Homeಅಂಕಣಗಳುಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

- Advertisement -
- Advertisement -

ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ ಮೇಲೆ ನಿಷೇಧವನ್ನು ಹೇರಿಬಿಟ್ಟಿತಲ್ಲಾ. ನಿಷೇಧದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹಾಗಾದರೆ ಆರೆಸ್ಸೆಸ್ಸನ್ನು ನಿಷೇಧಿಸಿ ಎಂದು ಕರೆಕೊಟ್ಟ ಕೂಡಲೇ ಬಿಜೆಪಿಯ ತಲೆಕೆಟ್ಟ ಲೀಡರುಗಳು ಸಿದ್ದು ಮೇಲೆ ಬಿದ್ದಿವೆಯಂತಲ್ಲಾ. ಈ ಆರೆಸ್ಸೆಸ್ಸಿಗರು ಮತ್ತು ಲೀಡರುಗಳು ಗಾಂಧಿ ಹತ್ಯೆಯ ನಂತರ ಹುಟ್ಟಿದವರು; ಇವರಿಗೆ ಇತಿಹಾಸ ಗೊತ್ತಿರಲಾರದು. ಗಾಂಧಿ ಕೊಲೆಯಲ್ಲಿ ಆರೆಸ್ಸೆಸ್ ಕೈವಾಡ ಇದೆಯೆಂದು ಆರೋಪಿಸಿ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರೇ ಆರೆಸ್ಸೆಸ್ಸನ್ನು ಬ್ಯಾನ್ ಮಾಡಿದ್ದರೆಂದು ಸಿದ್ದು ಇನ್ನೂ ತಮ್ಮ ವಿರೋಧಿಗಳ ಮುಸುಡಿಗೆ ಹೇಳಿಲ್ಲವಂತಲ್ಲಾ, ಥೂತ್ತೇರಿ.

*****

ಸಂಘ ಪರಿವಾರಿಗಳು ಗಾಂಧಿಯನ್ನು ಕೊಂದ ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸುತ್ತಿವೆ, ಇದಷ್ಟೇ ಅಲ್ಲ, ಮುಂದೆ ಮಾಡಬಹುದಾದ ಧ್ವಂಸದ ಕಾರ್ಯಗಳ ಪಟ್ಟಿಯನ್ನು ಮಾಡುತ್ತಿವೆ. ಬಾಬರಿ ಮಸೀದಿ ವಿಷಯದಲ್ಲಿ ತೀರ್ಪು ನೀಡಿದ ಸಮಯದಲ್ಲಿ ಸುಪ್ರೀಂಕೋರ್ಟು ’ಆಯ್ತು ಸಾಕು ಮಾಡಿ, ಮುಂದೆ ದೇಶದ ಶಾಂತಿ ಬಹಳ ಮುಖ್ಯ’ ಎಂದು ಹೇಳಿದ ಮಾತಿಗೆ ಕಿವುಡಾಗಿ ಕುಂತಿವೆಯೆಲ್ಲಾ. ಹೊಸದಾಗಿ ಹುಟ್ಟಿಕೊಂಡ ಗಾದೆ ಮಾತಿನಂತೆ ’ನಳ್ಳಿ ಹೆಚ್ಚಿದ ಕೆರೆ ಹಾಳು, ಆರೆಸ್ಸೆಸ್ ಹೆಚ್ಚಿದ ಊರ್ ಹಾಳು’ ಎಂಬ ಗಾದೆಯಂತೆ ಈಗ ಬ್ರಾಹ್ಮಣ ವಠಾರದಲ್ಲಿದ್ದ ಆರೆಸ್ಸೆಸ್ ಕವಾಯತು ಊರನ್ನೆಲ್ಲಾ ವ್ಯಾಪಿಸುತ್ತಿದೆ. ಅವುಗಳ ದೀರ್ಘಕಾಲದ ಅಜೆಂಡಾ ಪ್ರಕಾರ ಮುಸ್ಲಿಮರನ್ನ ಬಗ್ಗು ಬಡಿಯುವುದು, ನಂತರ ದಲಿತರ ಮೇಲೆ ಶೂದ್ರರ ಕೈಲಿ ದಾಳಿ ಮಾಡಿಸುವುದು, ಆ ನಂತರ ಸಿಖ್ಖರು, ಯಾದವರು ಹೀಗೆ ನಡೆಯಲಿಚ್ಛಿಸಿರುವ ದೊಡ್ಡ ದೊಂಬಿಯನ್ನೇ ಊಹಿಸಬಹುದು. ತಲೆಕೆಟ್ಟವರಿಗೆ ಮತ್ತು ಬರುವ ಔಷಧಿ ಕೊಡಿಸಿ ಜಗಲಿಯ ಮೇಲೆ ಕೂರಿಸುವ ತನಕ ಇವೆಲ್ಲಾ ನಿರಂತರವಾಗಿ ನಡೆಯುವ ಚೇಷ್ಟೆಗಳೆಂದು ಉಗ್ರ ಗಾಂಧಿವಾದಿಗಳು ಗೊಣಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಭಾರತ್ ಜೋಡೋ ಯಾತ್ರೆ ಕೇರಳದಿಂದ ಕರ್ನಾಟಕ ತಲುಪಾಯ್ತು. ಮಂಡ್ಯದ ಹತ್ತಿರ ಹೋಗುತ್ತಿದೆ. ಕಳೆದ ಎಂಟು ವರ್ಷಗಳಿಂದ ಬಾಲಿಶ ಹುಡುಗ, ಲಾಲಿಪಾಪು ಮತ್ತು ಅಪ್ರಬುದ್ಧ ಬಾಲ ಭಾಷೆಯ ಹುಡುಗ ಎಂದೆಲ್ಲಾ ಚೆಡ್ಡಿಗಳು ತಮ್ಮ ಜಾಲತಾಣದಲ್ಲಿ ಯಾರ ವಿರುದ್ಧ ಅಪಪ್ರಚಾರ ಮಾಡಿದ್ದವೊ ಅಂತಹ ರಾಹುಲಗಾಂಧಿ, ತಂದೆ ತಾಯಿ ಅಜ್ಜಿ ಮುತ್ತಾತರ ಮಾರ್ಗ ಹುಡುಕುತ್ತ ಹೊರಟವನಂತೆ ಬರುತ್ತಿದ್ದಾನಂತಲ್ಲಾ. ಅವನನ್ನು ನೋಡಲು ರಸ್ತೆ ಬದಿಯಲ್ಲಿ ನಿಂತ ಜನ ಮತ್ತು ಆತನ ಹಿಂದೆ ಕಿಲೋಮಿಟರುಗಟ್ಟಲೆ ಹರಿದು ಬರುತ್ತಿರುವ ಜನಸಾಗರ ನೋಡಿದ ಬಿಜೆಪಿಗಳು ಬೆಚ್ಚಿ ಏನು ಮಾಡಲೂ ತೋಚದೆ ಜಾಥಾದಲ್ಲಿ ಪೇಸಿಎಂ ಟಿಶರ್ಟ್ ಧರಿಸಿದ್ದ ಹುಡುಗರನ್ನ ಹಿಡಿದು ಶರ್ಟ್ ಬಿಚ್ಚಿಕೊಂಡು ಬರಲು ಹೇಳಿವೆಯಂತಲ್ಲಾ. ಒಂದು ಟೀಶರ್ಟ್ ಬಿಚ್ಚಿದರೇನು ಹತ್ತು ಟೀಶರ್ಟ್ ಕೊಡಿಸುತ್ತೇನೆ ಎಂದು ಡಿಕೆಶಿ ಹೇಳಿದ ಕೂಡಲೇ ಮಾಧ್ಯಮದೊಳಗಿರುವ ಶಾನುಭೋಗರ ಹುಡುಗರು ತಮ್ಮ ಕ್ಯಾಮರಾ ಚುರುಕುಗೊಳಿಸಿ ಹೆಜ್ಜೆ ಹಾಕುವಲ್ಲಿ ಹಿಂದೆ ಬಿದ್ದ ಡಿಕೆಶಿ, ಸಿದ್ದರಾಮಯ್ಯನಿಗೆ ಎಡಗೈ ತಾಕಿಸಿದ ಡಿಕೆಶಿ, ರಾಹುಲ್ ಕಾರಿನಲ್ಲಿ ಜಾಗವಿಲ್ಲದೆ ಹಿಂದಿನ ಕಾರಿನಲ್ಲಿ ಹೊರಟ ಡಿಕೆಶಿ ಎಂದು ಅರಚುತ್ತಲೇ ತಮ್ಮ ಚೇಷ್ಟೆಗಳನ್ನು ಮೆರೆಯುತ್ತಿವೆಯಂತಲ್ಲಾ. ನಗು ಕಳೆದುಕೊಂಡ ಜನಕ್ಕೆ ಇನ್ನು ಏನೇನು ಹಾಸ್ಯ ಪ್ರಸಂಗವನ್ನು ಈ ದಸರಾ ಸಮಯದಲ್ಲಿ ಮಾಧ್ಯಮಗಳು ತೋರುತ್ತವೊ ಎಂಬುದು ಮನರಂಜನೆಗೆ ಹಾತೊರೆಯುವ ಜನರ ಮನದಾಳದ ಮಾತಾಗಿದೆಯಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯ ಮತ್ತು ಸತ್ವದ ಹುಡುಕಾಟ ಗೌರಿ. ಕಾಂ ಧ್ಯೇಯೋದ್ದೇಶ.ಹೆಮ್ಮೆಯಾಗುತ್ತದೆ…ಪತ್ರಿಕಾ ಧರ್ಮವನ್ನೇ ಮರೆತ ಮೈಮನ ಮಾರಿಕೊಂಡ ಅದೆಷ್ಟೋ ಮಾಧ್ಯಮಗಳ ನಡುವೆ ಕೆಸರಲ್ಲಿ ಕಮಲ ಅರಳಿದಂತೆ ಅರಳಿ ಮಾಧ್ಯಮ ಅಂದರೆ ಇದಲ್ಲಾ ಇದು ಎಂದು ಅರಹುತ್ತಿರುವ ನಿಷ್ಕಲ್ಮಷ ನಿಷ್ಕಪಟ ಈ ಮಾಧ್ಯಮ ಕಂಡು.ಹೃದಯಾಂತರಾಳದ ಸಲಾಂ ಬಸವ ಶರಣು.
    ಗುಡಿಬಂಡೆ ಫಯಾಜ್ ಅಹಮದ್ ಖಾನ್
    ರಾಜ್ಯಾಧ್ಯಕ್ಷರು. ಕಸಾಪ
    ಕರುನಾಡು ಸಾಹಿತ್ಯ ಪರಿಷತ್ತು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....