Homeಅಂಕಣಗಳುಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

- Advertisement -
- Advertisement -

ಹಸಿರುಮಯವಾಗಿದ್ದ ಮಂಡ್ಯವನ್ನು ಕೇಸರಿಮಯವಾಗಿಸಲು ಪಣತೊಟ್ಟ ಬಿಜೆಪಿಗಳು ಪ್ರಧಾನಿಯವರ ರೋಡ್ ಶೋ ಏರ್ಪಡಿಸಿದ್ದ ಫಲವಾಗಿ ಮೋದಿ ಕೈ ಬೀಸಲು ಅಡ್ಡಿಯಾಗಿದ್ದ ಮರದ ರೆಂಬೆಕೊಂಬೆಗಳನ್ನೆಲ್ಲಾ ಕಡಿದು, ರಸ್ತೆಯ ಮಾರ್ಗವನ್ನು ಬದಲಿಸಿ ಅಂತೂ ಮಂಡ್ಯಕ್ಕೆ ಮೋದಿ ಕರೆತಂದು ಫೈಟರ್ ರವಿಯನ್ನ ಪರಿಚಯಿಸಿದವಲ್ಲಾ. ಮಂಡ್ಯ ಧೀಮಂತ ರಾಜಕಾರಣಿಗಳಿಗೆ ಹೆಸರಾದ ಜಿಲ್ಲೆ. ಅಲ್ಲಿನ ರಾಜಕಾರಣದ ಇತಿಹಾಸ ನೋಡಿದರೆ ಇಲ್ಲಿನ ಪ್ರಾಮಾಣಿಕ ಮತದಾರರ ಮೆಚ್ಚಿನ ಜನ ನಾಯಕರ ಇತಿಹಾಸವೇ ಇದೆ. ಅವರ ಸಂತತಿಗಳು ಕೂಡ ಇನ್ನೂ ಇವೆ. ಅವರನ್ನೆಲ್ಲಾ ಬಿಟ್ಟು ಈ ಬಿಜೆಪಿಗಳು ಫೈಟರ್ ರವಿ ಎಂಬ ವ್ಯಕ್ತಿಯನ್ನು ಪರಿಚಯಿಸಿದಾಗ ಮೋದಿಯವರಿಗೆ ಅಮಿತ್‌ಶಾ ದರ್ಶನ ಮಾಡಿದಂತಾಗಿ ಕೈ ಮುಗಿದು ಮುಗುಳುನಕ್ಕಿದ್ದಾರಲ್ಲಾ. ಇದು ಭಾರತದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ. ಬೆಂಗಳೂರು ಠಾಣೆಗಳಲ್ಲಿ ಕೇಸುಗಳಿರುವ ವ್ಯಕ್ತಿಯೊಬ್ಬ ಜಾದೂ ಮಾಡಿದಂತೆ ಧನಕನಕ ಸಂಗ್ರಹಿಸಿಕೊಂಡು ಒಂದು ಓಟಿಗೆ ಇಂತಿಷ್ಟು ಸಾವಿರ ಕೊಡುತ್ತೇನೆಂದು ಘೋಷಣೆ ಮಾಡಿಕೊಂಡು ತಿರುಗುತ್ತಿರುವಾಗ, ಆತ ಬಿಜೆಪಿಗಳಿಗೆ ಗಣ್ಯನಾಗಿ ಕಂಡಿದ್ದೂ ಅಲ್ಲದೆ, ಆತ ಪ್ರಧಾನ ಮಂತ್ರಿ ಭೇಟಿಮಾಡಲೇಬೇಕಾದ ವ್ಯಕ್ತಿಯೆಂದು ಭಾವಿಸಿದ ಈ ಬಿಜೆಪಿಗಳು ಮುಟ್ಟಿರುವ ಪಾತಾಳ ಎದ್ದು ಬರಲಾರದಂತಹುದಂತಲ್ಲಾ, ಥೂತ್ತೇರಿ.

*****

ಮಂಡ್ಯದಲ್ಲಿ ಫೈಟರ್ ರವಿಯ ಜೊತೆಗೆ ಮತ್ತೊಬ್ಬ ಧೀಮಂತ ಮಹಿಳೆ ಸುಮಲತಾ ತಾನು ಈವರೆಗೆ ಹಸುವಿನಂತಿದ್ದೆ, ನನಗೆ ಆನೆ ಬಲ ಬರಬೇಕಾದರೆ ಬಿಜೆಪಿಗೆ ಸೇರಲೇಬೇಕೆಂದು ಹಠತೊಟ್ಟು ಮೋದಿ ಸಮ್ಮುಖದಲ್ಲೇ ಬಿಜೆಪಿಗಿ ನುಗ್ಗಿದ್ದಾರಲ್ಲಾ. ಸುಮಲತಾ ಚುನಾವಣೆಗೆ ನಿಂತಾಗ ನಾಗಮಂಗಲದ ಮಾಜಿ ಶಾಸಕ ಮತ್ತು ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ತನ್ನದೇ ಶೈಲಿಯಲ್ಲಿ ಸುಮಲತಾರನ್ನು ಜರಿದಿದ್ದರು. ಆಗ ಇಡೀ ನಾಡಿನ ತುಂಬ ಪ್ರತಿಭಟನೆಗಳಾಗಿದ್ದವು. ಶಿವರಾಮೇಗೌಡರ ವಿರುದ್ಧ ಮಹಿಳೆಯರು ಪ್ರತಿಭಟಿಸಿದ್ದರು. ಆದರೆ ಈಗ ಸುಮಲತಾ ದಿಢೀರನೆ ಬಿಜೆಪಿಗೆ ಬೆಂಬಲ ಘೋಷಿಸಿ ಅಸಂಬದ್ಧವಾಗಿ ಮಾತನಾಡುವ ಶಿವರಾಮೇಗೌಡನ ಮಾತನ್ನೇ ಮರೆಸುವಂತೆ ಮುನ್ನುಗ್ಗುತ್ತಿದ್ದಾರಲ್ಲಾ. ಅಂದು ಜೆಡಿಎಸ್ ಲೀಡರುಗಳನ್ನು ಮೆಚ್ಚಿಸಲೋಸ್ಕರ ಅಸಂಬದ್ಧ ಮಾತನಾಡಿದ್ದ ಶಿವರಾಮೇಗೌಡ ಇಂದು ಜೆಡಿಎಸ್‌ನಿಂದಲೀ ಉಚ್ಛಾಟನೆಗೊಂಡು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವಾಗಲೇ, ಫೈಟರ್ ರವಿ ನಾಗಮಂಗಲಕ್ಕೆ ಕೋಟಿಗೂ ಹೆಚ್ಚು ಖರ್ಚು ಮಾಡಿ ಪ್ರಧಾನಿಯಿಂದಲೇ ಕೈ ಮುಗಿಸಿಕೊಂಡು ಭೇಷ್ ಎನ್ನಿಸಿಕೊಳ್ಳುವಾಗ, ಸುಮಲತಾ ಕೂಡ ಬಿಜೆಪಿ ಸೇರಿದ್ದು (ಬಾಹ್ಯ ಬೆಂಬಲವೆಂಬ ನಾಟಕದೊಂದಿದೆಗೆ) ಈಗ ಎಲ್ಲಿಗೆ ಹೋಗಲಿ ಎಂಬ ಸ್ಥಿತಿಯನ್ನು ಶಿವರಾಮೇಗೌಡ ಎದುರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಈಗ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಕಳೆದ ಬಾರಿ ಎದುರಿಸಿದ್ದ ಚುನಾವಣೆಯನ್ನು ಪ್ರಪಂಚದಲ್ಲೆಲ್ಲಾ ಹರಡಿರುವ ಅಂಬರೀಶ್ ಅಭಿಮಾನಿಗಳು ಕುತೂಹಲದಿಂದ ನೋಡಿದ್ದರು. ಅದೂಅಲ್ಲದೆ ದುಬೈನ ಬುರ್ಜು ಖಲೀಫದ ಕಟ್ಟಡದಲ್ಲಿ ಕುಳಿತ ಅದರ ಮಾಲೀಕರೂ ಕೂಡ ವೀಕ್ಷಿಸಿದ್ದರು. ಏಕೆಂದರೆ ಅವರೆಲ್ಲಾ ಅಂಬರೀಶ್ ಗೆಳೆಯರಾಗಿದ್ದರು. ಅದೂಅಲ್ಲದೆ ಕಾಶ್ಮೀರದ ಫಾರೂಕ್ ಅಬ್ದುಲ್ಲಾ ಕೂಡ ತನ್ನ ಗೆಳೆಯನ ಪತ್ನಿ ಗೆಲ್ಲಲೆಂದು ಪ್ರಾರ್ಥಿಸಿದ್ದರು. ಅಂತೂ ಸುಮಲತಾ ಗೆದ್ದರು. ಆ ಗೆಲುವಿನಲ್ಲೂ ಕೆಲವು ದಾಖಲೆಗಳಿದ್ದವು. ಅವರ ಬೆನ್ನಿಗೆ ರೈತಸಂಘ, ಕಾಂಗ್ರೆಸ್ಸು, ಕೆಲ ಬಿಜೆಪಿಗಳೂ ನಿಂತಿದ್ದವು. ಆದ್ದರಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಲೀಡಿನಲ್ಲಿ ಗೆದ್ದಿದ್ದರು. ಇದನ್ನೆಲ್ಲ ದಾಟಿದ ಸುಮಲತಾ ಬಿಜೆಪಿಗೆ ನೆಗೆದದ್ದು ಈ ಶತಮಾನದ ದ್ರೋಹ ಎಂದು ಮಂಡ್ಯದ ಸ್ವಾಭಿಮಾನಿಗಳು ಹೇಳುತ್ತಿದ್ದಾರಲ್ಲಾ. ಇದೆಲ್ಲಕ್ಕಿಂತ ಮಂಡ್ಯದವರು ಬೆಚ್ಚಿರುವುದೇಕೆಂದರೆ ಅಂದು ಸೆರಗೊಡ್ಡಿ ಮತ ಕೇಳಿದ್ದ ಈಕೆಯ ನಟನೆ ನಮಗೆ ಗೊತ್ತೇ ಆಗಲಿಲ್ಲ ಎಂದ ರೋಷಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಪ್ರಧಾನಿ ಭೇಟಿಯಿಂದ ಮಂಡ್ಯ ಸುಸ್ತು ಹೊಡೆದು ಕುಳಿತಿದೆಯಲ್ಲಾ. ಏಕೆಂದರೆ ಇಡೀ ಸರಕಾರಿ ಯಂತ್ರಾಂಗವನ್ನೇ ಬಳಸಿಕೊಂಡು ಅದ್ದೂರಿಯಾಗಿ ಪ್ರಧಾನಿಯ ಪ್ರವಾಸವನ್ನು ಮಾಡಿ ಮುಗಿಸಿದ ಬಿಜೆಪಿಯ ಸಾಧನೆ ನೋಡಿದರೆ, ಪ್ರಧಾನಿಗಳು ಫೈಟರ್ ರವಿಗೆ ಕೈ ಮುಗಿದದ್ದು ಮತ್ತು ಸುಮಲತಾರನ್ನು ಪಾರ್ಟಿಗೆ ಸೇರಿಸಿಕೊಂಡಿದ್ದೇ ಬಹುದೊಡ್ಡ ಸಾಧನೆಯಾಗಿ ಕಾಣತೊಡಗಿದೆಯಲ್ಲಾ. ಒಂದೊಂದು ತಾಲೂಕಿನಿಂದ ತಲಾ ಎಪ್ಪತ್ತು ಬಸ್ಸು ಜನ ತುಂಬಿಕೊಂಡು ಬಂದವು. ಅದರಲ್ಲಿ 50 ಜನರಿದ್ದು ತಲಾ ಮುನ್ನೂರು ಬಟವಾಡೆಯಾಗಿ ಕೊಟ್ಟರಂತಲ್ಲಾ. ಹಣ ಮತ್ತು ಬಂದ ಜನರ ದಾಖಲೆ ಎಲ್ಲ ಸರಿಯಾಗಿರಬೇಕು ಎಂದು ಹಿಂದೆಂದು ಕಾಣದ ಶಿಸ್ತಿನಿಂದ ನಡೆದುಹೋದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಚಲುವರಾಯಸ್ವಾಮಿ ನಡೆಸುವ ಸಭೆಗೆ ಮತ್ತು ಶಿವರಾಮೇಗೌಡ ಹಾಗೂ ಇನ್ನಿತರ ಸಭೆಗೂ ಹೋಗುತ್ತ ನಾವು ಕೂಲಿಗೆ ಹೋದರೆ ಐದುನೂರು ಕೊಡುತ್ತಾರೆ ಈ ಮುನ್ನೂರು ಸಾಲುವುದಿಲ್ಲ ಇನ್ನ ಮುಂದೆ ಐನೂರರ ಜೊತೆಗೆ ಒಂದು ಪ್ಯಾಕೆಟ್ ಬಿರಿಯಾನಿ ಮತ್ತು ಒಂದು ಕ್ವಾಟರ್ ಕೊಡುವುದಿದ್ದರೆ ಮನೆ ಹತ್ತಿರ ಬನ್ನಿ ಎನ್ನವಂತಾಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...