Homeಅಂಕಣಗಳುಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

- Advertisement -
- Advertisement -

ಚಕ್ರತೀರ್ಥನ ಕಾಯಿಲೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಷಿಗೂ ಬಡಿದುಕೊಂಡಿದೆಯಂತಲ್ಲಾ. ಈ ಬಿಜೆಪಿಗಳದ್ದು ಅಂಟು ರೋಗ. ಈ ರೋಗದ ವಿಶೇಷ ಏನೆಂದರೆ ಎಲ್ಲವೂ ಒಂದೇ ತರಹ ಮಾತನಾಡುತ್ತವೆ ಮತ್ತು ಆಡಿದ್ದನ್ನು ಮಾಡಲು ಹೋಗುತ್ತವೆ. ಇದಕ್ಕೆ ನೂರಾರು ಉದಾಹರಣೆಗಳಿವೆ. ಈ ಸಾಹಿತ್ಯ ಪರಿಷತ್ ಜೋಷಿಯವರನ್ನೇ ನೋಡಿ; ಈತ ಆಯ್ಕೆಯಾಗಿ ಬಂದಾಗ ಬಡಿದುಕೊಂಡ ರೋಗ ಯಾವುದೆಂದರೆ ಜನರನ್ನು ಶುದ್ಧ ಕನ್ನಡದಲ್ಲಿ ಮಾತನಾಡುವಂತೆ ಮಾಡಬೇಕೆಂಬುದು; ಶುದ್ಧ ಕನ್ನಡ ಅಂದರೆ ಏನು ಎಂಬುದು ಆತನಿಗೇ ಗೊತ್ತಿರಲಿಲ್ಲ. ಹಲವು ಕನ್ನಡಗಳಲ್ಲಿ ಅದ್ಲಿಸಿದಾಗ ಸುಮ್ಮನಾದರು. ಆದರೆ ಕಾಯಿಲೆ ಜನಕ್ಕೆ ಹಲವು ಕಾಯಿಲೆಗಳು ಅಂಟುವುದು ಸಾಮಾನ್ಯ. ಈಗ ಜೋಷಿಗೆ ಪಂಪ ಮಹಾಕವಿಯ ರಸ್ತೆ ಹೆಸರು ಬದಲಿಸುವ ಕಾಯಿಲೆ ಕಾಣಿಸಿಕೊಂಡಿದೆ. ಅದಕ್ಕಾಗಿ ಆತನ ಅಣ್ಣನಂತಿರುವ ಬೊಮ್ಮಾಯಿಗೆ ಪರಮಿಷನ್ ಕೇಳಿದ್ದಾರಂತೆ! ಇಂಗ್ಲಿಷ್ ಭಾಷೆಯನ್ನ ಮಾತನಾಡುವ ಜನಗಳು ತೊಗಟೆಯನ್ನು ಸೊಂಟಕ್ಕೆ ಸುತ್ತಿಕೊಂಡು ನಾಗರಿಕ ಜಗತ್ತಿನೆಡೆಗೆ ನಡೆಯಲು ಯತ್ನಿಸುತ್ತಿದ್ದಾನೆ ಇಲ್ಲಿ ಕನ್ನಡದ ಆದಿಕವಿ ಪಂಪ ಮಹಾಕಾವ್ಯವನ್ನೆ ಬರೆದಿದ್ದ ಎಂದು ಕುವೆಂಪು ಹೇಳಿದ್ದಾರೆ. ಜೋಷಿ ಆ ಮಹಾಕಾವ್ಯವನ್ನು ಓದಿ ಜೀರ್ಣಿಸಿಕೊಂಡು ಮಾತನಾಡುವುದಬಿಟ್ಟು ರಸ್ತೆ ಹೆಸರನ್ನೇ ಬದಲಿಸಹೊರಟಿರುವುದು ಶುದ್ದ ಮೂರ್ಖತನ. ಪಂಪನ ಮಾರ್ಗದಿಂದಲೇ ಸಾಹಿತ್ಯ ಪರಿಷತ್ ಪ್ರವೇಶ ನಡೆಯುತ್ತ ಬಂದಿದೆ ಎಂಬುದೇ ಜೋಷಿಗೆ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

******

ತೇಜಸ್ವಿ ಸೂರ್ಯ ಎಂಬ ಸಂಸದ ಹೋಟಲಿಗೆ ಹೋಗಿ ದೋಸೆ ತಿನ್ನುವುದನ್ನು ಆಡಿಕೊಂಡ ಕೆಲವರು ದೋಸೆ ಸೂರ್ಯ ಎಂದು ನಾಮಕರಣ ಮಾಡಿದ್ದಾರಲ್ಲಾ. ಇಂತಹ ಹೆಸರನ್ನು ಸಂಪಾದಿಸುವುದು ಸಾಮಾನ್ಯವಲ್ಲ. ಬೊಂಡ ರಮೇಶ ಮುದ್ದೇಗೌಡರು, ಬಿರಿಯಾನಿ ಜಮೀರು, ಉಪ್ಪೆಸಾರಿನ ಪುಟ್ಟಸ್ವಾಮಿ, ತೂತುವಡೆ ಶ್ರೀಕಂಠಯ್ಯ, ಬಾಡೂಟದ ಕೃಷ್ಣಪ್ಪ ಇವೆಲ್ಲ ನಮ್ಮ ರಾಜಕಾರಣದಲ್ಲಿ ಹಿಂದೆ ನಮ್ಮ ನಾಯಕರು ಸಂಪಾದಿಸಿದ ಹೆಸರುಗಳು. ಅದರೊಳಕ್ಕೆ ಈಗ ದೋಸೆ ಸೂರ್ಯ ಸೇರಿಕೊಂಡಿದ್ದಾರೆ ಅಷ್ಟೇ. ಮುಖ್ಯವಾಗಿ ಆತನ ಕಡೆಯವರಿಗೆ ದೋಸೆ ಅಂದರೆ ಪ್ರಾಣ. ಮೂರು ದೋಸೆ ಕೊಟ್ಟರೆ ಈ ಕಡೆ ಬರುತ್ತವೆ ಆರು ದೋಸೆ ಕೊಟ್ಟರೆ ಈ ಕಡೆ ಹೋಗುತ್ತವೆ. ಅದರಲ್ಲೂ ಮಸಾಲದೋಸೆ ಎಂದರೆ ಮುಗಿದೇ ಹೋಯ್ತು, ಮೈ ಮರೆತು ತಿನ್ನುತ್ತವೆ. ಹಾಗೇ ತೇಜಸ್ವಿಸೂರ್ಯ ಇಡೀ ಬೆಂಗಳೂರು ಸೊಂಟಮಟ ಮುಳುಗಿರುವಾಗ ಬಿಸಿಬಿಸಿ ದೋಸೆ ತಿನ್ನುತ್ತ ನೀವು ಬಂದು ತಿನ್ನಿ ಎಂದು ಹೋಟೆಲ್ ಅಡ್ರೆಸ್ ಹೇಳಿದ್ದಕ್ಕೆ ಜನಗಳು ನಖಶಿಖಾಂತ ಕೆರಳಿ ಕ್ಯಾಕರಿಸಿದ್ದಾರೆ. ಸಿಟ್ಟಾಗಿರುವ ಆತನ ಸಂಬಂಧಿ ಭಗವಾನ್ ಎಂಬ ದೋಸೆ ಪ್ರಿಯ, ನಮ್ಮ ಸೂರ್ಯ ಸುಮ್ಮಸುಮ್ಮನೆ ದೋಸೆ ತಿಂದಿಲ್ಲ; ಕೆರೆಯಂತಾಗಿರುವ ಬೆಂಗಳೂರು ನೀರನ್ನು ಹೊರಗೆ ಹಾಕಲು ಏನು ಮಾಡಬೇಕೆಂದು ಯೋಚಿಸುತ್ತ ದೋಸೆ ಅಗಿದಿದ್ದಾರೆ; ಸಾರ್ವಜನಿಕರೊಂದಿಗೆ ಸೇರಲು ದೋಸೆಗಿಂತ ತಿನಿಸೇ ಇಲ್ಲ ಎಂದು ಕೂಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕಕ್ಕೆ ಇದು ಕೆಟ್ಟ ಕಾಲ. ಏಕೆಂದರೆ ಜನಾಭಿಪ್ರಾಯವಿಲ್ಲದ ಮತ್ತು ಶಾಸಕರ ಬೆಂಬಲವೂ ಇಲ್ಲದ ಮುಖ್ಯಮಂತ್ರಿಯೊಬ್ಬರು ಅಕಸ್ಮಾತ್ ವಕ್ಕರಿಸಿ ಅಬ್ಬರಿಸಿದ್ದಾರಂತಲ್ಲಾ. ಈ ಅಬ್ಬರದ ಹೆಸರು ’ಜನೋತ್ಸವ’. ಈ ಸರಕಾರದ ಸಾಧನೆಯ ಪಟ್ಟಿ ಮಾಡುವುದಾದರೆ ಜೋಗದಲ್ಲಿ ಜನರೇಟರ್ ಆನ್ ಆದ ಕೂಡಲೆ ಅರ್ಧ ನಾಡಿನ ಲೈಟ್ ಹಚ್ಚಿಕೊಳ್ಳುವಂತೆ, ಮುಸ್ಲಿಂ ಹೆಣ್ಣು ಮಕ್ಕಳ ಹಿಜಾಬ್ ಪ್ರತಿಭಟನೆ ಉಡುಪಿಯಿಂದ ಬೇರೆ ಕಡೆಗೆ ಹರಡಿಸಿದ್ದು. ನಂತರ ಮುಸ್ಲಿಮರ ಅಂಗಡಿಗೆ ಹೋಗದಂತೆ ಮಾಡಿ ಎಂದದ್ದು, ಮುಸ್ಲಿಂ ಹಣ್ಣಿನ ಅಂಗಡಿ ಧ್ವಂಸ ಮಾಡಿದ್ದು, ಅವರ ಆಜಾನ್ ಶಬ್ದ ನಿಲ್ಲಿಸಲು ಹೋರಾಡಿದ್ದು ಇತ್ಯಾದಿ. ಸುದೈವಕ್ಕೆ ನಲವತ್ತು ಪರಸೆಂಟ್ ಲಂಚ, ಪಿಎಸ್‌ಐ ಹಗರಣ, ಶಿಕ್ಷಣ ಇಲಾಖೆಯಲ್ಲಿನ ಹಗರಣ ಎಲ್ಲವೂ ಮುಸ್ಲಿಮರ ವಿರುದ್ಧದ ಹೋರಾಟಗಳು ಹಿನ್ನಡೆಯಾಗುವಂತೆ ಮಾಡಿದವು. ಇದರ ಜೊತೆಗೆ ಬೆಂಗಳೂರು ಹಿಂದೆಂದೂ ಕಂಡರಿಯದ ಜಲಪ್ರಳಯಕ್ಕೆ ಸಿಕ್ಕಿ ಮುಳುಗಿತು. ಇಂತಹ ಸಮಯದಲ್ಲಿ ಸಾಧನೆಯ ಸಮಾವೇಶ ಮಾಡಿ ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಕೀರಲು ಗಂಟಲಲ್ಲಿ ಕಿರುಚಿದ ಬೊಮ್ಮಯಿ ಮಾತಿಗೆ ಜಾಕ್ಸನ್ ಮತ್ತು ಪ್ರಭುದೇವನೆ ನಾಚಿಕೊಳ್ಳುವಂತೆ ಎಂಟಿಬಿ ಫ್ರೆಂಡ್ಸ್ ಕುಣಿದರಂತಲ್ಲಾ. ಇತ್ತ ಕಾಂಗೈನ ಕಿಡಿಗೇಡಿಗಳು ಬೊಮ್ಮಾಯಿಯ ಮಾತಿಗೆ ಬಿದ್ದುಬಿದ್ದು ನಗುತ್ತ ನಮ್ಮ ಸಿದ್ದರಾಮಯ್ಯನ ತಾಕತ್ತಿನ ಬಗ್ಗೆ ಮಾತಾಡ್ತೀರಾ, ನಿಮಗೆ ತಾಕತ್ತಿದ್ದರೆ ಸಂಪುಟ ವಿಸ್ತರಿಸಿ ಸರಿಯಾಗಿ ನಡೆಯಿರಿ ನೋಡೋಣ ಎಂದವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....