Homeಅಂಕಣಗಳುದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

ದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

- Advertisement -
- Advertisement -

ಈ ಸರಕಾರಕ್ಕೆ ನರಬಲಿ ಬೇಕಿದೆ ಎಂದು ದೇವನೂರ ಮಹಾದೇವ ಭವಿಷ್ಯ ನುಡಿದಿದ್ದಾರಲ್ಲಾ. ಸಾಹಿತ್ಯ ಲೋಕ ಕಂಡ ಅಪರೂಪದ ಪ್ರತಿಭೆ ದೇವನೂರ. ಶತಮಾನಗಳಿಂದ ತುಳಿದವರು ಮತ್ತು ತುಳಿಸಿಕೊಂಡವರ ಮನಸ್ಥಿತಿಯನ್ನು ಬಿಚ್ಚಿ ಹರವಿ, ಇದೇ ನೋಡಿ ನಿಮ್ಮ ಹಣೆಬರಹವೆಂದು ಎತ್ತರದಲ್ಲಿ ನಿಂತು ತೋರಿದವರು.
ಅದೆಲ್ಲಕ್ಕಿಂತ ಮುಖ್ಯವಾಗಿ ಹೊಲೆ ಮಾದಿಗರು ಎಂದಕೂಡಲೇ ಸೋ ಕಾಲ್ಡ್ ಮೇಲು ಜಾತಿಗಳೆನಿಸಿಕೊಂಡವರಲ್ಲಿ ಮೂಡುವ ತಿರಸ್ಕಾರವನ್ನು ಪತ್ತೆಹಚ್ಚಿ ಹೇಳಿದವರು. ಮೇಲು ಜನರ ಈ ಕಾಯಿಲೆ ಇನ್ನು ಗುಣವಾಗಿಲ್ಲದ ಈ ಸಂದರ್ಭದಲ್ಲಿ, ಮುಸ್ಲಿಮ್ ಎಂದ ಕೂಡಲೇ ಎಲ್ಲರಿಗೂ ಅಸಹನೆ ಮೂಡುವಂತೆ ಶ್ರಮಿಸುತ್ತಿರುವವರ ವಿರುದ್ಧ ಇದೇ ಮಹಾದೇವ ತಿರುಗಿ ಬಿದಿದ್ದಾರಲ್ಲಾ. ಏಕೆಂದರೆ ಮುಸ್ಲಿಮರನ್ನ ಮುರಿದು ಮೂಟೆಕಟ್ಟಿ ಮಡಗಿದ ನಂತರ, ರಾಮಸೇನೆ ಎಂಬ ವಾನರರ ಸಮರ ದಲಿತರ ವಿರುದ್ಧ ಆರಂಭವಾಗುವುದರಲ್ಲಿ ಯಾವ ಸಂಶಯವೂ ಇಲ್ಲ. ಏಕೆಂದರೆ ಪ್ರಪಂಚದ ಸಂವಿಧಾನಗಳನ್ನೆಲ್ಲಾ ಓದಿ ಭಾರತಕ್ಕೆಂದು ಅಪರೂಪದ ಸಂವಿಧಾನ ನೀಡಿದ ಅಂಬೇಡ್ಕರ್ ಬಗ್ಗೆ ಪುರೋಹಿತಶಾಹಿ ರಾಷ್ಟ್ರೋತ್ಥಾನ ಸಾಹಿತ್ಯದಲ್ಲಿ ನೈಜವನ್ನು ಮರೆಮಾಚಿ ಅವರಿಗೆ ಬೇಕಾದಂತೆ ಬರೆದುಕೊಂಡಿದ್ದಾರೆ. ಅಂಬೇಡ್ಕರ್ ಘನತೆ ಕಲ್ಪಿಸಿಕೊಟ್ಟ ಜನರ ಮೇಲೆ ಬೀಳಲು ಇಷ್ಟು ಸಾಕಲ್ಲವೆ ಸಂಘಿಗಳಿಗೆ. ಥೂತ್ತೇರಿ.

*****

ಮಹಿಷ ಮಂಡಲದಲ್ಲಿ ನಿಂತು ಬಿಜೆಪಿಯವರ ಮನಸ್ಥಿತಿಯನ್ನ ಅನಾವರಣ ಮಾಡಿದ ದೇವನೂರ ನಡವಳಿಕೆ ಕರ್ನಾಟಕದ ಇತರ ಸಾಹಿತಿಗಳಿಗೆ ಸ್ಪೂರ್ತಿಯುಂಟು ಮಾಡಬೇಕಿತ್ತು. ಏಕೆಂದರೆ ಬರೆಯುವ ಸಾಹಿತಿಗಳು ಏನು ಬರೆಯಬೇಕೆಂದು ಚಿಂತಿಸುವಂತಾಗಿದೆ. ತನ್ನ ಯಾವ ಪದ ಏನು ಅರ್ಥಕೊಡಬಹುದು, ಯಾವ ವಾಕ್ಯದಿಂದ ಯಾರು ಕೆರಳಬಹುದು, ನನ್ನ ಪುಸ್ತಕದಿಂದ ಯಾರಾದರೂ ರೊಚ್ಚಿಗೇಳುವರೆ ಎಂಬ ಗೊಂದಲಕ್ಕೆ ಸಿಕ್ಕಿಬಿದ್ದಿರುವಾಗ ಈ ಸಾಹಿತಿಗಳು ದೇವನೂರರಂತೆ ಬೀದಿಗೆ ಬರಬೇಕಿತ್ತು. ಒಂದು ಪ್ರೆಸ್‌ಮಿಟ್ ಮಾಡಬಹುದಿತ್ತು. ತನ್ನ ಮನೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದುಕೊಂಡು ಹೋಗಿ ಸರ್ವಜನಾಂಗದ ಮನವಿ ಕೊಡಬಹುದಿತ್ತು. ಜನರಿಗಾಗಿ ಬರೆಯುವ ಇವರು ಜನರಿಗೆ ತೊಂದರೆಯಾದಾಗ ಸುಮ್ಮನಿರಬಾರದಿತ್ತು ಎಂದು ಕರ್ನಾಟಕದ ಒಳ್ಳೆಯ ಮನಸ್ಸುಗಳು ಆಲೋಚಿಸುತ್ತಿರುವಾಗಲೇ ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿಪಡೆದಿರುವ ಧಾರವಾಡದ ನುಗ್ಗಿಕೇರಿಗೆ ನುಗ್ಗಿದ ವಾನರ ಸೇನೆ ನಬೀಸಾಬಿಯ ಕಲ್ಲಂಗಡಿ ಹಣ್ಣನ್ನು ಕಿತ್ತು ತಿಂದಿವೆಯಂತಲ್ಲಾ. ಥೂತ್ತೇರಿ.

ರಣಬಿಸಿಲ ದಾಹ ನೀಗಿಸಲೆಂದು ರೈತ ಬೆಳೆವ ಬೇಸಿಗೆ ಬೆಳೆ ಕಲ್ಲಂಗಡಿ ಹಣ್ಣು. ಬೆಳೆದವನು ಮಾರುವವನನ್ನ ಕಾಯುತ್ತಾನೆ, ಮಾರುವವನು ಕೊಂಡು ತಿನ್ನುವ ಗಿರಾಕಿಗಾಗಿ ಕಾಯುತ್ತಾನೆ, ಇದು ಒಬ್ಬರನ್ನೊಬ್ಬರು ಅವಲಂಬಿಸಿದ ಬದುಕು. ಇಂತಲ್ಲಿಗೆ ನುಗ್ಗಿದ ವಾನರ ಸೇನೆಯ ಇತಿಹಾಸ ಕೆದಕಿದರೆ ಅವು ಎಂದೂ ಭೂಮಿ ನೆಚ್ಚಿ ಬದುಕಿದವಲ್ಲ. ಭೂಮಿ ನೆಚ್ಚಿದವರನ್ನ ಗೌರವಿಸಿದ್ದು ಈ ವಾನರ ಸೇನೆಯ ಸಂಸ್ಕೃತಿಯಲ್ಲೇ ಇಲ್ಲ. ಅದು ಭೂಮಿ ನೆಚ್ಚಿ ಬದುಕಿದವನನ್ನ ಹೊಲ ಉಳುವ ಎತ್ತಿನಂತೆ ನೋಡುತ್ತಾ ಬಂದಿದೆ. ಇದನ್ನು ಕಂಡು ಕುವೆಂಪು ಉಳುವಾ ಯೋಗಿಯ ನೋಡಲ್ಲಿ ಎಂದು ತೋರಿಸಿದರು. ಅಲ್ಲಿಯವರೆಗೂ ಎತ್ತಿನ ಹಿಂದೆ ಎತ್ತಾಗಿ ತಿರುಗುವವನನ್ನು ಎತ್ತೆಂದೇ ಪರಿಗಣಿಸಿದ್ದ ಭೂಸುರೋತ್ತಮರು, ಅವನನ್ನ ಯೋಗಿ ಎಂದದ್ದು ಎಷ್ಟು ಸರಿ ಎಂದು ಕೊಂಕು ನುಡಿದಿದ್ದವು. ಸೂರ್ಯನಿಗಿಂತಲೂ ಮೊದಲೇ ತನ್ನ ಹೊಲದಲ್ಲಿ ಆರೂಡಿದ ರೈತ ಹುಕ್ಕೆ ಗೆರೆಯಲ್ಲೇ ನೇಗಿಲು ಬಿಡಬೇಕು. ಅತ್ತ ಇತ್ತ ತಿರುಗಿದರೆ ಮೊದಲ ಸೀಳಿಗೇ ನುಗ್ಗುತ್ತದೆ. ಅಂದರೆ ಉತ್ತ ಪಾತಿಯನ್ನೆ ಉಳಬೇಕಾಗುತ್ತದೆ. ಆದ್ದರಿಂದ ತಲೆ ಎತ್ತದ ರೈತ, ಹೆಂಡತಿ ರೊಟ್ಟಿ ತಂದಾಗಲೇ ತಲೆ ಎತ್ತಿ ನೋಡುತ್ತಿದ್ದುದು. ಯೋಗಿಯ ಧ್ಯಾನವಿಲ್ಲದೆ ಹೊಲ ಉಳಲಾಗುವುದಿಲ್ಲ. ಈ ಸಂಸ್ಕೃತಿಯೇ ಗೊತ್ತಿಲ್ಲದವುಗಳಿಗೆ ಭೂಮಿಯಿಂದ ಬೆಳೆದ ದವಸ ಧಾನ್ಯ ಹಣ್ಣುಗಳ ಬಗ್ಗೆ ಗೌರವವೇ ಇರುವುದಿಲ್ಲ. ಇಂತವರೇ ನಬೀಸಾಬ್ ಅಂಗಡಿಗೆ ದಾಳಿಯಿಟ್ಟವಂತಲ್ಲಾ. ಥೂತ್ತೇರಿ.

*****

ಕರ್ನಾಟಕದಲ್ಲೀಗ ರಾಜನ ಭಯ, ರಾಜನಿಲ್ಲದ ಭಯ ಎರಡೂ ಮನಸ್ಥಿತಿ ಅಮರಿಕೊಂಡಿವೆಯಂತಲ್ಲಾ. ಆಗೊಮ್ಮೆ ಗುಜರಾತಿನಲ್ಲಿ ಈ ಸ್ಥಿತಿಯುಂಟಾಗಿತ್ತು. ಅಲ್ಲಿ ಮೋದಿ ಎಂದಕೂಡಲೇ ಮುಸ್ಲಿಮರು ಬೆಚ್ಚಿ ಬೀಳುತ್ತಿದ್ದರು. ಮುಖ್ಯಮಂತ್ರಿಯ ಹುಕುಂನಂತೆಯೇ ವಿಶ್ವಹಿಂದುಗಳು ಭಜರಂಗಿಗಳು ರಾಮಸೇನೆ ವಾನರಸೇನೆಯೆಲ್ಲಾ ಸೇರಿಕೊಂಡು ಮೂರುದಿನ ಮುಸ್ಲಿಮರನ್ನ ಹುರಿದು ಮುಕ್ಕಿದ್ದರು. ಇದೀಗ ಕರ್ನಾಟಕದಲ್ಲಿ ಅಂತಹ ತಯಾರಿಯೊಂದು ನಡೆಯುತ್ತಿದೆಯಂತಲ್ಲಾ. ಪ್ರಕ್ಷುಬ್ದವಾದ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಮಿಂಚಿನ ಕಾರ್ಯಾಚರಣೆ ನಡೆಸುವುದರ ಬದಲು ನೊಂದವರು ಬಂದು ದೂರು ಕೊಡುವುದನ್ನೆ ಕಾಯುತ್ತಿದ್ದಾರಂತಲ್ಲಾ. ಅದೇ ಬಿಜೆಪಿ ಜನರಿಗೆ ತೊಂದರೆ ಕೊಟ್ಟವರನ್ನ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವ ಪೊಲೀಸರು ಕರ್ನಾಟಕ ಈವರೆಗೆ ಕಾಣದಿದ್ದ ಹೋಂ ಮಿನಿಸ್ಟರ್ ಏನು ಹೇಳುತ್ತಿದ್ದಾರೆಂದು ಕಾಯುತ್ತಿದ್ದಾರಂತಲ್ಲಾ. ಹೋಂ ಮಿನಿಸ್ಟರ್ ಸಾಧನೆ ಯಾವುದೆಂದರೆ ಭದ್ರಾವತಿಯ ಕಾಗದ ಕಾರ್ಖಾನೆ ಉದ್ಧಾರ ಮಾಡಪ್ಪ ಎಂದು ಅಧ್ಯಕ್ಷನನ್ನಾಗಿ ಕೂರಿಸಿದರೆ ವಾರೊಪ್ಪತ್ತಿನಲ್ಲಿ ಅದನ್ನು ಹಾಳು ಮಾಡಿದ್ದೂ ಅಲ್ಲದೆ ಅದರ ಬಾಗಿಲಿಗೆ ಬೀಗ ಜಡಿದು ಅರಗದ ಕಡೆ ಹೋದದ್ದು. ಇಂತಹ ವ್ಯಕ್ತಿಯನ್ನು ಕರ್ನಾಟಕವನ್ನ ಹದ್ದುಬಸ್ತಿನಲ್ಲಿಡಬೇಕಾದ ಜವಾಬ್ದಾರಿ ಹೊರೆಸಿ ಕೂರಿಸಿದರೆ ಏನಾಗಬೇಕೋ ಅದೇ ಆಗುತ್ತಿದೆ. ಅಂದರೆ ಕೇಶವ ಕೃಪದ ಸೂಚನೆಗಳು ಜಾರಿಯಾಗುತ್ತಿವೆಯಂತಲ್ಲಾ. ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ:  ಸಿದ್ದರಾಮಯ್ಯ ರಾವಣನಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...