Homeಅಂಕಣಗಳುದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

ದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

- Advertisement -
- Advertisement -

ಜೆಡಿಎಸ್ ಎಂಬ ಪಿತೃ ಪಕ್ಷ ಮುಂದೆ ಏಕಾಂಗಿಯಾಗಿಯೇ ಹೋರಾಡಿ ಮಡಿಯಲಿದೆ ಎಂದು ದೇವೇಗೌಡರು ಖಚಿತವಾಗಿ ಹೇಳಿದ್ದಾರಲ್ಲಾ. ಆದರೂ ಜನಕ್ಕೆ ಡವುಟು ಬಂದಿರುವುದು ಇಲ್ಲೆ; ಏಕೆಂದರೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಈತರದ ಮನೋಲ್ಲಾಸದ ಕಡೆ ಮನಸ್ಸನ್ನು ಕಿಂಚಿತ್ತೂ ಹರಿಯಬಿಡದೆ ರಾಜಕಾರಣಕ್ಕೆ ಕೇಂದ್ರೀಕರಿಸಿರುವ ದೇವೇಗೌಡರು ದೇಶಕಂಡ ಅಪರೂಪದ ರಾಜಕಾರಣಿ. ಇದನ್ನಾಗಲೇ ಜೀವನ ಚರಿತ್ರೆಕಾರರು ದಾಖಲಿಸಿ ಪ್ರತಿಷ್ಠಿತ ಪ್ರಕಾಶಕರು ಪ್ರಕಟಿಸಿದ್ದಾರಂತಲ್ಲಾ. ತಮ್ಮ ಅಂಗೈನಲ್ಲಿಯೇ ಇನ್ನೂರ ಇಪ್ಪತ್ತ ನಾಲ್ಕು ಕ್ಷೇತ್ರಗಳ ಗೆರೆಗಳನ್ನ ನೋಡುವ ಗೌಡರು, ಹಿಂದೊಮ್ಮೆ ಮುಖ್ಯಮಂತ್ರಿ ಆಸೆ ತೋರಿಸಿ ಮಗನನ್ನು ಕಮಲದವರು ಅಪಹರಿಸಿದರೆಂದೂ, ಅದರಲ್ಲಿ ನನ್ನ ಪಾತ್ರವಿಲ್ಲ ಅದಕ್ಕೆ ನಾನು ಮುಂದಿನ ಇಪ್ಪತ್ತು ತಿಂಗಳನ್ನ ಎಡೂರಪ್ಪನಿಗೆ ಬಿಡದೆ ನನ್ನ ಜಾತ್ಯತೀತ ಕಾಯ್ದುಕೊಂಡೆ ಎಂದೂ ಲೋಕಸಭೆಯಲ್ಲಿ ನಂಬಿಸುವ ದನಿಯಲ್ಲಿ ಹೇಳಿದ್ದರು. ಲೋಕ ನಂಬಿತು, ಆದರೆ ಈಗ ಜನಕ್ಕೆ ಡವುಟಾಗುತ್ತಿರುವುದು ಏಕೆಂದರೆ 1983ರಲ್ಲಿ ಇದೇ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಜನತಾ ಸರಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿರಲಿಲ್ಲವೆ ಎಂದು ಗೌಡರು ನೆನಪಿಸಿದ್ದಾರಲ್ಲಾ, ಥೂತ್ತೇರಿ.

*****

1983ರಲ್ಲಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದುದು ನಿಜ. ಏಕೆಂದರೆ ಪ್ರತಿಭಾವಂತನಂತೆ ಕಾಣುತ್ತಿದ್ದ ಅವರನ್ನು ಖಾಲಿ ಬಿಡಬಾರದೆಂದು ನಜೀರ್ ಸಾಬ್ ಮತ್ತು ರಾಚಯ್ಯ, ರಾಮಕೃಷ್ಣ ಹೆಗಡೆಯವರಿಗೆ ಶಿಫಾರಸ್ಸು ಮಾಡಿದ್ದರು. ಆ ಕಾರಣವಾಗಿ ಸಿದ್ದು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾದರು. ಹೆಗಡೆ ಸರಕಾರಕ್ಕೆ ಬೆಂಬಲಕೊಟ್ಟಿದ್ದ ಬಿಜೆಪಿ ಇಂದಿನ ಬಿಜೆಪಿಯಾಗಿರಲಿಲ್ಲ. ಇವತ್ತಿನ ಬಿಜೆಪಿಗಳ ತರಹ ಅಂದಿನ ಕಾಂಗ್ರೆಸ್ಸಿಗರಿದ್ದರು. ಎ.ಕೆ ಸುಬ್ಬಯ್ಯನವರ ನೇತೃತ್ವದ ಬಿಜೆಪಿ ದೇವೇಗೌಡರ ವಿಶ್ವಾಸದಲ್ಲಿತ್ತು. ಅಂದಿನ ಬಿಜೆಪಿ ಬ್ರಾಹ್ಮಣರು ಹೆಗಡೆ ನೇತೃತ್ವಕ್ಕೆ ತಮ್ಮನ್ನ ಅರ್ಪಿಸಿಕೊಂಡಿದ್ದರಿಂದ ಮುಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಕ್ಕೆ ಇಳಿಯಿತು. ಹೆಗಡೆಯವರು ಸುಬ್ಬಯ್ಯರನ್ನು ಹತ್ತಿಕ್ಕುವ ಕೆಲಸದಲ್ಲಿ ನಿರತರಾದಾಗ ದೇವೇಗೌಡರು ಸುಬ್ಬಯ್ಯನವರ ಪರವಿದ್ದರು. ತಮ್ಮ ಸರಳ ಸಜ್ಜನಿಕೆ ಸಿದ್ಧಾಂತದಿಂದ ದೇವೇಗೌಡರು ಅಂದು ಅವರ ಪಕ್ಷದಲ್ಲಿದ್ದ ಪಟೇಲ್, ಬೊಮ್ಮಾಯಿ, ಸಿಂಧ್ಯಾ, ಸಿದ್ದು, ಪ್ರಕಾಶ್ ಮತ್ತು ಆಳ್ವ ರಘುಪತಿ, ರಾಮಯ್ಯ ಇಂತಹ ಘಟಾನುಘಟಿ ರಾಜಕಾರಣಿಗಳ ಲೀಡರಾಗಿದ್ದರು. ಈಗ ಅವರಲ್ಲಿ ಕೆಲವರು ಭೌತಿಕವಾಗಿ ಇಲ್ಲ. ಮತ್ತೆ ಉಳಿದವರು ದೇವೇಗೌಡರ ಪಾರ್ಟಿಯಲ್ಲಿ ಇಲ್ಲ. ’ಹಾಳೂರಿಗೆ ಉಳಿದವನೇ ಗೌಡ’ ಎಂಬ ಗಾದೆಯಂತೆ ನಾನಿನ್ನೂ ಸೆಕ್ಯುಲರ್ ಮ್ಯಾನ್ ಎಂಬುವುದನ್ನ ತೋರಿಸಿಕೊಳ್ಳಲು ಇಬ್ರಾಹಿಂ ಎಂಬ ಮಾತಿನ ಮಲ್ಲರನ್ನ ಜೊತೆಗಿಟ್ಟುಕೊಂಡು ಮಗನನ್ನು ಆಟ ಆಡಲು ಬಿಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

 

ಮಗನನ್ನು ಆಟ ಆಡಲು ಬಿಟ್ಟಿದ್ದಾರೆ ಎಂಬ ನಮ್ಮ ಆಪಾದನೆಗೆ ಸಾಕ್ಷಿಯೊದಗಿಸಬೇಕಲ್ಲವೇ! ಕುಮಾರಣ್ಣ ಬಿಜೆಪಿ ಸಖ್ಯ ಬೆಳೆಸಿಕೊಂಡು ಮುಖ್ಯಮಂತ್ರಿಯಾದದ್ದು ದಿಢೀರ್ ಬೆಳವಣಿಗೆಯೇನಲ್ಲ; ದಿನ ಬೆಳಗಾಯ್ತೆಂದರೆ ಮಗನನ್ನ ಮನೆಗೆ ಕರೆಸಿಕೊಂಡು ಮುಂದೆ ನಡೆಯುವ ಮಹಾ ನಾಟಕಕ್ಕೆ ತಾಲೀಮು ಕೊಡುತ್ತಿದ್ದರು ದೇವೇಗೌಡರು. ಹೇಳಿದಂತೆ ಕೇಳುವ ಜೆಡಿಎಸ್ ಅಧ್ಯಕ್ಷನಿದ್ದ ಆ ಕಾಲದಲ್ಲಿ ತೋರಿದ್ದನ್ನು ತಲೆಯ ಮೇಲೆ ಹೊತ್ತು ಮಾಡುವ ಸ್ಪೀಕರ್ ಇದ್ದರು; ಹಾಗಾಗಿ ಗೌಡರು ಮನೆಯಲ್ಲೇ ಕುಳಿತು ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರಕಾರ ರಚನೆ ಮಾಡುವುದಾದರೆ ನನ್ನ ಹೆಣದ ಮೇಲಾಗಲಿ ಎಂದರು. ದಳದವರೆಲ್ಲಾ ಹೆದರಿ ಗೌಡರನ್ನ ಉಳಿಸಿಕೊಂಡರು. ಮುಂದೆ ಕೆಲವೇ ತಿಂಗಳಲ್ಲಿ ಗೌಡರು ಮಗನೊಂದಿಗೆ ಸೇರಿ, ಯಯಾತಿಯಂತಾಗಿ ಈ ನಾಡನ್ನ ಸುತ್ತತೊಡಗಿದರು; ಮಗನ ಸುತ್ತಲೂ ಇದ್ದ ಮಂತ್ರಿಗಳ ಖಾತೆಗಳ ಮೇಲೆ ಹಿಡಿತ ಸಾಧಿಸಿದರು. ಮುಂದೆ ಜೆಡಿಎಸ್‌ನ ಪ್ರಶ್ನಾತೀತ ನಾಯಕನಾಗಿ ಮಗನನ್ನು ಪ್ರತಿಷ್ಠಾಪಿಸಿದರು. ಆಗ ದಳದ ಪತನ ಆರಂಭವಾಗಿ ಸಿಂಧ್ಯಾ, ಪ್ರಕಾಶ್ ಇಂತವರೆಲ್ಲಾ ವಲಸಿಗರಾಗಿ ಕಾಂಗ್ರೆಸ್ ಸೇರಿಕೊಂಡರು. ಆದರೇನು ಗೌಡರು ಬಿಜೆಪಿ ಜನತೆಗಿನ ಸರಸವನ್ನ ಇನ್ನೂ ಬಿಟ್ಟಿಲ್ಲ. ಈಗ ಗೌಡರ ಪಾರ್ಟಿ ಕಚೆರಿಗೆ ಎರಡು ಬಾಗಿಲಂತಲ್ಲಾ. ಒಂದರ ಮುಖಾಂತರ ಬಿಜೆಪಿಗೆ ಹೋಗುವವರು ಹೋಗಬಹುದು, ಮತ್ತೊಂದರ ಮುಖಾಂತರ ಕಾಂಗ್ರೆಸ್ಸಿಗೆ ಹೋಗುವವರು ಹೋಗಬಹುದು; ಕುಮಾರಣ್ಣ ಸಿಂಗಪುರಕ್ಕೆ ಹೋಗಿರುವುದರಲ್ಲಿ ಈ ಸಂದೇಶವೂ ಅಡಗಿದೆಯಂತಲ್ಲಾ, ಥೂತ್ತೇರಿ.

*****

ಕುಮಾರಣ್ಣ ಸಿಂಗಪುರದಲ್ಲಿದ್ದರೂ ಅವರು ಬಿಜೆಪಿಗಳನ್ನೇ ಮೀರಿಸಿ ಬಿಜೆಪಿಯಾಗಿರುವುದು ಹಳೆ ಸುದ್ದಿಯಂತಲ್ಲಾ. ಬಿಜೆಪಿಯ ಬೃಹಸ್ಪತಿಗಳು ರೈತವಿರೋಧಿ ಕಾನೂನು ತಂದಾಗ ಗೌಡರು ಮತ್ತು ಕುಮಾರಣ್ಣ ಮೋದಿಗೆ ನೋವಾಗದಂತೆ ನಡೆದುಕೊಂಡಿದ್ದರು. ಮತಾಂತರ ನಿಷೇದಧ ಕಾಯ್ದೆ ಜಾರಿಯಾಗುವಾಗ ಉಸಿರೆತ್ತದೆ ಬೆಂಬಲಿಸಿದರು. ಹೆಚ್ಚು ಗೋಮಾಂಸ ರಫ್ತು ಮಾಡುವ ಬಿಜೆಪಿಗರ ವಿರುದ್ಧ ದನಿ ಎತ್ತಲಿಲ್ಲ. ಕಾರಿನವರೆಗೂ ಬಂದು ನನ್ನನ್ನ ಮೋದಿ ಬೀಳ್ಕೊಟ್ಟರು ಎಂದು ಗೌಡರು ಮೋದಿಯ ದೊಡ್ಡತನವನ್ನ ಕೊಂಡಾಡಿದರೆ, ಮೋದಿ ಮಾತನ್ನು ನಾನು ಕೇಳಿದ್ದರೆ ಮುಖ್ಯಮಂತ್ರಿಯಾಗಿ ತಾಜ್‌ವೆಸ್ಟ್‌ಎಂಡ್ ಹೋಟೆಲಿನಲ್ಲೇ ಅಧಿಕಾರ ಅನುಭವಿಸಿ ಅವಧಿ ಮುಗಿಸುತ್ತಿದ್ದೆ ಎನ್ನುವ ಕುಮಾರಣ್ಣ ಈಗ ಅಧಿಕೃತ ಬಿಜೆಪಿಯ ವಕ್ತಾರನಾಗಿರುವುದಲ್ಲದೆ, ವಿರೋಧ ಪಕ್ಷದ ಅನಧಿಕೃತ ನಾಯಕನೂ ಆಗಿದ್ದಾರಲ್ಲಾ. ಇದಕ್ಕೆ ಸಿಕ್ಕ ತಾಜಾ ಉದಾಹರಣೆಯೆಂದರೆ ಸಿದ್ದರಾಮಯ್ಯ ಸರಕಾರದ ವಿರುದ್ಧ ಪ್ರತಿಭಟಿಸುವ ಬಿಜೆಪಿ ಲೆಟರ್‌ಗೆ ಆ ಪಾರ್ಟಿಯ ಆಫೀಸಿಗೆ ಹೋಗಿ ಸಹಿಮಾಡಿದ್ದು ಮತ್ತು ಬೊಮ್ಮಾಯಿ ಆಡಬೇಕಾದ ಮಾತನ್ನ ತಾವೇ ಆಡುತ್ತಿರುವುದು. ಉದಾಹರಣೆಗೆ ಹಿಂದಿನ ಸರಕಾರ ಆರ್ಥಿಕ ಅಶಿಸ್ತಿನಿಂದ ನಡೆದುಕೊಂಡಿದೆ ಎಂದು ಸದರಿ ಸರ್ಕಾರ ಟೀಕಿಸಿದರೆ, ಕುಮಾರಸ್ವಾಮಿಯವರು ಶಿಸ್ತಿನಿಂದಲೇ ಆಡಳಿತ ನಡೆಸಿದ್ದಾರೆ ಎನ್ನುತ್ತಿದ್ದಾರಲ್ಲಾ. ಇದಲ್ಲವೆ ಬಿಜೆಪಿಯ ಕಾರ್ಯಕರ್ತನ ಮಾತು ಎಂದು ಬಿಜೆಪಿಗಳೇ ಹೇಳುತ್ತಿದ್ದಾರಲ್ಲಾ, ಥೂತ್ತೇರಿ.

*****

ಕುಮಾರಣ್ಣ ಬಿಜೆಪಿ ಬಾಗಿಲಲ್ಲಿ ನಿಂತು ಹೋಗಿ ಬರುವವರನ್ನ ನೋಡಿ “ಹಲೋ ಬ್ರದರ್” ಎಂಬುದನ್ನ ಕೇಳಿ ಶಿವಮೊಗ್ಗದ ಆಯನೂರ್ ಮಂಜುನಾಥ್ ಕಂಗಾಲಾಗಿದ್ದಾರಂತಲ್ಲಾ. ಏಕೆಂದರೆ ಶಿವಮೊಗ್ಗದ ಹರಕುಬಾಯಿ ಈಶ್ವರಪ್ಪನ ವಿರುದ್ದ ಸೆಡ್ಡು ಹೊಡೆದು ಫ್ಲೆಕ್ಸ್ ಹಾಕಿದ್ದರು. ಕಾಂಗ್ರೆಸ್ ಕಡೆ ಹೊರಟಾಗ ಕಾಂಗೈನ ಕೆಲವರು ತಡೆಯೊಡ್ಡಿದರು. ಆಗ ಆಯನೂರ್ ಅನಿವಾರ್ಯವಾಗಿ ದಳ ಸೇರಿ ಕ್ಯಾಂಡಿಡೇಟ್ ಆದರು. ಈಗತಾನೆ ಅವರ ಪಾರ್ಟಿಗೆ ಹೋಗಿ ಸೋತು ಸುಧಾರಿಸಿಕೊಳ್ಳುತ್ತಿರುವಾಗಲೇ ಕುಮಾರಣ್ಣ ಬಿಜೆಪಿಗೆ ಹೊರಟದ್ದು ನೋಡಿ ದಿಕ್ಕುತೋಚದಂತಾಗಿದ್ದಾರಂತಲ್ಲಾ. ಏಕೆಂದರೆ ಪುನಃ ಬಂದರೆ ಆಯನೂರರನ್ನು ಹಲ್ಲುಗಿಂಜಿ ಅಣುಕಿಸಲು ಈಶ್ವರಪ್ಪನ ಕಡೆಯವರು ಕಾಯುತ್ತಿದ್ದಾರಂತೆ. ಆಯನೂರ್ ಕತೆ ಹಿಂಗಾದರೆ ಇನ್ನ ನಾಡಿನ ತುಂಬ ಆಯನೂರ್‌ನಂತ ಆಸಾಮಿಗಳು ಎಷ್ಟಿದ್ದಾರೆಯೋ ಏನೋ, ಥೂತ್ತೇರಿ.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕೂಡಿಕೆ: ರಾಜಕೀಯ ಪಕ್ಷವಾಗಿ ಸತ್ತು ಅಸ್ತಿತ್ವ ಉಳಿಸಿಕೊಳ್ಳುವ ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...