Homeಅಂಕಣಗಳುಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

- Advertisement -
- Advertisement -

ಹಸಿರುಮಯವಾಗಿದ್ದ ಮಂಡ್ಯವನ್ನು ಕೇಸರಿಮಯವಾಗಿಸಲು ಪಣತೊಟ್ಟ ಬಿಜೆಪಿಗಳು ಪ್ರಧಾನಿಯವರ ರೋಡ್ ಶೋ ಏರ್ಪಡಿಸಿದ್ದ ಫಲವಾಗಿ ಮೋದಿ ಕೈ ಬೀಸಲು ಅಡ್ಡಿಯಾಗಿದ್ದ ಮರದ ರೆಂಬೆಕೊಂಬೆಗಳನ್ನೆಲ್ಲಾ ಕಡಿದು, ರಸ್ತೆಯ ಮಾರ್ಗವನ್ನು ಬದಲಿಸಿ ಅಂತೂ ಮಂಡ್ಯಕ್ಕೆ ಮೋದಿ ಕರೆತಂದು ಫೈಟರ್ ರವಿಯನ್ನ ಪರಿಚಯಿಸಿದವಲ್ಲಾ. ಮಂಡ್ಯ ಧೀಮಂತ ರಾಜಕಾರಣಿಗಳಿಗೆ ಹೆಸರಾದ ಜಿಲ್ಲೆ. ಅಲ್ಲಿನ ರಾಜಕಾರಣದ ಇತಿಹಾಸ ನೋಡಿದರೆ ಇಲ್ಲಿನ ಪ್ರಾಮಾಣಿಕ ಮತದಾರರ ಮೆಚ್ಚಿನ ಜನ ನಾಯಕರ ಇತಿಹಾಸವೇ ಇದೆ. ಅವರ ಸಂತತಿಗಳು ಕೂಡ ಇನ್ನೂ ಇವೆ. ಅವರನ್ನೆಲ್ಲಾ ಬಿಟ್ಟು ಈ ಬಿಜೆಪಿಗಳು ಫೈಟರ್ ರವಿ ಎಂಬ ವ್ಯಕ್ತಿಯನ್ನು ಪರಿಚಯಿಸಿದಾಗ ಮೋದಿಯವರಿಗೆ ಅಮಿತ್‌ಶಾ ದರ್ಶನ ಮಾಡಿದಂತಾಗಿ ಕೈ ಮುಗಿದು ಮುಗುಳುನಕ್ಕಿದ್ದಾರಲ್ಲಾ. ಇದು ಭಾರತದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ. ಬೆಂಗಳೂರು ಠಾಣೆಗಳಲ್ಲಿ ಕೇಸುಗಳಿರುವ ವ್ಯಕ್ತಿಯೊಬ್ಬ ಜಾದೂ ಮಾಡಿದಂತೆ ಧನಕನಕ ಸಂಗ್ರಹಿಸಿಕೊಂಡು ಒಂದು ಓಟಿಗೆ ಇಂತಿಷ್ಟು ಸಾವಿರ ಕೊಡುತ್ತೇನೆಂದು ಘೋಷಣೆ ಮಾಡಿಕೊಂಡು ತಿರುಗುತ್ತಿರುವಾಗ, ಆತ ಬಿಜೆಪಿಗಳಿಗೆ ಗಣ್ಯನಾಗಿ ಕಂಡಿದ್ದೂ ಅಲ್ಲದೆ, ಆತ ಪ್ರಧಾನ ಮಂತ್ರಿ ಭೇಟಿಮಾಡಲೇಬೇಕಾದ ವ್ಯಕ್ತಿಯೆಂದು ಭಾವಿಸಿದ ಈ ಬಿಜೆಪಿಗಳು ಮುಟ್ಟಿರುವ ಪಾತಾಳ ಎದ್ದು ಬರಲಾರದಂತಹುದಂತಲ್ಲಾ, ಥೂತ್ತೇರಿ.

*****

ಮಂಡ್ಯದಲ್ಲಿ ಫೈಟರ್ ರವಿಯ ಜೊತೆಗೆ ಮತ್ತೊಬ್ಬ ಧೀಮಂತ ಮಹಿಳೆ ಸುಮಲತಾ ತಾನು ಈವರೆಗೆ ಹಸುವಿನಂತಿದ್ದೆ, ನನಗೆ ಆನೆ ಬಲ ಬರಬೇಕಾದರೆ ಬಿಜೆಪಿಗೆ ಸೇರಲೇಬೇಕೆಂದು ಹಠತೊಟ್ಟು ಮೋದಿ ಸಮ್ಮುಖದಲ್ಲೇ ಬಿಜೆಪಿಗಿ ನುಗ್ಗಿದ್ದಾರಲ್ಲಾ. ಸುಮಲತಾ ಚುನಾವಣೆಗೆ ನಿಂತಾಗ ನಾಗಮಂಗಲದ ಮಾಜಿ ಶಾಸಕ ಮತ್ತು ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ತನ್ನದೇ ಶೈಲಿಯಲ್ಲಿ ಸುಮಲತಾರನ್ನು ಜರಿದಿದ್ದರು. ಆಗ ಇಡೀ ನಾಡಿನ ತುಂಬ ಪ್ರತಿಭಟನೆಗಳಾಗಿದ್ದವು. ಶಿವರಾಮೇಗೌಡರ ವಿರುದ್ಧ ಮಹಿಳೆಯರು ಪ್ರತಿಭಟಿಸಿದ್ದರು. ಆದರೆ ಈಗ ಸುಮಲತಾ ದಿಢೀರನೆ ಬಿಜೆಪಿಗೆ ಬೆಂಬಲ ಘೋಷಿಸಿ ಅಸಂಬದ್ಧವಾಗಿ ಮಾತನಾಡುವ ಶಿವರಾಮೇಗೌಡನ ಮಾತನ್ನೇ ಮರೆಸುವಂತೆ ಮುನ್ನುಗ್ಗುತ್ತಿದ್ದಾರಲ್ಲಾ. ಅಂದು ಜೆಡಿಎಸ್ ಲೀಡರುಗಳನ್ನು ಮೆಚ್ಚಿಸಲೋಸ್ಕರ ಅಸಂಬದ್ಧ ಮಾತನಾಡಿದ್ದ ಶಿವರಾಮೇಗೌಡ ಇಂದು ಜೆಡಿಎಸ್‌ನಿಂದಲೀ ಉಚ್ಛಾಟನೆಗೊಂಡು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವಾಗಲೇ, ಫೈಟರ್ ರವಿ ನಾಗಮಂಗಲಕ್ಕೆ ಕೋಟಿಗೂ ಹೆಚ್ಚು ಖರ್ಚು ಮಾಡಿ ಪ್ರಧಾನಿಯಿಂದಲೇ ಕೈ ಮುಗಿಸಿಕೊಂಡು ಭೇಷ್ ಎನ್ನಿಸಿಕೊಳ್ಳುವಾಗ, ಸುಮಲತಾ ಕೂಡ ಬಿಜೆಪಿ ಸೇರಿದ್ದು (ಬಾಹ್ಯ ಬೆಂಬಲವೆಂಬ ನಾಟಕದೊಂದಿದೆಗೆ) ಈಗ ಎಲ್ಲಿಗೆ ಹೋಗಲಿ ಎಂಬ ಸ್ಥಿತಿಯನ್ನು ಶಿವರಾಮೇಗೌಡ ಎದುರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಈಗ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಕಳೆದ ಬಾರಿ ಎದುರಿಸಿದ್ದ ಚುನಾವಣೆಯನ್ನು ಪ್ರಪಂಚದಲ್ಲೆಲ್ಲಾ ಹರಡಿರುವ ಅಂಬರೀಶ್ ಅಭಿಮಾನಿಗಳು ಕುತೂಹಲದಿಂದ ನೋಡಿದ್ದರು. ಅದೂಅಲ್ಲದೆ ದುಬೈನ ಬುರ್ಜು ಖಲೀಫದ ಕಟ್ಟಡದಲ್ಲಿ ಕುಳಿತ ಅದರ ಮಾಲೀಕರೂ ಕೂಡ ವೀಕ್ಷಿಸಿದ್ದರು. ಏಕೆಂದರೆ ಅವರೆಲ್ಲಾ ಅಂಬರೀಶ್ ಗೆಳೆಯರಾಗಿದ್ದರು. ಅದೂಅಲ್ಲದೆ ಕಾಶ್ಮೀರದ ಫಾರೂಕ್ ಅಬ್ದುಲ್ಲಾ ಕೂಡ ತನ್ನ ಗೆಳೆಯನ ಪತ್ನಿ ಗೆಲ್ಲಲೆಂದು ಪ್ರಾರ್ಥಿಸಿದ್ದರು. ಅಂತೂ ಸುಮಲತಾ ಗೆದ್ದರು. ಆ ಗೆಲುವಿನಲ್ಲೂ ಕೆಲವು ದಾಖಲೆಗಳಿದ್ದವು. ಅವರ ಬೆನ್ನಿಗೆ ರೈತಸಂಘ, ಕಾಂಗ್ರೆಸ್ಸು, ಕೆಲ ಬಿಜೆಪಿಗಳೂ ನಿಂತಿದ್ದವು. ಆದ್ದರಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಲೀಡಿನಲ್ಲಿ ಗೆದ್ದಿದ್ದರು. ಇದನ್ನೆಲ್ಲ ದಾಟಿದ ಸುಮಲತಾ ಬಿಜೆಪಿಗೆ ನೆಗೆದದ್ದು ಈ ಶತಮಾನದ ದ್ರೋಹ ಎಂದು ಮಂಡ್ಯದ ಸ್ವಾಭಿಮಾನಿಗಳು ಹೇಳುತ್ತಿದ್ದಾರಲ್ಲಾ. ಇದೆಲ್ಲಕ್ಕಿಂತ ಮಂಡ್ಯದವರು ಬೆಚ್ಚಿರುವುದೇಕೆಂದರೆ ಅಂದು ಸೆರಗೊಡ್ಡಿ ಮತ ಕೇಳಿದ್ದ ಈಕೆಯ ನಟನೆ ನಮಗೆ ಗೊತ್ತೇ ಆಗಲಿಲ್ಲ ಎಂದ ರೋಷಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಪ್ರಧಾನಿ ಭೇಟಿಯಿಂದ ಮಂಡ್ಯ ಸುಸ್ತು ಹೊಡೆದು ಕುಳಿತಿದೆಯಲ್ಲಾ. ಏಕೆಂದರೆ ಇಡೀ ಸರಕಾರಿ ಯಂತ್ರಾಂಗವನ್ನೇ ಬಳಸಿಕೊಂಡು ಅದ್ದೂರಿಯಾಗಿ ಪ್ರಧಾನಿಯ ಪ್ರವಾಸವನ್ನು ಮಾಡಿ ಮುಗಿಸಿದ ಬಿಜೆಪಿಯ ಸಾಧನೆ ನೋಡಿದರೆ, ಪ್ರಧಾನಿಗಳು ಫೈಟರ್ ರವಿಗೆ ಕೈ ಮುಗಿದದ್ದು ಮತ್ತು ಸುಮಲತಾರನ್ನು ಪಾರ್ಟಿಗೆ ಸೇರಿಸಿಕೊಂಡಿದ್ದೇ ಬಹುದೊಡ್ಡ ಸಾಧನೆಯಾಗಿ ಕಾಣತೊಡಗಿದೆಯಲ್ಲಾ. ಒಂದೊಂದು ತಾಲೂಕಿನಿಂದ ತಲಾ ಎಪ್ಪತ್ತು ಬಸ್ಸು ಜನ ತುಂಬಿಕೊಂಡು ಬಂದವು. ಅದರಲ್ಲಿ 50 ಜನರಿದ್ದು ತಲಾ ಮುನ್ನೂರು ಬಟವಾಡೆಯಾಗಿ ಕೊಟ್ಟರಂತಲ್ಲಾ. ಹಣ ಮತ್ತು ಬಂದ ಜನರ ದಾಖಲೆ ಎಲ್ಲ ಸರಿಯಾಗಿರಬೇಕು ಎಂದು ಹಿಂದೆಂದು ಕಾಣದ ಶಿಸ್ತಿನಿಂದ ನಡೆದುಹೋದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಚಲುವರಾಯಸ್ವಾಮಿ ನಡೆಸುವ ಸಭೆಗೆ ಮತ್ತು ಶಿವರಾಮೇಗೌಡ ಹಾಗೂ ಇನ್ನಿತರ ಸಭೆಗೂ ಹೋಗುತ್ತ ನಾವು ಕೂಲಿಗೆ ಹೋದರೆ ಐದುನೂರು ಕೊಡುತ್ತಾರೆ ಈ ಮುನ್ನೂರು ಸಾಲುವುದಿಲ್ಲ ಇನ್ನ ಮುಂದೆ ಐನೂರರ ಜೊತೆಗೆ ಒಂದು ಪ್ಯಾಕೆಟ್ ಬಿರಿಯಾನಿ ಮತ್ತು ಒಂದು ಕ್ವಾಟರ್ ಕೊಡುವುದಿದ್ದರೆ ಮನೆ ಹತ್ತಿರ ಬನ್ನಿ ಎನ್ನವಂತಾಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...