Homeಅಂಕಣಗಳುಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

ಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

- Advertisement -
- Advertisement -

ಸರಕಾರದ ಸಾಧನೆಯ ಪಟ್ಟಿ ಮುಂದಿಟ್ಟು ಮತ ಕೇಳಿ ಎಂದು ಜೆ.ಪಿ ನಡ್ಡಾ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರಂತಲ್ಲಾ. ಆ ಕೂಡಲೇ ಬಿಜೆಪಿಯ ಉಗ್ರ ಕಾರ್ಯಕರ್ತರಿಗೆ ಕಾಣಿಸಿದ ಸಾಧನೆಗಳಾವುವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮುಸ್ಲಿಂ ಹುಡುಗಿಯರ ಹಿಜಾಬು ತೆಗೆಸಲು ಹೋರಾಡಿದ್ದು. ನಂತರ ಮುಸ್ಲಿಮರು ಜಾತ್ರೆ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡದಂತೆ ದಾಳಿ ಮಾಡಿ, ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ತುಳಿದು ನಾಶಮಾಡಿದ್ದು. ಅಲ್ಲದೆ ಮುಸಲ್ಮಾನರ ಅಂಗಡಿಯಲ್ಲಿ ಮಾಂಸ ತಂದು ತಿನ್ನಬೇಡಿರೆಂದು ಕಾಳಿಸ್ವಾಮಿ ಎಂಬುವವ ಕೋಳಿಸ್ಟಾಲ್ ಮಾಡಿದ್ದು. ಇನ್ನ ಗೋಳವಲಕರ ಅರ್ಥ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹಿಂದುಳಿದ ವರ್ಗದ ಹುಡುಗರ ಹಾಸ್ಟಲು ಫೀಜು ಬಂದ್ ಮಾಡಿದ್ದು. ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ದು. ಕಬ್ಬಿನ ಬೆಂಬಲ ಬೆಲೆ ನೀಡಲಾಗದ ರೈತರ ಕಡೆ ತಿರುಗಿ ನೋಡದೆ ಇದ್ದದ್ದು. ಬೆಂಗಳೂರಲ್ಲಿ ಗುಂಡಿ ಬಿದ್ದ ಗುಂಡಿಗೆ ಬಿದ್ದು ಹಲವು ಜನ ಪ್ರಾಣ ಕಳೆದುಕೊಂಡದ್ದು. ಗುಂಡಿ ಮುಚ್ಚುವ ಪರ್ಸೆಂಟೇಜಿಗಾಗಿ ಜಗಳವಾಡುತ್ತ ಕೂತಿದ್ದು. ಇನ್ನ ನಲವತ್ತು ಪರಸೆಂಟ್ ಗಲಾಟೆಯಲ್ಲಿ ಮಂತ್ರಿಗಿರಿ ಕಳೆದುಕೊಂಡ ಈಶ್ವರಪ್ಪನ ನೇತೃತ್ವದಲ್ಲಿ ಮುಸ್ಲಿಮರ ಕೇರಿಗೆ ನುಗ್ಗಿ ಎಸ್ಪಿ, ಡಿ.ಸಿ, ತಹಸೀಲ್ದಾರ, ಎಂ.ಪಿ ನೇತೃತ್ವದಲ್ಲಿ ಅವರ ಜೀವನೋಪಾಯದ ಪದಾರ್ಥಗಳನ್ನು ಬೀದಿಗೆ ಎಸೆದು ಭಯೋತ್ಪಾದನೆ ಮಾಡಿದ್ದು. ಇವೆಲ್ಲಾ ಬಿಜೆಪಿಗಳ ಸಾಧನೆಯಾಗಿ ಇದನ್ನೇ ಹೇಳಿಕೊಂಡು ಮತ ಕೇಳಲು ತಯಾರಾದ ಅವರುಗಳ ತಲೆಗೆ ಒಳ್ಳೆಯ ಕೆಲಸಗಳೇ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಎಲ್ಲ ವಿಧಾನಸಭಾ ಸದಸ್ಯರಿಗೆ ಬೆಳಗಾವಿ ಅಧಿವೇಶನವೆಂದರೆ ವಿದ್ಯೆ ಕಲಿಯಲು ಇಷ್ಟವಿಲ್ಲದ ಹುಡುಗರು ಸ್ಕೂಲಿಗೆ ಹೋದ ರೀತಿಯಂತಲ್ಲಾ. ಏಕೆಂದರೆ ಅಧಿವೇಶನಗಳು ಅರ್ಥ ಕಳೆದುಕೊಂಡಿವೆ. ಅಲ್ಲಿ ಯಾರಾದರೂ ಎದ್ದುನಿಂತು ಮಾತನಾಡಿದರೆ ಕೇಳಿಸಿಕೊಳ್ಳಬೇಕಿನಿಸುವುದಿಲ್ಲ; ಗೈರುಹಾಜರಾದರೆ, ಗೋವಾಕ್ಕೆ ಹೋಗಬೇಕಿನಿಸುತ್ತದೆ. ಕೊಠಡಿಯಲ್ಲೇ ಇರಲು ಬೇಜಾರು. ಎಲ್ಲಾದರೂ ಹೋಗೋಣವೆಂದರೆ ತಾಜ್‌ವೆಸ್ಟ್ ಹೋಟಲಿನಂತವೂ ಇಲ್ಲ. ಹೀಗಾಗಿ ಬಿಜೆಪಿಗಳು ಸದನವನ್ನೇ ಗಬ್ಬೆಬ್ಬಿಸುವ ಪ್ಲಾನ್ ಮಾಡಿ ಸಾವರ್ಕರ್‌ನ ಫೋಟೋವನ್ನು ಮುಖ್ಯಮಂತ್ರಿಗೂ ಗೊತ್ತಿಲ್ಲದೆ ಅಳವಡಿಸುವ ಸಂಚು ರೂಪಿಸಿದರಂತಲ್ಲಾ. ಅಲ್ಲಿಗೆ ಇದು ಆರೆಸ್ಸೆಸ್ ಕಾರ್ಯಕ್ರಮದಂತೆ ಕಂಡು ಕಾಂಗೈಗಳು ಸಾವರ್ಕರ್‌ನ ಜೊತೆಗೆ ಅಥವ ಬದಲಿಗೆ ಇನ್ನಿತರ ಕನ್ನಡದ ಸಾಂಸ್ಕೃತಿಕ ನಾಯಕರ ಫೋಟೋನೂ ಮಡಗಿ ಎಂದು ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತರಂತಲ್ಲಾ. ಇದನ್ನ ಕಂಡ ಬಿಜೆಪಿಗಳು ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಕರಿನೀರ ಶಿಕ್ಷೆಗೆ ಗುರಿಯಾದವರು. ಗಾಂಧಿ ಕೊಂದವರೆಂದು ನೀವೇ ಆಪಾದಿಸುತ್ತಿದ್ದೀರಿ; ಗಾಂಧಿ ಕೊಲ್ಲಲು ಪಿಸ್ತೂಲು ಕೊಟ್ಟವರು ಸಾವರ್ಕರ್ ಎಂದು ಇತ್ತೀಚೆಗೆ ಗಾಂಧೀಜಿ ಮರಿಮಗ ಹೇಳಿದ್ದಾರೆ. ನಮ್ಮ ಪುರಾಣದಲ್ಲಿ ಕೊಂದವರು ಕೊಲ್ಲಿಸಿಕೊಂಡವರನ್ನು ನೆನೆಸುತ್ತ ಬಂದಿದ್ದೇವೆ. ಉದಾಹರಣೆ ಬೇಕಾದಷ್ಟಿವೆ. ರಾಮ-ರಾವಣ, ಕೃಷ್ಣ-ಕಂಸ, ನರಸಿಂಹ-ಹಿರಣ್ಯಕಶಿಪು ಹೀಗೆ. ಆದ್ದರಿಂದ ಗಾಂಧಿ ಫೋಟೋ ಸುವರ್ಣ ಸೌಧದಲ್ಲಿರುವುದಾದರೆ ಪಕ್ಕದಲ್ಲಿ ಸಾವರ್ಕರ್ ಫೋಟೋ ಇರುವುದು ಸತ್ಯ. ಓಂ ಶಾಂತಿ ಶಾಂತಿ ಶಾಂತಿ ಎಂದವಂತಲ್ಲಾ, ಥೂತ್ತೇರಿ.

*****

ಹದಿನೈದು ಲಕ್ಷ ಮತದಾರರನ್ನು ಡಿಲೀಟ್ ಮಾಡಿಸಿದ ಆರೋಪ ಎದುರಿಸುತ್ತಿರುವ ಸರಕಾರ ಈ ಕೃತ್ಯ ವ್ಯಾಪಕವಾಗಿ ಪ್ರಚಾರವಾಗದಂತೆ ತಡೆಯಲು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬ್ಲಾಸ್ಟು ಮಾಡಿ ಎಂದು ಟಿವಿಯವರಿಗೆ ಸೂಚನೆ ಕೊಟ್ಟ ಕೂಡಲೇ ಮಾರಿಕೊಂಡ ಮಾಧ್ಯಮದವರು ಮತದಾರರು ಕಾಣೆಯಾಗಿರುವ ಪ್ರಕರಣವನ್ನೇ ಮರೆಯಾಗುವಂತೆ ಮಾಡಿದರು ಎಂದು ಡಿ.ಕೆ.ಶಿ ಆಪಾದನೆ ಮಾಡಿದರಂತಲ್ಲ. ಹಾಗಂದ ಕೂಡಲೇ ಅವರ ಮೇಲೆ ಇ.ಡಿ ದಾಳಿ ನಡೆಯಿತು. ಈಗ ಸರಕಾರದ ಸಂಪೂರ್ಣ ವೈಫಲ್ಯ ಮುಚ್ಚಲು ಸಾವರ್ಕರ್‌ನ ಮೊರೆ ಹೋಗಿರುವ ಸರಕಾರ ಆರೆಸ್ಸೆಸ್ ಸೂಚನೆಯಂತೆ ಆತನ ಭಾವಚಿತ್ರವನ್ನು ಸುವರ್ಣಸೌಧದದಲ್ಲಿ ಅಳವಡಿಸಲು ಸಂಚು ರೂಪಿಸಿದೆಯಂತಲ್ಲಾ. ಇದರಲ್ಲಿ ಅವರು ಗೆದ್ದರೆ ಮುಂದಿನ ಅಧಿವೇಶನಕ್ಕೆ ಸಾವರ್ಕರ್‌ನ ಪಕ್ಕಕ್ಕೆ ಗೋಳವಲಕರನ ಫೋಟೋ ಬರುತ್ತೆ ನಂತರ ಹೆಡಗೆವಾರನ ಚಿತ್ರ ತೂಗುಬೀಳುತ್ತೆ. ಆ ನಂತರ ರೈಲ್ವೆ ಭೋಗಿ ಮೇಲಿರುವ ದೀನದಯಾಳರ ಭಾವಚಿತ್ರ ವಿರಾಜಮಾನವಾಗುತ್ತೆ. ಹಾಲಿ ಸದಸ್ಯರೆಲ್ಲಾ ಅಸ್ತಂಗತರಾದ ಮೇಲೆ ಸುವರ್ಣಸೌಧದ ಗೋಡೆ ಮೇಲೆ ಎಡೂರಪ್ಪ, ಜೋಷಿ, ಸಿ.ಟಿ ರವಿ, ರೇಣುಕಾಚಾರ್ಯ, ಈಶ್ವರಪ್ಪ ಸರದಿಯೂ ಬರಬಹುದು. ಅಷ್ಟಕ್ಕೂ ಸಾವರ್ಕರ್ ಸುವರ್ಣ ಸಂಸ್ಕೃತಿ ಭವನ ಹೊಕ್ಕಿದ್ದು ಈಶ್ವರಪ್ಪರ ಸಾಧನೆಯಿಂದ. ಶಿವಮೊಗ್ಗದ ಮಾರ್ಕೆಟ್‌ನಲ್ಲಿ ನಿಲ್ಲಿಸಿದ್ದ ಸಾವರ್ಕರ್‌ನ ಫೋಟೋವನ್ನು ಯಾರೋ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಿತ್ತೆಸೆದ. ಅಷ್ಟು ಸಾಕಿತ್ತು ಮಂತ್ರಿಗಿರಿ ಕಳೆದುಕೊಂಡು ನಿರುದ್ಯೋಗಿಯಾಗಿದ್ದ ಈಶ್ವರಪ್ಪರಿಗೆ. ಕೂಡಲೇ ತರತರದ ಕಾರ್ಯಕ್ರಮಗಳನ್ನು ಮಾಡಿ ಸಾವರ್ಕರ್‌ನನ್ನು ಮೆರೆಸಿದರು. ಅಂತಹ ವ್ಯಕ್ತಿ ಈಗ ಸದನಕ್ಕೆ ಹೋಗದೆ ಜಾರಕಿಹೊಳಿ ಮನೆಯಲ್ಲಿ ಜಾಲಿಯಾಗಿ ಕಾಲ ಕಳೆದದ್ದು ಇತಿಹಾಸದ ವ್ಯಂಗ್ಯವಂತಲ್ಲಾ, ಥೂತ್ತೇರಿ.

*****

ನಮ್ಮ ಹಿರಿಯ ಚೇತನಗಳಾದ ಶ್ರೀನಿವಾಸ್ ಪ್ರಸಾದ್ ಮತ್ತು ವಿಶ್ವನಾಥ್ ಹರಿಯ ಮುರಿಯ ಜಗಳಕ್ಕೆ ಬಿದ್ದಿದ್ದಾರಲ್ಲಾ. ಹಳ್ಳಿಯ ಕಡೆ ಒಂದು ಗಾದೆಯಿದೆ. ’ತಿರಿಯಲು ಬಂದು ಕೇರಿಯಲ್ಲಿ ಜಗಳಕ್ಕೆ ಬಿದ್ದರು’ ಅಂತ. ಪ್ರಸಾದ್ ಮತ್ತು ವಿಶ್ವನಾಥ್ ತಿರಿಯಲು ಬಂದಿದ್ದು ಬಿಜೆಪಿ ಕೇರಿಯಲ್ಲಿ. ಅದವರ ಕೇರಿಯಲ್ಲ. ಅವರು ಬಂದಿದ್ದು ಕಾಂಗ್ರೆಸ್ ಕೇರಿಯಿಂದ. ಅವರಿಬ್ಬರೂ ಬಿಜೆಪಿಗೆ ಬಂದಿದ್ದು ಒಂದೇ ಕಾರಣದಿಂದ. ಪ್ರಸಾದ್ ಸಿದ್ದರಾಮಯ್ಯಗೆ ತಾಕೀತು ಮಾಡಿ ರೆವಿನ್ಯೂ ಮಂತ್ರಿಯಾದ ಕೂಡಲೇ ವೀಕ್ ಆದರು. ವಿಶ್ವನಾಥ್ ತಮ್ಮನ್ನು ಮಂತ್ರಿ ಮಾಡಲಿಲ್ಲ ಎಂದು ಸೋನಿಯಾಗಾಂಧಿಗೆ ’ಸಿದ್ದು ಭ್ರಷ್ಟ, ಬದಲಾಯಿಸಿ’ ಎಂದು ದೂರು ಬರೆಯುತ್ತ ಕುಳಿತರು. ಈ ಇಬ್ಬರ ಚಟುವಟಿಕೆಯನ್ನು ನೋಡಿದ ಸಿದ್ದು ಇಬ್ಬರೂ ಕಾಂಗ್ರೆಸ್ ಬಿಟ್ಟುಹೋಗುವಂತೆ ಮಾಡಿದರು. ಸಮಾನ ಸಂತ್ರಸ್ತರಾದ ಇಬ್ಬರಿಗೂ ಬಿಜೆಪಿ ಅನ್ಯಾಯ ಮಾಡಲಿಲ್ಲ. ಒಬ್ಬರನ್ನು ಸಂಸದರನ್ನಾಗಿಸಿತು, ಮತ್ತೊಬ್ಬರನ್ನು ಎಮ್ಮೆಲ್ಸಿ ಮಾಡಿತು. ರಾಜಕಾರಣದ ಅಂಚಿಗೆ ಸರಿದಿರುವ ಶ್ರೀನಿವಾಸ ಪ್ರಸಾದ್ ನಿವೃತ್ತಿ ಅಂಚಿನಲ್ಲಿದ್ದರೆ, ವಿಶ್ವನಾಥ್ ಕಾಂಗ್ರೆಸ್ ಕೇರಿಗೆ ಬಂದು ಇನ್ನೊಂದು ಚಾನ್ಸಿಗೆ ಅಡಿಪಾಯ ಹಾಕುತ್ತಿದ್ದಾರೆ. ಪ್ರಸಾದ್, ವಿಶ್ವನಾಥರನ್ನ ಮೂದಲಿಸಿ ಅಲೆಮಾರಿ ಎಂದುಬಿಟ್ಟಿದ್ದಾರಲ್ಲಾ. ಸಾಮಾನ್ಯವಾಗಿ ಪಕ್ಷದಿಂದ ಪಕ್ಷಕ್ಕೆ ಅಲೆಯುವ ಒಬ್ಬ ಅಲೆಮಾರಿಯನ್ನು ಕಂಡ ಇನ್ನೊಬ್ಬ ಅಲೆಮಾರಿಗೆ ಆಗುವುದಿಲ್ಲವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...