Homeಅಂಕಣಗಳುಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

ಗಾಂಧೀಜಿ ಪೋಟೊ ಜೊತೆಗೆ ಸಾವರ್ಕರ್ ಇರುವುದು ಸರಿ!

- Advertisement -
- Advertisement -

ಸರಕಾರದ ಸಾಧನೆಯ ಪಟ್ಟಿ ಮುಂದಿಟ್ಟು ಮತ ಕೇಳಿ ಎಂದು ಜೆ.ಪಿ ನಡ್ಡಾ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರಂತಲ್ಲಾ. ಆ ಕೂಡಲೇ ಬಿಜೆಪಿಯ ಉಗ್ರ ಕಾರ್ಯಕರ್ತರಿಗೆ ಕಾಣಿಸಿದ ಸಾಧನೆಗಳಾವುವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮುಸ್ಲಿಂ ಹುಡುಗಿಯರ ಹಿಜಾಬು ತೆಗೆಸಲು ಹೋರಾಡಿದ್ದು. ನಂತರ ಮುಸ್ಲಿಮರು ಜಾತ್ರೆ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡದಂತೆ ದಾಳಿ ಮಾಡಿ, ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ತುಳಿದು ನಾಶಮಾಡಿದ್ದು. ಅಲ್ಲದೆ ಮುಸಲ್ಮಾನರ ಅಂಗಡಿಯಲ್ಲಿ ಮಾಂಸ ತಂದು ತಿನ್ನಬೇಡಿರೆಂದು ಕಾಳಿಸ್ವಾಮಿ ಎಂಬುವವ ಕೋಳಿಸ್ಟಾಲ್ ಮಾಡಿದ್ದು. ಇನ್ನ ಗೋಳವಲಕರ ಅರ್ಥ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹಿಂದುಳಿದ ವರ್ಗದ ಹುಡುಗರ ಹಾಸ್ಟಲು ಫೀಜು ಬಂದ್ ಮಾಡಿದ್ದು. ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ದು. ಕಬ್ಬಿನ ಬೆಂಬಲ ಬೆಲೆ ನೀಡಲಾಗದ ರೈತರ ಕಡೆ ತಿರುಗಿ ನೋಡದೆ ಇದ್ದದ್ದು. ಬೆಂಗಳೂರಲ್ಲಿ ಗುಂಡಿ ಬಿದ್ದ ಗುಂಡಿಗೆ ಬಿದ್ದು ಹಲವು ಜನ ಪ್ರಾಣ ಕಳೆದುಕೊಂಡದ್ದು. ಗುಂಡಿ ಮುಚ್ಚುವ ಪರ್ಸೆಂಟೇಜಿಗಾಗಿ ಜಗಳವಾಡುತ್ತ ಕೂತಿದ್ದು. ಇನ್ನ ನಲವತ್ತು ಪರಸೆಂಟ್ ಗಲಾಟೆಯಲ್ಲಿ ಮಂತ್ರಿಗಿರಿ ಕಳೆದುಕೊಂಡ ಈಶ್ವರಪ್ಪನ ನೇತೃತ್ವದಲ್ಲಿ ಮುಸ್ಲಿಮರ ಕೇರಿಗೆ ನುಗ್ಗಿ ಎಸ್ಪಿ, ಡಿ.ಸಿ, ತಹಸೀಲ್ದಾರ, ಎಂ.ಪಿ ನೇತೃತ್ವದಲ್ಲಿ ಅವರ ಜೀವನೋಪಾಯದ ಪದಾರ್ಥಗಳನ್ನು ಬೀದಿಗೆ ಎಸೆದು ಭಯೋತ್ಪಾದನೆ ಮಾಡಿದ್ದು. ಇವೆಲ್ಲಾ ಬಿಜೆಪಿಗಳ ಸಾಧನೆಯಾಗಿ ಇದನ್ನೇ ಹೇಳಿಕೊಂಡು ಮತ ಕೇಳಲು ತಯಾರಾದ ಅವರುಗಳ ತಲೆಗೆ ಒಳ್ಳೆಯ ಕೆಲಸಗಳೇ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಎಲ್ಲ ವಿಧಾನಸಭಾ ಸದಸ್ಯರಿಗೆ ಬೆಳಗಾವಿ ಅಧಿವೇಶನವೆಂದರೆ ವಿದ್ಯೆ ಕಲಿಯಲು ಇಷ್ಟವಿಲ್ಲದ ಹುಡುಗರು ಸ್ಕೂಲಿಗೆ ಹೋದ ರೀತಿಯಂತಲ್ಲಾ. ಏಕೆಂದರೆ ಅಧಿವೇಶನಗಳು ಅರ್ಥ ಕಳೆದುಕೊಂಡಿವೆ. ಅಲ್ಲಿ ಯಾರಾದರೂ ಎದ್ದುನಿಂತು ಮಾತನಾಡಿದರೆ ಕೇಳಿಸಿಕೊಳ್ಳಬೇಕಿನಿಸುವುದಿಲ್ಲ; ಗೈರುಹಾಜರಾದರೆ, ಗೋವಾಕ್ಕೆ ಹೋಗಬೇಕಿನಿಸುತ್ತದೆ. ಕೊಠಡಿಯಲ್ಲೇ ಇರಲು ಬೇಜಾರು. ಎಲ್ಲಾದರೂ ಹೋಗೋಣವೆಂದರೆ ತಾಜ್‌ವೆಸ್ಟ್ ಹೋಟಲಿನಂತವೂ ಇಲ್ಲ. ಹೀಗಾಗಿ ಬಿಜೆಪಿಗಳು ಸದನವನ್ನೇ ಗಬ್ಬೆಬ್ಬಿಸುವ ಪ್ಲಾನ್ ಮಾಡಿ ಸಾವರ್ಕರ್‌ನ ಫೋಟೋವನ್ನು ಮುಖ್ಯಮಂತ್ರಿಗೂ ಗೊತ್ತಿಲ್ಲದೆ ಅಳವಡಿಸುವ ಸಂಚು ರೂಪಿಸಿದರಂತಲ್ಲಾ. ಅಲ್ಲಿಗೆ ಇದು ಆರೆಸ್ಸೆಸ್ ಕಾರ್ಯಕ್ರಮದಂತೆ ಕಂಡು ಕಾಂಗೈಗಳು ಸಾವರ್ಕರ್‌ನ ಜೊತೆಗೆ ಅಥವ ಬದಲಿಗೆ ಇನ್ನಿತರ ಕನ್ನಡದ ಸಾಂಸ್ಕೃತಿಕ ನಾಯಕರ ಫೋಟೋನೂ ಮಡಗಿ ಎಂದು ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತರಂತಲ್ಲಾ. ಇದನ್ನ ಕಂಡ ಬಿಜೆಪಿಗಳು ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಕರಿನೀರ ಶಿಕ್ಷೆಗೆ ಗುರಿಯಾದವರು. ಗಾಂಧಿ ಕೊಂದವರೆಂದು ನೀವೇ ಆಪಾದಿಸುತ್ತಿದ್ದೀರಿ; ಗಾಂಧಿ ಕೊಲ್ಲಲು ಪಿಸ್ತೂಲು ಕೊಟ್ಟವರು ಸಾವರ್ಕರ್ ಎಂದು ಇತ್ತೀಚೆಗೆ ಗಾಂಧೀಜಿ ಮರಿಮಗ ಹೇಳಿದ್ದಾರೆ. ನಮ್ಮ ಪುರಾಣದಲ್ಲಿ ಕೊಂದವರು ಕೊಲ್ಲಿಸಿಕೊಂಡವರನ್ನು ನೆನೆಸುತ್ತ ಬಂದಿದ್ದೇವೆ. ಉದಾಹರಣೆ ಬೇಕಾದಷ್ಟಿವೆ. ರಾಮ-ರಾವಣ, ಕೃಷ್ಣ-ಕಂಸ, ನರಸಿಂಹ-ಹಿರಣ್ಯಕಶಿಪು ಹೀಗೆ. ಆದ್ದರಿಂದ ಗಾಂಧಿ ಫೋಟೋ ಸುವರ್ಣ ಸೌಧದಲ್ಲಿರುವುದಾದರೆ ಪಕ್ಕದಲ್ಲಿ ಸಾವರ್ಕರ್ ಫೋಟೋ ಇರುವುದು ಸತ್ಯ. ಓಂ ಶಾಂತಿ ಶಾಂತಿ ಶಾಂತಿ ಎಂದವಂತಲ್ಲಾ, ಥೂತ್ತೇರಿ.

*****

ಹದಿನೈದು ಲಕ್ಷ ಮತದಾರರನ್ನು ಡಿಲೀಟ್ ಮಾಡಿಸಿದ ಆರೋಪ ಎದುರಿಸುತ್ತಿರುವ ಸರಕಾರ ಈ ಕೃತ್ಯ ವ್ಯಾಪಕವಾಗಿ ಪ್ರಚಾರವಾಗದಂತೆ ತಡೆಯಲು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬ್ಲಾಸ್ಟು ಮಾಡಿ ಎಂದು ಟಿವಿಯವರಿಗೆ ಸೂಚನೆ ಕೊಟ್ಟ ಕೂಡಲೇ ಮಾರಿಕೊಂಡ ಮಾಧ್ಯಮದವರು ಮತದಾರರು ಕಾಣೆಯಾಗಿರುವ ಪ್ರಕರಣವನ್ನೇ ಮರೆಯಾಗುವಂತೆ ಮಾಡಿದರು ಎಂದು ಡಿ.ಕೆ.ಶಿ ಆಪಾದನೆ ಮಾಡಿದರಂತಲ್ಲ. ಹಾಗಂದ ಕೂಡಲೇ ಅವರ ಮೇಲೆ ಇ.ಡಿ ದಾಳಿ ನಡೆಯಿತು. ಈಗ ಸರಕಾರದ ಸಂಪೂರ್ಣ ವೈಫಲ್ಯ ಮುಚ್ಚಲು ಸಾವರ್ಕರ್‌ನ ಮೊರೆ ಹೋಗಿರುವ ಸರಕಾರ ಆರೆಸ್ಸೆಸ್ ಸೂಚನೆಯಂತೆ ಆತನ ಭಾವಚಿತ್ರವನ್ನು ಸುವರ್ಣಸೌಧದದಲ್ಲಿ ಅಳವಡಿಸಲು ಸಂಚು ರೂಪಿಸಿದೆಯಂತಲ್ಲಾ. ಇದರಲ್ಲಿ ಅವರು ಗೆದ್ದರೆ ಮುಂದಿನ ಅಧಿವೇಶನಕ್ಕೆ ಸಾವರ್ಕರ್‌ನ ಪಕ್ಕಕ್ಕೆ ಗೋಳವಲಕರನ ಫೋಟೋ ಬರುತ್ತೆ ನಂತರ ಹೆಡಗೆವಾರನ ಚಿತ್ರ ತೂಗುಬೀಳುತ್ತೆ. ಆ ನಂತರ ರೈಲ್ವೆ ಭೋಗಿ ಮೇಲಿರುವ ದೀನದಯಾಳರ ಭಾವಚಿತ್ರ ವಿರಾಜಮಾನವಾಗುತ್ತೆ. ಹಾಲಿ ಸದಸ್ಯರೆಲ್ಲಾ ಅಸ್ತಂಗತರಾದ ಮೇಲೆ ಸುವರ್ಣಸೌಧದ ಗೋಡೆ ಮೇಲೆ ಎಡೂರಪ್ಪ, ಜೋಷಿ, ಸಿ.ಟಿ ರವಿ, ರೇಣುಕಾಚಾರ್ಯ, ಈಶ್ವರಪ್ಪ ಸರದಿಯೂ ಬರಬಹುದು. ಅಷ್ಟಕ್ಕೂ ಸಾವರ್ಕರ್ ಸುವರ್ಣ ಸಂಸ್ಕೃತಿ ಭವನ ಹೊಕ್ಕಿದ್ದು ಈಶ್ವರಪ್ಪರ ಸಾಧನೆಯಿಂದ. ಶಿವಮೊಗ್ಗದ ಮಾರ್ಕೆಟ್‌ನಲ್ಲಿ ನಿಲ್ಲಿಸಿದ್ದ ಸಾವರ್ಕರ್‌ನ ಫೋಟೋವನ್ನು ಯಾರೋ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಿತ್ತೆಸೆದ. ಅಷ್ಟು ಸಾಕಿತ್ತು ಮಂತ್ರಿಗಿರಿ ಕಳೆದುಕೊಂಡು ನಿರುದ್ಯೋಗಿಯಾಗಿದ್ದ ಈಶ್ವರಪ್ಪರಿಗೆ. ಕೂಡಲೇ ತರತರದ ಕಾರ್ಯಕ್ರಮಗಳನ್ನು ಮಾಡಿ ಸಾವರ್ಕರ್‌ನನ್ನು ಮೆರೆಸಿದರು. ಅಂತಹ ವ್ಯಕ್ತಿ ಈಗ ಸದನಕ್ಕೆ ಹೋಗದೆ ಜಾರಕಿಹೊಳಿ ಮನೆಯಲ್ಲಿ ಜಾಲಿಯಾಗಿ ಕಾಲ ಕಳೆದದ್ದು ಇತಿಹಾಸದ ವ್ಯಂಗ್ಯವಂತಲ್ಲಾ, ಥೂತ್ತೇರಿ.

*****

ನಮ್ಮ ಹಿರಿಯ ಚೇತನಗಳಾದ ಶ್ರೀನಿವಾಸ್ ಪ್ರಸಾದ್ ಮತ್ತು ವಿಶ್ವನಾಥ್ ಹರಿಯ ಮುರಿಯ ಜಗಳಕ್ಕೆ ಬಿದ್ದಿದ್ದಾರಲ್ಲಾ. ಹಳ್ಳಿಯ ಕಡೆ ಒಂದು ಗಾದೆಯಿದೆ. ’ತಿರಿಯಲು ಬಂದು ಕೇರಿಯಲ್ಲಿ ಜಗಳಕ್ಕೆ ಬಿದ್ದರು’ ಅಂತ. ಪ್ರಸಾದ್ ಮತ್ತು ವಿಶ್ವನಾಥ್ ತಿರಿಯಲು ಬಂದಿದ್ದು ಬಿಜೆಪಿ ಕೇರಿಯಲ್ಲಿ. ಅದವರ ಕೇರಿಯಲ್ಲ. ಅವರು ಬಂದಿದ್ದು ಕಾಂಗ್ರೆಸ್ ಕೇರಿಯಿಂದ. ಅವರಿಬ್ಬರೂ ಬಿಜೆಪಿಗೆ ಬಂದಿದ್ದು ಒಂದೇ ಕಾರಣದಿಂದ. ಪ್ರಸಾದ್ ಸಿದ್ದರಾಮಯ್ಯಗೆ ತಾಕೀತು ಮಾಡಿ ರೆವಿನ್ಯೂ ಮಂತ್ರಿಯಾದ ಕೂಡಲೇ ವೀಕ್ ಆದರು. ವಿಶ್ವನಾಥ್ ತಮ್ಮನ್ನು ಮಂತ್ರಿ ಮಾಡಲಿಲ್ಲ ಎಂದು ಸೋನಿಯಾಗಾಂಧಿಗೆ ’ಸಿದ್ದು ಭ್ರಷ್ಟ, ಬದಲಾಯಿಸಿ’ ಎಂದು ದೂರು ಬರೆಯುತ್ತ ಕುಳಿತರು. ಈ ಇಬ್ಬರ ಚಟುವಟಿಕೆಯನ್ನು ನೋಡಿದ ಸಿದ್ದು ಇಬ್ಬರೂ ಕಾಂಗ್ರೆಸ್ ಬಿಟ್ಟುಹೋಗುವಂತೆ ಮಾಡಿದರು. ಸಮಾನ ಸಂತ್ರಸ್ತರಾದ ಇಬ್ಬರಿಗೂ ಬಿಜೆಪಿ ಅನ್ಯಾಯ ಮಾಡಲಿಲ್ಲ. ಒಬ್ಬರನ್ನು ಸಂಸದರನ್ನಾಗಿಸಿತು, ಮತ್ತೊಬ್ಬರನ್ನು ಎಮ್ಮೆಲ್ಸಿ ಮಾಡಿತು. ರಾಜಕಾರಣದ ಅಂಚಿಗೆ ಸರಿದಿರುವ ಶ್ರೀನಿವಾಸ ಪ್ರಸಾದ್ ನಿವೃತ್ತಿ ಅಂಚಿನಲ್ಲಿದ್ದರೆ, ವಿಶ್ವನಾಥ್ ಕಾಂಗ್ರೆಸ್ ಕೇರಿಗೆ ಬಂದು ಇನ್ನೊಂದು ಚಾನ್ಸಿಗೆ ಅಡಿಪಾಯ ಹಾಕುತ್ತಿದ್ದಾರೆ. ಪ್ರಸಾದ್, ವಿಶ್ವನಾಥರನ್ನ ಮೂದಲಿಸಿ ಅಲೆಮಾರಿ ಎಂದುಬಿಟ್ಟಿದ್ದಾರಲ್ಲಾ. ಸಾಮಾನ್ಯವಾಗಿ ಪಕ್ಷದಿಂದ ಪಕ್ಷಕ್ಕೆ ಅಲೆಯುವ ಒಬ್ಬ ಅಲೆಮಾರಿಯನ್ನು ಕಂಡ ಇನ್ನೊಬ್ಬ ಅಲೆಮಾರಿಗೆ ಆಗುವುದಿಲ್ಲವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...