Homeಅಂಕಣಗಳುದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

ದಳ ಉದುರಿ ಕಮಲದ ದಳವಾಗಲಿದೆಯಂತಲ್ಲಾ!

- Advertisement -
- Advertisement -

ಜೆಡಿಎಸ್ ಎಂಬ ಪಿತೃ ಪಕ್ಷ ಮುಂದೆ ಏಕಾಂಗಿಯಾಗಿಯೇ ಹೋರಾಡಿ ಮಡಿಯಲಿದೆ ಎಂದು ದೇವೇಗೌಡರು ಖಚಿತವಾಗಿ ಹೇಳಿದ್ದಾರಲ್ಲಾ. ಆದರೂ ಜನಕ್ಕೆ ಡವುಟು ಬಂದಿರುವುದು ಇಲ್ಲೆ; ಏಕೆಂದರೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಈತರದ ಮನೋಲ್ಲಾಸದ ಕಡೆ ಮನಸ್ಸನ್ನು ಕಿಂಚಿತ್ತೂ ಹರಿಯಬಿಡದೆ ರಾಜಕಾರಣಕ್ಕೆ ಕೇಂದ್ರೀಕರಿಸಿರುವ ದೇವೇಗೌಡರು ದೇಶಕಂಡ ಅಪರೂಪದ ರಾಜಕಾರಣಿ. ಇದನ್ನಾಗಲೇ ಜೀವನ ಚರಿತ್ರೆಕಾರರು ದಾಖಲಿಸಿ ಪ್ರತಿಷ್ಠಿತ ಪ್ರಕಾಶಕರು ಪ್ರಕಟಿಸಿದ್ದಾರಂತಲ್ಲಾ. ತಮ್ಮ ಅಂಗೈನಲ್ಲಿಯೇ ಇನ್ನೂರ ಇಪ್ಪತ್ತ ನಾಲ್ಕು ಕ್ಷೇತ್ರಗಳ ಗೆರೆಗಳನ್ನ ನೋಡುವ ಗೌಡರು, ಹಿಂದೊಮ್ಮೆ ಮುಖ್ಯಮಂತ್ರಿ ಆಸೆ ತೋರಿಸಿ ಮಗನನ್ನು ಕಮಲದವರು ಅಪಹರಿಸಿದರೆಂದೂ, ಅದರಲ್ಲಿ ನನ್ನ ಪಾತ್ರವಿಲ್ಲ ಅದಕ್ಕೆ ನಾನು ಮುಂದಿನ ಇಪ್ಪತ್ತು ತಿಂಗಳನ್ನ ಎಡೂರಪ್ಪನಿಗೆ ಬಿಡದೆ ನನ್ನ ಜಾತ್ಯತೀತ ಕಾಯ್ದುಕೊಂಡೆ ಎಂದೂ ಲೋಕಸಭೆಯಲ್ಲಿ ನಂಬಿಸುವ ದನಿಯಲ್ಲಿ ಹೇಳಿದ್ದರು. ಲೋಕ ನಂಬಿತು, ಆದರೆ ಈಗ ಜನಕ್ಕೆ ಡವುಟಾಗುತ್ತಿರುವುದು ಏಕೆಂದರೆ 1983ರಲ್ಲಿ ಇದೇ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಜನತಾ ಸರಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿರಲಿಲ್ಲವೆ ಎಂದು ಗೌಡರು ನೆನಪಿಸಿದ್ದಾರಲ್ಲಾ, ಥೂತ್ತೇರಿ.

*****

1983ರಲ್ಲಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದುದು ನಿಜ. ಏಕೆಂದರೆ ಪ್ರತಿಭಾವಂತನಂತೆ ಕಾಣುತ್ತಿದ್ದ ಅವರನ್ನು ಖಾಲಿ ಬಿಡಬಾರದೆಂದು ನಜೀರ್ ಸಾಬ್ ಮತ್ತು ರಾಚಯ್ಯ, ರಾಮಕೃಷ್ಣ ಹೆಗಡೆಯವರಿಗೆ ಶಿಫಾರಸ್ಸು ಮಾಡಿದ್ದರು. ಆ ಕಾರಣವಾಗಿ ಸಿದ್ದು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾದರು. ಹೆಗಡೆ ಸರಕಾರಕ್ಕೆ ಬೆಂಬಲಕೊಟ್ಟಿದ್ದ ಬಿಜೆಪಿ ಇಂದಿನ ಬಿಜೆಪಿಯಾಗಿರಲಿಲ್ಲ. ಇವತ್ತಿನ ಬಿಜೆಪಿಗಳ ತರಹ ಅಂದಿನ ಕಾಂಗ್ರೆಸ್ಸಿಗರಿದ್ದರು. ಎ.ಕೆ ಸುಬ್ಬಯ್ಯನವರ ನೇತೃತ್ವದ ಬಿಜೆಪಿ ದೇವೇಗೌಡರ ವಿಶ್ವಾಸದಲ್ಲಿತ್ತು. ಅಂದಿನ ಬಿಜೆಪಿ ಬ್ರಾಹ್ಮಣರು ಹೆಗಡೆ ನೇತೃತ್ವಕ್ಕೆ ತಮ್ಮನ್ನ ಅರ್ಪಿಸಿಕೊಂಡಿದ್ದರಿಂದ ಮುಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಕ್ಕೆ ಇಳಿಯಿತು. ಹೆಗಡೆಯವರು ಸುಬ್ಬಯ್ಯರನ್ನು ಹತ್ತಿಕ್ಕುವ ಕೆಲಸದಲ್ಲಿ ನಿರತರಾದಾಗ ದೇವೇಗೌಡರು ಸುಬ್ಬಯ್ಯನವರ ಪರವಿದ್ದರು. ತಮ್ಮ ಸರಳ ಸಜ್ಜನಿಕೆ ಸಿದ್ಧಾಂತದಿಂದ ದೇವೇಗೌಡರು ಅಂದು ಅವರ ಪಕ್ಷದಲ್ಲಿದ್ದ ಪಟೇಲ್, ಬೊಮ್ಮಾಯಿ, ಸಿಂಧ್ಯಾ, ಸಿದ್ದು, ಪ್ರಕಾಶ್ ಮತ್ತು ಆಳ್ವ ರಘುಪತಿ, ರಾಮಯ್ಯ ಇಂತಹ ಘಟಾನುಘಟಿ ರಾಜಕಾರಣಿಗಳ ಲೀಡರಾಗಿದ್ದರು. ಈಗ ಅವರಲ್ಲಿ ಕೆಲವರು ಭೌತಿಕವಾಗಿ ಇಲ್ಲ. ಮತ್ತೆ ಉಳಿದವರು ದೇವೇಗೌಡರ ಪಾರ್ಟಿಯಲ್ಲಿ ಇಲ್ಲ. ’ಹಾಳೂರಿಗೆ ಉಳಿದವನೇ ಗೌಡ’ ಎಂಬ ಗಾದೆಯಂತೆ ನಾನಿನ್ನೂ ಸೆಕ್ಯುಲರ್ ಮ್ಯಾನ್ ಎಂಬುವುದನ್ನ ತೋರಿಸಿಕೊಳ್ಳಲು ಇಬ್ರಾಹಿಂ ಎಂಬ ಮಾತಿನ ಮಲ್ಲರನ್ನ ಜೊತೆಗಿಟ್ಟುಕೊಂಡು ಮಗನನ್ನು ಆಟ ಆಡಲು ಬಿಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

 

ಮಗನನ್ನು ಆಟ ಆಡಲು ಬಿಟ್ಟಿದ್ದಾರೆ ಎಂಬ ನಮ್ಮ ಆಪಾದನೆಗೆ ಸಾಕ್ಷಿಯೊದಗಿಸಬೇಕಲ್ಲವೇ! ಕುಮಾರಣ್ಣ ಬಿಜೆಪಿ ಸಖ್ಯ ಬೆಳೆಸಿಕೊಂಡು ಮುಖ್ಯಮಂತ್ರಿಯಾದದ್ದು ದಿಢೀರ್ ಬೆಳವಣಿಗೆಯೇನಲ್ಲ; ದಿನ ಬೆಳಗಾಯ್ತೆಂದರೆ ಮಗನನ್ನ ಮನೆಗೆ ಕರೆಸಿಕೊಂಡು ಮುಂದೆ ನಡೆಯುವ ಮಹಾ ನಾಟಕಕ್ಕೆ ತಾಲೀಮು ಕೊಡುತ್ತಿದ್ದರು ದೇವೇಗೌಡರು. ಹೇಳಿದಂತೆ ಕೇಳುವ ಜೆಡಿಎಸ್ ಅಧ್ಯಕ್ಷನಿದ್ದ ಆ ಕಾಲದಲ್ಲಿ ತೋರಿದ್ದನ್ನು ತಲೆಯ ಮೇಲೆ ಹೊತ್ತು ಮಾಡುವ ಸ್ಪೀಕರ್ ಇದ್ದರು; ಹಾಗಾಗಿ ಗೌಡರು ಮನೆಯಲ್ಲೇ ಕುಳಿತು ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರಕಾರ ರಚನೆ ಮಾಡುವುದಾದರೆ ನನ್ನ ಹೆಣದ ಮೇಲಾಗಲಿ ಎಂದರು. ದಳದವರೆಲ್ಲಾ ಹೆದರಿ ಗೌಡರನ್ನ ಉಳಿಸಿಕೊಂಡರು. ಮುಂದೆ ಕೆಲವೇ ತಿಂಗಳಲ್ಲಿ ಗೌಡರು ಮಗನೊಂದಿಗೆ ಸೇರಿ, ಯಯಾತಿಯಂತಾಗಿ ಈ ನಾಡನ್ನ ಸುತ್ತತೊಡಗಿದರು; ಮಗನ ಸುತ್ತಲೂ ಇದ್ದ ಮಂತ್ರಿಗಳ ಖಾತೆಗಳ ಮೇಲೆ ಹಿಡಿತ ಸಾಧಿಸಿದರು. ಮುಂದೆ ಜೆಡಿಎಸ್‌ನ ಪ್ರಶ್ನಾತೀತ ನಾಯಕನಾಗಿ ಮಗನನ್ನು ಪ್ರತಿಷ್ಠಾಪಿಸಿದರು. ಆಗ ದಳದ ಪತನ ಆರಂಭವಾಗಿ ಸಿಂಧ್ಯಾ, ಪ್ರಕಾಶ್ ಇಂತವರೆಲ್ಲಾ ವಲಸಿಗರಾಗಿ ಕಾಂಗ್ರೆಸ್ ಸೇರಿಕೊಂಡರು. ಆದರೇನು ಗೌಡರು ಬಿಜೆಪಿ ಜನತೆಗಿನ ಸರಸವನ್ನ ಇನ್ನೂ ಬಿಟ್ಟಿಲ್ಲ. ಈಗ ಗೌಡರ ಪಾರ್ಟಿ ಕಚೆರಿಗೆ ಎರಡು ಬಾಗಿಲಂತಲ್ಲಾ. ಒಂದರ ಮುಖಾಂತರ ಬಿಜೆಪಿಗೆ ಹೋಗುವವರು ಹೋಗಬಹುದು, ಮತ್ತೊಂದರ ಮುಖಾಂತರ ಕಾಂಗ್ರೆಸ್ಸಿಗೆ ಹೋಗುವವರು ಹೋಗಬಹುದು; ಕುಮಾರಣ್ಣ ಸಿಂಗಪುರಕ್ಕೆ ಹೋಗಿರುವುದರಲ್ಲಿ ಈ ಸಂದೇಶವೂ ಅಡಗಿದೆಯಂತಲ್ಲಾ, ಥೂತ್ತೇರಿ.

*****

ಕುಮಾರಣ್ಣ ಸಿಂಗಪುರದಲ್ಲಿದ್ದರೂ ಅವರು ಬಿಜೆಪಿಗಳನ್ನೇ ಮೀರಿಸಿ ಬಿಜೆಪಿಯಾಗಿರುವುದು ಹಳೆ ಸುದ್ದಿಯಂತಲ್ಲಾ. ಬಿಜೆಪಿಯ ಬೃಹಸ್ಪತಿಗಳು ರೈತವಿರೋಧಿ ಕಾನೂನು ತಂದಾಗ ಗೌಡರು ಮತ್ತು ಕುಮಾರಣ್ಣ ಮೋದಿಗೆ ನೋವಾಗದಂತೆ ನಡೆದುಕೊಂಡಿದ್ದರು. ಮತಾಂತರ ನಿಷೇದಧ ಕಾಯ್ದೆ ಜಾರಿಯಾಗುವಾಗ ಉಸಿರೆತ್ತದೆ ಬೆಂಬಲಿಸಿದರು. ಹೆಚ್ಚು ಗೋಮಾಂಸ ರಫ್ತು ಮಾಡುವ ಬಿಜೆಪಿಗರ ವಿರುದ್ಧ ದನಿ ಎತ್ತಲಿಲ್ಲ. ಕಾರಿನವರೆಗೂ ಬಂದು ನನ್ನನ್ನ ಮೋದಿ ಬೀಳ್ಕೊಟ್ಟರು ಎಂದು ಗೌಡರು ಮೋದಿಯ ದೊಡ್ಡತನವನ್ನ ಕೊಂಡಾಡಿದರೆ, ಮೋದಿ ಮಾತನ್ನು ನಾನು ಕೇಳಿದ್ದರೆ ಮುಖ್ಯಮಂತ್ರಿಯಾಗಿ ತಾಜ್‌ವೆಸ್ಟ್‌ಎಂಡ್ ಹೋಟೆಲಿನಲ್ಲೇ ಅಧಿಕಾರ ಅನುಭವಿಸಿ ಅವಧಿ ಮುಗಿಸುತ್ತಿದ್ದೆ ಎನ್ನುವ ಕುಮಾರಣ್ಣ ಈಗ ಅಧಿಕೃತ ಬಿಜೆಪಿಯ ವಕ್ತಾರನಾಗಿರುವುದಲ್ಲದೆ, ವಿರೋಧ ಪಕ್ಷದ ಅನಧಿಕೃತ ನಾಯಕನೂ ಆಗಿದ್ದಾರಲ್ಲಾ. ಇದಕ್ಕೆ ಸಿಕ್ಕ ತಾಜಾ ಉದಾಹರಣೆಯೆಂದರೆ ಸಿದ್ದರಾಮಯ್ಯ ಸರಕಾರದ ವಿರುದ್ಧ ಪ್ರತಿಭಟಿಸುವ ಬಿಜೆಪಿ ಲೆಟರ್‌ಗೆ ಆ ಪಾರ್ಟಿಯ ಆಫೀಸಿಗೆ ಹೋಗಿ ಸಹಿಮಾಡಿದ್ದು ಮತ್ತು ಬೊಮ್ಮಾಯಿ ಆಡಬೇಕಾದ ಮಾತನ್ನ ತಾವೇ ಆಡುತ್ತಿರುವುದು. ಉದಾಹರಣೆಗೆ ಹಿಂದಿನ ಸರಕಾರ ಆರ್ಥಿಕ ಅಶಿಸ್ತಿನಿಂದ ನಡೆದುಕೊಂಡಿದೆ ಎಂದು ಸದರಿ ಸರ್ಕಾರ ಟೀಕಿಸಿದರೆ, ಕುಮಾರಸ್ವಾಮಿಯವರು ಶಿಸ್ತಿನಿಂದಲೇ ಆಡಳಿತ ನಡೆಸಿದ್ದಾರೆ ಎನ್ನುತ್ತಿದ್ದಾರಲ್ಲಾ. ಇದಲ್ಲವೆ ಬಿಜೆಪಿಯ ಕಾರ್ಯಕರ್ತನ ಮಾತು ಎಂದು ಬಿಜೆಪಿಗಳೇ ಹೇಳುತ್ತಿದ್ದಾರಲ್ಲಾ, ಥೂತ್ತೇರಿ.

*****

ಕುಮಾರಣ್ಣ ಬಿಜೆಪಿ ಬಾಗಿಲಲ್ಲಿ ನಿಂತು ಹೋಗಿ ಬರುವವರನ್ನ ನೋಡಿ “ಹಲೋ ಬ್ರದರ್” ಎಂಬುದನ್ನ ಕೇಳಿ ಶಿವಮೊಗ್ಗದ ಆಯನೂರ್ ಮಂಜುನಾಥ್ ಕಂಗಾಲಾಗಿದ್ದಾರಂತಲ್ಲಾ. ಏಕೆಂದರೆ ಶಿವಮೊಗ್ಗದ ಹರಕುಬಾಯಿ ಈಶ್ವರಪ್ಪನ ವಿರುದ್ದ ಸೆಡ್ಡು ಹೊಡೆದು ಫ್ಲೆಕ್ಸ್ ಹಾಕಿದ್ದರು. ಕಾಂಗ್ರೆಸ್ ಕಡೆ ಹೊರಟಾಗ ಕಾಂಗೈನ ಕೆಲವರು ತಡೆಯೊಡ್ಡಿದರು. ಆಗ ಆಯನೂರ್ ಅನಿವಾರ್ಯವಾಗಿ ದಳ ಸೇರಿ ಕ್ಯಾಂಡಿಡೇಟ್ ಆದರು. ಈಗತಾನೆ ಅವರ ಪಾರ್ಟಿಗೆ ಹೋಗಿ ಸೋತು ಸುಧಾರಿಸಿಕೊಳ್ಳುತ್ತಿರುವಾಗಲೇ ಕುಮಾರಣ್ಣ ಬಿಜೆಪಿಗೆ ಹೊರಟದ್ದು ನೋಡಿ ದಿಕ್ಕುತೋಚದಂತಾಗಿದ್ದಾರಂತಲ್ಲಾ. ಏಕೆಂದರೆ ಪುನಃ ಬಂದರೆ ಆಯನೂರರನ್ನು ಹಲ್ಲುಗಿಂಜಿ ಅಣುಕಿಸಲು ಈಶ್ವರಪ್ಪನ ಕಡೆಯವರು ಕಾಯುತ್ತಿದ್ದಾರಂತೆ. ಆಯನೂರ್ ಕತೆ ಹಿಂಗಾದರೆ ಇನ್ನ ನಾಡಿನ ತುಂಬ ಆಯನೂರ್‌ನಂತ ಆಸಾಮಿಗಳು ಎಷ್ಟಿದ್ದಾರೆಯೋ ಏನೋ, ಥೂತ್ತೇರಿ.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕೂಡಿಕೆ: ರಾಜಕೀಯ ಪಕ್ಷವಾಗಿ ಸತ್ತು ಅಸ್ತಿತ್ವ ಉಳಿಸಿಕೊಳ್ಳುವ ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...