Homeಅಂಕಣಗಳುದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

ದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

- Advertisement -
- Advertisement -

ಈ ಸರಕಾರಕ್ಕೆ ನರಬಲಿ ಬೇಕಿದೆ ಎಂದು ದೇವನೂರ ಮಹಾದೇವ ಭವಿಷ್ಯ ನುಡಿದಿದ್ದಾರಲ್ಲಾ. ಸಾಹಿತ್ಯ ಲೋಕ ಕಂಡ ಅಪರೂಪದ ಪ್ರತಿಭೆ ದೇವನೂರ. ಶತಮಾನಗಳಿಂದ ತುಳಿದವರು ಮತ್ತು ತುಳಿಸಿಕೊಂಡವರ ಮನಸ್ಥಿತಿಯನ್ನು ಬಿಚ್ಚಿ ಹರವಿ, ಇದೇ ನೋಡಿ ನಿಮ್ಮ ಹಣೆಬರಹವೆಂದು ಎತ್ತರದಲ್ಲಿ ನಿಂತು ತೋರಿದವರು.
ಅದೆಲ್ಲಕ್ಕಿಂತ ಮುಖ್ಯವಾಗಿ ಹೊಲೆ ಮಾದಿಗರು ಎಂದಕೂಡಲೇ ಸೋ ಕಾಲ್ಡ್ ಮೇಲು ಜಾತಿಗಳೆನಿಸಿಕೊಂಡವರಲ್ಲಿ ಮೂಡುವ ತಿರಸ್ಕಾರವನ್ನು ಪತ್ತೆಹಚ್ಚಿ ಹೇಳಿದವರು. ಮೇಲು ಜನರ ಈ ಕಾಯಿಲೆ ಇನ್ನು ಗುಣವಾಗಿಲ್ಲದ ಈ ಸಂದರ್ಭದಲ್ಲಿ, ಮುಸ್ಲಿಮ್ ಎಂದ ಕೂಡಲೇ ಎಲ್ಲರಿಗೂ ಅಸಹನೆ ಮೂಡುವಂತೆ ಶ್ರಮಿಸುತ್ತಿರುವವರ ವಿರುದ್ಧ ಇದೇ ಮಹಾದೇವ ತಿರುಗಿ ಬಿದಿದ್ದಾರಲ್ಲಾ. ಏಕೆಂದರೆ ಮುಸ್ಲಿಮರನ್ನ ಮುರಿದು ಮೂಟೆಕಟ್ಟಿ ಮಡಗಿದ ನಂತರ, ರಾಮಸೇನೆ ಎಂಬ ವಾನರರ ಸಮರ ದಲಿತರ ವಿರುದ್ಧ ಆರಂಭವಾಗುವುದರಲ್ಲಿ ಯಾವ ಸಂಶಯವೂ ಇಲ್ಲ. ಏಕೆಂದರೆ ಪ್ರಪಂಚದ ಸಂವಿಧಾನಗಳನ್ನೆಲ್ಲಾ ಓದಿ ಭಾರತಕ್ಕೆಂದು ಅಪರೂಪದ ಸಂವಿಧಾನ ನೀಡಿದ ಅಂಬೇಡ್ಕರ್ ಬಗ್ಗೆ ಪುರೋಹಿತಶಾಹಿ ರಾಷ್ಟ್ರೋತ್ಥಾನ ಸಾಹಿತ್ಯದಲ್ಲಿ ನೈಜವನ್ನು ಮರೆಮಾಚಿ ಅವರಿಗೆ ಬೇಕಾದಂತೆ ಬರೆದುಕೊಂಡಿದ್ದಾರೆ. ಅಂಬೇಡ್ಕರ್ ಘನತೆ ಕಲ್ಪಿಸಿಕೊಟ್ಟ ಜನರ ಮೇಲೆ ಬೀಳಲು ಇಷ್ಟು ಸಾಕಲ್ಲವೆ ಸಂಘಿಗಳಿಗೆ. ಥೂತ್ತೇರಿ.

*****

ಮಹಿಷ ಮಂಡಲದಲ್ಲಿ ನಿಂತು ಬಿಜೆಪಿಯವರ ಮನಸ್ಥಿತಿಯನ್ನ ಅನಾವರಣ ಮಾಡಿದ ದೇವನೂರ ನಡವಳಿಕೆ ಕರ್ನಾಟಕದ ಇತರ ಸಾಹಿತಿಗಳಿಗೆ ಸ್ಪೂರ್ತಿಯುಂಟು ಮಾಡಬೇಕಿತ್ತು. ಏಕೆಂದರೆ ಬರೆಯುವ ಸಾಹಿತಿಗಳು ಏನು ಬರೆಯಬೇಕೆಂದು ಚಿಂತಿಸುವಂತಾಗಿದೆ. ತನ್ನ ಯಾವ ಪದ ಏನು ಅರ್ಥಕೊಡಬಹುದು, ಯಾವ ವಾಕ್ಯದಿಂದ ಯಾರು ಕೆರಳಬಹುದು, ನನ್ನ ಪುಸ್ತಕದಿಂದ ಯಾರಾದರೂ ರೊಚ್ಚಿಗೇಳುವರೆ ಎಂಬ ಗೊಂದಲಕ್ಕೆ ಸಿಕ್ಕಿಬಿದ್ದಿರುವಾಗ ಈ ಸಾಹಿತಿಗಳು ದೇವನೂರರಂತೆ ಬೀದಿಗೆ ಬರಬೇಕಿತ್ತು. ಒಂದು ಪ್ರೆಸ್‌ಮಿಟ್ ಮಾಡಬಹುದಿತ್ತು. ತನ್ನ ಮನೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದುಕೊಂಡು ಹೋಗಿ ಸರ್ವಜನಾಂಗದ ಮನವಿ ಕೊಡಬಹುದಿತ್ತು. ಜನರಿಗಾಗಿ ಬರೆಯುವ ಇವರು ಜನರಿಗೆ ತೊಂದರೆಯಾದಾಗ ಸುಮ್ಮನಿರಬಾರದಿತ್ತು ಎಂದು ಕರ್ನಾಟಕದ ಒಳ್ಳೆಯ ಮನಸ್ಸುಗಳು ಆಲೋಚಿಸುತ್ತಿರುವಾಗಲೇ ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿಪಡೆದಿರುವ ಧಾರವಾಡದ ನುಗ್ಗಿಕೇರಿಗೆ ನುಗ್ಗಿದ ವಾನರ ಸೇನೆ ನಬೀಸಾಬಿಯ ಕಲ್ಲಂಗಡಿ ಹಣ್ಣನ್ನು ಕಿತ್ತು ತಿಂದಿವೆಯಂತಲ್ಲಾ. ಥೂತ್ತೇರಿ.

ರಣಬಿಸಿಲ ದಾಹ ನೀಗಿಸಲೆಂದು ರೈತ ಬೆಳೆವ ಬೇಸಿಗೆ ಬೆಳೆ ಕಲ್ಲಂಗಡಿ ಹಣ್ಣು. ಬೆಳೆದವನು ಮಾರುವವನನ್ನ ಕಾಯುತ್ತಾನೆ, ಮಾರುವವನು ಕೊಂಡು ತಿನ್ನುವ ಗಿರಾಕಿಗಾಗಿ ಕಾಯುತ್ತಾನೆ, ಇದು ಒಬ್ಬರನ್ನೊಬ್ಬರು ಅವಲಂಬಿಸಿದ ಬದುಕು. ಇಂತಲ್ಲಿಗೆ ನುಗ್ಗಿದ ವಾನರ ಸೇನೆಯ ಇತಿಹಾಸ ಕೆದಕಿದರೆ ಅವು ಎಂದೂ ಭೂಮಿ ನೆಚ್ಚಿ ಬದುಕಿದವಲ್ಲ. ಭೂಮಿ ನೆಚ್ಚಿದವರನ್ನ ಗೌರವಿಸಿದ್ದು ಈ ವಾನರ ಸೇನೆಯ ಸಂಸ್ಕೃತಿಯಲ್ಲೇ ಇಲ್ಲ. ಅದು ಭೂಮಿ ನೆಚ್ಚಿ ಬದುಕಿದವನನ್ನ ಹೊಲ ಉಳುವ ಎತ್ತಿನಂತೆ ನೋಡುತ್ತಾ ಬಂದಿದೆ. ಇದನ್ನು ಕಂಡು ಕುವೆಂಪು ಉಳುವಾ ಯೋಗಿಯ ನೋಡಲ್ಲಿ ಎಂದು ತೋರಿಸಿದರು. ಅಲ್ಲಿಯವರೆಗೂ ಎತ್ತಿನ ಹಿಂದೆ ಎತ್ತಾಗಿ ತಿರುಗುವವನನ್ನು ಎತ್ತೆಂದೇ ಪರಿಗಣಿಸಿದ್ದ ಭೂಸುರೋತ್ತಮರು, ಅವನನ್ನ ಯೋಗಿ ಎಂದದ್ದು ಎಷ್ಟು ಸರಿ ಎಂದು ಕೊಂಕು ನುಡಿದಿದ್ದವು. ಸೂರ್ಯನಿಗಿಂತಲೂ ಮೊದಲೇ ತನ್ನ ಹೊಲದಲ್ಲಿ ಆರೂಡಿದ ರೈತ ಹುಕ್ಕೆ ಗೆರೆಯಲ್ಲೇ ನೇಗಿಲು ಬಿಡಬೇಕು. ಅತ್ತ ಇತ್ತ ತಿರುಗಿದರೆ ಮೊದಲ ಸೀಳಿಗೇ ನುಗ್ಗುತ್ತದೆ. ಅಂದರೆ ಉತ್ತ ಪಾತಿಯನ್ನೆ ಉಳಬೇಕಾಗುತ್ತದೆ. ಆದ್ದರಿಂದ ತಲೆ ಎತ್ತದ ರೈತ, ಹೆಂಡತಿ ರೊಟ್ಟಿ ತಂದಾಗಲೇ ತಲೆ ಎತ್ತಿ ನೋಡುತ್ತಿದ್ದುದು. ಯೋಗಿಯ ಧ್ಯಾನವಿಲ್ಲದೆ ಹೊಲ ಉಳಲಾಗುವುದಿಲ್ಲ. ಈ ಸಂಸ್ಕೃತಿಯೇ ಗೊತ್ತಿಲ್ಲದವುಗಳಿಗೆ ಭೂಮಿಯಿಂದ ಬೆಳೆದ ದವಸ ಧಾನ್ಯ ಹಣ್ಣುಗಳ ಬಗ್ಗೆ ಗೌರವವೇ ಇರುವುದಿಲ್ಲ. ಇಂತವರೇ ನಬೀಸಾಬ್ ಅಂಗಡಿಗೆ ದಾಳಿಯಿಟ್ಟವಂತಲ್ಲಾ. ಥೂತ್ತೇರಿ.

*****

ಕರ್ನಾಟಕದಲ್ಲೀಗ ರಾಜನ ಭಯ, ರಾಜನಿಲ್ಲದ ಭಯ ಎರಡೂ ಮನಸ್ಥಿತಿ ಅಮರಿಕೊಂಡಿವೆಯಂತಲ್ಲಾ. ಆಗೊಮ್ಮೆ ಗುಜರಾತಿನಲ್ಲಿ ಈ ಸ್ಥಿತಿಯುಂಟಾಗಿತ್ತು. ಅಲ್ಲಿ ಮೋದಿ ಎಂದಕೂಡಲೇ ಮುಸ್ಲಿಮರು ಬೆಚ್ಚಿ ಬೀಳುತ್ತಿದ್ದರು. ಮುಖ್ಯಮಂತ್ರಿಯ ಹುಕುಂನಂತೆಯೇ ವಿಶ್ವಹಿಂದುಗಳು ಭಜರಂಗಿಗಳು ರಾಮಸೇನೆ ವಾನರಸೇನೆಯೆಲ್ಲಾ ಸೇರಿಕೊಂಡು ಮೂರುದಿನ ಮುಸ್ಲಿಮರನ್ನ ಹುರಿದು ಮುಕ್ಕಿದ್ದರು. ಇದೀಗ ಕರ್ನಾಟಕದಲ್ಲಿ ಅಂತಹ ತಯಾರಿಯೊಂದು ನಡೆಯುತ್ತಿದೆಯಂತಲ್ಲಾ. ಪ್ರಕ್ಷುಬ್ದವಾದ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಮಿಂಚಿನ ಕಾರ್ಯಾಚರಣೆ ನಡೆಸುವುದರ ಬದಲು ನೊಂದವರು ಬಂದು ದೂರು ಕೊಡುವುದನ್ನೆ ಕಾಯುತ್ತಿದ್ದಾರಂತಲ್ಲಾ. ಅದೇ ಬಿಜೆಪಿ ಜನರಿಗೆ ತೊಂದರೆ ಕೊಟ್ಟವರನ್ನ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವ ಪೊಲೀಸರು ಕರ್ನಾಟಕ ಈವರೆಗೆ ಕಾಣದಿದ್ದ ಹೋಂ ಮಿನಿಸ್ಟರ್ ಏನು ಹೇಳುತ್ತಿದ್ದಾರೆಂದು ಕಾಯುತ್ತಿದ್ದಾರಂತಲ್ಲಾ. ಹೋಂ ಮಿನಿಸ್ಟರ್ ಸಾಧನೆ ಯಾವುದೆಂದರೆ ಭದ್ರಾವತಿಯ ಕಾಗದ ಕಾರ್ಖಾನೆ ಉದ್ಧಾರ ಮಾಡಪ್ಪ ಎಂದು ಅಧ್ಯಕ್ಷನನ್ನಾಗಿ ಕೂರಿಸಿದರೆ ವಾರೊಪ್ಪತ್ತಿನಲ್ಲಿ ಅದನ್ನು ಹಾಳು ಮಾಡಿದ್ದೂ ಅಲ್ಲದೆ ಅದರ ಬಾಗಿಲಿಗೆ ಬೀಗ ಜಡಿದು ಅರಗದ ಕಡೆ ಹೋದದ್ದು. ಇಂತಹ ವ್ಯಕ್ತಿಯನ್ನು ಕರ್ನಾಟಕವನ್ನ ಹದ್ದುಬಸ್ತಿನಲ್ಲಿಡಬೇಕಾದ ಜವಾಬ್ದಾರಿ ಹೊರೆಸಿ ಕೂರಿಸಿದರೆ ಏನಾಗಬೇಕೋ ಅದೇ ಆಗುತ್ತಿದೆ. ಅಂದರೆ ಕೇಶವ ಕೃಪದ ಸೂಚನೆಗಳು ಜಾರಿಯಾಗುತ್ತಿವೆಯಂತಲ್ಲಾ. ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ:  ಸಿದ್ದರಾಮಯ್ಯ ರಾವಣನಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...