Homeಅಂಕಣಗಳುದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

ದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

- Advertisement -
- Advertisement -

ಈ ಸರಕಾರಕ್ಕೆ ನರಬಲಿ ಬೇಕಿದೆ ಎಂದು ದೇವನೂರ ಮಹಾದೇವ ಭವಿಷ್ಯ ನುಡಿದಿದ್ದಾರಲ್ಲಾ. ಸಾಹಿತ್ಯ ಲೋಕ ಕಂಡ ಅಪರೂಪದ ಪ್ರತಿಭೆ ದೇವನೂರ. ಶತಮಾನಗಳಿಂದ ತುಳಿದವರು ಮತ್ತು ತುಳಿಸಿಕೊಂಡವರ ಮನಸ್ಥಿತಿಯನ್ನು ಬಿಚ್ಚಿ ಹರವಿ, ಇದೇ ನೋಡಿ ನಿಮ್ಮ ಹಣೆಬರಹವೆಂದು ಎತ್ತರದಲ್ಲಿ ನಿಂತು ತೋರಿದವರು.
ಅದೆಲ್ಲಕ್ಕಿಂತ ಮುಖ್ಯವಾಗಿ ಹೊಲೆ ಮಾದಿಗರು ಎಂದಕೂಡಲೇ ಸೋ ಕಾಲ್ಡ್ ಮೇಲು ಜಾತಿಗಳೆನಿಸಿಕೊಂಡವರಲ್ಲಿ ಮೂಡುವ ತಿರಸ್ಕಾರವನ್ನು ಪತ್ತೆಹಚ್ಚಿ ಹೇಳಿದವರು. ಮೇಲು ಜನರ ಈ ಕಾಯಿಲೆ ಇನ್ನು ಗುಣವಾಗಿಲ್ಲದ ಈ ಸಂದರ್ಭದಲ್ಲಿ, ಮುಸ್ಲಿಮ್ ಎಂದ ಕೂಡಲೇ ಎಲ್ಲರಿಗೂ ಅಸಹನೆ ಮೂಡುವಂತೆ ಶ್ರಮಿಸುತ್ತಿರುವವರ ವಿರುದ್ಧ ಇದೇ ಮಹಾದೇವ ತಿರುಗಿ ಬಿದಿದ್ದಾರಲ್ಲಾ. ಏಕೆಂದರೆ ಮುಸ್ಲಿಮರನ್ನ ಮುರಿದು ಮೂಟೆಕಟ್ಟಿ ಮಡಗಿದ ನಂತರ, ರಾಮಸೇನೆ ಎಂಬ ವಾನರರ ಸಮರ ದಲಿತರ ವಿರುದ್ಧ ಆರಂಭವಾಗುವುದರಲ್ಲಿ ಯಾವ ಸಂಶಯವೂ ಇಲ್ಲ. ಏಕೆಂದರೆ ಪ್ರಪಂಚದ ಸಂವಿಧಾನಗಳನ್ನೆಲ್ಲಾ ಓದಿ ಭಾರತಕ್ಕೆಂದು ಅಪರೂಪದ ಸಂವಿಧಾನ ನೀಡಿದ ಅಂಬೇಡ್ಕರ್ ಬಗ್ಗೆ ಪುರೋಹಿತಶಾಹಿ ರಾಷ್ಟ್ರೋತ್ಥಾನ ಸಾಹಿತ್ಯದಲ್ಲಿ ನೈಜವನ್ನು ಮರೆಮಾಚಿ ಅವರಿಗೆ ಬೇಕಾದಂತೆ ಬರೆದುಕೊಂಡಿದ್ದಾರೆ. ಅಂಬೇಡ್ಕರ್ ಘನತೆ ಕಲ್ಪಿಸಿಕೊಟ್ಟ ಜನರ ಮೇಲೆ ಬೀಳಲು ಇಷ್ಟು ಸಾಕಲ್ಲವೆ ಸಂಘಿಗಳಿಗೆ. ಥೂತ್ತೇರಿ.

*****

ಮಹಿಷ ಮಂಡಲದಲ್ಲಿ ನಿಂತು ಬಿಜೆಪಿಯವರ ಮನಸ್ಥಿತಿಯನ್ನ ಅನಾವರಣ ಮಾಡಿದ ದೇವನೂರ ನಡವಳಿಕೆ ಕರ್ನಾಟಕದ ಇತರ ಸಾಹಿತಿಗಳಿಗೆ ಸ್ಪೂರ್ತಿಯುಂಟು ಮಾಡಬೇಕಿತ್ತು. ಏಕೆಂದರೆ ಬರೆಯುವ ಸಾಹಿತಿಗಳು ಏನು ಬರೆಯಬೇಕೆಂದು ಚಿಂತಿಸುವಂತಾಗಿದೆ. ತನ್ನ ಯಾವ ಪದ ಏನು ಅರ್ಥಕೊಡಬಹುದು, ಯಾವ ವಾಕ್ಯದಿಂದ ಯಾರು ಕೆರಳಬಹುದು, ನನ್ನ ಪುಸ್ತಕದಿಂದ ಯಾರಾದರೂ ರೊಚ್ಚಿಗೇಳುವರೆ ಎಂಬ ಗೊಂದಲಕ್ಕೆ ಸಿಕ್ಕಿಬಿದ್ದಿರುವಾಗ ಈ ಸಾಹಿತಿಗಳು ದೇವನೂರರಂತೆ ಬೀದಿಗೆ ಬರಬೇಕಿತ್ತು. ಒಂದು ಪ್ರೆಸ್‌ಮಿಟ್ ಮಾಡಬಹುದಿತ್ತು. ತನ್ನ ಮನೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದುಕೊಂಡು ಹೋಗಿ ಸರ್ವಜನಾಂಗದ ಮನವಿ ಕೊಡಬಹುದಿತ್ತು. ಜನರಿಗಾಗಿ ಬರೆಯುವ ಇವರು ಜನರಿಗೆ ತೊಂದರೆಯಾದಾಗ ಸುಮ್ಮನಿರಬಾರದಿತ್ತು ಎಂದು ಕರ್ನಾಟಕದ ಒಳ್ಳೆಯ ಮನಸ್ಸುಗಳು ಆಲೋಚಿಸುತ್ತಿರುವಾಗಲೇ ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿಪಡೆದಿರುವ ಧಾರವಾಡದ ನುಗ್ಗಿಕೇರಿಗೆ ನುಗ್ಗಿದ ವಾನರ ಸೇನೆ ನಬೀಸಾಬಿಯ ಕಲ್ಲಂಗಡಿ ಹಣ್ಣನ್ನು ಕಿತ್ತು ತಿಂದಿವೆಯಂತಲ್ಲಾ. ಥೂತ್ತೇರಿ.

ರಣಬಿಸಿಲ ದಾಹ ನೀಗಿಸಲೆಂದು ರೈತ ಬೆಳೆವ ಬೇಸಿಗೆ ಬೆಳೆ ಕಲ್ಲಂಗಡಿ ಹಣ್ಣು. ಬೆಳೆದವನು ಮಾರುವವನನ್ನ ಕಾಯುತ್ತಾನೆ, ಮಾರುವವನು ಕೊಂಡು ತಿನ್ನುವ ಗಿರಾಕಿಗಾಗಿ ಕಾಯುತ್ತಾನೆ, ಇದು ಒಬ್ಬರನ್ನೊಬ್ಬರು ಅವಲಂಬಿಸಿದ ಬದುಕು. ಇಂತಲ್ಲಿಗೆ ನುಗ್ಗಿದ ವಾನರ ಸೇನೆಯ ಇತಿಹಾಸ ಕೆದಕಿದರೆ ಅವು ಎಂದೂ ಭೂಮಿ ನೆಚ್ಚಿ ಬದುಕಿದವಲ್ಲ. ಭೂಮಿ ನೆಚ್ಚಿದವರನ್ನ ಗೌರವಿಸಿದ್ದು ಈ ವಾನರ ಸೇನೆಯ ಸಂಸ್ಕೃತಿಯಲ್ಲೇ ಇಲ್ಲ. ಅದು ಭೂಮಿ ನೆಚ್ಚಿ ಬದುಕಿದವನನ್ನ ಹೊಲ ಉಳುವ ಎತ್ತಿನಂತೆ ನೋಡುತ್ತಾ ಬಂದಿದೆ. ಇದನ್ನು ಕಂಡು ಕುವೆಂಪು ಉಳುವಾ ಯೋಗಿಯ ನೋಡಲ್ಲಿ ಎಂದು ತೋರಿಸಿದರು. ಅಲ್ಲಿಯವರೆಗೂ ಎತ್ತಿನ ಹಿಂದೆ ಎತ್ತಾಗಿ ತಿರುಗುವವನನ್ನು ಎತ್ತೆಂದೇ ಪರಿಗಣಿಸಿದ್ದ ಭೂಸುರೋತ್ತಮರು, ಅವನನ್ನ ಯೋಗಿ ಎಂದದ್ದು ಎಷ್ಟು ಸರಿ ಎಂದು ಕೊಂಕು ನುಡಿದಿದ್ದವು. ಸೂರ್ಯನಿಗಿಂತಲೂ ಮೊದಲೇ ತನ್ನ ಹೊಲದಲ್ಲಿ ಆರೂಡಿದ ರೈತ ಹುಕ್ಕೆ ಗೆರೆಯಲ್ಲೇ ನೇಗಿಲು ಬಿಡಬೇಕು. ಅತ್ತ ಇತ್ತ ತಿರುಗಿದರೆ ಮೊದಲ ಸೀಳಿಗೇ ನುಗ್ಗುತ್ತದೆ. ಅಂದರೆ ಉತ್ತ ಪಾತಿಯನ್ನೆ ಉಳಬೇಕಾಗುತ್ತದೆ. ಆದ್ದರಿಂದ ತಲೆ ಎತ್ತದ ರೈತ, ಹೆಂಡತಿ ರೊಟ್ಟಿ ತಂದಾಗಲೇ ತಲೆ ಎತ್ತಿ ನೋಡುತ್ತಿದ್ದುದು. ಯೋಗಿಯ ಧ್ಯಾನವಿಲ್ಲದೆ ಹೊಲ ಉಳಲಾಗುವುದಿಲ್ಲ. ಈ ಸಂಸ್ಕೃತಿಯೇ ಗೊತ್ತಿಲ್ಲದವುಗಳಿಗೆ ಭೂಮಿಯಿಂದ ಬೆಳೆದ ದವಸ ಧಾನ್ಯ ಹಣ್ಣುಗಳ ಬಗ್ಗೆ ಗೌರವವೇ ಇರುವುದಿಲ್ಲ. ಇಂತವರೇ ನಬೀಸಾಬ್ ಅಂಗಡಿಗೆ ದಾಳಿಯಿಟ್ಟವಂತಲ್ಲಾ. ಥೂತ್ತೇರಿ.

*****

ಕರ್ನಾಟಕದಲ್ಲೀಗ ರಾಜನ ಭಯ, ರಾಜನಿಲ್ಲದ ಭಯ ಎರಡೂ ಮನಸ್ಥಿತಿ ಅಮರಿಕೊಂಡಿವೆಯಂತಲ್ಲಾ. ಆಗೊಮ್ಮೆ ಗುಜರಾತಿನಲ್ಲಿ ಈ ಸ್ಥಿತಿಯುಂಟಾಗಿತ್ತು. ಅಲ್ಲಿ ಮೋದಿ ಎಂದಕೂಡಲೇ ಮುಸ್ಲಿಮರು ಬೆಚ್ಚಿ ಬೀಳುತ್ತಿದ್ದರು. ಮುಖ್ಯಮಂತ್ರಿಯ ಹುಕುಂನಂತೆಯೇ ವಿಶ್ವಹಿಂದುಗಳು ಭಜರಂಗಿಗಳು ರಾಮಸೇನೆ ವಾನರಸೇನೆಯೆಲ್ಲಾ ಸೇರಿಕೊಂಡು ಮೂರುದಿನ ಮುಸ್ಲಿಮರನ್ನ ಹುರಿದು ಮುಕ್ಕಿದ್ದರು. ಇದೀಗ ಕರ್ನಾಟಕದಲ್ಲಿ ಅಂತಹ ತಯಾರಿಯೊಂದು ನಡೆಯುತ್ತಿದೆಯಂತಲ್ಲಾ. ಪ್ರಕ್ಷುಬ್ದವಾದ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಮಿಂಚಿನ ಕಾರ್ಯಾಚರಣೆ ನಡೆಸುವುದರ ಬದಲು ನೊಂದವರು ಬಂದು ದೂರು ಕೊಡುವುದನ್ನೆ ಕಾಯುತ್ತಿದ್ದಾರಂತಲ್ಲಾ. ಅದೇ ಬಿಜೆಪಿ ಜನರಿಗೆ ತೊಂದರೆ ಕೊಟ್ಟವರನ್ನ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವ ಪೊಲೀಸರು ಕರ್ನಾಟಕ ಈವರೆಗೆ ಕಾಣದಿದ್ದ ಹೋಂ ಮಿನಿಸ್ಟರ್ ಏನು ಹೇಳುತ್ತಿದ್ದಾರೆಂದು ಕಾಯುತ್ತಿದ್ದಾರಂತಲ್ಲಾ. ಹೋಂ ಮಿನಿಸ್ಟರ್ ಸಾಧನೆ ಯಾವುದೆಂದರೆ ಭದ್ರಾವತಿಯ ಕಾಗದ ಕಾರ್ಖಾನೆ ಉದ್ಧಾರ ಮಾಡಪ್ಪ ಎಂದು ಅಧ್ಯಕ್ಷನನ್ನಾಗಿ ಕೂರಿಸಿದರೆ ವಾರೊಪ್ಪತ್ತಿನಲ್ಲಿ ಅದನ್ನು ಹಾಳು ಮಾಡಿದ್ದೂ ಅಲ್ಲದೆ ಅದರ ಬಾಗಿಲಿಗೆ ಬೀಗ ಜಡಿದು ಅರಗದ ಕಡೆ ಹೋದದ್ದು. ಇಂತಹ ವ್ಯಕ್ತಿಯನ್ನು ಕರ್ನಾಟಕವನ್ನ ಹದ್ದುಬಸ್ತಿನಲ್ಲಿಡಬೇಕಾದ ಜವಾಬ್ದಾರಿ ಹೊರೆಸಿ ಕೂರಿಸಿದರೆ ಏನಾಗಬೇಕೋ ಅದೇ ಆಗುತ್ತಿದೆ. ಅಂದರೆ ಕೇಶವ ಕೃಪದ ಸೂಚನೆಗಳು ಜಾರಿಯಾಗುತ್ತಿವೆಯಂತಲ್ಲಾ. ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ:  ಸಿದ್ದರಾಮಯ್ಯ ರಾವಣನಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....