Homeಅಂಕಣಗಳುಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

- Advertisement -
- Advertisement -

ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ ಮೇಲೆ ನಿಷೇಧವನ್ನು ಹೇರಿಬಿಟ್ಟಿತಲ್ಲಾ. ನಿಷೇಧದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹಾಗಾದರೆ ಆರೆಸ್ಸೆಸ್ಸನ್ನು ನಿಷೇಧಿಸಿ ಎಂದು ಕರೆಕೊಟ್ಟ ಕೂಡಲೇ ಬಿಜೆಪಿಯ ತಲೆಕೆಟ್ಟ ಲೀಡರುಗಳು ಸಿದ್ದು ಮೇಲೆ ಬಿದ್ದಿವೆಯಂತಲ್ಲಾ. ಈ ಆರೆಸ್ಸೆಸ್ಸಿಗರು ಮತ್ತು ಲೀಡರುಗಳು ಗಾಂಧಿ ಹತ್ಯೆಯ ನಂತರ ಹುಟ್ಟಿದವರು; ಇವರಿಗೆ ಇತಿಹಾಸ ಗೊತ್ತಿರಲಾರದು. ಗಾಂಧಿ ಕೊಲೆಯಲ್ಲಿ ಆರೆಸ್ಸೆಸ್ ಕೈವಾಡ ಇದೆಯೆಂದು ಆರೋಪಿಸಿ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರೇ ಆರೆಸ್ಸೆಸ್ಸನ್ನು ಬ್ಯಾನ್ ಮಾಡಿದ್ದರೆಂದು ಸಿದ್ದು ಇನ್ನೂ ತಮ್ಮ ವಿರೋಧಿಗಳ ಮುಸುಡಿಗೆ ಹೇಳಿಲ್ಲವಂತಲ್ಲಾ, ಥೂತ್ತೇರಿ.

*****

ಸಂಘ ಪರಿವಾರಿಗಳು ಗಾಂಧಿಯನ್ನು ಕೊಂದ ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸುತ್ತಿವೆ, ಇದಷ್ಟೇ ಅಲ್ಲ, ಮುಂದೆ ಮಾಡಬಹುದಾದ ಧ್ವಂಸದ ಕಾರ್ಯಗಳ ಪಟ್ಟಿಯನ್ನು ಮಾಡುತ್ತಿವೆ. ಬಾಬರಿ ಮಸೀದಿ ವಿಷಯದಲ್ಲಿ ತೀರ್ಪು ನೀಡಿದ ಸಮಯದಲ್ಲಿ ಸುಪ್ರೀಂಕೋರ್ಟು ’ಆಯ್ತು ಸಾಕು ಮಾಡಿ, ಮುಂದೆ ದೇಶದ ಶಾಂತಿ ಬಹಳ ಮುಖ್ಯ’ ಎಂದು ಹೇಳಿದ ಮಾತಿಗೆ ಕಿವುಡಾಗಿ ಕುಂತಿವೆಯೆಲ್ಲಾ. ಹೊಸದಾಗಿ ಹುಟ್ಟಿಕೊಂಡ ಗಾದೆ ಮಾತಿನಂತೆ ’ನಳ್ಳಿ ಹೆಚ್ಚಿದ ಕೆರೆ ಹಾಳು, ಆರೆಸ್ಸೆಸ್ ಹೆಚ್ಚಿದ ಊರ್ ಹಾಳು’ ಎಂಬ ಗಾದೆಯಂತೆ ಈಗ ಬ್ರಾಹ್ಮಣ ವಠಾರದಲ್ಲಿದ್ದ ಆರೆಸ್ಸೆಸ್ ಕವಾಯತು ಊರನ್ನೆಲ್ಲಾ ವ್ಯಾಪಿಸುತ್ತಿದೆ. ಅವುಗಳ ದೀರ್ಘಕಾಲದ ಅಜೆಂಡಾ ಪ್ರಕಾರ ಮುಸ್ಲಿಮರನ್ನ ಬಗ್ಗು ಬಡಿಯುವುದು, ನಂತರ ದಲಿತರ ಮೇಲೆ ಶೂದ್ರರ ಕೈಲಿ ದಾಳಿ ಮಾಡಿಸುವುದು, ಆ ನಂತರ ಸಿಖ್ಖರು, ಯಾದವರು ಹೀಗೆ ನಡೆಯಲಿಚ್ಛಿಸಿರುವ ದೊಡ್ಡ ದೊಂಬಿಯನ್ನೇ ಊಹಿಸಬಹುದು. ತಲೆಕೆಟ್ಟವರಿಗೆ ಮತ್ತು ಬರುವ ಔಷಧಿ ಕೊಡಿಸಿ ಜಗಲಿಯ ಮೇಲೆ ಕೂರಿಸುವ ತನಕ ಇವೆಲ್ಲಾ ನಿರಂತರವಾಗಿ ನಡೆಯುವ ಚೇಷ್ಟೆಗಳೆಂದು ಉಗ್ರ ಗಾಂಧಿವಾದಿಗಳು ಗೊಣಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಭಾರತ್ ಜೋಡೋ ಯಾತ್ರೆ ಕೇರಳದಿಂದ ಕರ್ನಾಟಕ ತಲುಪಾಯ್ತು. ಮಂಡ್ಯದ ಹತ್ತಿರ ಹೋಗುತ್ತಿದೆ. ಕಳೆದ ಎಂಟು ವರ್ಷಗಳಿಂದ ಬಾಲಿಶ ಹುಡುಗ, ಲಾಲಿಪಾಪು ಮತ್ತು ಅಪ್ರಬುದ್ಧ ಬಾಲ ಭಾಷೆಯ ಹುಡುಗ ಎಂದೆಲ್ಲಾ ಚೆಡ್ಡಿಗಳು ತಮ್ಮ ಜಾಲತಾಣದಲ್ಲಿ ಯಾರ ವಿರುದ್ಧ ಅಪಪ್ರಚಾರ ಮಾಡಿದ್ದವೊ ಅಂತಹ ರಾಹುಲಗಾಂಧಿ, ತಂದೆ ತಾಯಿ ಅಜ್ಜಿ ಮುತ್ತಾತರ ಮಾರ್ಗ ಹುಡುಕುತ್ತ ಹೊರಟವನಂತೆ ಬರುತ್ತಿದ್ದಾನಂತಲ್ಲಾ. ಅವನನ್ನು ನೋಡಲು ರಸ್ತೆ ಬದಿಯಲ್ಲಿ ನಿಂತ ಜನ ಮತ್ತು ಆತನ ಹಿಂದೆ ಕಿಲೋಮಿಟರುಗಟ್ಟಲೆ ಹರಿದು ಬರುತ್ತಿರುವ ಜನಸಾಗರ ನೋಡಿದ ಬಿಜೆಪಿಗಳು ಬೆಚ್ಚಿ ಏನು ಮಾಡಲೂ ತೋಚದೆ ಜಾಥಾದಲ್ಲಿ ಪೇಸಿಎಂ ಟಿಶರ್ಟ್ ಧರಿಸಿದ್ದ ಹುಡುಗರನ್ನ ಹಿಡಿದು ಶರ್ಟ್ ಬಿಚ್ಚಿಕೊಂಡು ಬರಲು ಹೇಳಿವೆಯಂತಲ್ಲಾ. ಒಂದು ಟೀಶರ್ಟ್ ಬಿಚ್ಚಿದರೇನು ಹತ್ತು ಟೀಶರ್ಟ್ ಕೊಡಿಸುತ್ತೇನೆ ಎಂದು ಡಿಕೆಶಿ ಹೇಳಿದ ಕೂಡಲೇ ಮಾಧ್ಯಮದೊಳಗಿರುವ ಶಾನುಭೋಗರ ಹುಡುಗರು ತಮ್ಮ ಕ್ಯಾಮರಾ ಚುರುಕುಗೊಳಿಸಿ ಹೆಜ್ಜೆ ಹಾಕುವಲ್ಲಿ ಹಿಂದೆ ಬಿದ್ದ ಡಿಕೆಶಿ, ಸಿದ್ದರಾಮಯ್ಯನಿಗೆ ಎಡಗೈ ತಾಕಿಸಿದ ಡಿಕೆಶಿ, ರಾಹುಲ್ ಕಾರಿನಲ್ಲಿ ಜಾಗವಿಲ್ಲದೆ ಹಿಂದಿನ ಕಾರಿನಲ್ಲಿ ಹೊರಟ ಡಿಕೆಶಿ ಎಂದು ಅರಚುತ್ತಲೇ ತಮ್ಮ ಚೇಷ್ಟೆಗಳನ್ನು ಮೆರೆಯುತ್ತಿವೆಯಂತಲ್ಲಾ. ನಗು ಕಳೆದುಕೊಂಡ ಜನಕ್ಕೆ ಇನ್ನು ಏನೇನು ಹಾಸ್ಯ ಪ್ರಸಂಗವನ್ನು ಈ ದಸರಾ ಸಮಯದಲ್ಲಿ ಮಾಧ್ಯಮಗಳು ತೋರುತ್ತವೊ ಎಂಬುದು ಮನರಂಜನೆಗೆ ಹಾತೊರೆಯುವ ಜನರ ಮನದಾಳದ ಮಾತಾಗಿದೆಯಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯ ಮತ್ತು ಸತ್ವದ ಹುಡುಕಾಟ ಗೌರಿ. ಕಾಂ ಧ್ಯೇಯೋದ್ದೇಶ.ಹೆಮ್ಮೆಯಾಗುತ್ತದೆ…ಪತ್ರಿಕಾ ಧರ್ಮವನ್ನೇ ಮರೆತ ಮೈಮನ ಮಾರಿಕೊಂಡ ಅದೆಷ್ಟೋ ಮಾಧ್ಯಮಗಳ ನಡುವೆ ಕೆಸರಲ್ಲಿ ಕಮಲ ಅರಳಿದಂತೆ ಅರಳಿ ಮಾಧ್ಯಮ ಅಂದರೆ ಇದಲ್ಲಾ ಇದು ಎಂದು ಅರಹುತ್ತಿರುವ ನಿಷ್ಕಲ್ಮಷ ನಿಷ್ಕಪಟ ಈ ಮಾಧ್ಯಮ ಕಂಡು.ಹೃದಯಾಂತರಾಳದ ಸಲಾಂ ಬಸವ ಶರಣು.
    ಗುಡಿಬಂಡೆ ಫಯಾಜ್ ಅಹಮದ್ ಖಾನ್
    ರಾಜ್ಯಾಧ್ಯಕ್ಷರು. ಕಸಾಪ
    ಕರುನಾಡು ಸಾಹಿತ್ಯ ಪರಿಷತ್ತು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...