Homeಅಂಕಣಗಳುದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

ದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

- Advertisement -
- Advertisement -

ಜೆಡಿಎಸ್ ಎಂಬ ಪಿತೃ ಪಕ್ಷ ಮುಂದೆ ಏಕಾಂಗಿಯಾಗಿಯೇ ಹೋರಾಡಿ ಮಡಿಯಲಿದೆ ಎಂದು ದೇವೇಗೌಡರು ಖಚಿತವಾಗಿ ಹೇಳಿದ್ದಾರಲ್ಲಾ. ಆದರೂ ಜನಕ್ಕೆ ಡವುಟು ಬಂದಿರುವುದು ಇಲ್ಲೆ; ಏಕೆಂದರೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಈತರದ ಮನೋಲ್ಲಾಸದ ಕಡೆ ಮನಸ್ಸನ್ನು ಕಿಂಚಿತ್ತೂ ಹರಿಯಬಿಡದೆ ರಾಜಕಾರಣಕ್ಕೆ ಕೇಂದ್ರೀಕರಿಸಿರುವ ದೇವೇಗೌಡರು ದೇಶಕಂಡ ಅಪರೂಪದ ರಾಜಕಾರಣಿ. ಇದನ್ನಾಗಲೇ ಜೀವನ ಚರಿತ್ರೆಕಾರರು ದಾಖಲಿಸಿ ಪ್ರತಿಷ್ಠಿತ ಪ್ರಕಾಶಕರು ಪ್ರಕಟಿಸಿದ್ದಾರಂತಲ್ಲಾ. ತಮ್ಮ ಅಂಗೈನಲ್ಲಿಯೇ ಇನ್ನೂರ ಇಪ್ಪತ್ತ ನಾಲ್ಕು ಕ್ಷೇತ್ರಗಳ ಗೆರೆಗಳನ್ನ ನೋಡುವ ಗೌಡರು, ಹಿಂದೊಮ್ಮೆ ಮುಖ್ಯಮಂತ್ರಿ ಆಸೆ ತೋರಿಸಿ ಮಗನನ್ನು ಕಮಲದವರು ಅಪಹರಿಸಿದರೆಂದೂ, ಅದರಲ್ಲಿ ನನ್ನ ಪಾತ್ರವಿಲ್ಲ ಅದಕ್ಕೆ ನಾನು ಮುಂದಿನ ಇಪ್ಪತ್ತು ತಿಂಗಳನ್ನ ಎಡೂರಪ್ಪನಿಗೆ ಬಿಡದೆ ನನ್ನ ಜಾತ್ಯತೀತ ಕಾಯ್ದುಕೊಂಡೆ ಎಂದೂ ಲೋಕಸಭೆಯಲ್ಲಿ ನಂಬಿಸುವ ದನಿಯಲ್ಲಿ ಹೇಳಿದ್ದರು. ಲೋಕ ನಂಬಿತು, ಆದರೆ ಈಗ ಜನಕ್ಕೆ ಡವುಟಾಗುತ್ತಿರುವುದು ಏಕೆಂದರೆ 1983ರಲ್ಲಿ ಇದೇ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಜನತಾ ಸರಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿರಲಿಲ್ಲವೆ ಎಂದು ಗೌಡರು ನೆನಪಿಸಿದ್ದಾರಲ್ಲಾ, ಥೂತ್ತೇರಿ.

*****

1983ರಲ್ಲಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದುದು ನಿಜ. ಏಕೆಂದರೆ ಪ್ರತಿಭಾವಂತನಂತೆ ಕಾಣುತ್ತಿದ್ದ ಅವರನ್ನು ಖಾಲಿ ಬಿಡಬಾರದೆಂದು ನಜೀರ್ ಸಾಬ್ ಮತ್ತು ರಾಚಯ್ಯ, ರಾಮಕೃಷ್ಣ ಹೆಗಡೆಯವರಿಗೆ ಶಿಫಾರಸ್ಸು ಮಾಡಿದ್ದರು. ಆ ಕಾರಣವಾಗಿ ಸಿದ್ದು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾದರು. ಹೆಗಡೆ ಸರಕಾರಕ್ಕೆ ಬೆಂಬಲಕೊಟ್ಟಿದ್ದ ಬಿಜೆಪಿ ಇಂದಿನ ಬಿಜೆಪಿಯಾಗಿರಲಿಲ್ಲ. ಇವತ್ತಿನ ಬಿಜೆಪಿಗಳ ತರಹ ಅಂದಿನ ಕಾಂಗ್ರೆಸ್ಸಿಗರಿದ್ದರು. ಎ.ಕೆ ಸುಬ್ಬಯ್ಯನವರ ನೇತೃತ್ವದ ಬಿಜೆಪಿ ದೇವೇಗೌಡರ ವಿಶ್ವಾಸದಲ್ಲಿತ್ತು. ಅಂದಿನ ಬಿಜೆಪಿ ಬ್ರಾಹ್ಮಣರು ಹೆಗಡೆ ನೇತೃತ್ವಕ್ಕೆ ತಮ್ಮನ್ನ ಅರ್ಪಿಸಿಕೊಂಡಿದ್ದರಿಂದ ಮುಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಕ್ಕೆ ಇಳಿಯಿತು. ಹೆಗಡೆಯವರು ಸುಬ್ಬಯ್ಯರನ್ನು ಹತ್ತಿಕ್ಕುವ ಕೆಲಸದಲ್ಲಿ ನಿರತರಾದಾಗ ದೇವೇಗೌಡರು ಸುಬ್ಬಯ್ಯನವರ ಪರವಿದ್ದರು. ತಮ್ಮ ಸರಳ ಸಜ್ಜನಿಕೆ ಸಿದ್ಧಾಂತದಿಂದ ದೇವೇಗೌಡರು ಅಂದು ಅವರ ಪಕ್ಷದಲ್ಲಿದ್ದ ಪಟೇಲ್, ಬೊಮ್ಮಾಯಿ, ಸಿಂಧ್ಯಾ, ಸಿದ್ದು, ಪ್ರಕಾಶ್ ಮತ್ತು ಆಳ್ವ ರಘುಪತಿ, ರಾಮಯ್ಯ ಇಂತಹ ಘಟಾನುಘಟಿ ರಾಜಕಾರಣಿಗಳ ಲೀಡರಾಗಿದ್ದರು. ಈಗ ಅವರಲ್ಲಿ ಕೆಲವರು ಭೌತಿಕವಾಗಿ ಇಲ್ಲ. ಮತ್ತೆ ಉಳಿದವರು ದೇವೇಗೌಡರ ಪಾರ್ಟಿಯಲ್ಲಿ ಇಲ್ಲ. ’ಹಾಳೂರಿಗೆ ಉಳಿದವನೇ ಗೌಡ’ ಎಂಬ ಗಾದೆಯಂತೆ ನಾನಿನ್ನೂ ಸೆಕ್ಯುಲರ್ ಮ್ಯಾನ್ ಎಂಬುವುದನ್ನ ತೋರಿಸಿಕೊಳ್ಳಲು ಇಬ್ರಾಹಿಂ ಎಂಬ ಮಾತಿನ ಮಲ್ಲರನ್ನ ಜೊತೆಗಿಟ್ಟುಕೊಂಡು ಮಗನನ್ನು ಆಟ ಆಡಲು ಬಿಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

 

ಮಗನನ್ನು ಆಟ ಆಡಲು ಬಿಟ್ಟಿದ್ದಾರೆ ಎಂಬ ನಮ್ಮ ಆಪಾದನೆಗೆ ಸಾಕ್ಷಿಯೊದಗಿಸಬೇಕಲ್ಲವೇ! ಕುಮಾರಣ್ಣ ಬಿಜೆಪಿ ಸಖ್ಯ ಬೆಳೆಸಿಕೊಂಡು ಮುಖ್ಯಮಂತ್ರಿಯಾದದ್ದು ದಿಢೀರ್ ಬೆಳವಣಿಗೆಯೇನಲ್ಲ; ದಿನ ಬೆಳಗಾಯ್ತೆಂದರೆ ಮಗನನ್ನ ಮನೆಗೆ ಕರೆಸಿಕೊಂಡು ಮುಂದೆ ನಡೆಯುವ ಮಹಾ ನಾಟಕಕ್ಕೆ ತಾಲೀಮು ಕೊಡುತ್ತಿದ್ದರು ದೇವೇಗೌಡರು. ಹೇಳಿದಂತೆ ಕೇಳುವ ಜೆಡಿಎಸ್ ಅಧ್ಯಕ್ಷನಿದ್ದ ಆ ಕಾಲದಲ್ಲಿ ತೋರಿದ್ದನ್ನು ತಲೆಯ ಮೇಲೆ ಹೊತ್ತು ಮಾಡುವ ಸ್ಪೀಕರ್ ಇದ್ದರು; ಹಾಗಾಗಿ ಗೌಡರು ಮನೆಯಲ್ಲೇ ಕುಳಿತು ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರಕಾರ ರಚನೆ ಮಾಡುವುದಾದರೆ ನನ್ನ ಹೆಣದ ಮೇಲಾಗಲಿ ಎಂದರು. ದಳದವರೆಲ್ಲಾ ಹೆದರಿ ಗೌಡರನ್ನ ಉಳಿಸಿಕೊಂಡರು. ಮುಂದೆ ಕೆಲವೇ ತಿಂಗಳಲ್ಲಿ ಗೌಡರು ಮಗನೊಂದಿಗೆ ಸೇರಿ, ಯಯಾತಿಯಂತಾಗಿ ಈ ನಾಡನ್ನ ಸುತ್ತತೊಡಗಿದರು; ಮಗನ ಸುತ್ತಲೂ ಇದ್ದ ಮಂತ್ರಿಗಳ ಖಾತೆಗಳ ಮೇಲೆ ಹಿಡಿತ ಸಾಧಿಸಿದರು. ಮುಂದೆ ಜೆಡಿಎಸ್‌ನ ಪ್ರಶ್ನಾತೀತ ನಾಯಕನಾಗಿ ಮಗನನ್ನು ಪ್ರತಿಷ್ಠಾಪಿಸಿದರು. ಆಗ ದಳದ ಪತನ ಆರಂಭವಾಗಿ ಸಿಂಧ್ಯಾ, ಪ್ರಕಾಶ್ ಇಂತವರೆಲ್ಲಾ ವಲಸಿಗರಾಗಿ ಕಾಂಗ್ರೆಸ್ ಸೇರಿಕೊಂಡರು. ಆದರೇನು ಗೌಡರು ಬಿಜೆಪಿ ಜನತೆಗಿನ ಸರಸವನ್ನ ಇನ್ನೂ ಬಿಟ್ಟಿಲ್ಲ. ಈಗ ಗೌಡರ ಪಾರ್ಟಿ ಕಚೆರಿಗೆ ಎರಡು ಬಾಗಿಲಂತಲ್ಲಾ. ಒಂದರ ಮುಖಾಂತರ ಬಿಜೆಪಿಗೆ ಹೋಗುವವರು ಹೋಗಬಹುದು, ಮತ್ತೊಂದರ ಮುಖಾಂತರ ಕಾಂಗ್ರೆಸ್ಸಿಗೆ ಹೋಗುವವರು ಹೋಗಬಹುದು; ಕುಮಾರಣ್ಣ ಸಿಂಗಪುರಕ್ಕೆ ಹೋಗಿರುವುದರಲ್ಲಿ ಈ ಸಂದೇಶವೂ ಅಡಗಿದೆಯಂತಲ್ಲಾ, ಥೂತ್ತೇರಿ.

*****

ಕುಮಾರಣ್ಣ ಸಿಂಗಪುರದಲ್ಲಿದ್ದರೂ ಅವರು ಬಿಜೆಪಿಗಳನ್ನೇ ಮೀರಿಸಿ ಬಿಜೆಪಿಯಾಗಿರುವುದು ಹಳೆ ಸುದ್ದಿಯಂತಲ್ಲಾ. ಬಿಜೆಪಿಯ ಬೃಹಸ್ಪತಿಗಳು ರೈತವಿರೋಧಿ ಕಾನೂನು ತಂದಾಗ ಗೌಡರು ಮತ್ತು ಕುಮಾರಣ್ಣ ಮೋದಿಗೆ ನೋವಾಗದಂತೆ ನಡೆದುಕೊಂಡಿದ್ದರು. ಮತಾಂತರ ನಿಷೇದಧ ಕಾಯ್ದೆ ಜಾರಿಯಾಗುವಾಗ ಉಸಿರೆತ್ತದೆ ಬೆಂಬಲಿಸಿದರು. ಹೆಚ್ಚು ಗೋಮಾಂಸ ರಫ್ತು ಮಾಡುವ ಬಿಜೆಪಿಗರ ವಿರುದ್ಧ ದನಿ ಎತ್ತಲಿಲ್ಲ. ಕಾರಿನವರೆಗೂ ಬಂದು ನನ್ನನ್ನ ಮೋದಿ ಬೀಳ್ಕೊಟ್ಟರು ಎಂದು ಗೌಡರು ಮೋದಿಯ ದೊಡ್ಡತನವನ್ನ ಕೊಂಡಾಡಿದರೆ, ಮೋದಿ ಮಾತನ್ನು ನಾನು ಕೇಳಿದ್ದರೆ ಮುಖ್ಯಮಂತ್ರಿಯಾಗಿ ತಾಜ್‌ವೆಸ್ಟ್‌ಎಂಡ್ ಹೋಟೆಲಿನಲ್ಲೇ ಅಧಿಕಾರ ಅನುಭವಿಸಿ ಅವಧಿ ಮುಗಿಸುತ್ತಿದ್ದೆ ಎನ್ನುವ ಕುಮಾರಣ್ಣ ಈಗ ಅಧಿಕೃತ ಬಿಜೆಪಿಯ ವಕ್ತಾರನಾಗಿರುವುದಲ್ಲದೆ, ವಿರೋಧ ಪಕ್ಷದ ಅನಧಿಕೃತ ನಾಯಕನೂ ಆಗಿದ್ದಾರಲ್ಲಾ. ಇದಕ್ಕೆ ಸಿಕ್ಕ ತಾಜಾ ಉದಾಹರಣೆಯೆಂದರೆ ಸಿದ್ದರಾಮಯ್ಯ ಸರಕಾರದ ವಿರುದ್ಧ ಪ್ರತಿಭಟಿಸುವ ಬಿಜೆಪಿ ಲೆಟರ್‌ಗೆ ಆ ಪಾರ್ಟಿಯ ಆಫೀಸಿಗೆ ಹೋಗಿ ಸಹಿಮಾಡಿದ್ದು ಮತ್ತು ಬೊಮ್ಮಾಯಿ ಆಡಬೇಕಾದ ಮಾತನ್ನ ತಾವೇ ಆಡುತ್ತಿರುವುದು. ಉದಾಹರಣೆಗೆ ಹಿಂದಿನ ಸರಕಾರ ಆರ್ಥಿಕ ಅಶಿಸ್ತಿನಿಂದ ನಡೆದುಕೊಂಡಿದೆ ಎಂದು ಸದರಿ ಸರ್ಕಾರ ಟೀಕಿಸಿದರೆ, ಕುಮಾರಸ್ವಾಮಿಯವರು ಶಿಸ್ತಿನಿಂದಲೇ ಆಡಳಿತ ನಡೆಸಿದ್ದಾರೆ ಎನ್ನುತ್ತಿದ್ದಾರಲ್ಲಾ. ಇದಲ್ಲವೆ ಬಿಜೆಪಿಯ ಕಾರ್ಯಕರ್ತನ ಮಾತು ಎಂದು ಬಿಜೆಪಿಗಳೇ ಹೇಳುತ್ತಿದ್ದಾರಲ್ಲಾ, ಥೂತ್ತೇರಿ.

*****

ಕುಮಾರಣ್ಣ ಬಿಜೆಪಿ ಬಾಗಿಲಲ್ಲಿ ನಿಂತು ಹೋಗಿ ಬರುವವರನ್ನ ನೋಡಿ “ಹಲೋ ಬ್ರದರ್” ಎಂಬುದನ್ನ ಕೇಳಿ ಶಿವಮೊಗ್ಗದ ಆಯನೂರ್ ಮಂಜುನಾಥ್ ಕಂಗಾಲಾಗಿದ್ದಾರಂತಲ್ಲಾ. ಏಕೆಂದರೆ ಶಿವಮೊಗ್ಗದ ಹರಕುಬಾಯಿ ಈಶ್ವರಪ್ಪನ ವಿರುದ್ದ ಸೆಡ್ಡು ಹೊಡೆದು ಫ್ಲೆಕ್ಸ್ ಹಾಕಿದ್ದರು. ಕಾಂಗ್ರೆಸ್ ಕಡೆ ಹೊರಟಾಗ ಕಾಂಗೈನ ಕೆಲವರು ತಡೆಯೊಡ್ಡಿದರು. ಆಗ ಆಯನೂರ್ ಅನಿವಾರ್ಯವಾಗಿ ದಳ ಸೇರಿ ಕ್ಯಾಂಡಿಡೇಟ್ ಆದರು. ಈಗತಾನೆ ಅವರ ಪಾರ್ಟಿಗೆ ಹೋಗಿ ಸೋತು ಸುಧಾರಿಸಿಕೊಳ್ಳುತ್ತಿರುವಾಗಲೇ ಕುಮಾರಣ್ಣ ಬಿಜೆಪಿಗೆ ಹೊರಟದ್ದು ನೋಡಿ ದಿಕ್ಕುತೋಚದಂತಾಗಿದ್ದಾರಂತಲ್ಲಾ. ಏಕೆಂದರೆ ಪುನಃ ಬಂದರೆ ಆಯನೂರರನ್ನು ಹಲ್ಲುಗಿಂಜಿ ಅಣುಕಿಸಲು ಈಶ್ವರಪ್ಪನ ಕಡೆಯವರು ಕಾಯುತ್ತಿದ್ದಾರಂತೆ. ಆಯನೂರ್ ಕತೆ ಹಿಂಗಾದರೆ ಇನ್ನ ನಾಡಿನ ತುಂಬ ಆಯನೂರ್‌ನಂತ ಆಸಾಮಿಗಳು ಎಷ್ಟಿದ್ದಾರೆಯೋ ಏನೋ, ಥೂತ್ತೇರಿ.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕೂಡಿಕೆ: ರಾಜಕೀಯ ಪಕ್ಷವಾಗಿ ಸತ್ತು ಅಸ್ತಿತ್ವ ಉಳಿಸಿಕೊಳ್ಳುವ ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...