Homeಅಂಕಣಗಳುಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

- Advertisement -
- Advertisement -

ಹಸಿರುಮಯವಾಗಿದ್ದ ಮಂಡ್ಯವನ್ನು ಕೇಸರಿಮಯವಾಗಿಸಲು ಪಣತೊಟ್ಟ ಬಿಜೆಪಿಗಳು ಪ್ರಧಾನಿಯವರ ರೋಡ್ ಶೋ ಏರ್ಪಡಿಸಿದ್ದ ಫಲವಾಗಿ ಮೋದಿ ಕೈ ಬೀಸಲು ಅಡ್ಡಿಯಾಗಿದ್ದ ಮರದ ರೆಂಬೆಕೊಂಬೆಗಳನ್ನೆಲ್ಲಾ ಕಡಿದು, ರಸ್ತೆಯ ಮಾರ್ಗವನ್ನು ಬದಲಿಸಿ ಅಂತೂ ಮಂಡ್ಯಕ್ಕೆ ಮೋದಿ ಕರೆತಂದು ಫೈಟರ್ ರವಿಯನ್ನ ಪರಿಚಯಿಸಿದವಲ್ಲಾ. ಮಂಡ್ಯ ಧೀಮಂತ ರಾಜಕಾರಣಿಗಳಿಗೆ ಹೆಸರಾದ ಜಿಲ್ಲೆ. ಅಲ್ಲಿನ ರಾಜಕಾರಣದ ಇತಿಹಾಸ ನೋಡಿದರೆ ಇಲ್ಲಿನ ಪ್ರಾಮಾಣಿಕ ಮತದಾರರ ಮೆಚ್ಚಿನ ಜನ ನಾಯಕರ ಇತಿಹಾಸವೇ ಇದೆ. ಅವರ ಸಂತತಿಗಳು ಕೂಡ ಇನ್ನೂ ಇವೆ. ಅವರನ್ನೆಲ್ಲಾ ಬಿಟ್ಟು ಈ ಬಿಜೆಪಿಗಳು ಫೈಟರ್ ರವಿ ಎಂಬ ವ್ಯಕ್ತಿಯನ್ನು ಪರಿಚಯಿಸಿದಾಗ ಮೋದಿಯವರಿಗೆ ಅಮಿತ್‌ಶಾ ದರ್ಶನ ಮಾಡಿದಂತಾಗಿ ಕೈ ಮುಗಿದು ಮುಗುಳುನಕ್ಕಿದ್ದಾರಲ್ಲಾ. ಇದು ಭಾರತದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ. ಬೆಂಗಳೂರು ಠಾಣೆಗಳಲ್ಲಿ ಕೇಸುಗಳಿರುವ ವ್ಯಕ್ತಿಯೊಬ್ಬ ಜಾದೂ ಮಾಡಿದಂತೆ ಧನಕನಕ ಸಂಗ್ರಹಿಸಿಕೊಂಡು ಒಂದು ಓಟಿಗೆ ಇಂತಿಷ್ಟು ಸಾವಿರ ಕೊಡುತ್ತೇನೆಂದು ಘೋಷಣೆ ಮಾಡಿಕೊಂಡು ತಿರುಗುತ್ತಿರುವಾಗ, ಆತ ಬಿಜೆಪಿಗಳಿಗೆ ಗಣ್ಯನಾಗಿ ಕಂಡಿದ್ದೂ ಅಲ್ಲದೆ, ಆತ ಪ್ರಧಾನ ಮಂತ್ರಿ ಭೇಟಿಮಾಡಲೇಬೇಕಾದ ವ್ಯಕ್ತಿಯೆಂದು ಭಾವಿಸಿದ ಈ ಬಿಜೆಪಿಗಳು ಮುಟ್ಟಿರುವ ಪಾತಾಳ ಎದ್ದು ಬರಲಾರದಂತಹುದಂತಲ್ಲಾ, ಥೂತ್ತೇರಿ.

*****

ಮಂಡ್ಯದಲ್ಲಿ ಫೈಟರ್ ರವಿಯ ಜೊತೆಗೆ ಮತ್ತೊಬ್ಬ ಧೀಮಂತ ಮಹಿಳೆ ಸುಮಲತಾ ತಾನು ಈವರೆಗೆ ಹಸುವಿನಂತಿದ್ದೆ, ನನಗೆ ಆನೆ ಬಲ ಬರಬೇಕಾದರೆ ಬಿಜೆಪಿಗೆ ಸೇರಲೇಬೇಕೆಂದು ಹಠತೊಟ್ಟು ಮೋದಿ ಸಮ್ಮುಖದಲ್ಲೇ ಬಿಜೆಪಿಗಿ ನುಗ್ಗಿದ್ದಾರಲ್ಲಾ. ಸುಮಲತಾ ಚುನಾವಣೆಗೆ ನಿಂತಾಗ ನಾಗಮಂಗಲದ ಮಾಜಿ ಶಾಸಕ ಮತ್ತು ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ತನ್ನದೇ ಶೈಲಿಯಲ್ಲಿ ಸುಮಲತಾರನ್ನು ಜರಿದಿದ್ದರು. ಆಗ ಇಡೀ ನಾಡಿನ ತುಂಬ ಪ್ರತಿಭಟನೆಗಳಾಗಿದ್ದವು. ಶಿವರಾಮೇಗೌಡರ ವಿರುದ್ಧ ಮಹಿಳೆಯರು ಪ್ರತಿಭಟಿಸಿದ್ದರು. ಆದರೆ ಈಗ ಸುಮಲತಾ ದಿಢೀರನೆ ಬಿಜೆಪಿಗೆ ಬೆಂಬಲ ಘೋಷಿಸಿ ಅಸಂಬದ್ಧವಾಗಿ ಮಾತನಾಡುವ ಶಿವರಾಮೇಗೌಡನ ಮಾತನ್ನೇ ಮರೆಸುವಂತೆ ಮುನ್ನುಗ್ಗುತ್ತಿದ್ದಾರಲ್ಲಾ. ಅಂದು ಜೆಡಿಎಸ್ ಲೀಡರುಗಳನ್ನು ಮೆಚ್ಚಿಸಲೋಸ್ಕರ ಅಸಂಬದ್ಧ ಮಾತನಾಡಿದ್ದ ಶಿವರಾಮೇಗೌಡ ಇಂದು ಜೆಡಿಎಸ್‌ನಿಂದಲೀ ಉಚ್ಛಾಟನೆಗೊಂಡು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವಾಗಲೇ, ಫೈಟರ್ ರವಿ ನಾಗಮಂಗಲಕ್ಕೆ ಕೋಟಿಗೂ ಹೆಚ್ಚು ಖರ್ಚು ಮಾಡಿ ಪ್ರಧಾನಿಯಿಂದಲೇ ಕೈ ಮುಗಿಸಿಕೊಂಡು ಭೇಷ್ ಎನ್ನಿಸಿಕೊಳ್ಳುವಾಗ, ಸುಮಲತಾ ಕೂಡ ಬಿಜೆಪಿ ಸೇರಿದ್ದು (ಬಾಹ್ಯ ಬೆಂಬಲವೆಂಬ ನಾಟಕದೊಂದಿದೆಗೆ) ಈಗ ಎಲ್ಲಿಗೆ ಹೋಗಲಿ ಎಂಬ ಸ್ಥಿತಿಯನ್ನು ಶಿವರಾಮೇಗೌಡ ಎದುರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಈಗ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಕಳೆದ ಬಾರಿ ಎದುರಿಸಿದ್ದ ಚುನಾವಣೆಯನ್ನು ಪ್ರಪಂಚದಲ್ಲೆಲ್ಲಾ ಹರಡಿರುವ ಅಂಬರೀಶ್ ಅಭಿಮಾನಿಗಳು ಕುತೂಹಲದಿಂದ ನೋಡಿದ್ದರು. ಅದೂಅಲ್ಲದೆ ದುಬೈನ ಬುರ್ಜು ಖಲೀಫದ ಕಟ್ಟಡದಲ್ಲಿ ಕುಳಿತ ಅದರ ಮಾಲೀಕರೂ ಕೂಡ ವೀಕ್ಷಿಸಿದ್ದರು. ಏಕೆಂದರೆ ಅವರೆಲ್ಲಾ ಅಂಬರೀಶ್ ಗೆಳೆಯರಾಗಿದ್ದರು. ಅದೂಅಲ್ಲದೆ ಕಾಶ್ಮೀರದ ಫಾರೂಕ್ ಅಬ್ದುಲ್ಲಾ ಕೂಡ ತನ್ನ ಗೆಳೆಯನ ಪತ್ನಿ ಗೆಲ್ಲಲೆಂದು ಪ್ರಾರ್ಥಿಸಿದ್ದರು. ಅಂತೂ ಸುಮಲತಾ ಗೆದ್ದರು. ಆ ಗೆಲುವಿನಲ್ಲೂ ಕೆಲವು ದಾಖಲೆಗಳಿದ್ದವು. ಅವರ ಬೆನ್ನಿಗೆ ರೈತಸಂಘ, ಕಾಂಗ್ರೆಸ್ಸು, ಕೆಲ ಬಿಜೆಪಿಗಳೂ ನಿಂತಿದ್ದವು. ಆದ್ದರಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಲೀಡಿನಲ್ಲಿ ಗೆದ್ದಿದ್ದರು. ಇದನ್ನೆಲ್ಲ ದಾಟಿದ ಸುಮಲತಾ ಬಿಜೆಪಿಗೆ ನೆಗೆದದ್ದು ಈ ಶತಮಾನದ ದ್ರೋಹ ಎಂದು ಮಂಡ್ಯದ ಸ್ವಾಭಿಮಾನಿಗಳು ಹೇಳುತ್ತಿದ್ದಾರಲ್ಲಾ. ಇದೆಲ್ಲಕ್ಕಿಂತ ಮಂಡ್ಯದವರು ಬೆಚ್ಚಿರುವುದೇಕೆಂದರೆ ಅಂದು ಸೆರಗೊಡ್ಡಿ ಮತ ಕೇಳಿದ್ದ ಈಕೆಯ ನಟನೆ ನಮಗೆ ಗೊತ್ತೇ ಆಗಲಿಲ್ಲ ಎಂದ ರೋಷಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಪ್ರಧಾನಿ ಭೇಟಿಯಿಂದ ಮಂಡ್ಯ ಸುಸ್ತು ಹೊಡೆದು ಕುಳಿತಿದೆಯಲ್ಲಾ. ಏಕೆಂದರೆ ಇಡೀ ಸರಕಾರಿ ಯಂತ್ರಾಂಗವನ್ನೇ ಬಳಸಿಕೊಂಡು ಅದ್ದೂರಿಯಾಗಿ ಪ್ರಧಾನಿಯ ಪ್ರವಾಸವನ್ನು ಮಾಡಿ ಮುಗಿಸಿದ ಬಿಜೆಪಿಯ ಸಾಧನೆ ನೋಡಿದರೆ, ಪ್ರಧಾನಿಗಳು ಫೈಟರ್ ರವಿಗೆ ಕೈ ಮುಗಿದದ್ದು ಮತ್ತು ಸುಮಲತಾರನ್ನು ಪಾರ್ಟಿಗೆ ಸೇರಿಸಿಕೊಂಡಿದ್ದೇ ಬಹುದೊಡ್ಡ ಸಾಧನೆಯಾಗಿ ಕಾಣತೊಡಗಿದೆಯಲ್ಲಾ. ಒಂದೊಂದು ತಾಲೂಕಿನಿಂದ ತಲಾ ಎಪ್ಪತ್ತು ಬಸ್ಸು ಜನ ತುಂಬಿಕೊಂಡು ಬಂದವು. ಅದರಲ್ಲಿ 50 ಜನರಿದ್ದು ತಲಾ ಮುನ್ನೂರು ಬಟವಾಡೆಯಾಗಿ ಕೊಟ್ಟರಂತಲ್ಲಾ. ಹಣ ಮತ್ತು ಬಂದ ಜನರ ದಾಖಲೆ ಎಲ್ಲ ಸರಿಯಾಗಿರಬೇಕು ಎಂದು ಹಿಂದೆಂದು ಕಾಣದ ಶಿಸ್ತಿನಿಂದ ನಡೆದುಹೋದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಚಲುವರಾಯಸ್ವಾಮಿ ನಡೆಸುವ ಸಭೆಗೆ ಮತ್ತು ಶಿವರಾಮೇಗೌಡ ಹಾಗೂ ಇನ್ನಿತರ ಸಭೆಗೂ ಹೋಗುತ್ತ ನಾವು ಕೂಲಿಗೆ ಹೋದರೆ ಐದುನೂರು ಕೊಡುತ್ತಾರೆ ಈ ಮುನ್ನೂರು ಸಾಲುವುದಿಲ್ಲ ಇನ್ನ ಮುಂದೆ ಐನೂರರ ಜೊತೆಗೆ ಒಂದು ಪ್ಯಾಕೆಟ್ ಬಿರಿಯಾನಿ ಮತ್ತು ಒಂದು ಕ್ವಾಟರ್ ಕೊಡುವುದಿದ್ದರೆ ಮನೆ ಹತ್ತಿರ ಬನ್ನಿ ಎನ್ನವಂತಾಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...