Homeಅಂಕಣಗಳುಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

- Advertisement -
- Advertisement -

ಚಕ್ರತೀರ್ಥನ ಕಾಯಿಲೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಷಿಗೂ ಬಡಿದುಕೊಂಡಿದೆಯಂತಲ್ಲಾ. ಈ ಬಿಜೆಪಿಗಳದ್ದು ಅಂಟು ರೋಗ. ಈ ರೋಗದ ವಿಶೇಷ ಏನೆಂದರೆ ಎಲ್ಲವೂ ಒಂದೇ ತರಹ ಮಾತನಾಡುತ್ತವೆ ಮತ್ತು ಆಡಿದ್ದನ್ನು ಮಾಡಲು ಹೋಗುತ್ತವೆ. ಇದಕ್ಕೆ ನೂರಾರು ಉದಾಹರಣೆಗಳಿವೆ. ಈ ಸಾಹಿತ್ಯ ಪರಿಷತ್ ಜೋಷಿಯವರನ್ನೇ ನೋಡಿ; ಈತ ಆಯ್ಕೆಯಾಗಿ ಬಂದಾಗ ಬಡಿದುಕೊಂಡ ರೋಗ ಯಾವುದೆಂದರೆ ಜನರನ್ನು ಶುದ್ಧ ಕನ್ನಡದಲ್ಲಿ ಮಾತನಾಡುವಂತೆ ಮಾಡಬೇಕೆಂಬುದು; ಶುದ್ಧ ಕನ್ನಡ ಅಂದರೆ ಏನು ಎಂಬುದು ಆತನಿಗೇ ಗೊತ್ತಿರಲಿಲ್ಲ. ಹಲವು ಕನ್ನಡಗಳಲ್ಲಿ ಅದ್ಲಿಸಿದಾಗ ಸುಮ್ಮನಾದರು. ಆದರೆ ಕಾಯಿಲೆ ಜನಕ್ಕೆ ಹಲವು ಕಾಯಿಲೆಗಳು ಅಂಟುವುದು ಸಾಮಾನ್ಯ. ಈಗ ಜೋಷಿಗೆ ಪಂಪ ಮಹಾಕವಿಯ ರಸ್ತೆ ಹೆಸರು ಬದಲಿಸುವ ಕಾಯಿಲೆ ಕಾಣಿಸಿಕೊಂಡಿದೆ. ಅದಕ್ಕಾಗಿ ಆತನ ಅಣ್ಣನಂತಿರುವ ಬೊಮ್ಮಾಯಿಗೆ ಪರಮಿಷನ್ ಕೇಳಿದ್ದಾರಂತೆ! ಇಂಗ್ಲಿಷ್ ಭಾಷೆಯನ್ನ ಮಾತನಾಡುವ ಜನಗಳು ತೊಗಟೆಯನ್ನು ಸೊಂಟಕ್ಕೆ ಸುತ್ತಿಕೊಂಡು ನಾಗರಿಕ ಜಗತ್ತಿನೆಡೆಗೆ ನಡೆಯಲು ಯತ್ನಿಸುತ್ತಿದ್ದಾನೆ ಇಲ್ಲಿ ಕನ್ನಡದ ಆದಿಕವಿ ಪಂಪ ಮಹಾಕಾವ್ಯವನ್ನೆ ಬರೆದಿದ್ದ ಎಂದು ಕುವೆಂಪು ಹೇಳಿದ್ದಾರೆ. ಜೋಷಿ ಆ ಮಹಾಕಾವ್ಯವನ್ನು ಓದಿ ಜೀರ್ಣಿಸಿಕೊಂಡು ಮಾತನಾಡುವುದಬಿಟ್ಟು ರಸ್ತೆ ಹೆಸರನ್ನೇ ಬದಲಿಸಹೊರಟಿರುವುದು ಶುದ್ದ ಮೂರ್ಖತನ. ಪಂಪನ ಮಾರ್ಗದಿಂದಲೇ ಸಾಹಿತ್ಯ ಪರಿಷತ್ ಪ್ರವೇಶ ನಡೆಯುತ್ತ ಬಂದಿದೆ ಎಂಬುದೇ ಜೋಷಿಗೆ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

******

ತೇಜಸ್ವಿ ಸೂರ್ಯ ಎಂಬ ಸಂಸದ ಹೋಟಲಿಗೆ ಹೋಗಿ ದೋಸೆ ತಿನ್ನುವುದನ್ನು ಆಡಿಕೊಂಡ ಕೆಲವರು ದೋಸೆ ಸೂರ್ಯ ಎಂದು ನಾಮಕರಣ ಮಾಡಿದ್ದಾರಲ್ಲಾ. ಇಂತಹ ಹೆಸರನ್ನು ಸಂಪಾದಿಸುವುದು ಸಾಮಾನ್ಯವಲ್ಲ. ಬೊಂಡ ರಮೇಶ ಮುದ್ದೇಗೌಡರು, ಬಿರಿಯಾನಿ ಜಮೀರು, ಉಪ್ಪೆಸಾರಿನ ಪುಟ್ಟಸ್ವಾಮಿ, ತೂತುವಡೆ ಶ್ರೀಕಂಠಯ್ಯ, ಬಾಡೂಟದ ಕೃಷ್ಣಪ್ಪ ಇವೆಲ್ಲ ನಮ್ಮ ರಾಜಕಾರಣದಲ್ಲಿ ಹಿಂದೆ ನಮ್ಮ ನಾಯಕರು ಸಂಪಾದಿಸಿದ ಹೆಸರುಗಳು. ಅದರೊಳಕ್ಕೆ ಈಗ ದೋಸೆ ಸೂರ್ಯ ಸೇರಿಕೊಂಡಿದ್ದಾರೆ ಅಷ್ಟೇ. ಮುಖ್ಯವಾಗಿ ಆತನ ಕಡೆಯವರಿಗೆ ದೋಸೆ ಅಂದರೆ ಪ್ರಾಣ. ಮೂರು ದೋಸೆ ಕೊಟ್ಟರೆ ಈ ಕಡೆ ಬರುತ್ತವೆ ಆರು ದೋಸೆ ಕೊಟ್ಟರೆ ಈ ಕಡೆ ಹೋಗುತ್ತವೆ. ಅದರಲ್ಲೂ ಮಸಾಲದೋಸೆ ಎಂದರೆ ಮುಗಿದೇ ಹೋಯ್ತು, ಮೈ ಮರೆತು ತಿನ್ನುತ್ತವೆ. ಹಾಗೇ ತೇಜಸ್ವಿಸೂರ್ಯ ಇಡೀ ಬೆಂಗಳೂರು ಸೊಂಟಮಟ ಮುಳುಗಿರುವಾಗ ಬಿಸಿಬಿಸಿ ದೋಸೆ ತಿನ್ನುತ್ತ ನೀವು ಬಂದು ತಿನ್ನಿ ಎಂದು ಹೋಟೆಲ್ ಅಡ್ರೆಸ್ ಹೇಳಿದ್ದಕ್ಕೆ ಜನಗಳು ನಖಶಿಖಾಂತ ಕೆರಳಿ ಕ್ಯಾಕರಿಸಿದ್ದಾರೆ. ಸಿಟ್ಟಾಗಿರುವ ಆತನ ಸಂಬಂಧಿ ಭಗವಾನ್ ಎಂಬ ದೋಸೆ ಪ್ರಿಯ, ನಮ್ಮ ಸೂರ್ಯ ಸುಮ್ಮಸುಮ್ಮನೆ ದೋಸೆ ತಿಂದಿಲ್ಲ; ಕೆರೆಯಂತಾಗಿರುವ ಬೆಂಗಳೂರು ನೀರನ್ನು ಹೊರಗೆ ಹಾಕಲು ಏನು ಮಾಡಬೇಕೆಂದು ಯೋಚಿಸುತ್ತ ದೋಸೆ ಅಗಿದಿದ್ದಾರೆ; ಸಾರ್ವಜನಿಕರೊಂದಿಗೆ ಸೇರಲು ದೋಸೆಗಿಂತ ತಿನಿಸೇ ಇಲ್ಲ ಎಂದು ಕೂಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕಕ್ಕೆ ಇದು ಕೆಟ್ಟ ಕಾಲ. ಏಕೆಂದರೆ ಜನಾಭಿಪ್ರಾಯವಿಲ್ಲದ ಮತ್ತು ಶಾಸಕರ ಬೆಂಬಲವೂ ಇಲ್ಲದ ಮುಖ್ಯಮಂತ್ರಿಯೊಬ್ಬರು ಅಕಸ್ಮಾತ್ ವಕ್ಕರಿಸಿ ಅಬ್ಬರಿಸಿದ್ದಾರಂತಲ್ಲಾ. ಈ ಅಬ್ಬರದ ಹೆಸರು ’ಜನೋತ್ಸವ’. ಈ ಸರಕಾರದ ಸಾಧನೆಯ ಪಟ್ಟಿ ಮಾಡುವುದಾದರೆ ಜೋಗದಲ್ಲಿ ಜನರೇಟರ್ ಆನ್ ಆದ ಕೂಡಲೆ ಅರ್ಧ ನಾಡಿನ ಲೈಟ್ ಹಚ್ಚಿಕೊಳ್ಳುವಂತೆ, ಮುಸ್ಲಿಂ ಹೆಣ್ಣು ಮಕ್ಕಳ ಹಿಜಾಬ್ ಪ್ರತಿಭಟನೆ ಉಡುಪಿಯಿಂದ ಬೇರೆ ಕಡೆಗೆ ಹರಡಿಸಿದ್ದು. ನಂತರ ಮುಸ್ಲಿಮರ ಅಂಗಡಿಗೆ ಹೋಗದಂತೆ ಮಾಡಿ ಎಂದದ್ದು, ಮುಸ್ಲಿಂ ಹಣ್ಣಿನ ಅಂಗಡಿ ಧ್ವಂಸ ಮಾಡಿದ್ದು, ಅವರ ಆಜಾನ್ ಶಬ್ದ ನಿಲ್ಲಿಸಲು ಹೋರಾಡಿದ್ದು ಇತ್ಯಾದಿ. ಸುದೈವಕ್ಕೆ ನಲವತ್ತು ಪರಸೆಂಟ್ ಲಂಚ, ಪಿಎಸ್‌ಐ ಹಗರಣ, ಶಿಕ್ಷಣ ಇಲಾಖೆಯಲ್ಲಿನ ಹಗರಣ ಎಲ್ಲವೂ ಮುಸ್ಲಿಮರ ವಿರುದ್ಧದ ಹೋರಾಟಗಳು ಹಿನ್ನಡೆಯಾಗುವಂತೆ ಮಾಡಿದವು. ಇದರ ಜೊತೆಗೆ ಬೆಂಗಳೂರು ಹಿಂದೆಂದೂ ಕಂಡರಿಯದ ಜಲಪ್ರಳಯಕ್ಕೆ ಸಿಕ್ಕಿ ಮುಳುಗಿತು. ಇಂತಹ ಸಮಯದಲ್ಲಿ ಸಾಧನೆಯ ಸಮಾವೇಶ ಮಾಡಿ ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಕೀರಲು ಗಂಟಲಲ್ಲಿ ಕಿರುಚಿದ ಬೊಮ್ಮಯಿ ಮಾತಿಗೆ ಜಾಕ್ಸನ್ ಮತ್ತು ಪ್ರಭುದೇವನೆ ನಾಚಿಕೊಳ್ಳುವಂತೆ ಎಂಟಿಬಿ ಫ್ರೆಂಡ್ಸ್ ಕುಣಿದರಂತಲ್ಲಾ. ಇತ್ತ ಕಾಂಗೈನ ಕಿಡಿಗೇಡಿಗಳು ಬೊಮ್ಮಾಯಿಯ ಮಾತಿಗೆ ಬಿದ್ದುಬಿದ್ದು ನಗುತ್ತ ನಮ್ಮ ಸಿದ್ದರಾಮಯ್ಯನ ತಾಕತ್ತಿನ ಬಗ್ಗೆ ಮಾತಾಡ್ತೀರಾ, ನಿಮಗೆ ತಾಕತ್ತಿದ್ದರೆ ಸಂಪುಟ ವಿಸ್ತರಿಸಿ ಸರಿಯಾಗಿ ನಡೆಯಿರಿ ನೋಡೋಣ ಎಂದವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...