Homeಅಂಕಣಗಳುಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

- Advertisement -
- Advertisement -

ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ ಪ್ರತಿನಿಧಿಗಳು ಪ್ರತಿಭಟಿಸಿದಾಗ ಮುಂದೆ ನೀವೂ ಆರೆಸ್ಸೆಸ್, ಇಡೀ ದೇಶವೇ ಆರೆಸ್ಸೆಸ್‌ಮಯವಾಗುತ್ತದೆ ಎಂದು ಹೆಮ್ಮೆಯಿಂದ ಉತ್ತರಿಸುತ್ತಾರೆ. ಇದಕ್ಕೆ ಪೂರಕವಾಗಿ ಉಗ್ರ ಹಿಂದೂ ಪ್ರತಿಪಾದಕ ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿರುವ ರೇಣುಕಾಚಾರ್ಯ ತನ್ನ ಮಗಳಿಗೆ ಬೇಡಜಂಗಮ ಸರ್ಟಿಫಿಕೇಟ್ ಪಡೆದಿರುವುದನ್ನು ಯಾವ ಅಳುಕೂ ಇಲ್ಲದೆ ಸದನದಲ್ಲಿ ಹೆಮ್ಮೆಯಿಂದ ಒಪ್ಪಿಕೊಳ್ಳುತ್ತಾರೆ. ಹೆಮ್ಮೆ ಏಕೆಂದರೆ ನಾವಿನ್ನೂ ಯಾವ ಸವಲತ್ತನ್ನು ಪಡೆದಿಲ್ಲ ಎಂಬುದು. ಅಷ್ಟೇ ಅಲ್ಲದೆ ಅವರ ಮಗ ಮತ್ತು ತಮ್ಮನೂ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರಂತಲ್ಲಾ. ರೇಣುಕಾಚಾರ್ಯ ಕೃತ್ಯದಿಂದ ದಲಿತರು ದಂಗುಬಡಿದುಹೋಗಿರುವಾಗ, ಅತ್ತ ಸದನದ ನ್ಯಾಯಸ್ಥಾನದಲ್ಲಿರುವ ಕಾಗೇರಿ ಯಾವ ಅಳುಕೂ ಇಲ್ಲದೆ ರೇಣುಕಾಚಾರ್ಯ ತಪ್ಪೊಪ್ಪಿಗೆಯನ್ನ ಮುಗುಳುನಗುತ್ತಲೇ ಗಮನಿಸುತ್ತಿದ್ದಾಗ, ಬೆಂಗಳೂರು ಜನತಾ ಬಜಾರಿನ ಮಾಜಿ ಉದ್ಯೋಗಿಯಾದ ಸೋಮಣ್ಣ ತನ್ನ ಅಕ್ರಮ ಆಸ್ತಿ ಸಂಬಂಧ ಕೋರ್ಟಿನಿಂದ ಬಂದ ನೋಟಿಸಿಗೆ ಕೇರ್ ಮಾಡದೆ ತನ್ನಂತೆ ಆಸ್ತಿ ಮಾಡಿದವರ ಪಟ್ಟಿ ತಯಾರಿಸುತ್ತಿದ್ದಾರಂತಲ್ಲಾ. ಥೂತ್ತೇರಿ.

*****

ಸೋಮಣ್ಣ ರೇವಣ್ಣನಂತೆ ಕೆಲಸಗಾರ, ತಿನ್ನುವವನು ಕೆಲಸ ಮಾಡುತ್ತಾನೆ ತಿನ್ನದವನು ಸುಮ್ಮನಿದ್ದು ಹೋಗುತ್ತಾನೆ ಎಂಬ ನಂಬಿಕೆ ಉಳ್ಳವರಂತಲ್ಲಾ. ರಾಜಕಾರಣದ ಸೋಮಣ್ಣನನ್ನು ಸದನದಲ್ಲೇ ರೇವಣ್ಣ ಸಮರ್ಥಿಸಿಕೊಂಡರಲ್ಲಾ. ಹಾಗೆ ನೋಡಿದರೆ ರೇವಣ್ಣನೂ ಪಡುವಲಹಿಪ್ಪೆ ತೋಟದಲ್ಲಿದ್ದು ಸಾಕಾಗಿ ಸದನಕ್ಕೆ ಬಂದವರು. ಒಳ್ಳೆ ಪಿಡಬ್ಲುಡಿ ಕೆಲಸಗಾರ. ಆದರೆ ಸೋಮಣ್ಣನಂತೆ ಸಿಕ್ಕಿ ಬಿದ್ದಿಲ್ಲ. ನುರಿತ ಅಧಿಕಾರಿಗಳ ಸಲಹೆ ತೆಗೆದುಕೊಂಡು ದೇವೇಗೌಡರ ಒಪ್ಪಿಗೆ ಪಡೆದು ಮುಂದುವರಿಯುವ ರೇವಣ್ಣ ಏನಾದರಾಗಲೀ ಎಂದು ಹಲವು ನಿಂಬೆಹಣ್ಣುಗಳನ್ನು ಜೇಬಲ್ಲಿ ಮಡಗಿಕೊಂಡೇ ಸದನಕ್ಕೆ ಬರುತ್ತಾರಂತಲ್ಲಾ. ಆದರೂ, ಸೋಮಣ್ಣನಿಗೆ ಬಂದ ನೋಟಿಸು ನನಗೆ ಬಂದರೆ ಗತಿಯೇನು ಎಂದು ಸೋಮಣ್ಣನ ಸಮರ್ಥನೆಗೆ ನಿಂತರಂತಲ್ಲಾ. ಬೆಂಗಳೂರಲ್ಲಿ ಯಾರಾದರೂ ಗೆಲ್ಲಲಿ, ಆ ಸೋಮಣ್ಣ ಗೆಲ್ಲಬಾರದೆಂದು ದೇವೇಗೌಡರು ಆಡಿದ ಮಾತನ್ನ ಕೇಳಿಸಿಕೊಂಡಾಗಿನಿಂದ ದೇವೇಗೌಡರ ಕುಟುಂಬವನ್ನೇ ದ್ವೇಷಿಸುತ್ತಿದ್ದ ಸೋಮಣ್ಣ ರೇವಣ್ಣನ ರಕ್ಷಣಾತ್ಮಕ ಮಾತಿನಿಂದ ಎಚ್ಚರಗೊಂಡು ಜೆಡಿಎಸ್ ಅಭಿಮಾನಿಯಾಗಿದ್ದಾರಂತಲ್ಲಾ. ಈ ನಡುವೆ ಕರ್ನಾಟಕದಲ್ಲಿ ನಡೆಯುತ್ತಿರುವ ಯಾವ ವಿದ್ಯಮಾನಕ್ಕೂ ಬಾಯಿ ಬಿಡದೆ ಕುಳಿತಿರುವ ಮಾಜಿ ಪ್ರಧಾನಿಗಳ ಮಗನಾದ ಕುಮಾರಣ್ಣ ಇದ್ದಕ್ಕಿದ್ದಂತೆ ಮುಖ್ಯಮಂತ್ರಿಯ ಗಂಡಸ್ತನದ ಬಗ್ಗೆ ಹೇಳಿದ ಮಾತಿಗೆ ಜೆಡಿಎಸ್ ಗಂಡು ಹುಡುಗರೆಲ್ಲಾ ಎದ್ದು ನಿಂತು ಗುಟುರು ಹಾಕಿವೆಯಂತಲ್ಲಾ. ನಂತರ ಏನೋ ಭರದಲ್ಲಿ ಹಾಗಂದದ್ದು ಅಂದರಂತಲ್ಲಾ. ಇದನ್ನು ಕೇಳಿಸಿಕೊಂಡ ಕಾಂಗೈಗಳೂ ಕೂಡ ಎಚ್ಚರವಾದರಂತರಲ್ಲಾ. ಥೂತ್ತೇರಿ.

****

ಇದ್ದಕ್ಕಿದ್ದಂತೆ ಎಡೂರಪ್ಪನ ವಿರೋಧಿಗಳೂ ಕೂಡ ಏನೇ ಆಗಲಿ ಎಡೂರಪ್ಪನೇ ವಾಸಿ. ಅವರು ಯಂತದೇ ರಾಜಕಾರಣ ಮಾಡಿದರೂ ಕರ್ನಾಟಕವನ್ನು ಈ ಸ್ಥಿತಿಗೆ ದೂಡುತ್ತಿರಲಿಲ್ಲ ಎಂಬ ಉದ್ಘಾರ ತೆಗೆಯುತ್ತಿದ್ದಾರಲ್ಲಾ. ಹಾಗೆ ನೋಡಿದರೆ ಈ ಎಡೂರಪ್ಪ ಈಶ್ವರಪ್ಪನಂತೆ ಮುಸ್ಲಿಂ ದ್ವೇಷ ಮಾಡಿಕೊಂಡು ರಾಜಕಾರಣ ಮಾಡಿದವರಲ್ಲ. ಶಿಕಾರಿಪುರದಲ್ಲಿ ಮುಸ್ಲಿಮರು ಕೂಡ ಎಡೂರಪ್ಪನಿಗೆ ಓಟು ಮಾಡುತ್ತಾರೆ. ಅದಕ್ಕಿಂತ ಮುಖ್ಯವಾಗಿ ಒಮ್ಮೆ ಬಿಜೆಪಿಗೆ ಜಾಡಿಸಿ ಒದ್ದು ಕೆಜೆಪಿ ಪಕ್ಷ ಕಟ್ಟಿ ಕರ್ನಾಟಕವನ್ನ ಸುತ್ತಿ ಬಂದು ಬಿಜೆಪಿಗೆ ಮಣ್ಣು ಮುಕ್ಕಿಸಿದವರು ಅವರು. ಪ್ರಾಯವೇ ಇದ್ದಿದ್ದರೆ ಈಗಲೂ ಅಂತಹದೊಂದು ಸಾಹಸ ಮಾಡಿ ಬಿಜೆಪಿ ಬಾಯಿಗೆ ಬಿರುಡೆ ಇಕ್ಕುತ್ತಿದ್ದರು. ಆದರೇನು ಮಾಡೋದು, ವಯಸ್ಸು ಮತ್ತು ಮಕ್ಕಳ ಭವಿಷ್ಯ ಹಾಗೂ ಅಕ್ರಮ ಆಸ್ತಿ ಅವರನ್ನ ಬಿಜೆಪಿ ಗೊಂತಿನಲ್ಲೇ ಇರುವಂತೆ ಮಾಡಿದೆ. ನಾಗಪುರದ ಕಾರ್ಯಕ್ರಮಗಳನ್ನ
ಜಾರಿಮಾಡಬೇಕಾದರೆ ಎಡೂರಪ್ಪ ಹಿಂದೇಟು ಹಾಕಬಹುದೆಂದು ತೀರ್ಮಾನಿಸಿದ ಪರಿವಾರದವರು ಸಾದರ ಲಿಂಗಾಯತರ ಬೊಮ್ಮಾಯಿಯನ್ನ ಅಧಿಕಾರಕ್ಕೇರಿಸಿ, ತನ್ನ ಕಾರ್ಯಾಚರಣೆಯನ್ನು ಕಾರ್ಯಕರ್ತರಿಗೆ ವಹಿಸಿ ದೇಶದಲ್ಲೇ ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕಕ್ಕೆ ತನ್ನ ವಾನರ ಸೇನೆ ನುಗ್ಗಿಸಿ ಹಾಳು ಮಾಡುತ್ತಿವೆಯಲ್ಲಾ. ಇದನ್ನ ನೋಡುತ್ತ ಕುಳಿತಿರುವ ಕರ್ನಾಟಕದ ಮಠಮಾನ್ಯಗಳ ದಿಕ್ಕಿನಿಂದ ಭೋಜನದ ತೇಗಿನ ಶಬ್ದ ಬರುತ್ತಿದೆಯಂತಲ್ಲಾ. ಥೂತ್ತೇರಿ.

******

ಕರ್ನಾಟಕದಲ್ಲಿ ಜಾರಿಯಾಗುತ್ತಿರುವ ಮತೀಯ ಕ್ಷೋಭೆಯ ಕಾರ್ಯಕ್ರಮಗಳು ನಾಗಪುರದಲ್ಲಿ ತಯಾರಾಗಿ, ಮೊದಲ ಕಂತಾಗಿ ಉಡುಪಿ ಭಟ್ಟರ ಮುಖಾಂತರ ಕಾರ್ಯರೂಪಕ್ಕಿಳಿದವಂತಲ್ಲಾ. ಮೊದಲು ಹಿಜಾಬ್‌ನಿಂದ ಶುರುಮಾಡಿ, ಶಿವಮೊಗ್ಗದಲ್ಲೊಂದು ಹತ್ಯೆಯಾದ ನಂತರ ಅಲ್ಲಿ ಗಲಭೆಯೆಬ್ಬಿಸಿ, ನಂತರ ಜಾತ್ರೆಗಳಲ್ಲಿ ಮುಸ್ಲಿಮರು ಅಂಗಡಿ ಹಾಕಬಾರದೆಂಬ ಗಲಾಟೆಯ ಜೊತೆಗೆ, ಹಲಾಲ್ ಮಾಂಸದ ಜಗಳ ಹಚ್ಚಿ ಈಗ ಮಸೀದಿಗಳಲ್ಲಿ ಧ್ವನಿವಧಕ ನಿರ್ಬಂಧಿಸಬೇಕೆಂಬ ದಾಂಧಲೆಗೆ ಬಂದು ನಿಂತಿವೆಯಲ್ಲಾ. ಆತ್ತ ಬೀದಿಯಲ್ಲಿ ಈ ಕತೆಯಾದರೆ ಇತ್ತ ಸರಕಾರದ ಮಟ್ಟದಲ್ಲಿ ಟಿಪ್ಪುಸುಲ್ತಾನನ ಸಾಹಸಗಳನ್ನ ಮರೆಮಾಚಿ ಸಾಧಾರಣ ಸೈನಿಕನಂತೆ ಮರೆಮಾಚಲು ಹವಣಿಸುತ್ತಿವೆಯೆಲ್ಲಾ. ಬಿಜೆಪಿ ಬೃಹಸ್ಪತಿಗಳು ಟಿಪ್ಪು ಇತಿಹಾಸ ಕೆದಕಿ ನೋಡಿದರೆ ಆತನ ಆಡಳಿತದಲ್ಲಿ ಏಳೆಂಟು ಸಚಿವರ ಪೈಕಿ ಐದು ಜನ ಬ್ರಾಹ್ಮಣ ಮಂತ್ರಿಗಳಿದ್ದರು; ದಿವಾನ್ ಪೂರ್ಣಯ್ಯನೇ ಬ್ರಾಹ್ಮಣ; ಆತ ನೇಮಿಸಿದ ಶ್ಯಾನುಭೋಗರ ಪೈಕಿ ಎಲ್ಲ ಬ್ರಾಹ್ಮಣರಿದ್ದರು; ಅವರೆಲ್ಲಾ ಕೆರೆ ಹಿಂದಿನ ಗದ್ದೆಯನ್ನ ತಮ್ಮ ಹೆಸರಿಗೆ ಕಾತೆ ಮಾಡಿಸಿಕೊಂಡರು; ಒಕ್ಕಲಿಗರಿಂದ ಗದ್ದೆ ಗೇಯಿಸಿಕೊಂಡರು ಬದಲಾದ ಕಾಲಕ್ಕೆ ಬಹುಬೆಲೆಗೆ ಅದನ್ನು ಮಾರಿ ಬೆಂಗಳೂರು, ದೆಹಲಿ, ನ್ಯೂಯಾರ್ಕ್ ಸೇರಿಕೊಂಡರು; ಅವರ ಮಕ್ಕಳು ಪೋಸ್ಟಾಫೀಸು, ಬ್ಯಾಂಕು, ಇನ್ಸೂರೆನ್ಸ್ ಆಫೀಸು, ರೇಡಿಯೊ, ಪೇಪರ್, ಸಿನಿಮಾ, ಟಿವಿಯೊಳಗೆ ಸೇರಿಕೊಂಡರು. ಈ ಇತಿಹಾಸವನ್ನು ಗಮನಿಸಿದರೆ ಟಿಪ್ಪುವಿನಿಂದಾದ ತೊಂದರೆ ಪೂರ್ಣಯ್ಯನ ಸಂತತಿಯಿಂದ ನಡೆಯುತ್ತಿರುವ ಅನಾಹುತದ ಮುಂದೇ ಏನೇನೂ ಅಲ್ಲ ಎಂದು ಎಲ್ಲರಿಗೂ ಗುರುತಾಗಲಿದೆಯಂತಲ್ಲಾ. ಥೂತ್ತೇರಿ

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಸಿದ್ದರಾಮಯ್ಯ ರಾವಣನಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...