Homeಅಂಕಣಗಳುಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

- Advertisement -
- Advertisement -

ಚಕ್ರತೀರ್ಥನ ಕಾಯಿಲೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಷಿಗೂ ಬಡಿದುಕೊಂಡಿದೆಯಂತಲ್ಲಾ. ಈ ಬಿಜೆಪಿಗಳದ್ದು ಅಂಟು ರೋಗ. ಈ ರೋಗದ ವಿಶೇಷ ಏನೆಂದರೆ ಎಲ್ಲವೂ ಒಂದೇ ತರಹ ಮಾತನಾಡುತ್ತವೆ ಮತ್ತು ಆಡಿದ್ದನ್ನು ಮಾಡಲು ಹೋಗುತ್ತವೆ. ಇದಕ್ಕೆ ನೂರಾರು ಉದಾಹರಣೆಗಳಿವೆ. ಈ ಸಾಹಿತ್ಯ ಪರಿಷತ್ ಜೋಷಿಯವರನ್ನೇ ನೋಡಿ; ಈತ ಆಯ್ಕೆಯಾಗಿ ಬಂದಾಗ ಬಡಿದುಕೊಂಡ ರೋಗ ಯಾವುದೆಂದರೆ ಜನರನ್ನು ಶುದ್ಧ ಕನ್ನಡದಲ್ಲಿ ಮಾತನಾಡುವಂತೆ ಮಾಡಬೇಕೆಂಬುದು; ಶುದ್ಧ ಕನ್ನಡ ಅಂದರೆ ಏನು ಎಂಬುದು ಆತನಿಗೇ ಗೊತ್ತಿರಲಿಲ್ಲ. ಹಲವು ಕನ್ನಡಗಳಲ್ಲಿ ಅದ್ಲಿಸಿದಾಗ ಸುಮ್ಮನಾದರು. ಆದರೆ ಕಾಯಿಲೆ ಜನಕ್ಕೆ ಹಲವು ಕಾಯಿಲೆಗಳು ಅಂಟುವುದು ಸಾಮಾನ್ಯ. ಈಗ ಜೋಷಿಗೆ ಪಂಪ ಮಹಾಕವಿಯ ರಸ್ತೆ ಹೆಸರು ಬದಲಿಸುವ ಕಾಯಿಲೆ ಕಾಣಿಸಿಕೊಂಡಿದೆ. ಅದಕ್ಕಾಗಿ ಆತನ ಅಣ್ಣನಂತಿರುವ ಬೊಮ್ಮಾಯಿಗೆ ಪರಮಿಷನ್ ಕೇಳಿದ್ದಾರಂತೆ! ಇಂಗ್ಲಿಷ್ ಭಾಷೆಯನ್ನ ಮಾತನಾಡುವ ಜನಗಳು ತೊಗಟೆಯನ್ನು ಸೊಂಟಕ್ಕೆ ಸುತ್ತಿಕೊಂಡು ನಾಗರಿಕ ಜಗತ್ತಿನೆಡೆಗೆ ನಡೆಯಲು ಯತ್ನಿಸುತ್ತಿದ್ದಾನೆ ಇಲ್ಲಿ ಕನ್ನಡದ ಆದಿಕವಿ ಪಂಪ ಮಹಾಕಾವ್ಯವನ್ನೆ ಬರೆದಿದ್ದ ಎಂದು ಕುವೆಂಪು ಹೇಳಿದ್ದಾರೆ. ಜೋಷಿ ಆ ಮಹಾಕಾವ್ಯವನ್ನು ಓದಿ ಜೀರ್ಣಿಸಿಕೊಂಡು ಮಾತನಾಡುವುದಬಿಟ್ಟು ರಸ್ತೆ ಹೆಸರನ್ನೇ ಬದಲಿಸಹೊರಟಿರುವುದು ಶುದ್ದ ಮೂರ್ಖತನ. ಪಂಪನ ಮಾರ್ಗದಿಂದಲೇ ಸಾಹಿತ್ಯ ಪರಿಷತ್ ಪ್ರವೇಶ ನಡೆಯುತ್ತ ಬಂದಿದೆ ಎಂಬುದೇ ಜೋಷಿಗೆ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

******

ತೇಜಸ್ವಿ ಸೂರ್ಯ ಎಂಬ ಸಂಸದ ಹೋಟಲಿಗೆ ಹೋಗಿ ದೋಸೆ ತಿನ್ನುವುದನ್ನು ಆಡಿಕೊಂಡ ಕೆಲವರು ದೋಸೆ ಸೂರ್ಯ ಎಂದು ನಾಮಕರಣ ಮಾಡಿದ್ದಾರಲ್ಲಾ. ಇಂತಹ ಹೆಸರನ್ನು ಸಂಪಾದಿಸುವುದು ಸಾಮಾನ್ಯವಲ್ಲ. ಬೊಂಡ ರಮೇಶ ಮುದ್ದೇಗೌಡರು, ಬಿರಿಯಾನಿ ಜಮೀರು, ಉಪ್ಪೆಸಾರಿನ ಪುಟ್ಟಸ್ವಾಮಿ, ತೂತುವಡೆ ಶ್ರೀಕಂಠಯ್ಯ, ಬಾಡೂಟದ ಕೃಷ್ಣಪ್ಪ ಇವೆಲ್ಲ ನಮ್ಮ ರಾಜಕಾರಣದಲ್ಲಿ ಹಿಂದೆ ನಮ್ಮ ನಾಯಕರು ಸಂಪಾದಿಸಿದ ಹೆಸರುಗಳು. ಅದರೊಳಕ್ಕೆ ಈಗ ದೋಸೆ ಸೂರ್ಯ ಸೇರಿಕೊಂಡಿದ್ದಾರೆ ಅಷ್ಟೇ. ಮುಖ್ಯವಾಗಿ ಆತನ ಕಡೆಯವರಿಗೆ ದೋಸೆ ಅಂದರೆ ಪ್ರಾಣ. ಮೂರು ದೋಸೆ ಕೊಟ್ಟರೆ ಈ ಕಡೆ ಬರುತ್ತವೆ ಆರು ದೋಸೆ ಕೊಟ್ಟರೆ ಈ ಕಡೆ ಹೋಗುತ್ತವೆ. ಅದರಲ್ಲೂ ಮಸಾಲದೋಸೆ ಎಂದರೆ ಮುಗಿದೇ ಹೋಯ್ತು, ಮೈ ಮರೆತು ತಿನ್ನುತ್ತವೆ. ಹಾಗೇ ತೇಜಸ್ವಿಸೂರ್ಯ ಇಡೀ ಬೆಂಗಳೂರು ಸೊಂಟಮಟ ಮುಳುಗಿರುವಾಗ ಬಿಸಿಬಿಸಿ ದೋಸೆ ತಿನ್ನುತ್ತ ನೀವು ಬಂದು ತಿನ್ನಿ ಎಂದು ಹೋಟೆಲ್ ಅಡ್ರೆಸ್ ಹೇಳಿದ್ದಕ್ಕೆ ಜನಗಳು ನಖಶಿಖಾಂತ ಕೆರಳಿ ಕ್ಯಾಕರಿಸಿದ್ದಾರೆ. ಸಿಟ್ಟಾಗಿರುವ ಆತನ ಸಂಬಂಧಿ ಭಗವಾನ್ ಎಂಬ ದೋಸೆ ಪ್ರಿಯ, ನಮ್ಮ ಸೂರ್ಯ ಸುಮ್ಮಸುಮ್ಮನೆ ದೋಸೆ ತಿಂದಿಲ್ಲ; ಕೆರೆಯಂತಾಗಿರುವ ಬೆಂಗಳೂರು ನೀರನ್ನು ಹೊರಗೆ ಹಾಕಲು ಏನು ಮಾಡಬೇಕೆಂದು ಯೋಚಿಸುತ್ತ ದೋಸೆ ಅಗಿದಿದ್ದಾರೆ; ಸಾರ್ವಜನಿಕರೊಂದಿಗೆ ಸೇರಲು ದೋಸೆಗಿಂತ ತಿನಿಸೇ ಇಲ್ಲ ಎಂದು ಕೂಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕಕ್ಕೆ ಇದು ಕೆಟ್ಟ ಕಾಲ. ಏಕೆಂದರೆ ಜನಾಭಿಪ್ರಾಯವಿಲ್ಲದ ಮತ್ತು ಶಾಸಕರ ಬೆಂಬಲವೂ ಇಲ್ಲದ ಮುಖ್ಯಮಂತ್ರಿಯೊಬ್ಬರು ಅಕಸ್ಮಾತ್ ವಕ್ಕರಿಸಿ ಅಬ್ಬರಿಸಿದ್ದಾರಂತಲ್ಲಾ. ಈ ಅಬ್ಬರದ ಹೆಸರು ’ಜನೋತ್ಸವ’. ಈ ಸರಕಾರದ ಸಾಧನೆಯ ಪಟ್ಟಿ ಮಾಡುವುದಾದರೆ ಜೋಗದಲ್ಲಿ ಜನರೇಟರ್ ಆನ್ ಆದ ಕೂಡಲೆ ಅರ್ಧ ನಾಡಿನ ಲೈಟ್ ಹಚ್ಚಿಕೊಳ್ಳುವಂತೆ, ಮುಸ್ಲಿಂ ಹೆಣ್ಣು ಮಕ್ಕಳ ಹಿಜಾಬ್ ಪ್ರತಿಭಟನೆ ಉಡುಪಿಯಿಂದ ಬೇರೆ ಕಡೆಗೆ ಹರಡಿಸಿದ್ದು. ನಂತರ ಮುಸ್ಲಿಮರ ಅಂಗಡಿಗೆ ಹೋಗದಂತೆ ಮಾಡಿ ಎಂದದ್ದು, ಮುಸ್ಲಿಂ ಹಣ್ಣಿನ ಅಂಗಡಿ ಧ್ವಂಸ ಮಾಡಿದ್ದು, ಅವರ ಆಜಾನ್ ಶಬ್ದ ನಿಲ್ಲಿಸಲು ಹೋರಾಡಿದ್ದು ಇತ್ಯಾದಿ. ಸುದೈವಕ್ಕೆ ನಲವತ್ತು ಪರಸೆಂಟ್ ಲಂಚ, ಪಿಎಸ್‌ಐ ಹಗರಣ, ಶಿಕ್ಷಣ ಇಲಾಖೆಯಲ್ಲಿನ ಹಗರಣ ಎಲ್ಲವೂ ಮುಸ್ಲಿಮರ ವಿರುದ್ಧದ ಹೋರಾಟಗಳು ಹಿನ್ನಡೆಯಾಗುವಂತೆ ಮಾಡಿದವು. ಇದರ ಜೊತೆಗೆ ಬೆಂಗಳೂರು ಹಿಂದೆಂದೂ ಕಂಡರಿಯದ ಜಲಪ್ರಳಯಕ್ಕೆ ಸಿಕ್ಕಿ ಮುಳುಗಿತು. ಇಂತಹ ಸಮಯದಲ್ಲಿ ಸಾಧನೆಯ ಸಮಾವೇಶ ಮಾಡಿ ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಕೀರಲು ಗಂಟಲಲ್ಲಿ ಕಿರುಚಿದ ಬೊಮ್ಮಯಿ ಮಾತಿಗೆ ಜಾಕ್ಸನ್ ಮತ್ತು ಪ್ರಭುದೇವನೆ ನಾಚಿಕೊಳ್ಳುವಂತೆ ಎಂಟಿಬಿ ಫ್ರೆಂಡ್ಸ್ ಕುಣಿದರಂತಲ್ಲಾ. ಇತ್ತ ಕಾಂಗೈನ ಕಿಡಿಗೇಡಿಗಳು ಬೊಮ್ಮಾಯಿಯ ಮಾತಿಗೆ ಬಿದ್ದುಬಿದ್ದು ನಗುತ್ತ ನಮ್ಮ ಸಿದ್ದರಾಮಯ್ಯನ ತಾಕತ್ತಿನ ಬಗ್ಗೆ ಮಾತಾಡ್ತೀರಾ, ನಿಮಗೆ ತಾಕತ್ತಿದ್ದರೆ ಸಂಪುಟ ವಿಸ್ತರಿಸಿ ಸರಿಯಾಗಿ ನಡೆಯಿರಿ ನೋಡೋಣ ಎಂದವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...