Homeಅಂಕಣಗಳುಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

- Advertisement -
- Advertisement -

ಹಸಿರುಮಯವಾಗಿದ್ದ ಮಂಡ್ಯವನ್ನು ಕೇಸರಿಮಯವಾಗಿಸಲು ಪಣತೊಟ್ಟ ಬಿಜೆಪಿಗಳು ಪ್ರಧಾನಿಯವರ ರೋಡ್ ಶೋ ಏರ್ಪಡಿಸಿದ್ದ ಫಲವಾಗಿ ಮೋದಿ ಕೈ ಬೀಸಲು ಅಡ್ಡಿಯಾಗಿದ್ದ ಮರದ ರೆಂಬೆಕೊಂಬೆಗಳನ್ನೆಲ್ಲಾ ಕಡಿದು, ರಸ್ತೆಯ ಮಾರ್ಗವನ್ನು ಬದಲಿಸಿ ಅಂತೂ ಮಂಡ್ಯಕ್ಕೆ ಮೋದಿ ಕರೆತಂದು ಫೈಟರ್ ರವಿಯನ್ನ ಪರಿಚಯಿಸಿದವಲ್ಲಾ. ಮಂಡ್ಯ ಧೀಮಂತ ರಾಜಕಾರಣಿಗಳಿಗೆ ಹೆಸರಾದ ಜಿಲ್ಲೆ. ಅಲ್ಲಿನ ರಾಜಕಾರಣದ ಇತಿಹಾಸ ನೋಡಿದರೆ ಇಲ್ಲಿನ ಪ್ರಾಮಾಣಿಕ ಮತದಾರರ ಮೆಚ್ಚಿನ ಜನ ನಾಯಕರ ಇತಿಹಾಸವೇ ಇದೆ. ಅವರ ಸಂತತಿಗಳು ಕೂಡ ಇನ್ನೂ ಇವೆ. ಅವರನ್ನೆಲ್ಲಾ ಬಿಟ್ಟು ಈ ಬಿಜೆಪಿಗಳು ಫೈಟರ್ ರವಿ ಎಂಬ ವ್ಯಕ್ತಿಯನ್ನು ಪರಿಚಯಿಸಿದಾಗ ಮೋದಿಯವರಿಗೆ ಅಮಿತ್‌ಶಾ ದರ್ಶನ ಮಾಡಿದಂತಾಗಿ ಕೈ ಮುಗಿದು ಮುಗುಳುನಕ್ಕಿದ್ದಾರಲ್ಲಾ. ಇದು ಭಾರತದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ. ಬೆಂಗಳೂರು ಠಾಣೆಗಳಲ್ಲಿ ಕೇಸುಗಳಿರುವ ವ್ಯಕ್ತಿಯೊಬ್ಬ ಜಾದೂ ಮಾಡಿದಂತೆ ಧನಕನಕ ಸಂಗ್ರಹಿಸಿಕೊಂಡು ಒಂದು ಓಟಿಗೆ ಇಂತಿಷ್ಟು ಸಾವಿರ ಕೊಡುತ್ತೇನೆಂದು ಘೋಷಣೆ ಮಾಡಿಕೊಂಡು ತಿರುಗುತ್ತಿರುವಾಗ, ಆತ ಬಿಜೆಪಿಗಳಿಗೆ ಗಣ್ಯನಾಗಿ ಕಂಡಿದ್ದೂ ಅಲ್ಲದೆ, ಆತ ಪ್ರಧಾನ ಮಂತ್ರಿ ಭೇಟಿಮಾಡಲೇಬೇಕಾದ ವ್ಯಕ್ತಿಯೆಂದು ಭಾವಿಸಿದ ಈ ಬಿಜೆಪಿಗಳು ಮುಟ್ಟಿರುವ ಪಾತಾಳ ಎದ್ದು ಬರಲಾರದಂತಹುದಂತಲ್ಲಾ, ಥೂತ್ತೇರಿ.

*****

ಮಂಡ್ಯದಲ್ಲಿ ಫೈಟರ್ ರವಿಯ ಜೊತೆಗೆ ಮತ್ತೊಬ್ಬ ಧೀಮಂತ ಮಹಿಳೆ ಸುಮಲತಾ ತಾನು ಈವರೆಗೆ ಹಸುವಿನಂತಿದ್ದೆ, ನನಗೆ ಆನೆ ಬಲ ಬರಬೇಕಾದರೆ ಬಿಜೆಪಿಗೆ ಸೇರಲೇಬೇಕೆಂದು ಹಠತೊಟ್ಟು ಮೋದಿ ಸಮ್ಮುಖದಲ್ಲೇ ಬಿಜೆಪಿಗಿ ನುಗ್ಗಿದ್ದಾರಲ್ಲಾ. ಸುಮಲತಾ ಚುನಾವಣೆಗೆ ನಿಂತಾಗ ನಾಗಮಂಗಲದ ಮಾಜಿ ಶಾಸಕ ಮತ್ತು ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ತನ್ನದೇ ಶೈಲಿಯಲ್ಲಿ ಸುಮಲತಾರನ್ನು ಜರಿದಿದ್ದರು. ಆಗ ಇಡೀ ನಾಡಿನ ತುಂಬ ಪ್ರತಿಭಟನೆಗಳಾಗಿದ್ದವು. ಶಿವರಾಮೇಗೌಡರ ವಿರುದ್ಧ ಮಹಿಳೆಯರು ಪ್ರತಿಭಟಿಸಿದ್ದರು. ಆದರೆ ಈಗ ಸುಮಲತಾ ದಿಢೀರನೆ ಬಿಜೆಪಿಗೆ ಬೆಂಬಲ ಘೋಷಿಸಿ ಅಸಂಬದ್ಧವಾಗಿ ಮಾತನಾಡುವ ಶಿವರಾಮೇಗೌಡನ ಮಾತನ್ನೇ ಮರೆಸುವಂತೆ ಮುನ್ನುಗ್ಗುತ್ತಿದ್ದಾರಲ್ಲಾ. ಅಂದು ಜೆಡಿಎಸ್ ಲೀಡರುಗಳನ್ನು ಮೆಚ್ಚಿಸಲೋಸ್ಕರ ಅಸಂಬದ್ಧ ಮಾತನಾಡಿದ್ದ ಶಿವರಾಮೇಗೌಡ ಇಂದು ಜೆಡಿಎಸ್‌ನಿಂದಲೀ ಉಚ್ಛಾಟನೆಗೊಂಡು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವಾಗಲೇ, ಫೈಟರ್ ರವಿ ನಾಗಮಂಗಲಕ್ಕೆ ಕೋಟಿಗೂ ಹೆಚ್ಚು ಖರ್ಚು ಮಾಡಿ ಪ್ರಧಾನಿಯಿಂದಲೇ ಕೈ ಮುಗಿಸಿಕೊಂಡು ಭೇಷ್ ಎನ್ನಿಸಿಕೊಳ್ಳುವಾಗ, ಸುಮಲತಾ ಕೂಡ ಬಿಜೆಪಿ ಸೇರಿದ್ದು (ಬಾಹ್ಯ ಬೆಂಬಲವೆಂಬ ನಾಟಕದೊಂದಿದೆಗೆ) ಈಗ ಎಲ್ಲಿಗೆ ಹೋಗಲಿ ಎಂಬ ಸ್ಥಿತಿಯನ್ನು ಶಿವರಾಮೇಗೌಡ ಎದುರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಈಗ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಕಳೆದ ಬಾರಿ ಎದುರಿಸಿದ್ದ ಚುನಾವಣೆಯನ್ನು ಪ್ರಪಂಚದಲ್ಲೆಲ್ಲಾ ಹರಡಿರುವ ಅಂಬರೀಶ್ ಅಭಿಮಾನಿಗಳು ಕುತೂಹಲದಿಂದ ನೋಡಿದ್ದರು. ಅದೂಅಲ್ಲದೆ ದುಬೈನ ಬುರ್ಜು ಖಲೀಫದ ಕಟ್ಟಡದಲ್ಲಿ ಕುಳಿತ ಅದರ ಮಾಲೀಕರೂ ಕೂಡ ವೀಕ್ಷಿಸಿದ್ದರು. ಏಕೆಂದರೆ ಅವರೆಲ್ಲಾ ಅಂಬರೀಶ್ ಗೆಳೆಯರಾಗಿದ್ದರು. ಅದೂಅಲ್ಲದೆ ಕಾಶ್ಮೀರದ ಫಾರೂಕ್ ಅಬ್ದುಲ್ಲಾ ಕೂಡ ತನ್ನ ಗೆಳೆಯನ ಪತ್ನಿ ಗೆಲ್ಲಲೆಂದು ಪ್ರಾರ್ಥಿಸಿದ್ದರು. ಅಂತೂ ಸುಮಲತಾ ಗೆದ್ದರು. ಆ ಗೆಲುವಿನಲ್ಲೂ ಕೆಲವು ದಾಖಲೆಗಳಿದ್ದವು. ಅವರ ಬೆನ್ನಿಗೆ ರೈತಸಂಘ, ಕಾಂಗ್ರೆಸ್ಸು, ಕೆಲ ಬಿಜೆಪಿಗಳೂ ನಿಂತಿದ್ದವು. ಆದ್ದರಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಲೀಡಿನಲ್ಲಿ ಗೆದ್ದಿದ್ದರು. ಇದನ್ನೆಲ್ಲ ದಾಟಿದ ಸುಮಲತಾ ಬಿಜೆಪಿಗೆ ನೆಗೆದದ್ದು ಈ ಶತಮಾನದ ದ್ರೋಹ ಎಂದು ಮಂಡ್ಯದ ಸ್ವಾಭಿಮಾನಿಗಳು ಹೇಳುತ್ತಿದ್ದಾರಲ್ಲಾ. ಇದೆಲ್ಲಕ್ಕಿಂತ ಮಂಡ್ಯದವರು ಬೆಚ್ಚಿರುವುದೇಕೆಂದರೆ ಅಂದು ಸೆರಗೊಡ್ಡಿ ಮತ ಕೇಳಿದ್ದ ಈಕೆಯ ನಟನೆ ನಮಗೆ ಗೊತ್ತೇ ಆಗಲಿಲ್ಲ ಎಂದ ರೋಷಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಪ್ರಧಾನಿ ಭೇಟಿಯಿಂದ ಮಂಡ್ಯ ಸುಸ್ತು ಹೊಡೆದು ಕುಳಿತಿದೆಯಲ್ಲಾ. ಏಕೆಂದರೆ ಇಡೀ ಸರಕಾರಿ ಯಂತ್ರಾಂಗವನ್ನೇ ಬಳಸಿಕೊಂಡು ಅದ್ದೂರಿಯಾಗಿ ಪ್ರಧಾನಿಯ ಪ್ರವಾಸವನ್ನು ಮಾಡಿ ಮುಗಿಸಿದ ಬಿಜೆಪಿಯ ಸಾಧನೆ ನೋಡಿದರೆ, ಪ್ರಧಾನಿಗಳು ಫೈಟರ್ ರವಿಗೆ ಕೈ ಮುಗಿದದ್ದು ಮತ್ತು ಸುಮಲತಾರನ್ನು ಪಾರ್ಟಿಗೆ ಸೇರಿಸಿಕೊಂಡಿದ್ದೇ ಬಹುದೊಡ್ಡ ಸಾಧನೆಯಾಗಿ ಕಾಣತೊಡಗಿದೆಯಲ್ಲಾ. ಒಂದೊಂದು ತಾಲೂಕಿನಿಂದ ತಲಾ ಎಪ್ಪತ್ತು ಬಸ್ಸು ಜನ ತುಂಬಿಕೊಂಡು ಬಂದವು. ಅದರಲ್ಲಿ 50 ಜನರಿದ್ದು ತಲಾ ಮುನ್ನೂರು ಬಟವಾಡೆಯಾಗಿ ಕೊಟ್ಟರಂತಲ್ಲಾ. ಹಣ ಮತ್ತು ಬಂದ ಜನರ ದಾಖಲೆ ಎಲ್ಲ ಸರಿಯಾಗಿರಬೇಕು ಎಂದು ಹಿಂದೆಂದು ಕಾಣದ ಶಿಸ್ತಿನಿಂದ ನಡೆದುಹೋದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಚಲುವರಾಯಸ್ವಾಮಿ ನಡೆಸುವ ಸಭೆಗೆ ಮತ್ತು ಶಿವರಾಮೇಗೌಡ ಹಾಗೂ ಇನ್ನಿತರ ಸಭೆಗೂ ಹೋಗುತ್ತ ನಾವು ಕೂಲಿಗೆ ಹೋದರೆ ಐದುನೂರು ಕೊಡುತ್ತಾರೆ ಈ ಮುನ್ನೂರು ಸಾಲುವುದಿಲ್ಲ ಇನ್ನ ಮುಂದೆ ಐನೂರರ ಜೊತೆಗೆ ಒಂದು ಪ್ಯಾಕೆಟ್ ಬಿರಿಯಾನಿ ಮತ್ತು ಒಂದು ಕ್ವಾಟರ್ ಕೊಡುವುದಿದ್ದರೆ ಮನೆ ಹತ್ತಿರ ಬನ್ನಿ ಎನ್ನವಂತಾಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...