Homeಅಂಕಣಗಳುಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

- Advertisement -
- Advertisement -

ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ ಪ್ರತಿನಿಧಿಗಳು ಪ್ರತಿಭಟಿಸಿದಾಗ ಮುಂದೆ ನೀವೂ ಆರೆಸ್ಸೆಸ್, ಇಡೀ ದೇಶವೇ ಆರೆಸ್ಸೆಸ್‌ಮಯವಾಗುತ್ತದೆ ಎಂದು ಹೆಮ್ಮೆಯಿಂದ ಉತ್ತರಿಸುತ್ತಾರೆ. ಇದಕ್ಕೆ ಪೂರಕವಾಗಿ ಉಗ್ರ ಹಿಂದೂ ಪ್ರತಿಪಾದಕ ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿರುವ ರೇಣುಕಾಚಾರ್ಯ ತನ್ನ ಮಗಳಿಗೆ ಬೇಡಜಂಗಮ ಸರ್ಟಿಫಿಕೇಟ್ ಪಡೆದಿರುವುದನ್ನು ಯಾವ ಅಳುಕೂ ಇಲ್ಲದೆ ಸದನದಲ್ಲಿ ಹೆಮ್ಮೆಯಿಂದ ಒಪ್ಪಿಕೊಳ್ಳುತ್ತಾರೆ. ಹೆಮ್ಮೆ ಏಕೆಂದರೆ ನಾವಿನ್ನೂ ಯಾವ ಸವಲತ್ತನ್ನು ಪಡೆದಿಲ್ಲ ಎಂಬುದು. ಅಷ್ಟೇ ಅಲ್ಲದೆ ಅವರ ಮಗ ಮತ್ತು ತಮ್ಮನೂ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರಂತಲ್ಲಾ. ರೇಣುಕಾಚಾರ್ಯ ಕೃತ್ಯದಿಂದ ದಲಿತರು ದಂಗುಬಡಿದುಹೋಗಿರುವಾಗ, ಅತ್ತ ಸದನದ ನ್ಯಾಯಸ್ಥಾನದಲ್ಲಿರುವ ಕಾಗೇರಿ ಯಾವ ಅಳುಕೂ ಇಲ್ಲದೆ ರೇಣುಕಾಚಾರ್ಯ ತಪ್ಪೊಪ್ಪಿಗೆಯನ್ನ ಮುಗುಳುನಗುತ್ತಲೇ ಗಮನಿಸುತ್ತಿದ್ದಾಗ, ಬೆಂಗಳೂರು ಜನತಾ ಬಜಾರಿನ ಮಾಜಿ ಉದ್ಯೋಗಿಯಾದ ಸೋಮಣ್ಣ ತನ್ನ ಅಕ್ರಮ ಆಸ್ತಿ ಸಂಬಂಧ ಕೋರ್ಟಿನಿಂದ ಬಂದ ನೋಟಿಸಿಗೆ ಕೇರ್ ಮಾಡದೆ ತನ್ನಂತೆ ಆಸ್ತಿ ಮಾಡಿದವರ ಪಟ್ಟಿ ತಯಾರಿಸುತ್ತಿದ್ದಾರಂತಲ್ಲಾ. ಥೂತ್ತೇರಿ.

*****

ಸೋಮಣ್ಣ ರೇವಣ್ಣನಂತೆ ಕೆಲಸಗಾರ, ತಿನ್ನುವವನು ಕೆಲಸ ಮಾಡುತ್ತಾನೆ ತಿನ್ನದವನು ಸುಮ್ಮನಿದ್ದು ಹೋಗುತ್ತಾನೆ ಎಂಬ ನಂಬಿಕೆ ಉಳ್ಳವರಂತಲ್ಲಾ. ರಾಜಕಾರಣದ ಸೋಮಣ್ಣನನ್ನು ಸದನದಲ್ಲೇ ರೇವಣ್ಣ ಸಮರ್ಥಿಸಿಕೊಂಡರಲ್ಲಾ. ಹಾಗೆ ನೋಡಿದರೆ ರೇವಣ್ಣನೂ ಪಡುವಲಹಿಪ್ಪೆ ತೋಟದಲ್ಲಿದ್ದು ಸಾಕಾಗಿ ಸದನಕ್ಕೆ ಬಂದವರು. ಒಳ್ಳೆ ಪಿಡಬ್ಲುಡಿ ಕೆಲಸಗಾರ. ಆದರೆ ಸೋಮಣ್ಣನಂತೆ ಸಿಕ್ಕಿ ಬಿದ್ದಿಲ್ಲ. ನುರಿತ ಅಧಿಕಾರಿಗಳ ಸಲಹೆ ತೆಗೆದುಕೊಂಡು ದೇವೇಗೌಡರ ಒಪ್ಪಿಗೆ ಪಡೆದು ಮುಂದುವರಿಯುವ ರೇವಣ್ಣ ಏನಾದರಾಗಲೀ ಎಂದು ಹಲವು ನಿಂಬೆಹಣ್ಣುಗಳನ್ನು ಜೇಬಲ್ಲಿ ಮಡಗಿಕೊಂಡೇ ಸದನಕ್ಕೆ ಬರುತ್ತಾರಂತಲ್ಲಾ. ಆದರೂ, ಸೋಮಣ್ಣನಿಗೆ ಬಂದ ನೋಟಿಸು ನನಗೆ ಬಂದರೆ ಗತಿಯೇನು ಎಂದು ಸೋಮಣ್ಣನ ಸಮರ್ಥನೆಗೆ ನಿಂತರಂತಲ್ಲಾ. ಬೆಂಗಳೂರಲ್ಲಿ ಯಾರಾದರೂ ಗೆಲ್ಲಲಿ, ಆ ಸೋಮಣ್ಣ ಗೆಲ್ಲಬಾರದೆಂದು ದೇವೇಗೌಡರು ಆಡಿದ ಮಾತನ್ನ ಕೇಳಿಸಿಕೊಂಡಾಗಿನಿಂದ ದೇವೇಗೌಡರ ಕುಟುಂಬವನ್ನೇ ದ್ವೇಷಿಸುತ್ತಿದ್ದ ಸೋಮಣ್ಣ ರೇವಣ್ಣನ ರಕ್ಷಣಾತ್ಮಕ ಮಾತಿನಿಂದ ಎಚ್ಚರಗೊಂಡು ಜೆಡಿಎಸ್ ಅಭಿಮಾನಿಯಾಗಿದ್ದಾರಂತಲ್ಲಾ. ಈ ನಡುವೆ ಕರ್ನಾಟಕದಲ್ಲಿ ನಡೆಯುತ್ತಿರುವ ಯಾವ ವಿದ್ಯಮಾನಕ್ಕೂ ಬಾಯಿ ಬಿಡದೆ ಕುಳಿತಿರುವ ಮಾಜಿ ಪ್ರಧಾನಿಗಳ ಮಗನಾದ ಕುಮಾರಣ್ಣ ಇದ್ದಕ್ಕಿದ್ದಂತೆ ಮುಖ್ಯಮಂತ್ರಿಯ ಗಂಡಸ್ತನದ ಬಗ್ಗೆ ಹೇಳಿದ ಮಾತಿಗೆ ಜೆಡಿಎಸ್ ಗಂಡು ಹುಡುಗರೆಲ್ಲಾ ಎದ್ದು ನಿಂತು ಗುಟುರು ಹಾಕಿವೆಯಂತಲ್ಲಾ. ನಂತರ ಏನೋ ಭರದಲ್ಲಿ ಹಾಗಂದದ್ದು ಅಂದರಂತಲ್ಲಾ. ಇದನ್ನು ಕೇಳಿಸಿಕೊಂಡ ಕಾಂಗೈಗಳೂ ಕೂಡ ಎಚ್ಚರವಾದರಂತರಲ್ಲಾ. ಥೂತ್ತೇರಿ.

****

ಇದ್ದಕ್ಕಿದ್ದಂತೆ ಎಡೂರಪ್ಪನ ವಿರೋಧಿಗಳೂ ಕೂಡ ಏನೇ ಆಗಲಿ ಎಡೂರಪ್ಪನೇ ವಾಸಿ. ಅವರು ಯಂತದೇ ರಾಜಕಾರಣ ಮಾಡಿದರೂ ಕರ್ನಾಟಕವನ್ನು ಈ ಸ್ಥಿತಿಗೆ ದೂಡುತ್ತಿರಲಿಲ್ಲ ಎಂಬ ಉದ್ಘಾರ ತೆಗೆಯುತ್ತಿದ್ದಾರಲ್ಲಾ. ಹಾಗೆ ನೋಡಿದರೆ ಈ ಎಡೂರಪ್ಪ ಈಶ್ವರಪ್ಪನಂತೆ ಮುಸ್ಲಿಂ ದ್ವೇಷ ಮಾಡಿಕೊಂಡು ರಾಜಕಾರಣ ಮಾಡಿದವರಲ್ಲ. ಶಿಕಾರಿಪುರದಲ್ಲಿ ಮುಸ್ಲಿಮರು ಕೂಡ ಎಡೂರಪ್ಪನಿಗೆ ಓಟು ಮಾಡುತ್ತಾರೆ. ಅದಕ್ಕಿಂತ ಮುಖ್ಯವಾಗಿ ಒಮ್ಮೆ ಬಿಜೆಪಿಗೆ ಜಾಡಿಸಿ ಒದ್ದು ಕೆಜೆಪಿ ಪಕ್ಷ ಕಟ್ಟಿ ಕರ್ನಾಟಕವನ್ನ ಸುತ್ತಿ ಬಂದು ಬಿಜೆಪಿಗೆ ಮಣ್ಣು ಮುಕ್ಕಿಸಿದವರು ಅವರು. ಪ್ರಾಯವೇ ಇದ್ದಿದ್ದರೆ ಈಗಲೂ ಅಂತಹದೊಂದು ಸಾಹಸ ಮಾಡಿ ಬಿಜೆಪಿ ಬಾಯಿಗೆ ಬಿರುಡೆ ಇಕ್ಕುತ್ತಿದ್ದರು. ಆದರೇನು ಮಾಡೋದು, ವಯಸ್ಸು ಮತ್ತು ಮಕ್ಕಳ ಭವಿಷ್ಯ ಹಾಗೂ ಅಕ್ರಮ ಆಸ್ತಿ ಅವರನ್ನ ಬಿಜೆಪಿ ಗೊಂತಿನಲ್ಲೇ ಇರುವಂತೆ ಮಾಡಿದೆ. ನಾಗಪುರದ ಕಾರ್ಯಕ್ರಮಗಳನ್ನ
ಜಾರಿಮಾಡಬೇಕಾದರೆ ಎಡೂರಪ್ಪ ಹಿಂದೇಟು ಹಾಕಬಹುದೆಂದು ತೀರ್ಮಾನಿಸಿದ ಪರಿವಾರದವರು ಸಾದರ ಲಿಂಗಾಯತರ ಬೊಮ್ಮಾಯಿಯನ್ನ ಅಧಿಕಾರಕ್ಕೇರಿಸಿ, ತನ್ನ ಕಾರ್ಯಾಚರಣೆಯನ್ನು ಕಾರ್ಯಕರ್ತರಿಗೆ ವಹಿಸಿ ದೇಶದಲ್ಲೇ ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕಕ್ಕೆ ತನ್ನ ವಾನರ ಸೇನೆ ನುಗ್ಗಿಸಿ ಹಾಳು ಮಾಡುತ್ತಿವೆಯಲ್ಲಾ. ಇದನ್ನ ನೋಡುತ್ತ ಕುಳಿತಿರುವ ಕರ್ನಾಟಕದ ಮಠಮಾನ್ಯಗಳ ದಿಕ್ಕಿನಿಂದ ಭೋಜನದ ತೇಗಿನ ಶಬ್ದ ಬರುತ್ತಿದೆಯಂತಲ್ಲಾ. ಥೂತ್ತೇರಿ.

******

ಕರ್ನಾಟಕದಲ್ಲಿ ಜಾರಿಯಾಗುತ್ತಿರುವ ಮತೀಯ ಕ್ಷೋಭೆಯ ಕಾರ್ಯಕ್ರಮಗಳು ನಾಗಪುರದಲ್ಲಿ ತಯಾರಾಗಿ, ಮೊದಲ ಕಂತಾಗಿ ಉಡುಪಿ ಭಟ್ಟರ ಮುಖಾಂತರ ಕಾರ್ಯರೂಪಕ್ಕಿಳಿದವಂತಲ್ಲಾ. ಮೊದಲು ಹಿಜಾಬ್‌ನಿಂದ ಶುರುಮಾಡಿ, ಶಿವಮೊಗ್ಗದಲ್ಲೊಂದು ಹತ್ಯೆಯಾದ ನಂತರ ಅಲ್ಲಿ ಗಲಭೆಯೆಬ್ಬಿಸಿ, ನಂತರ ಜಾತ್ರೆಗಳಲ್ಲಿ ಮುಸ್ಲಿಮರು ಅಂಗಡಿ ಹಾಕಬಾರದೆಂಬ ಗಲಾಟೆಯ ಜೊತೆಗೆ, ಹಲಾಲ್ ಮಾಂಸದ ಜಗಳ ಹಚ್ಚಿ ಈಗ ಮಸೀದಿಗಳಲ್ಲಿ ಧ್ವನಿವಧಕ ನಿರ್ಬಂಧಿಸಬೇಕೆಂಬ ದಾಂಧಲೆಗೆ ಬಂದು ನಿಂತಿವೆಯಲ್ಲಾ. ಆತ್ತ ಬೀದಿಯಲ್ಲಿ ಈ ಕತೆಯಾದರೆ ಇತ್ತ ಸರಕಾರದ ಮಟ್ಟದಲ್ಲಿ ಟಿಪ್ಪುಸುಲ್ತಾನನ ಸಾಹಸಗಳನ್ನ ಮರೆಮಾಚಿ ಸಾಧಾರಣ ಸೈನಿಕನಂತೆ ಮರೆಮಾಚಲು ಹವಣಿಸುತ್ತಿವೆಯೆಲ್ಲಾ. ಬಿಜೆಪಿ ಬೃಹಸ್ಪತಿಗಳು ಟಿಪ್ಪು ಇತಿಹಾಸ ಕೆದಕಿ ನೋಡಿದರೆ ಆತನ ಆಡಳಿತದಲ್ಲಿ ಏಳೆಂಟು ಸಚಿವರ ಪೈಕಿ ಐದು ಜನ ಬ್ರಾಹ್ಮಣ ಮಂತ್ರಿಗಳಿದ್ದರು; ದಿವಾನ್ ಪೂರ್ಣಯ್ಯನೇ ಬ್ರಾಹ್ಮಣ; ಆತ ನೇಮಿಸಿದ ಶ್ಯಾನುಭೋಗರ ಪೈಕಿ ಎಲ್ಲ ಬ್ರಾಹ್ಮಣರಿದ್ದರು; ಅವರೆಲ್ಲಾ ಕೆರೆ ಹಿಂದಿನ ಗದ್ದೆಯನ್ನ ತಮ್ಮ ಹೆಸರಿಗೆ ಕಾತೆ ಮಾಡಿಸಿಕೊಂಡರು; ಒಕ್ಕಲಿಗರಿಂದ ಗದ್ದೆ ಗೇಯಿಸಿಕೊಂಡರು ಬದಲಾದ ಕಾಲಕ್ಕೆ ಬಹುಬೆಲೆಗೆ ಅದನ್ನು ಮಾರಿ ಬೆಂಗಳೂರು, ದೆಹಲಿ, ನ್ಯೂಯಾರ್ಕ್ ಸೇರಿಕೊಂಡರು; ಅವರ ಮಕ್ಕಳು ಪೋಸ್ಟಾಫೀಸು, ಬ್ಯಾಂಕು, ಇನ್ಸೂರೆನ್ಸ್ ಆಫೀಸು, ರೇಡಿಯೊ, ಪೇಪರ್, ಸಿನಿಮಾ, ಟಿವಿಯೊಳಗೆ ಸೇರಿಕೊಂಡರು. ಈ ಇತಿಹಾಸವನ್ನು ಗಮನಿಸಿದರೆ ಟಿಪ್ಪುವಿನಿಂದಾದ ತೊಂದರೆ ಪೂರ್ಣಯ್ಯನ ಸಂತತಿಯಿಂದ ನಡೆಯುತ್ತಿರುವ ಅನಾಹುತದ ಮುಂದೇ ಏನೇನೂ ಅಲ್ಲ ಎಂದು ಎಲ್ಲರಿಗೂ ಗುರುತಾಗಲಿದೆಯಂತಲ್ಲಾ. ಥೂತ್ತೇರಿ

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಸಿದ್ದರಾಮಯ್ಯ ರಾವಣನಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....