Homeಅಂಕಣಗಳುಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

- Advertisement -
- Advertisement -

ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ ಪ್ರತಿನಿಧಿಗಳು ಪ್ರತಿಭಟಿಸಿದಾಗ ಮುಂದೆ ನೀವೂ ಆರೆಸ್ಸೆಸ್, ಇಡೀ ದೇಶವೇ ಆರೆಸ್ಸೆಸ್‌ಮಯವಾಗುತ್ತದೆ ಎಂದು ಹೆಮ್ಮೆಯಿಂದ ಉತ್ತರಿಸುತ್ತಾರೆ. ಇದಕ್ಕೆ ಪೂರಕವಾಗಿ ಉಗ್ರ ಹಿಂದೂ ಪ್ರತಿಪಾದಕ ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿರುವ ರೇಣುಕಾಚಾರ್ಯ ತನ್ನ ಮಗಳಿಗೆ ಬೇಡಜಂಗಮ ಸರ್ಟಿಫಿಕೇಟ್ ಪಡೆದಿರುವುದನ್ನು ಯಾವ ಅಳುಕೂ ಇಲ್ಲದೆ ಸದನದಲ್ಲಿ ಹೆಮ್ಮೆಯಿಂದ ಒಪ್ಪಿಕೊಳ್ಳುತ್ತಾರೆ. ಹೆಮ್ಮೆ ಏಕೆಂದರೆ ನಾವಿನ್ನೂ ಯಾವ ಸವಲತ್ತನ್ನು ಪಡೆದಿಲ್ಲ ಎಂಬುದು. ಅಷ್ಟೇ ಅಲ್ಲದೆ ಅವರ ಮಗ ಮತ್ತು ತಮ್ಮನೂ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರಂತಲ್ಲಾ. ರೇಣುಕಾಚಾರ್ಯ ಕೃತ್ಯದಿಂದ ದಲಿತರು ದಂಗುಬಡಿದುಹೋಗಿರುವಾಗ, ಅತ್ತ ಸದನದ ನ್ಯಾಯಸ್ಥಾನದಲ್ಲಿರುವ ಕಾಗೇರಿ ಯಾವ ಅಳುಕೂ ಇಲ್ಲದೆ ರೇಣುಕಾಚಾರ್ಯ ತಪ್ಪೊಪ್ಪಿಗೆಯನ್ನ ಮುಗುಳುನಗುತ್ತಲೇ ಗಮನಿಸುತ್ತಿದ್ದಾಗ, ಬೆಂಗಳೂರು ಜನತಾ ಬಜಾರಿನ ಮಾಜಿ ಉದ್ಯೋಗಿಯಾದ ಸೋಮಣ್ಣ ತನ್ನ ಅಕ್ರಮ ಆಸ್ತಿ ಸಂಬಂಧ ಕೋರ್ಟಿನಿಂದ ಬಂದ ನೋಟಿಸಿಗೆ ಕೇರ್ ಮಾಡದೆ ತನ್ನಂತೆ ಆಸ್ತಿ ಮಾಡಿದವರ ಪಟ್ಟಿ ತಯಾರಿಸುತ್ತಿದ್ದಾರಂತಲ್ಲಾ. ಥೂತ್ತೇರಿ.

*****

ಸೋಮಣ್ಣ ರೇವಣ್ಣನಂತೆ ಕೆಲಸಗಾರ, ತಿನ್ನುವವನು ಕೆಲಸ ಮಾಡುತ್ತಾನೆ ತಿನ್ನದವನು ಸುಮ್ಮನಿದ್ದು ಹೋಗುತ್ತಾನೆ ಎಂಬ ನಂಬಿಕೆ ಉಳ್ಳವರಂತಲ್ಲಾ. ರಾಜಕಾರಣದ ಸೋಮಣ್ಣನನ್ನು ಸದನದಲ್ಲೇ ರೇವಣ್ಣ ಸಮರ್ಥಿಸಿಕೊಂಡರಲ್ಲಾ. ಹಾಗೆ ನೋಡಿದರೆ ರೇವಣ್ಣನೂ ಪಡುವಲಹಿಪ್ಪೆ ತೋಟದಲ್ಲಿದ್ದು ಸಾಕಾಗಿ ಸದನಕ್ಕೆ ಬಂದವರು. ಒಳ್ಳೆ ಪಿಡಬ್ಲುಡಿ ಕೆಲಸಗಾರ. ಆದರೆ ಸೋಮಣ್ಣನಂತೆ ಸಿಕ್ಕಿ ಬಿದ್ದಿಲ್ಲ. ನುರಿತ ಅಧಿಕಾರಿಗಳ ಸಲಹೆ ತೆಗೆದುಕೊಂಡು ದೇವೇಗೌಡರ ಒಪ್ಪಿಗೆ ಪಡೆದು ಮುಂದುವರಿಯುವ ರೇವಣ್ಣ ಏನಾದರಾಗಲೀ ಎಂದು ಹಲವು ನಿಂಬೆಹಣ್ಣುಗಳನ್ನು ಜೇಬಲ್ಲಿ ಮಡಗಿಕೊಂಡೇ ಸದನಕ್ಕೆ ಬರುತ್ತಾರಂತಲ್ಲಾ. ಆದರೂ, ಸೋಮಣ್ಣನಿಗೆ ಬಂದ ನೋಟಿಸು ನನಗೆ ಬಂದರೆ ಗತಿಯೇನು ಎಂದು ಸೋಮಣ್ಣನ ಸಮರ್ಥನೆಗೆ ನಿಂತರಂತಲ್ಲಾ. ಬೆಂಗಳೂರಲ್ಲಿ ಯಾರಾದರೂ ಗೆಲ್ಲಲಿ, ಆ ಸೋಮಣ್ಣ ಗೆಲ್ಲಬಾರದೆಂದು ದೇವೇಗೌಡರು ಆಡಿದ ಮಾತನ್ನ ಕೇಳಿಸಿಕೊಂಡಾಗಿನಿಂದ ದೇವೇಗೌಡರ ಕುಟುಂಬವನ್ನೇ ದ್ವೇಷಿಸುತ್ತಿದ್ದ ಸೋಮಣ್ಣ ರೇವಣ್ಣನ ರಕ್ಷಣಾತ್ಮಕ ಮಾತಿನಿಂದ ಎಚ್ಚರಗೊಂಡು ಜೆಡಿಎಸ್ ಅಭಿಮಾನಿಯಾಗಿದ್ದಾರಂತಲ್ಲಾ. ಈ ನಡುವೆ ಕರ್ನಾಟಕದಲ್ಲಿ ನಡೆಯುತ್ತಿರುವ ಯಾವ ವಿದ್ಯಮಾನಕ್ಕೂ ಬಾಯಿ ಬಿಡದೆ ಕುಳಿತಿರುವ ಮಾಜಿ ಪ್ರಧಾನಿಗಳ ಮಗನಾದ ಕುಮಾರಣ್ಣ ಇದ್ದಕ್ಕಿದ್ದಂತೆ ಮುಖ್ಯಮಂತ್ರಿಯ ಗಂಡಸ್ತನದ ಬಗ್ಗೆ ಹೇಳಿದ ಮಾತಿಗೆ ಜೆಡಿಎಸ್ ಗಂಡು ಹುಡುಗರೆಲ್ಲಾ ಎದ್ದು ನಿಂತು ಗುಟುರು ಹಾಕಿವೆಯಂತಲ್ಲಾ. ನಂತರ ಏನೋ ಭರದಲ್ಲಿ ಹಾಗಂದದ್ದು ಅಂದರಂತಲ್ಲಾ. ಇದನ್ನು ಕೇಳಿಸಿಕೊಂಡ ಕಾಂಗೈಗಳೂ ಕೂಡ ಎಚ್ಚರವಾದರಂತರಲ್ಲಾ. ಥೂತ್ತೇರಿ.

****

ಇದ್ದಕ್ಕಿದ್ದಂತೆ ಎಡೂರಪ್ಪನ ವಿರೋಧಿಗಳೂ ಕೂಡ ಏನೇ ಆಗಲಿ ಎಡೂರಪ್ಪನೇ ವಾಸಿ. ಅವರು ಯಂತದೇ ರಾಜಕಾರಣ ಮಾಡಿದರೂ ಕರ್ನಾಟಕವನ್ನು ಈ ಸ್ಥಿತಿಗೆ ದೂಡುತ್ತಿರಲಿಲ್ಲ ಎಂಬ ಉದ್ಘಾರ ತೆಗೆಯುತ್ತಿದ್ದಾರಲ್ಲಾ. ಹಾಗೆ ನೋಡಿದರೆ ಈ ಎಡೂರಪ್ಪ ಈಶ್ವರಪ್ಪನಂತೆ ಮುಸ್ಲಿಂ ದ್ವೇಷ ಮಾಡಿಕೊಂಡು ರಾಜಕಾರಣ ಮಾಡಿದವರಲ್ಲ. ಶಿಕಾರಿಪುರದಲ್ಲಿ ಮುಸ್ಲಿಮರು ಕೂಡ ಎಡೂರಪ್ಪನಿಗೆ ಓಟು ಮಾಡುತ್ತಾರೆ. ಅದಕ್ಕಿಂತ ಮುಖ್ಯವಾಗಿ ಒಮ್ಮೆ ಬಿಜೆಪಿಗೆ ಜಾಡಿಸಿ ಒದ್ದು ಕೆಜೆಪಿ ಪಕ್ಷ ಕಟ್ಟಿ ಕರ್ನಾಟಕವನ್ನ ಸುತ್ತಿ ಬಂದು ಬಿಜೆಪಿಗೆ ಮಣ್ಣು ಮುಕ್ಕಿಸಿದವರು ಅವರು. ಪ್ರಾಯವೇ ಇದ್ದಿದ್ದರೆ ಈಗಲೂ ಅಂತಹದೊಂದು ಸಾಹಸ ಮಾಡಿ ಬಿಜೆಪಿ ಬಾಯಿಗೆ ಬಿರುಡೆ ಇಕ್ಕುತ್ತಿದ್ದರು. ಆದರೇನು ಮಾಡೋದು, ವಯಸ್ಸು ಮತ್ತು ಮಕ್ಕಳ ಭವಿಷ್ಯ ಹಾಗೂ ಅಕ್ರಮ ಆಸ್ತಿ ಅವರನ್ನ ಬಿಜೆಪಿ ಗೊಂತಿನಲ್ಲೇ ಇರುವಂತೆ ಮಾಡಿದೆ. ನಾಗಪುರದ ಕಾರ್ಯಕ್ರಮಗಳನ್ನ
ಜಾರಿಮಾಡಬೇಕಾದರೆ ಎಡೂರಪ್ಪ ಹಿಂದೇಟು ಹಾಕಬಹುದೆಂದು ತೀರ್ಮಾನಿಸಿದ ಪರಿವಾರದವರು ಸಾದರ ಲಿಂಗಾಯತರ ಬೊಮ್ಮಾಯಿಯನ್ನ ಅಧಿಕಾರಕ್ಕೇರಿಸಿ, ತನ್ನ ಕಾರ್ಯಾಚರಣೆಯನ್ನು ಕಾರ್ಯಕರ್ತರಿಗೆ ವಹಿಸಿ ದೇಶದಲ್ಲೇ ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕಕ್ಕೆ ತನ್ನ ವಾನರ ಸೇನೆ ನುಗ್ಗಿಸಿ ಹಾಳು ಮಾಡುತ್ತಿವೆಯಲ್ಲಾ. ಇದನ್ನ ನೋಡುತ್ತ ಕುಳಿತಿರುವ ಕರ್ನಾಟಕದ ಮಠಮಾನ್ಯಗಳ ದಿಕ್ಕಿನಿಂದ ಭೋಜನದ ತೇಗಿನ ಶಬ್ದ ಬರುತ್ತಿದೆಯಂತಲ್ಲಾ. ಥೂತ್ತೇರಿ.

******

ಕರ್ನಾಟಕದಲ್ಲಿ ಜಾರಿಯಾಗುತ್ತಿರುವ ಮತೀಯ ಕ್ಷೋಭೆಯ ಕಾರ್ಯಕ್ರಮಗಳು ನಾಗಪುರದಲ್ಲಿ ತಯಾರಾಗಿ, ಮೊದಲ ಕಂತಾಗಿ ಉಡುಪಿ ಭಟ್ಟರ ಮುಖಾಂತರ ಕಾರ್ಯರೂಪಕ್ಕಿಳಿದವಂತಲ್ಲಾ. ಮೊದಲು ಹಿಜಾಬ್‌ನಿಂದ ಶುರುಮಾಡಿ, ಶಿವಮೊಗ್ಗದಲ್ಲೊಂದು ಹತ್ಯೆಯಾದ ನಂತರ ಅಲ್ಲಿ ಗಲಭೆಯೆಬ್ಬಿಸಿ, ನಂತರ ಜಾತ್ರೆಗಳಲ್ಲಿ ಮುಸ್ಲಿಮರು ಅಂಗಡಿ ಹಾಕಬಾರದೆಂಬ ಗಲಾಟೆಯ ಜೊತೆಗೆ, ಹಲಾಲ್ ಮಾಂಸದ ಜಗಳ ಹಚ್ಚಿ ಈಗ ಮಸೀದಿಗಳಲ್ಲಿ ಧ್ವನಿವಧಕ ನಿರ್ಬಂಧಿಸಬೇಕೆಂಬ ದಾಂಧಲೆಗೆ ಬಂದು ನಿಂತಿವೆಯಲ್ಲಾ. ಆತ್ತ ಬೀದಿಯಲ್ಲಿ ಈ ಕತೆಯಾದರೆ ಇತ್ತ ಸರಕಾರದ ಮಟ್ಟದಲ್ಲಿ ಟಿಪ್ಪುಸುಲ್ತಾನನ ಸಾಹಸಗಳನ್ನ ಮರೆಮಾಚಿ ಸಾಧಾರಣ ಸೈನಿಕನಂತೆ ಮರೆಮಾಚಲು ಹವಣಿಸುತ್ತಿವೆಯೆಲ್ಲಾ. ಬಿಜೆಪಿ ಬೃಹಸ್ಪತಿಗಳು ಟಿಪ್ಪು ಇತಿಹಾಸ ಕೆದಕಿ ನೋಡಿದರೆ ಆತನ ಆಡಳಿತದಲ್ಲಿ ಏಳೆಂಟು ಸಚಿವರ ಪೈಕಿ ಐದು ಜನ ಬ್ರಾಹ್ಮಣ ಮಂತ್ರಿಗಳಿದ್ದರು; ದಿವಾನ್ ಪೂರ್ಣಯ್ಯನೇ ಬ್ರಾಹ್ಮಣ; ಆತ ನೇಮಿಸಿದ ಶ್ಯಾನುಭೋಗರ ಪೈಕಿ ಎಲ್ಲ ಬ್ರಾಹ್ಮಣರಿದ್ದರು; ಅವರೆಲ್ಲಾ ಕೆರೆ ಹಿಂದಿನ ಗದ್ದೆಯನ್ನ ತಮ್ಮ ಹೆಸರಿಗೆ ಕಾತೆ ಮಾಡಿಸಿಕೊಂಡರು; ಒಕ್ಕಲಿಗರಿಂದ ಗದ್ದೆ ಗೇಯಿಸಿಕೊಂಡರು ಬದಲಾದ ಕಾಲಕ್ಕೆ ಬಹುಬೆಲೆಗೆ ಅದನ್ನು ಮಾರಿ ಬೆಂಗಳೂರು, ದೆಹಲಿ, ನ್ಯೂಯಾರ್ಕ್ ಸೇರಿಕೊಂಡರು; ಅವರ ಮಕ್ಕಳು ಪೋಸ್ಟಾಫೀಸು, ಬ್ಯಾಂಕು, ಇನ್ಸೂರೆನ್ಸ್ ಆಫೀಸು, ರೇಡಿಯೊ, ಪೇಪರ್, ಸಿನಿಮಾ, ಟಿವಿಯೊಳಗೆ ಸೇರಿಕೊಂಡರು. ಈ ಇತಿಹಾಸವನ್ನು ಗಮನಿಸಿದರೆ ಟಿಪ್ಪುವಿನಿಂದಾದ ತೊಂದರೆ ಪೂರ್ಣಯ್ಯನ ಸಂತತಿಯಿಂದ ನಡೆಯುತ್ತಿರುವ ಅನಾಹುತದ ಮುಂದೇ ಏನೇನೂ ಅಲ್ಲ ಎಂದು ಎಲ್ಲರಿಗೂ ಗುರುತಾಗಲಿದೆಯಂತಲ್ಲಾ. ಥೂತ್ತೇರಿ

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಸಿದ್ದರಾಮಯ್ಯ ರಾವಣನಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...