನೋಟು ಬ್ಯಾನು ಮಾಡಿ ದೇಶದ ಉದ್ದಗಲಕ್ಕೂ ಅಲ್ಲೋಲಕಲ್ಲೋಲವಾಗಿ ನೂರಾರು ಜನ ಸತ್ತು, ಸಾವಿರಾರು ಸಣ್ಣ ಉದ್ಯಮಗಳು ಕಣ್ಮರೆಯಾದದ್ದು.
  • ಎರಡನೆಯದಾಗಿ ಜಿಎಸ್‌ಟಿ ಎಂಬ ಮನೆಹಾಳ ತೆರಿಗೆ ವಸೂಲಿಯಿಂದಲೂ ಸಣ್ಣಪುಟ್ಟ ಉದ್ಯಮ ಬಾಗಿಲು ಹಾಕಿ ಬಡವರು ತಿನ್ನುವ ಕಡ್ಲೆಪುರಿ ಮೇಲೂ ಜಿಎಸ್‌ಟಿ ಬಂದಿದ್ದು.
  • ಸಿಎಎ ಕಾನೂನು ತರಲು ಹೊರಟು ಇಡೀ ಭಾರತದ ಮುಸ್ಲಿಮರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವಂತೆ ಮಾಡಿದ್ದು.
  • ಕೃಷಿಕಾಯ್ದೆ ತಂದು ದೆಹಲಿ ಗಡಿಯಲ್ಲಿ ಹೋರಾಟನಿರತ 750 ಜನ ರೈತರು ಸಾಯುವಂತೆ ಮಾಡಿದ್ದು.
  • ಸಾವಿರಾರು ಕೋಟಿ ಒಪ್ಪಂದದ ರಫೇಲ್ ಹಗರಣ ಮುಚ್ಚಿಹಾಕಿ, ತ್ವರಿತವಾಗಿ ಮಾಡಿದ ಒಪ್ಪಂದ ಎಂದು ಬಿಂಬಿಸಿದ್ದು.
  • ಭಾರತದ ಸುಮಾರು ಹನ್ನೆರಡು ಉದ್ಯಮಗಳನ್ನು ಮಾರಿದ್ದೂ ಅಲ್ಲದೆ, ವಿಶೇಷ ಘಟಕವಾಗಿದ್ದ ರೈಲ್ವೆ ಇಲಾಖೆಯನ್ನ ಮುಗಿಸಲು ಪ್ರಯತ್ನಿಸುತ್ತಿರುವುದು; ಅವುಗಳ ಬಣ್ಣ ಬದಲಿಸಿ ಸೀಟಿನ ಅಳತೆ ಕಡಿಮೆ ಮಾಡಿ ಪ್ರಯಾಣಿಕರನ್ನ ಹಿಂಸಿಸುತ್ತಿರುವುದು.
  • ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಗೆ ದಾಳಿಯಿಟ್ಟು ಒಂದು ಡಜನ್ ರೋಡ್ ಶೋ ಮಾಡಿ ಸೋತ ಸಿಟ್ಟಿಗೆ ಕರ್ನಾಟಕದ ಪಾಲಿನ ಅಕ್ಕಿ ನಿಲ್ಲಿಸಿದ್ದಲ್ಲದೆ ಇತಿಹಾಸದಲ್ಲಿ ದಾಖಲಾಗುವಂತೆ ವಿರೋಧಪಕ್ಷದ ನಾಯಕರನ್ನೆ ನೇಮಿಸದಿದ್ದುದು.
  • ನಮ್ಮದೇ ದೇಶದ ಭುಜದಂತಿರುವ ಮಣಿಪುರ ಎರಡು ತಿಂಗಳಿಂದ ಉರಿಯುತ್ತಿದ್ದರೂ ಆ ಕಡೆ ತಿರುಗಿಯೂ ನೋಡದೆ ಅಮೆರಿಕದಲ್ಲಿ ಯೋಗ ಮಾಡುತ್ತ ಕುಳಿತದ್ದು.

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ಕಡೆಗೂ ಮೋದಿ ಬಾಯಿ ಬಿಟ್ಟಿದ್ದು ಯಾವಾಗೆಂದರೆ ನಿಸ್ಸಹಾಯಕ ಹೆಣ್ಣುಮಕ್ಕಳನ್ನು ಬೆತ್ತಲೆ ಮಾಡಿ ಅವರನ್ನ ಅತ್ಯಾಚಾರ ಮಾಡಿ ಕೊಲೆ ಮಾಡಿದ ವಿಡಿಯೋ ತುಣುಕೊಂದು ತಿಂಗಳುಗಳ ನಂತರ ವೈರಲ್ ಆದಾಗ! ಇಂತಹ ಮೋದಿಯ ಸಾಧನೆಗಳನ್ನ ಹಳ್ಳಿಹಳ್ಳಿಗೆ ಹೋಗಿ ಹೇಳಿ ಎಂದು ಕರೆಕೊಡುತ್ತಿರುವ ಭೈರಪ್ಪರಿಗೆ ವಯೋಸಹಜ ಮರೆವೇನೂ ಇಲ್ಲ, ಆದರೆ ದಶಕಗಳಿಂದ ಸಂಘ ಪರಿವಾರದಿಂದ ತರಬೇತು ಪಡೆದಿರುವ ಮಿದುಳು ಹಾಗೆ ಕೆಲಸ ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಈಚೆಗೆ ಚಂದ್ರಯಾನ ಉಡಾವಣೆಯಾಗಿದೆ. ಇಸ್ರೊ ಅಧ್ಯಕ್ಷ ಸೋಮನಾಥ್ ಸಾರಥ್ಯದಲ್ಲಿ ಎಂಟು ಜನ ವಿಜ್ಞಾನಿಗಳೆಂಬುವರು ತಿರುಪತಿಯಲ್ಲಿ ನಿಂತು ಭಯ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ತಿಮ್ಮಪ್ಪ ಇಡೀ ಕರ್ನಾಟಕದ ಸಕಲಿಷ್ಟು ಜಾತಿಗಳ ದೇವರಾದ್ದರಿಂದ ಜನರಿಗೆಲ್ಲಾ ಈ ಚಂದ್ರಯಾನ ಉಡಾವಣೆಯಿಂದ ಒಳ್ಳೆಯದಾಗುತ್ತದಂತೆ. ಇವರ ಇಂಗಿತವನ್ನ ಆಡಿಕೊಳ್ಳುವುದಾದರೆ ಚಂದ್ರನ ಮೇಲೆ ಈ ಯಂತ್ರ ಕಾಲೂರಿದ ಕ್ಷಣದಿಂದಲೇ ಭಾರತದಲ್ಲಿ ಬಿಜೆಪಿಗಳ ಹಾವಳಿಯಿಂದ ಕ್ಷೆಭೆಗೊಂಡಿರುವ ಮನಸ್ಸುಗಳು ಶಾಂತಗೊಳ್ಳಲಿವೆ. ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ. ರೈತರು ಯಾವ ಸಮಸ್ಯೆಗಳು ಇಲ್ಲದೆ ಸಂತೃಪ್ತ ಜೀವನ ನಡೆಸುತ್ತಾರೆ. ಇತ್ಯಾದಿ ಸಮಸ್ಯೆಗಳಿಗೆಲ್ಲಾ ಸಂಜೀವಿನಿಯಾಗಿ ಚಂದ್ರನ ನೆಲೆಯಿಂದಲೇ ಛೂಮಂತ್ರ ಕಾಳಿ ಮಾಡುವ ಈ ಯಂತ್ರ ಪುರೋಹಿತಶಾಹಿಗಳಿಗೆ ಹೆಮ್ಮೆಯ ಸಾಧನೆ. ಪುರಾಣ ಸದೃಶ ಕಥೆ ಹೆಣೆಯುವುದರಲ್ಲಿ ನಿಸ್ಸೀಮರಾದ ಇವರು ಟಿ.ವಿಯೊಳಕ್ಕೂ ಬಂದು ಕೂತಿರುವುದಲ್ಲದೆ, ವಿಜ್ಞಾನಕ್ಕೂ ತಿರುಪತಿ ಭಕ್ತಿಗೂ ಏನು ಸಂಬಂಧ ಎಂದವರ ಮೇಲೆ ಎಗರಿ ಬೀಳತೊಡಗಿವೆ. ಇದಂತಿರಲಿ ಹಿಂದಿನ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಪುರೋಹಿತರೊಬ್ಬರು, ತಿರುಪತಿ ದರ್ಶನ ಪಡೆದ ವಿಜ್ಞಾನಿಗಳನ್ನ ಆಡಿಕೊಂಡಿದ್ದಕ್ಕೆ ಸಿಟ್ಟುಗೊಂಡು, ಹುಲಿಕುಂಟೆ ಮೂರ್ತಿ ಮೇಲೆ ನರಿಯಂತೆ ಎಗರಾಡಿದ್ದಾರಲ್ಲಾ. ಈತನ ನಡವಳಿಕೆ ನೋಡಿದರೆ ಚಕ್ರತೀರ್ಥ ವಕ್ರತೀರ್ಥ ನಾಗೇಶ ಇತ್ಯಾದಿಗಳ ಸಂಬಂಧಿಯಾಗಿರುವುದರಲ್ಲಿ ಯಾವ ಸಂಶಯವೂ ಇಲ್ಲ. ಬಿಜೆಪಿಗಳ ಮಂದೆಯಲ್ಲಿ ಈತ ಪರವಾಗಿಲ್ಲ ಎಂದು ನಮ್ಮ ಎಂ.ಪಿ ಪ್ರಕಾಶರು ವಾದಿಸುತ್ತಿದ್ದುದಲ್ಲದೆ, ತಮ್ಮ ಊರಿಗೂ ಕರೆದಿದ್ದರು. ಆದರೀಗ ಈತ ತನ್ನ ಚರ್ಮದೊಳಕ್ಕೆ ಸೇರಿಸಿಕೊಂಡಿರುವ ಜನಿವಾರದ ಅನಾವರಣ ಮಾಡಿದ್ದಾರೆ. ಅದೂ ಹುಲಿಕುಂಟೆ ಮೂರ್ತಿಯವರನ್ನ ಕೆಣಕಿ. ಅಂತೂ ಹುಲಿಕುಂಟೆ ಮೂರ್ತಿಗೆ ಥ್ಯಾಂಕ್ಸ್, ಥೂತ್ತೇರಿ.

******

ಕರ್ನಾಟಕದಲ್ಲಿ ಹೊಸದಾಗಿ ರಚನೆಗೊಂಡ ಸರಕಾರ ವಿರೋಧಪಕ್ಷಗಳ ವಿಕೃತ ದಾಳಿಯಿಂದ ಚೇತರಿಸಿಕೊಳ್ಳುತ್ತಿದೆ. ಇಂತಹ ಸಮಯದಲ್ಲಿ ಹರಿಪ್ರಸಾದ್ ಎಂಬ ಮಹಾನಾಯಕರು ನಮ್ಮ ಜನಾಂಗವನ್ನು ಕಡೆಗಣಿಸಿದರೆ ಮುಖ್ಯಮಂತ್ರಿಯನ್ನು ಇಳಿಸುವುದೂ ಗೊತ್ತು ಎಂದು ಹೇಳಿ ಕುಮಾರಣ್ಣ ಮತ್ತು ಬೊಮ್ಮಾಯಿಗೆ ರೋಮಾಂಚನವುಂಟುಮಾಡಿದ್ದಾರಲ್ಲಾ. ಹರಿಪ್ರಸಾದ್ ಎಲ್ಲ ಜನಾಂಗ ಎಂದಿದ್ದರೆ ಇಂತ ಅಣಕ ಬರೆಯುವ ಅಗತ್ಯವಿರಲಿಲ್ಲ. ಆದರೆ ಅವರು ತನ್ನ ಜನಾಂಗದ ಹೆಸರನ್ನು ಎಳೆದು ತಂದಿರುವುದರಿಂದ ಕೆಲ ಮಾಹಿತಿಯನ್ನ ಮುಖಕ್ಕೆ ಹಿಡಿಯುವ ಅಗತ್ಯವಂತಲ್ಲ.

1995ರಲ್ಲಿ ಈ ನಾಡಿನ ಎರಡನೇ ಬಹುದೊಡ್ಡ ಸಂಖ್ಯೆಯಾದ ಒಕ್ಕಲಿಗರ ಪೈಕಿ ಕೇವಲ ಎರಡು ಜನ ಎಂ.ಪಿಗಳಿದ್ದರೆ ಹರಿಪ್ರಸಾದರ ಸಮುದಾಯದ ಪೈಕಿ ಐದು ಜನ ಎಂ.ಪಿ ಗಳಿದ್ದರು. ಹಲವು ವ್ಯವಹಾರಗಳಲ್ಲೂ ಅವರು ಪ್ರಧಾನವಾಗಿ ಇದ್ದರು. ಕನ್ನಡ ಚಿತ್ರರಂಗದಲ್ಲೂ ಅನೇಕ ಗಣ್ಯರಿದ್ದರು. ಪತ್ರಿಕಾರಂಗದಲ್ಲೂ ಪ್ರಧಾನವಾಗಿ ಮುಂಚೂಣಿಯಲ್ಲಿದ್ದರು. ಹೀಗೆ ಸರಕಾರ, ಸಿನಿಮಾ, ಮಾಧ್ಯಮ ಮತ್ತು ಉದ್ಯಮದಲ್ಲಿದ್ದ ಹರಿಪ್ರಸಾದರ ಸಮುದಾಯದ ಜನ ತುಂಬ ಘನತೆಯಿಂದ ನಡೆದುಕೊಂಡು ಈ ನಾಡಿನ ಕೀರ್ತಿಯನ್ನ ಬೆಳಗಿದರು. ಈಗ ಅಂತವರ ಹೆಸರಿಗೆ ಮಸಿ ಬಳಿಯುತ್ತಿರುವ ಹರಿಪ್ರಸಾದ್ ಅವರಿಗೆ ಸೈರಣೆ ಬೇಕಾಗಿದೆಯಂತಲ್ಲಾ. ಅದೂ ಜವಾಬ್ದಾರಿಯುತ ಸೈರಣೆ ಮುಖ್ಯ. ಇಲ್ಲವಾದರೆ ’ಬಂ’ನಂತೆ ಜೆಡಿಎಸ್‌ಗೆ ಹೋಗಿ ಕಡೆಗಣನೆಗೆ ಒಳಗಾಗಬೇಕಾಗುತ್ತಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...