Homeಅಂಕಣಗಳುದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

ದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

- Advertisement -
- Advertisement -

ಜೆಡಿಎಸ್ ಎಂಬ ಪಿತೃ ಪಕ್ಷ ಮುಂದೆ ಏಕಾಂಗಿಯಾಗಿಯೇ ಹೋರಾಡಿ ಮಡಿಯಲಿದೆ ಎಂದು ದೇವೇಗೌಡರು ಖಚಿತವಾಗಿ ಹೇಳಿದ್ದಾರಲ್ಲಾ. ಆದರೂ ಜನಕ್ಕೆ ಡವುಟು ಬಂದಿರುವುದು ಇಲ್ಲೆ; ಏಕೆಂದರೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಈತರದ ಮನೋಲ್ಲಾಸದ ಕಡೆ ಮನಸ್ಸನ್ನು ಕಿಂಚಿತ್ತೂ ಹರಿಯಬಿಡದೆ ರಾಜಕಾರಣಕ್ಕೆ ಕೇಂದ್ರೀಕರಿಸಿರುವ ದೇವೇಗೌಡರು ದೇಶಕಂಡ ಅಪರೂಪದ ರಾಜಕಾರಣಿ. ಇದನ್ನಾಗಲೇ ಜೀವನ ಚರಿತ್ರೆಕಾರರು ದಾಖಲಿಸಿ ಪ್ರತಿಷ್ಠಿತ ಪ್ರಕಾಶಕರು ಪ್ರಕಟಿಸಿದ್ದಾರಂತಲ್ಲಾ. ತಮ್ಮ ಅಂಗೈನಲ್ಲಿಯೇ ಇನ್ನೂರ ಇಪ್ಪತ್ತ ನಾಲ್ಕು ಕ್ಷೇತ್ರಗಳ ಗೆರೆಗಳನ್ನ ನೋಡುವ ಗೌಡರು, ಹಿಂದೊಮ್ಮೆ ಮುಖ್ಯಮಂತ್ರಿ ಆಸೆ ತೋರಿಸಿ ಮಗನನ್ನು ಕಮಲದವರು ಅಪಹರಿಸಿದರೆಂದೂ, ಅದರಲ್ಲಿ ನನ್ನ ಪಾತ್ರವಿಲ್ಲ ಅದಕ್ಕೆ ನಾನು ಮುಂದಿನ ಇಪ್ಪತ್ತು ತಿಂಗಳನ್ನ ಎಡೂರಪ್ಪನಿಗೆ ಬಿಡದೆ ನನ್ನ ಜಾತ್ಯತೀತ ಕಾಯ್ದುಕೊಂಡೆ ಎಂದೂ ಲೋಕಸಭೆಯಲ್ಲಿ ನಂಬಿಸುವ ದನಿಯಲ್ಲಿ ಹೇಳಿದ್ದರು. ಲೋಕ ನಂಬಿತು, ಆದರೆ ಈಗ ಜನಕ್ಕೆ ಡವುಟಾಗುತ್ತಿರುವುದು ಏಕೆಂದರೆ 1983ರಲ್ಲಿ ಇದೇ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಜನತಾ ಸರಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿರಲಿಲ್ಲವೆ ಎಂದು ಗೌಡರು ನೆನಪಿಸಿದ್ದಾರಲ್ಲಾ, ಥೂತ್ತೇರಿ.

*****

1983ರಲ್ಲಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದುದು ನಿಜ. ಏಕೆಂದರೆ ಪ್ರತಿಭಾವಂತನಂತೆ ಕಾಣುತ್ತಿದ್ದ ಅವರನ್ನು ಖಾಲಿ ಬಿಡಬಾರದೆಂದು ನಜೀರ್ ಸಾಬ್ ಮತ್ತು ರಾಚಯ್ಯ, ರಾಮಕೃಷ್ಣ ಹೆಗಡೆಯವರಿಗೆ ಶಿಫಾರಸ್ಸು ಮಾಡಿದ್ದರು. ಆ ಕಾರಣವಾಗಿ ಸಿದ್ದು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾದರು. ಹೆಗಡೆ ಸರಕಾರಕ್ಕೆ ಬೆಂಬಲಕೊಟ್ಟಿದ್ದ ಬಿಜೆಪಿ ಇಂದಿನ ಬಿಜೆಪಿಯಾಗಿರಲಿಲ್ಲ. ಇವತ್ತಿನ ಬಿಜೆಪಿಗಳ ತರಹ ಅಂದಿನ ಕಾಂಗ್ರೆಸ್ಸಿಗರಿದ್ದರು. ಎ.ಕೆ ಸುಬ್ಬಯ್ಯನವರ ನೇತೃತ್ವದ ಬಿಜೆಪಿ ದೇವೇಗೌಡರ ವಿಶ್ವಾಸದಲ್ಲಿತ್ತು. ಅಂದಿನ ಬಿಜೆಪಿ ಬ್ರಾಹ್ಮಣರು ಹೆಗಡೆ ನೇತೃತ್ವಕ್ಕೆ ತಮ್ಮನ್ನ ಅರ್ಪಿಸಿಕೊಂಡಿದ್ದರಿಂದ ಮುಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಕ್ಕೆ ಇಳಿಯಿತು. ಹೆಗಡೆಯವರು ಸುಬ್ಬಯ್ಯರನ್ನು ಹತ್ತಿಕ್ಕುವ ಕೆಲಸದಲ್ಲಿ ನಿರತರಾದಾಗ ದೇವೇಗೌಡರು ಸುಬ್ಬಯ್ಯನವರ ಪರವಿದ್ದರು. ತಮ್ಮ ಸರಳ ಸಜ್ಜನಿಕೆ ಸಿದ್ಧಾಂತದಿಂದ ದೇವೇಗೌಡರು ಅಂದು ಅವರ ಪಕ್ಷದಲ್ಲಿದ್ದ ಪಟೇಲ್, ಬೊಮ್ಮಾಯಿ, ಸಿಂಧ್ಯಾ, ಸಿದ್ದು, ಪ್ರಕಾಶ್ ಮತ್ತು ಆಳ್ವ ರಘುಪತಿ, ರಾಮಯ್ಯ ಇಂತಹ ಘಟಾನುಘಟಿ ರಾಜಕಾರಣಿಗಳ ಲೀಡರಾಗಿದ್ದರು. ಈಗ ಅವರಲ್ಲಿ ಕೆಲವರು ಭೌತಿಕವಾಗಿ ಇಲ್ಲ. ಮತ್ತೆ ಉಳಿದವರು ದೇವೇಗೌಡರ ಪಾರ್ಟಿಯಲ್ಲಿ ಇಲ್ಲ. ’ಹಾಳೂರಿಗೆ ಉಳಿದವನೇ ಗೌಡ’ ಎಂಬ ಗಾದೆಯಂತೆ ನಾನಿನ್ನೂ ಸೆಕ್ಯುಲರ್ ಮ್ಯಾನ್ ಎಂಬುವುದನ್ನ ತೋರಿಸಿಕೊಳ್ಳಲು ಇಬ್ರಾಹಿಂ ಎಂಬ ಮಾತಿನ ಮಲ್ಲರನ್ನ ಜೊತೆಗಿಟ್ಟುಕೊಂಡು ಮಗನನ್ನು ಆಟ ಆಡಲು ಬಿಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

 

ಮಗನನ್ನು ಆಟ ಆಡಲು ಬಿಟ್ಟಿದ್ದಾರೆ ಎಂಬ ನಮ್ಮ ಆಪಾದನೆಗೆ ಸಾಕ್ಷಿಯೊದಗಿಸಬೇಕಲ್ಲವೇ! ಕುಮಾರಣ್ಣ ಬಿಜೆಪಿ ಸಖ್ಯ ಬೆಳೆಸಿಕೊಂಡು ಮುಖ್ಯಮಂತ್ರಿಯಾದದ್ದು ದಿಢೀರ್ ಬೆಳವಣಿಗೆಯೇನಲ್ಲ; ದಿನ ಬೆಳಗಾಯ್ತೆಂದರೆ ಮಗನನ್ನ ಮನೆಗೆ ಕರೆಸಿಕೊಂಡು ಮುಂದೆ ನಡೆಯುವ ಮಹಾ ನಾಟಕಕ್ಕೆ ತಾಲೀಮು ಕೊಡುತ್ತಿದ್ದರು ದೇವೇಗೌಡರು. ಹೇಳಿದಂತೆ ಕೇಳುವ ಜೆಡಿಎಸ್ ಅಧ್ಯಕ್ಷನಿದ್ದ ಆ ಕಾಲದಲ್ಲಿ ತೋರಿದ್ದನ್ನು ತಲೆಯ ಮೇಲೆ ಹೊತ್ತು ಮಾಡುವ ಸ್ಪೀಕರ್ ಇದ್ದರು; ಹಾಗಾಗಿ ಗೌಡರು ಮನೆಯಲ್ಲೇ ಕುಳಿತು ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರಕಾರ ರಚನೆ ಮಾಡುವುದಾದರೆ ನನ್ನ ಹೆಣದ ಮೇಲಾಗಲಿ ಎಂದರು. ದಳದವರೆಲ್ಲಾ ಹೆದರಿ ಗೌಡರನ್ನ ಉಳಿಸಿಕೊಂಡರು. ಮುಂದೆ ಕೆಲವೇ ತಿಂಗಳಲ್ಲಿ ಗೌಡರು ಮಗನೊಂದಿಗೆ ಸೇರಿ, ಯಯಾತಿಯಂತಾಗಿ ಈ ನಾಡನ್ನ ಸುತ್ತತೊಡಗಿದರು; ಮಗನ ಸುತ್ತಲೂ ಇದ್ದ ಮಂತ್ರಿಗಳ ಖಾತೆಗಳ ಮೇಲೆ ಹಿಡಿತ ಸಾಧಿಸಿದರು. ಮುಂದೆ ಜೆಡಿಎಸ್‌ನ ಪ್ರಶ್ನಾತೀತ ನಾಯಕನಾಗಿ ಮಗನನ್ನು ಪ್ರತಿಷ್ಠಾಪಿಸಿದರು. ಆಗ ದಳದ ಪತನ ಆರಂಭವಾಗಿ ಸಿಂಧ್ಯಾ, ಪ್ರಕಾಶ್ ಇಂತವರೆಲ್ಲಾ ವಲಸಿಗರಾಗಿ ಕಾಂಗ್ರೆಸ್ ಸೇರಿಕೊಂಡರು. ಆದರೇನು ಗೌಡರು ಬಿಜೆಪಿ ಜನತೆಗಿನ ಸರಸವನ್ನ ಇನ್ನೂ ಬಿಟ್ಟಿಲ್ಲ. ಈಗ ಗೌಡರ ಪಾರ್ಟಿ ಕಚೆರಿಗೆ ಎರಡು ಬಾಗಿಲಂತಲ್ಲಾ. ಒಂದರ ಮುಖಾಂತರ ಬಿಜೆಪಿಗೆ ಹೋಗುವವರು ಹೋಗಬಹುದು, ಮತ್ತೊಂದರ ಮುಖಾಂತರ ಕಾಂಗ್ರೆಸ್ಸಿಗೆ ಹೋಗುವವರು ಹೋಗಬಹುದು; ಕುಮಾರಣ್ಣ ಸಿಂಗಪುರಕ್ಕೆ ಹೋಗಿರುವುದರಲ್ಲಿ ಈ ಸಂದೇಶವೂ ಅಡಗಿದೆಯಂತಲ್ಲಾ, ಥೂತ್ತೇರಿ.

*****

ಕುಮಾರಣ್ಣ ಸಿಂಗಪುರದಲ್ಲಿದ್ದರೂ ಅವರು ಬಿಜೆಪಿಗಳನ್ನೇ ಮೀರಿಸಿ ಬಿಜೆಪಿಯಾಗಿರುವುದು ಹಳೆ ಸುದ್ದಿಯಂತಲ್ಲಾ. ಬಿಜೆಪಿಯ ಬೃಹಸ್ಪತಿಗಳು ರೈತವಿರೋಧಿ ಕಾನೂನು ತಂದಾಗ ಗೌಡರು ಮತ್ತು ಕುಮಾರಣ್ಣ ಮೋದಿಗೆ ನೋವಾಗದಂತೆ ನಡೆದುಕೊಂಡಿದ್ದರು. ಮತಾಂತರ ನಿಷೇದಧ ಕಾಯ್ದೆ ಜಾರಿಯಾಗುವಾಗ ಉಸಿರೆತ್ತದೆ ಬೆಂಬಲಿಸಿದರು. ಹೆಚ್ಚು ಗೋಮಾಂಸ ರಫ್ತು ಮಾಡುವ ಬಿಜೆಪಿಗರ ವಿರುದ್ಧ ದನಿ ಎತ್ತಲಿಲ್ಲ. ಕಾರಿನವರೆಗೂ ಬಂದು ನನ್ನನ್ನ ಮೋದಿ ಬೀಳ್ಕೊಟ್ಟರು ಎಂದು ಗೌಡರು ಮೋದಿಯ ದೊಡ್ಡತನವನ್ನ ಕೊಂಡಾಡಿದರೆ, ಮೋದಿ ಮಾತನ್ನು ನಾನು ಕೇಳಿದ್ದರೆ ಮುಖ್ಯಮಂತ್ರಿಯಾಗಿ ತಾಜ್‌ವೆಸ್ಟ್‌ಎಂಡ್ ಹೋಟೆಲಿನಲ್ಲೇ ಅಧಿಕಾರ ಅನುಭವಿಸಿ ಅವಧಿ ಮುಗಿಸುತ್ತಿದ್ದೆ ಎನ್ನುವ ಕುಮಾರಣ್ಣ ಈಗ ಅಧಿಕೃತ ಬಿಜೆಪಿಯ ವಕ್ತಾರನಾಗಿರುವುದಲ್ಲದೆ, ವಿರೋಧ ಪಕ್ಷದ ಅನಧಿಕೃತ ನಾಯಕನೂ ಆಗಿದ್ದಾರಲ್ಲಾ. ಇದಕ್ಕೆ ಸಿಕ್ಕ ತಾಜಾ ಉದಾಹರಣೆಯೆಂದರೆ ಸಿದ್ದರಾಮಯ್ಯ ಸರಕಾರದ ವಿರುದ್ಧ ಪ್ರತಿಭಟಿಸುವ ಬಿಜೆಪಿ ಲೆಟರ್‌ಗೆ ಆ ಪಾರ್ಟಿಯ ಆಫೀಸಿಗೆ ಹೋಗಿ ಸಹಿಮಾಡಿದ್ದು ಮತ್ತು ಬೊಮ್ಮಾಯಿ ಆಡಬೇಕಾದ ಮಾತನ್ನ ತಾವೇ ಆಡುತ್ತಿರುವುದು. ಉದಾಹರಣೆಗೆ ಹಿಂದಿನ ಸರಕಾರ ಆರ್ಥಿಕ ಅಶಿಸ್ತಿನಿಂದ ನಡೆದುಕೊಂಡಿದೆ ಎಂದು ಸದರಿ ಸರ್ಕಾರ ಟೀಕಿಸಿದರೆ, ಕುಮಾರಸ್ವಾಮಿಯವರು ಶಿಸ್ತಿನಿಂದಲೇ ಆಡಳಿತ ನಡೆಸಿದ್ದಾರೆ ಎನ್ನುತ್ತಿದ್ದಾರಲ್ಲಾ. ಇದಲ್ಲವೆ ಬಿಜೆಪಿಯ ಕಾರ್ಯಕರ್ತನ ಮಾತು ಎಂದು ಬಿಜೆಪಿಗಳೇ ಹೇಳುತ್ತಿದ್ದಾರಲ್ಲಾ, ಥೂತ್ತೇರಿ.

*****

ಕುಮಾರಣ್ಣ ಬಿಜೆಪಿ ಬಾಗಿಲಲ್ಲಿ ನಿಂತು ಹೋಗಿ ಬರುವವರನ್ನ ನೋಡಿ “ಹಲೋ ಬ್ರದರ್” ಎಂಬುದನ್ನ ಕೇಳಿ ಶಿವಮೊಗ್ಗದ ಆಯನೂರ್ ಮಂಜುನಾಥ್ ಕಂಗಾಲಾಗಿದ್ದಾರಂತಲ್ಲಾ. ಏಕೆಂದರೆ ಶಿವಮೊಗ್ಗದ ಹರಕುಬಾಯಿ ಈಶ್ವರಪ್ಪನ ವಿರುದ್ದ ಸೆಡ್ಡು ಹೊಡೆದು ಫ್ಲೆಕ್ಸ್ ಹಾಕಿದ್ದರು. ಕಾಂಗ್ರೆಸ್ ಕಡೆ ಹೊರಟಾಗ ಕಾಂಗೈನ ಕೆಲವರು ತಡೆಯೊಡ್ಡಿದರು. ಆಗ ಆಯನೂರ್ ಅನಿವಾರ್ಯವಾಗಿ ದಳ ಸೇರಿ ಕ್ಯಾಂಡಿಡೇಟ್ ಆದರು. ಈಗತಾನೆ ಅವರ ಪಾರ್ಟಿಗೆ ಹೋಗಿ ಸೋತು ಸುಧಾರಿಸಿಕೊಳ್ಳುತ್ತಿರುವಾಗಲೇ ಕುಮಾರಣ್ಣ ಬಿಜೆಪಿಗೆ ಹೊರಟದ್ದು ನೋಡಿ ದಿಕ್ಕುತೋಚದಂತಾಗಿದ್ದಾರಂತಲ್ಲಾ. ಏಕೆಂದರೆ ಪುನಃ ಬಂದರೆ ಆಯನೂರರನ್ನು ಹಲ್ಲುಗಿಂಜಿ ಅಣುಕಿಸಲು ಈಶ್ವರಪ್ಪನ ಕಡೆಯವರು ಕಾಯುತ್ತಿದ್ದಾರಂತೆ. ಆಯನೂರ್ ಕತೆ ಹಿಂಗಾದರೆ ಇನ್ನ ನಾಡಿನ ತುಂಬ ಆಯನೂರ್‌ನಂತ ಆಸಾಮಿಗಳು ಎಷ್ಟಿದ್ದಾರೆಯೋ ಏನೋ, ಥೂತ್ತೇರಿ.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕೂಡಿಕೆ: ರಾಜಕೀಯ ಪಕ್ಷವಾಗಿ ಸತ್ತು ಅಸ್ತಿತ್ವ ಉಳಿಸಿಕೊಳ್ಳುವ ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...