Homeಅಂಕಣಗಳುಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

ಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

- Advertisement -
- Advertisement -

ಸರಕಾರದ ಸಾಧನೆಯ ಪಟ್ಟಿ ಮುಂದಿಟ್ಟು ಮತ ಕೇಳಿ ಎಂದು ಜೆ.ಪಿ ನಡ್ಡಾ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರಂತಲ್ಲಾ. ಆ ಕೂಡಲೇ ಬಿಜೆಪಿಯ ಉಗ್ರ ಕಾರ್ಯಕರ್ತರಿಗೆ ಕಾಣಿಸಿದ ಸಾಧನೆಗಳಾವುವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮುಸ್ಲಿಂ ಹುಡುಗಿಯರ ಹಿಜಾಬು ತೆಗೆಸಲು ಹೋರಾಡಿದ್ದು. ನಂತರ ಮುಸ್ಲಿಮರು ಜಾತ್ರೆ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡದಂತೆ ದಾಳಿ ಮಾಡಿ, ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ತುಳಿದು ನಾಶಮಾಡಿದ್ದು. ಅಲ್ಲದೆ ಮುಸಲ್ಮಾನರ ಅಂಗಡಿಯಲ್ಲಿ ಮಾಂಸ ತಂದು ತಿನ್ನಬೇಡಿರೆಂದು ಕಾಳಿಸ್ವಾಮಿ ಎಂಬುವವ ಕೋಳಿಸ್ಟಾಲ್ ಮಾಡಿದ್ದು. ಇನ್ನ ಗೋಳವಲಕರ ಅರ್ಥ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹಿಂದುಳಿದ ವರ್ಗದ ಹುಡುಗರ ಹಾಸ್ಟಲು ಫೀಜು ಬಂದ್ ಮಾಡಿದ್ದು. ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ದು. ಕಬ್ಬಿನ ಬೆಂಬಲ ಬೆಲೆ ನೀಡಲಾಗದ ರೈತರ ಕಡೆ ತಿರುಗಿ ನೋಡದೆ ಇದ್ದದ್ದು. ಬೆಂಗಳೂರಲ್ಲಿ ಗುಂಡಿ ಬಿದ್ದ ಗುಂಡಿಗೆ ಬಿದ್ದು ಹಲವು ಜನ ಪ್ರಾಣ ಕಳೆದುಕೊಂಡದ್ದು. ಗುಂಡಿ ಮುಚ್ಚುವ ಪರ್ಸೆಂಟೇಜಿಗಾಗಿ ಜಗಳವಾಡುತ್ತ ಕೂತಿದ್ದು. ಇನ್ನ ನಲವತ್ತು ಪರಸೆಂಟ್ ಗಲಾಟೆಯಲ್ಲಿ ಮಂತ್ರಿಗಿರಿ ಕಳೆದುಕೊಂಡ ಈಶ್ವರಪ್ಪನ ನೇತೃತ್ವದಲ್ಲಿ ಮುಸ್ಲಿಮರ ಕೇರಿಗೆ ನುಗ್ಗಿ ಎಸ್ಪಿ, ಡಿ.ಸಿ, ತಹಸೀಲ್ದಾರ, ಎಂ.ಪಿ ನೇತೃತ್ವದಲ್ಲಿ ಅವರ ಜೀವನೋಪಾಯದ ಪದಾರ್ಥಗಳನ್ನು ಬೀದಿಗೆ ಎಸೆದು ಭಯೋತ್ಪಾದನೆ ಮಾಡಿದ್ದು. ಇವೆಲ್ಲಾ ಬಿಜೆಪಿಗಳ ಸಾಧನೆಯಾಗಿ ಇದನ್ನೇ ಹೇಳಿಕೊಂಡು ಮತ ಕೇಳಲು ತಯಾರಾದ ಅವರುಗಳ ತಲೆಗೆ ಒಳ್ಳೆಯ ಕೆಲಸಗಳೇ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಎಲ್ಲ ವಿಧಾನಸಭಾ ಸದಸ್ಯರಿಗೆ ಬೆಳಗಾವಿ ಅಧಿವೇಶನವೆಂದರೆ ವಿದ್ಯೆ ಕಲಿಯಲು ಇಷ್ಟವಿಲ್ಲದ ಹುಡುಗರು ಸ್ಕೂಲಿಗೆ ಹೋದ ರೀತಿಯಂತಲ್ಲಾ. ಏಕೆಂದರೆ ಅಧಿವೇಶನಗಳು ಅರ್ಥ ಕಳೆದುಕೊಂಡಿವೆ. ಅಲ್ಲಿ ಯಾರಾದರೂ ಎದ್ದುನಿಂತು ಮಾತನಾಡಿದರೆ ಕೇಳಿಸಿಕೊಳ್ಳಬೇಕಿನಿಸುವುದಿಲ್ಲ; ಗೈರುಹಾಜರಾದರೆ, ಗೋವಾಕ್ಕೆ ಹೋಗಬೇಕಿನಿಸುತ್ತದೆ. ಕೊಠಡಿಯಲ್ಲೇ ಇರಲು ಬೇಜಾರು. ಎಲ್ಲಾದರೂ ಹೋಗೋಣವೆಂದರೆ ತಾಜ್‌ವೆಸ್ಟ್ ಹೋಟಲಿನಂತವೂ ಇಲ್ಲ. ಹೀಗಾಗಿ ಬಿಜೆಪಿಗಳು ಸದನವನ್ನೇ ಗಬ್ಬೆಬ್ಬಿಸುವ ಪ್ಲಾನ್ ಮಾಡಿ ಸಾವರ್ಕರ್‌ನ ಫೋಟೋವನ್ನು ಮುಖ್ಯಮಂತ್ರಿಗೂ ಗೊತ್ತಿಲ್ಲದೆ ಅಳವಡಿಸುವ ಸಂಚು ರೂಪಿಸಿದರಂತಲ್ಲಾ. ಅಲ್ಲಿಗೆ ಇದು ಆರೆಸ್ಸೆಸ್ ಕಾರ್ಯಕ್ರಮದಂತೆ ಕಂಡು ಕಾಂಗೈಗಳು ಸಾವರ್ಕರ್‌ನ ಜೊತೆಗೆ ಅಥವ ಬದಲಿಗೆ ಇನ್ನಿತರ ಕನ್ನಡದ ಸಾಂಸ್ಕೃತಿಕ ನಾಯಕರ ಫೋಟೋನೂ ಮಡಗಿ ಎಂದು ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತರಂತಲ್ಲಾ. ಇದನ್ನ ಕಂಡ ಬಿಜೆಪಿಗಳು ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಕರಿನೀರ ಶಿಕ್ಷೆಗೆ ಗುರಿಯಾದವರು. ಗಾಂಧಿ ಕೊಂದವರೆಂದು ನೀವೇ ಆಪಾದಿಸುತ್ತಿದ್ದೀರಿ; ಗಾಂಧಿ ಕೊಲ್ಲಲು ಪಿಸ್ತೂಲು ಕೊಟ್ಟವರು ಸಾವರ್ಕರ್ ಎಂದು ಇತ್ತೀಚೆಗೆ ಗಾಂಧೀಜಿ ಮರಿಮಗ ಹೇಳಿದ್ದಾರೆ. ನಮ್ಮ ಪುರಾಣದಲ್ಲಿ ಕೊಂದವರು ಕೊಲ್ಲಿಸಿಕೊಂಡವರನ್ನು ನೆನೆಸುತ್ತ ಬಂದಿದ್ದೇವೆ. ಉದಾಹರಣೆ ಬೇಕಾದಷ್ಟಿವೆ. ರಾಮ-ರಾವಣ, ಕೃಷ್ಣ-ಕಂಸ, ನರಸಿಂಹ-ಹಿರಣ್ಯಕಶಿಪು ಹೀಗೆ. ಆದ್ದರಿಂದ ಗಾಂಧಿ ಫೋಟೋ ಸುವರ್ಣ ಸೌಧದಲ್ಲಿರುವುದಾದರೆ ಪಕ್ಕದಲ್ಲಿ ಸಾವರ್ಕರ್ ಫೋಟೋ ಇರುವುದು ಸತ್ಯ. ಓಂ ಶಾಂತಿ ಶಾಂತಿ ಶಾಂತಿ ಎಂದವಂತಲ್ಲಾ, ಥೂತ್ತೇರಿ.

*****

ಹದಿನೈದು ಲಕ್ಷ ಮತದಾರರನ್ನು ಡಿಲೀಟ್ ಮಾಡಿಸಿದ ಆರೋಪ ಎದುರಿಸುತ್ತಿರುವ ಸರಕಾರ ಈ ಕೃತ್ಯ ವ್ಯಾಪಕವಾಗಿ ಪ್ರಚಾರವಾಗದಂತೆ ತಡೆಯಲು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬ್ಲಾಸ್ಟು ಮಾಡಿ ಎಂದು ಟಿವಿಯವರಿಗೆ ಸೂಚನೆ ಕೊಟ್ಟ ಕೂಡಲೇ ಮಾರಿಕೊಂಡ ಮಾಧ್ಯಮದವರು ಮತದಾರರು ಕಾಣೆಯಾಗಿರುವ ಪ್ರಕರಣವನ್ನೇ ಮರೆಯಾಗುವಂತೆ ಮಾಡಿದರು ಎಂದು ಡಿ.ಕೆ.ಶಿ ಆಪಾದನೆ ಮಾಡಿದರಂತಲ್ಲ. ಹಾಗಂದ ಕೂಡಲೇ ಅವರ ಮೇಲೆ ಇ.ಡಿ ದಾಳಿ ನಡೆಯಿತು. ಈಗ ಸರಕಾರದ ಸಂಪೂರ್ಣ ವೈಫಲ್ಯ ಮುಚ್ಚಲು ಸಾವರ್ಕರ್‌ನ ಮೊರೆ ಹೋಗಿರುವ ಸರಕಾರ ಆರೆಸ್ಸೆಸ್ ಸೂಚನೆಯಂತೆ ಆತನ ಭಾವಚಿತ್ರವನ್ನು ಸುವರ್ಣಸೌಧದದಲ್ಲಿ ಅಳವಡಿಸಲು ಸಂಚು ರೂಪಿಸಿದೆಯಂತಲ್ಲಾ. ಇದರಲ್ಲಿ ಅವರು ಗೆದ್ದರೆ ಮುಂದಿನ ಅಧಿವೇಶನಕ್ಕೆ ಸಾವರ್ಕರ್‌ನ ಪಕ್ಕಕ್ಕೆ ಗೋಳವಲಕರನ ಫೋಟೋ ಬರುತ್ತೆ ನಂತರ ಹೆಡಗೆವಾರನ ಚಿತ್ರ ತೂಗುಬೀಳುತ್ತೆ. ಆ ನಂತರ ರೈಲ್ವೆ ಭೋಗಿ ಮೇಲಿರುವ ದೀನದಯಾಳರ ಭಾವಚಿತ್ರ ವಿರಾಜಮಾನವಾಗುತ್ತೆ. ಹಾಲಿ ಸದಸ್ಯರೆಲ್ಲಾ ಅಸ್ತಂಗತರಾದ ಮೇಲೆ ಸುವರ್ಣಸೌಧದ ಗೋಡೆ ಮೇಲೆ ಎಡೂರಪ್ಪ, ಜೋಷಿ, ಸಿ.ಟಿ ರವಿ, ರೇಣುಕಾಚಾರ್ಯ, ಈಶ್ವರಪ್ಪ ಸರದಿಯೂ ಬರಬಹುದು. ಅಷ್ಟಕ್ಕೂ ಸಾವರ್ಕರ್ ಸುವರ್ಣ ಸಂಸ್ಕೃತಿ ಭವನ ಹೊಕ್ಕಿದ್ದು ಈಶ್ವರಪ್ಪರ ಸಾಧನೆಯಿಂದ. ಶಿವಮೊಗ್ಗದ ಮಾರ್ಕೆಟ್‌ನಲ್ಲಿ ನಿಲ್ಲಿಸಿದ್ದ ಸಾವರ್ಕರ್‌ನ ಫೋಟೋವನ್ನು ಯಾರೋ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಿತ್ತೆಸೆದ. ಅಷ್ಟು ಸಾಕಿತ್ತು ಮಂತ್ರಿಗಿರಿ ಕಳೆದುಕೊಂಡು ನಿರುದ್ಯೋಗಿಯಾಗಿದ್ದ ಈಶ್ವರಪ್ಪರಿಗೆ. ಕೂಡಲೇ ತರತರದ ಕಾರ್ಯಕ್ರಮಗಳನ್ನು ಮಾಡಿ ಸಾವರ್ಕರ್‌ನನ್ನು ಮೆರೆಸಿದರು. ಅಂತಹ ವ್ಯಕ್ತಿ ಈಗ ಸದನಕ್ಕೆ ಹೋಗದೆ ಜಾರಕಿಹೊಳಿ ಮನೆಯಲ್ಲಿ ಜಾಲಿಯಾಗಿ ಕಾಲ ಕಳೆದದ್ದು ಇತಿಹಾಸದ ವ್ಯಂಗ್ಯವಂತಲ್ಲಾ, ಥೂತ್ತೇರಿ.

*****

ನಮ್ಮ ಹಿರಿಯ ಚೇತನಗಳಾದ ಶ್ರೀನಿವಾಸ್ ಪ್ರಸಾದ್ ಮತ್ತು ವಿಶ್ವನಾಥ್ ಹರಿಯ ಮುರಿಯ ಜಗಳಕ್ಕೆ ಬಿದ್ದಿದ್ದಾರಲ್ಲಾ. ಹಳ್ಳಿಯ ಕಡೆ ಒಂದು ಗಾದೆಯಿದೆ. ’ತಿರಿಯಲು ಬಂದು ಕೇರಿಯಲ್ಲಿ ಜಗಳಕ್ಕೆ ಬಿದ್ದರು’ ಅಂತ. ಪ್ರಸಾದ್ ಮತ್ತು ವಿಶ್ವನಾಥ್ ತಿರಿಯಲು ಬಂದಿದ್ದು ಬಿಜೆಪಿ ಕೇರಿಯಲ್ಲಿ. ಅದವರ ಕೇರಿಯಲ್ಲ. ಅವರು ಬಂದಿದ್ದು ಕಾಂಗ್ರೆಸ್ ಕೇರಿಯಿಂದ. ಅವರಿಬ್ಬರೂ ಬಿಜೆಪಿಗೆ ಬಂದಿದ್ದು ಒಂದೇ ಕಾರಣದಿಂದ. ಪ್ರಸಾದ್ ಸಿದ್ದರಾಮಯ್ಯಗೆ ತಾಕೀತು ಮಾಡಿ ರೆವಿನ್ಯೂ ಮಂತ್ರಿಯಾದ ಕೂಡಲೇ ವೀಕ್ ಆದರು. ವಿಶ್ವನಾಥ್ ತಮ್ಮನ್ನು ಮಂತ್ರಿ ಮಾಡಲಿಲ್ಲ ಎಂದು ಸೋನಿಯಾಗಾಂಧಿಗೆ ’ಸಿದ್ದು ಭ್ರಷ್ಟ, ಬದಲಾಯಿಸಿ’ ಎಂದು ದೂರು ಬರೆಯುತ್ತ ಕುಳಿತರು. ಈ ಇಬ್ಬರ ಚಟುವಟಿಕೆಯನ್ನು ನೋಡಿದ ಸಿದ್ದು ಇಬ್ಬರೂ ಕಾಂಗ್ರೆಸ್ ಬಿಟ್ಟುಹೋಗುವಂತೆ ಮಾಡಿದರು. ಸಮಾನ ಸಂತ್ರಸ್ತರಾದ ಇಬ್ಬರಿಗೂ ಬಿಜೆಪಿ ಅನ್ಯಾಯ ಮಾಡಲಿಲ್ಲ. ಒಬ್ಬರನ್ನು ಸಂಸದರನ್ನಾಗಿಸಿತು, ಮತ್ತೊಬ್ಬರನ್ನು ಎಮ್ಮೆಲ್ಸಿ ಮಾಡಿತು. ರಾಜಕಾರಣದ ಅಂಚಿಗೆ ಸರಿದಿರುವ ಶ್ರೀನಿವಾಸ ಪ್ರಸಾದ್ ನಿವೃತ್ತಿ ಅಂಚಿನಲ್ಲಿದ್ದರೆ, ವಿಶ್ವನಾಥ್ ಕಾಂಗ್ರೆಸ್ ಕೇರಿಗೆ ಬಂದು ಇನ್ನೊಂದು ಚಾನ್ಸಿಗೆ ಅಡಿಪಾಯ ಹಾಕುತ್ತಿದ್ದಾರೆ. ಪ್ರಸಾದ್, ವಿಶ್ವನಾಥರನ್ನ ಮೂದಲಿಸಿ ಅಲೆಮಾರಿ ಎಂದುಬಿಟ್ಟಿದ್ದಾರಲ್ಲಾ. ಸಾಮಾನ್ಯವಾಗಿ ಪಕ್ಷದಿಂದ ಪಕ್ಷಕ್ಕೆ ಅಲೆಯುವ ಒಬ್ಬ ಅಲೆಮಾರಿಯನ್ನು ಕಂಡ ಇನ್ನೊಬ್ಬ ಅಲೆಮಾರಿಗೆ ಆಗುವುದಿಲ್ಲವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...