Homeಅಂಕಣಗಳುಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

- Advertisement -
- Advertisement -

ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ ಮೇಲೆ ನಿಷೇಧವನ್ನು ಹೇರಿಬಿಟ್ಟಿತಲ್ಲಾ. ನಿಷೇಧದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹಾಗಾದರೆ ಆರೆಸ್ಸೆಸ್ಸನ್ನು ನಿಷೇಧಿಸಿ ಎಂದು ಕರೆಕೊಟ್ಟ ಕೂಡಲೇ ಬಿಜೆಪಿಯ ತಲೆಕೆಟ್ಟ ಲೀಡರುಗಳು ಸಿದ್ದು ಮೇಲೆ ಬಿದ್ದಿವೆಯಂತಲ್ಲಾ. ಈ ಆರೆಸ್ಸೆಸ್ಸಿಗರು ಮತ್ತು ಲೀಡರುಗಳು ಗಾಂಧಿ ಹತ್ಯೆಯ ನಂತರ ಹುಟ್ಟಿದವರು; ಇವರಿಗೆ ಇತಿಹಾಸ ಗೊತ್ತಿರಲಾರದು. ಗಾಂಧಿ ಕೊಲೆಯಲ್ಲಿ ಆರೆಸ್ಸೆಸ್ ಕೈವಾಡ ಇದೆಯೆಂದು ಆರೋಪಿಸಿ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರೇ ಆರೆಸ್ಸೆಸ್ಸನ್ನು ಬ್ಯಾನ್ ಮಾಡಿದ್ದರೆಂದು ಸಿದ್ದು ಇನ್ನೂ ತಮ್ಮ ವಿರೋಧಿಗಳ ಮುಸುಡಿಗೆ ಹೇಳಿಲ್ಲವಂತಲ್ಲಾ, ಥೂತ್ತೇರಿ.

*****

ಸಂಘ ಪರಿವಾರಿಗಳು ಗಾಂಧಿಯನ್ನು ಕೊಂದ ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸುತ್ತಿವೆ, ಇದಷ್ಟೇ ಅಲ್ಲ, ಮುಂದೆ ಮಾಡಬಹುದಾದ ಧ್ವಂಸದ ಕಾರ್ಯಗಳ ಪಟ್ಟಿಯನ್ನು ಮಾಡುತ್ತಿವೆ. ಬಾಬರಿ ಮಸೀದಿ ವಿಷಯದಲ್ಲಿ ತೀರ್ಪು ನೀಡಿದ ಸಮಯದಲ್ಲಿ ಸುಪ್ರೀಂಕೋರ್ಟು ’ಆಯ್ತು ಸಾಕು ಮಾಡಿ, ಮುಂದೆ ದೇಶದ ಶಾಂತಿ ಬಹಳ ಮುಖ್ಯ’ ಎಂದು ಹೇಳಿದ ಮಾತಿಗೆ ಕಿವುಡಾಗಿ ಕುಂತಿವೆಯೆಲ್ಲಾ. ಹೊಸದಾಗಿ ಹುಟ್ಟಿಕೊಂಡ ಗಾದೆ ಮಾತಿನಂತೆ ’ನಳ್ಳಿ ಹೆಚ್ಚಿದ ಕೆರೆ ಹಾಳು, ಆರೆಸ್ಸೆಸ್ ಹೆಚ್ಚಿದ ಊರ್ ಹಾಳು’ ಎಂಬ ಗಾದೆಯಂತೆ ಈಗ ಬ್ರಾಹ್ಮಣ ವಠಾರದಲ್ಲಿದ್ದ ಆರೆಸ್ಸೆಸ್ ಕವಾಯತು ಊರನ್ನೆಲ್ಲಾ ವ್ಯಾಪಿಸುತ್ತಿದೆ. ಅವುಗಳ ದೀರ್ಘಕಾಲದ ಅಜೆಂಡಾ ಪ್ರಕಾರ ಮುಸ್ಲಿಮರನ್ನ ಬಗ್ಗು ಬಡಿಯುವುದು, ನಂತರ ದಲಿತರ ಮೇಲೆ ಶೂದ್ರರ ಕೈಲಿ ದಾಳಿ ಮಾಡಿಸುವುದು, ಆ ನಂತರ ಸಿಖ್ಖರು, ಯಾದವರು ಹೀಗೆ ನಡೆಯಲಿಚ್ಛಿಸಿರುವ ದೊಡ್ಡ ದೊಂಬಿಯನ್ನೇ ಊಹಿಸಬಹುದು. ತಲೆಕೆಟ್ಟವರಿಗೆ ಮತ್ತು ಬರುವ ಔಷಧಿ ಕೊಡಿಸಿ ಜಗಲಿಯ ಮೇಲೆ ಕೂರಿಸುವ ತನಕ ಇವೆಲ್ಲಾ ನಿರಂತರವಾಗಿ ನಡೆಯುವ ಚೇಷ್ಟೆಗಳೆಂದು ಉಗ್ರ ಗಾಂಧಿವಾದಿಗಳು ಗೊಣಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಭಾರತ್ ಜೋಡೋ ಯಾತ್ರೆ ಕೇರಳದಿಂದ ಕರ್ನಾಟಕ ತಲುಪಾಯ್ತು. ಮಂಡ್ಯದ ಹತ್ತಿರ ಹೋಗುತ್ತಿದೆ. ಕಳೆದ ಎಂಟು ವರ್ಷಗಳಿಂದ ಬಾಲಿಶ ಹುಡುಗ, ಲಾಲಿಪಾಪು ಮತ್ತು ಅಪ್ರಬುದ್ಧ ಬಾಲ ಭಾಷೆಯ ಹುಡುಗ ಎಂದೆಲ್ಲಾ ಚೆಡ್ಡಿಗಳು ತಮ್ಮ ಜಾಲತಾಣದಲ್ಲಿ ಯಾರ ವಿರುದ್ಧ ಅಪಪ್ರಚಾರ ಮಾಡಿದ್ದವೊ ಅಂತಹ ರಾಹುಲಗಾಂಧಿ, ತಂದೆ ತಾಯಿ ಅಜ್ಜಿ ಮುತ್ತಾತರ ಮಾರ್ಗ ಹುಡುಕುತ್ತ ಹೊರಟವನಂತೆ ಬರುತ್ತಿದ್ದಾನಂತಲ್ಲಾ. ಅವನನ್ನು ನೋಡಲು ರಸ್ತೆ ಬದಿಯಲ್ಲಿ ನಿಂತ ಜನ ಮತ್ತು ಆತನ ಹಿಂದೆ ಕಿಲೋಮಿಟರುಗಟ್ಟಲೆ ಹರಿದು ಬರುತ್ತಿರುವ ಜನಸಾಗರ ನೋಡಿದ ಬಿಜೆಪಿಗಳು ಬೆಚ್ಚಿ ಏನು ಮಾಡಲೂ ತೋಚದೆ ಜಾಥಾದಲ್ಲಿ ಪೇಸಿಎಂ ಟಿಶರ್ಟ್ ಧರಿಸಿದ್ದ ಹುಡುಗರನ್ನ ಹಿಡಿದು ಶರ್ಟ್ ಬಿಚ್ಚಿಕೊಂಡು ಬರಲು ಹೇಳಿವೆಯಂತಲ್ಲಾ. ಒಂದು ಟೀಶರ್ಟ್ ಬಿಚ್ಚಿದರೇನು ಹತ್ತು ಟೀಶರ್ಟ್ ಕೊಡಿಸುತ್ತೇನೆ ಎಂದು ಡಿಕೆಶಿ ಹೇಳಿದ ಕೂಡಲೇ ಮಾಧ್ಯಮದೊಳಗಿರುವ ಶಾನುಭೋಗರ ಹುಡುಗರು ತಮ್ಮ ಕ್ಯಾಮರಾ ಚುರುಕುಗೊಳಿಸಿ ಹೆಜ್ಜೆ ಹಾಕುವಲ್ಲಿ ಹಿಂದೆ ಬಿದ್ದ ಡಿಕೆಶಿ, ಸಿದ್ದರಾಮಯ್ಯನಿಗೆ ಎಡಗೈ ತಾಕಿಸಿದ ಡಿಕೆಶಿ, ರಾಹುಲ್ ಕಾರಿನಲ್ಲಿ ಜಾಗವಿಲ್ಲದೆ ಹಿಂದಿನ ಕಾರಿನಲ್ಲಿ ಹೊರಟ ಡಿಕೆಶಿ ಎಂದು ಅರಚುತ್ತಲೇ ತಮ್ಮ ಚೇಷ್ಟೆಗಳನ್ನು ಮೆರೆಯುತ್ತಿವೆಯಂತಲ್ಲಾ. ನಗು ಕಳೆದುಕೊಂಡ ಜನಕ್ಕೆ ಇನ್ನು ಏನೇನು ಹಾಸ್ಯ ಪ್ರಸಂಗವನ್ನು ಈ ದಸರಾ ಸಮಯದಲ್ಲಿ ಮಾಧ್ಯಮಗಳು ತೋರುತ್ತವೊ ಎಂಬುದು ಮನರಂಜನೆಗೆ ಹಾತೊರೆಯುವ ಜನರ ಮನದಾಳದ ಮಾತಾಗಿದೆಯಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯ ಮತ್ತು ಸತ್ವದ ಹುಡುಕಾಟ ಗೌರಿ. ಕಾಂ ಧ್ಯೇಯೋದ್ದೇಶ.ಹೆಮ್ಮೆಯಾಗುತ್ತದೆ…ಪತ್ರಿಕಾ ಧರ್ಮವನ್ನೇ ಮರೆತ ಮೈಮನ ಮಾರಿಕೊಂಡ ಅದೆಷ್ಟೋ ಮಾಧ್ಯಮಗಳ ನಡುವೆ ಕೆಸರಲ್ಲಿ ಕಮಲ ಅರಳಿದಂತೆ ಅರಳಿ ಮಾಧ್ಯಮ ಅಂದರೆ ಇದಲ್ಲಾ ಇದು ಎಂದು ಅರಹುತ್ತಿರುವ ನಿಷ್ಕಲ್ಮಷ ನಿಷ್ಕಪಟ ಈ ಮಾಧ್ಯಮ ಕಂಡು.ಹೃದಯಾಂತರಾಳದ ಸಲಾಂ ಬಸವ ಶರಣು.
    ಗುಡಿಬಂಡೆ ಫಯಾಜ್ ಅಹಮದ್ ಖಾನ್
    ರಾಜ್ಯಾಧ್ಯಕ್ಷರು. ಕಸಾಪ
    ಕರುನಾಡು ಸಾಹಿತ್ಯ ಪರಿಷತ್ತು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...