Homeಅಂಕಣಗಳುಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

- Advertisement -
- Advertisement -

ಹಸಿರುಮಯವಾಗಿದ್ದ ಮಂಡ್ಯವನ್ನು ಕೇಸರಿಮಯವಾಗಿಸಲು ಪಣತೊಟ್ಟ ಬಿಜೆಪಿಗಳು ಪ್ರಧಾನಿಯವರ ರೋಡ್ ಶೋ ಏರ್ಪಡಿಸಿದ್ದ ಫಲವಾಗಿ ಮೋದಿ ಕೈ ಬೀಸಲು ಅಡ್ಡಿಯಾಗಿದ್ದ ಮರದ ರೆಂಬೆಕೊಂಬೆಗಳನ್ನೆಲ್ಲಾ ಕಡಿದು, ರಸ್ತೆಯ ಮಾರ್ಗವನ್ನು ಬದಲಿಸಿ ಅಂತೂ ಮಂಡ್ಯಕ್ಕೆ ಮೋದಿ ಕರೆತಂದು ಫೈಟರ್ ರವಿಯನ್ನ ಪರಿಚಯಿಸಿದವಲ್ಲಾ. ಮಂಡ್ಯ ಧೀಮಂತ ರಾಜಕಾರಣಿಗಳಿಗೆ ಹೆಸರಾದ ಜಿಲ್ಲೆ. ಅಲ್ಲಿನ ರಾಜಕಾರಣದ ಇತಿಹಾಸ ನೋಡಿದರೆ ಇಲ್ಲಿನ ಪ್ರಾಮಾಣಿಕ ಮತದಾರರ ಮೆಚ್ಚಿನ ಜನ ನಾಯಕರ ಇತಿಹಾಸವೇ ಇದೆ. ಅವರ ಸಂತತಿಗಳು ಕೂಡ ಇನ್ನೂ ಇವೆ. ಅವರನ್ನೆಲ್ಲಾ ಬಿಟ್ಟು ಈ ಬಿಜೆಪಿಗಳು ಫೈಟರ್ ರವಿ ಎಂಬ ವ್ಯಕ್ತಿಯನ್ನು ಪರಿಚಯಿಸಿದಾಗ ಮೋದಿಯವರಿಗೆ ಅಮಿತ್‌ಶಾ ದರ್ಶನ ಮಾಡಿದಂತಾಗಿ ಕೈ ಮುಗಿದು ಮುಗುಳುನಕ್ಕಿದ್ದಾರಲ್ಲಾ. ಇದು ಭಾರತದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ. ಬೆಂಗಳೂರು ಠಾಣೆಗಳಲ್ಲಿ ಕೇಸುಗಳಿರುವ ವ್ಯಕ್ತಿಯೊಬ್ಬ ಜಾದೂ ಮಾಡಿದಂತೆ ಧನಕನಕ ಸಂಗ್ರಹಿಸಿಕೊಂಡು ಒಂದು ಓಟಿಗೆ ಇಂತಿಷ್ಟು ಸಾವಿರ ಕೊಡುತ್ತೇನೆಂದು ಘೋಷಣೆ ಮಾಡಿಕೊಂಡು ತಿರುಗುತ್ತಿರುವಾಗ, ಆತ ಬಿಜೆಪಿಗಳಿಗೆ ಗಣ್ಯನಾಗಿ ಕಂಡಿದ್ದೂ ಅಲ್ಲದೆ, ಆತ ಪ್ರಧಾನ ಮಂತ್ರಿ ಭೇಟಿಮಾಡಲೇಬೇಕಾದ ವ್ಯಕ್ತಿಯೆಂದು ಭಾವಿಸಿದ ಈ ಬಿಜೆಪಿಗಳು ಮುಟ್ಟಿರುವ ಪಾತಾಳ ಎದ್ದು ಬರಲಾರದಂತಹುದಂತಲ್ಲಾ, ಥೂತ್ತೇರಿ.

*****

ಮಂಡ್ಯದಲ್ಲಿ ಫೈಟರ್ ರವಿಯ ಜೊತೆಗೆ ಮತ್ತೊಬ್ಬ ಧೀಮಂತ ಮಹಿಳೆ ಸುಮಲತಾ ತಾನು ಈವರೆಗೆ ಹಸುವಿನಂತಿದ್ದೆ, ನನಗೆ ಆನೆ ಬಲ ಬರಬೇಕಾದರೆ ಬಿಜೆಪಿಗೆ ಸೇರಲೇಬೇಕೆಂದು ಹಠತೊಟ್ಟು ಮೋದಿ ಸಮ್ಮುಖದಲ್ಲೇ ಬಿಜೆಪಿಗಿ ನುಗ್ಗಿದ್ದಾರಲ್ಲಾ. ಸುಮಲತಾ ಚುನಾವಣೆಗೆ ನಿಂತಾಗ ನಾಗಮಂಗಲದ ಮಾಜಿ ಶಾಸಕ ಮತ್ತು ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ತನ್ನದೇ ಶೈಲಿಯಲ್ಲಿ ಸುಮಲತಾರನ್ನು ಜರಿದಿದ್ದರು. ಆಗ ಇಡೀ ನಾಡಿನ ತುಂಬ ಪ್ರತಿಭಟನೆಗಳಾಗಿದ್ದವು. ಶಿವರಾಮೇಗೌಡರ ವಿರುದ್ಧ ಮಹಿಳೆಯರು ಪ್ರತಿಭಟಿಸಿದ್ದರು. ಆದರೆ ಈಗ ಸುಮಲತಾ ದಿಢೀರನೆ ಬಿಜೆಪಿಗೆ ಬೆಂಬಲ ಘೋಷಿಸಿ ಅಸಂಬದ್ಧವಾಗಿ ಮಾತನಾಡುವ ಶಿವರಾಮೇಗೌಡನ ಮಾತನ್ನೇ ಮರೆಸುವಂತೆ ಮುನ್ನುಗ್ಗುತ್ತಿದ್ದಾರಲ್ಲಾ. ಅಂದು ಜೆಡಿಎಸ್ ಲೀಡರುಗಳನ್ನು ಮೆಚ್ಚಿಸಲೋಸ್ಕರ ಅಸಂಬದ್ಧ ಮಾತನಾಡಿದ್ದ ಶಿವರಾಮೇಗೌಡ ಇಂದು ಜೆಡಿಎಸ್‌ನಿಂದಲೀ ಉಚ್ಛಾಟನೆಗೊಂಡು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವಾಗಲೇ, ಫೈಟರ್ ರವಿ ನಾಗಮಂಗಲಕ್ಕೆ ಕೋಟಿಗೂ ಹೆಚ್ಚು ಖರ್ಚು ಮಾಡಿ ಪ್ರಧಾನಿಯಿಂದಲೇ ಕೈ ಮುಗಿಸಿಕೊಂಡು ಭೇಷ್ ಎನ್ನಿಸಿಕೊಳ್ಳುವಾಗ, ಸುಮಲತಾ ಕೂಡ ಬಿಜೆಪಿ ಸೇರಿದ್ದು (ಬಾಹ್ಯ ಬೆಂಬಲವೆಂಬ ನಾಟಕದೊಂದಿದೆಗೆ) ಈಗ ಎಲ್ಲಿಗೆ ಹೋಗಲಿ ಎಂಬ ಸ್ಥಿತಿಯನ್ನು ಶಿವರಾಮೇಗೌಡ ಎದುರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಈಗ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಕಳೆದ ಬಾರಿ ಎದುರಿಸಿದ್ದ ಚುನಾವಣೆಯನ್ನು ಪ್ರಪಂಚದಲ್ಲೆಲ್ಲಾ ಹರಡಿರುವ ಅಂಬರೀಶ್ ಅಭಿಮಾನಿಗಳು ಕುತೂಹಲದಿಂದ ನೋಡಿದ್ದರು. ಅದೂಅಲ್ಲದೆ ದುಬೈನ ಬುರ್ಜು ಖಲೀಫದ ಕಟ್ಟಡದಲ್ಲಿ ಕುಳಿತ ಅದರ ಮಾಲೀಕರೂ ಕೂಡ ವೀಕ್ಷಿಸಿದ್ದರು. ಏಕೆಂದರೆ ಅವರೆಲ್ಲಾ ಅಂಬರೀಶ್ ಗೆಳೆಯರಾಗಿದ್ದರು. ಅದೂಅಲ್ಲದೆ ಕಾಶ್ಮೀರದ ಫಾರೂಕ್ ಅಬ್ದುಲ್ಲಾ ಕೂಡ ತನ್ನ ಗೆಳೆಯನ ಪತ್ನಿ ಗೆಲ್ಲಲೆಂದು ಪ್ರಾರ್ಥಿಸಿದ್ದರು. ಅಂತೂ ಸುಮಲತಾ ಗೆದ್ದರು. ಆ ಗೆಲುವಿನಲ್ಲೂ ಕೆಲವು ದಾಖಲೆಗಳಿದ್ದವು. ಅವರ ಬೆನ್ನಿಗೆ ರೈತಸಂಘ, ಕಾಂಗ್ರೆಸ್ಸು, ಕೆಲ ಬಿಜೆಪಿಗಳೂ ನಿಂತಿದ್ದವು. ಆದ್ದರಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಲೀಡಿನಲ್ಲಿ ಗೆದ್ದಿದ್ದರು. ಇದನ್ನೆಲ್ಲ ದಾಟಿದ ಸುಮಲತಾ ಬಿಜೆಪಿಗೆ ನೆಗೆದದ್ದು ಈ ಶತಮಾನದ ದ್ರೋಹ ಎಂದು ಮಂಡ್ಯದ ಸ್ವಾಭಿಮಾನಿಗಳು ಹೇಳುತ್ತಿದ್ದಾರಲ್ಲಾ. ಇದೆಲ್ಲಕ್ಕಿಂತ ಮಂಡ್ಯದವರು ಬೆಚ್ಚಿರುವುದೇಕೆಂದರೆ ಅಂದು ಸೆರಗೊಡ್ಡಿ ಮತ ಕೇಳಿದ್ದ ಈಕೆಯ ನಟನೆ ನಮಗೆ ಗೊತ್ತೇ ಆಗಲಿಲ್ಲ ಎಂದ ರೋಷಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಪ್ರಧಾನಿ ಭೇಟಿಯಿಂದ ಮಂಡ್ಯ ಸುಸ್ತು ಹೊಡೆದು ಕುಳಿತಿದೆಯಲ್ಲಾ. ಏಕೆಂದರೆ ಇಡೀ ಸರಕಾರಿ ಯಂತ್ರಾಂಗವನ್ನೇ ಬಳಸಿಕೊಂಡು ಅದ್ದೂರಿಯಾಗಿ ಪ್ರಧಾನಿಯ ಪ್ರವಾಸವನ್ನು ಮಾಡಿ ಮುಗಿಸಿದ ಬಿಜೆಪಿಯ ಸಾಧನೆ ನೋಡಿದರೆ, ಪ್ರಧಾನಿಗಳು ಫೈಟರ್ ರವಿಗೆ ಕೈ ಮುಗಿದದ್ದು ಮತ್ತು ಸುಮಲತಾರನ್ನು ಪಾರ್ಟಿಗೆ ಸೇರಿಸಿಕೊಂಡಿದ್ದೇ ಬಹುದೊಡ್ಡ ಸಾಧನೆಯಾಗಿ ಕಾಣತೊಡಗಿದೆಯಲ್ಲಾ. ಒಂದೊಂದು ತಾಲೂಕಿನಿಂದ ತಲಾ ಎಪ್ಪತ್ತು ಬಸ್ಸು ಜನ ತುಂಬಿಕೊಂಡು ಬಂದವು. ಅದರಲ್ಲಿ 50 ಜನರಿದ್ದು ತಲಾ ಮುನ್ನೂರು ಬಟವಾಡೆಯಾಗಿ ಕೊಟ್ಟರಂತಲ್ಲಾ. ಹಣ ಮತ್ತು ಬಂದ ಜನರ ದಾಖಲೆ ಎಲ್ಲ ಸರಿಯಾಗಿರಬೇಕು ಎಂದು ಹಿಂದೆಂದು ಕಾಣದ ಶಿಸ್ತಿನಿಂದ ನಡೆದುಹೋದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಚಲುವರಾಯಸ್ವಾಮಿ ನಡೆಸುವ ಸಭೆಗೆ ಮತ್ತು ಶಿವರಾಮೇಗೌಡ ಹಾಗೂ ಇನ್ನಿತರ ಸಭೆಗೂ ಹೋಗುತ್ತ ನಾವು ಕೂಲಿಗೆ ಹೋದರೆ ಐದುನೂರು ಕೊಡುತ್ತಾರೆ ಈ ಮುನ್ನೂರು ಸಾಲುವುದಿಲ್ಲ ಇನ್ನ ಮುಂದೆ ಐನೂರರ ಜೊತೆಗೆ ಒಂದು ಪ್ಯಾಕೆಟ್ ಬಿರಿಯಾನಿ ಮತ್ತು ಒಂದು ಕ್ವಾಟರ್ ಕೊಡುವುದಿದ್ದರೆ ಮನೆ ಹತ್ತಿರ ಬನ್ನಿ ಎನ್ನವಂತಾಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...