Homeಅಂಕಣಗಳುಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

- Advertisement -
- Advertisement -

ಸಾಮಾನ್ಯ ಮನುಷ್ಯನೂ ಕೂಡ ಅಸಹ್ಯ ಪಟ್ಟುಕೊಳ್ಳುವುದು ಯಾವುದಕ್ಕೆಂದರೆ ಅನವಶ್ಯಕವಾದ ಭಟ್ಟಂಗಿತನಕ್ಕಂತಲ್ಲಾ. ಅದು ಯಂಗೋ ಏನೋ ಭಟ್ಟಂಗಿಗಳು ಎಡೂರಪ್ಪನನ್ನು ರಾಜಾಹುಲಿ ಎಂದು ಕರೆದುಬಿಟ್ಟವು. ಸೂಕ್ಷ್ಮಜ್ಞರು ಆಲೋಚಿಸಿದಾಗ ಎಡೂರಪ್ಪ ಬರಿ ಹುಲಿಯಷ್ಟೆ; ಏಕೆಂದರೆ ಇಪ್ಪತ್ತಮೂರು ದಿನ ಕಂಬಿ ಹಿಂದೆ ಇದ್ದ ಈ ಹುಲಿ, ಬಿಡುಗಡೆಯ ನಂತರ ಕಾಡಿಗೇ ಕಾಂಪೌಂಡ್ ಹಾಕಿ ದಕ್ಕಿಸಿಕೊಂಡಿತು. ಜೊತೆಗೆ ಪತ್ರಕರ್ತರಿಗೂ ಮನೆ, ಸೈಟು ಮಾಡಿಕೊಟ್ಟಾಗ ಅವರೆಲ್ಲಾ ರಾಜಾಹುಲಿಯೆಂಬ ಬಿರುದು ಬರೆದುಕೊಟ್ಟರು. ಈಗ ರಾಜಾಹುಲಿಯ ಹಲ್ಲು ಮತ್ತು ಉಗುರುಗಳನ್ನ ಬಿಜೆಪಿಗಳು ಕಿತ್ತು ಕೂರಿಸಿವೆ. ಆದರೂ ನಿರಾಶೆಗೊಳ್ಳದೆ ಭಟ್ಟಂಗಿ ಮಾಧ್ಯಮದವರು ಯಡ್ಡಿ ಮಗನನ್ನಾಗಲೇ ಮರಿ ರಾಜಾಹುಲಿ ಎಂದು ನಾಮಕರಣ ಮಾಡಿ, ಸದನವನ್ನು ನಡುಗಿಸಿದ ಮರಿ ರಾಜಾಹುಲಿ ಎಂದು ನರಿಗಳಂತೆ ಊಳಿಟ್ಟಿವೆ. ಈ ಭಟ್ಟಂಗಿಗಳ ಬತ್ತಳಿಕೆಯಲ್ಲಿ ಇನ್ನು ಎಂತೆಂತಹ ಪದಪುಂಜಗಳಿವೆಯೆಂದರೆ, ಶಿಸ್ತಿನ ಪಕ್ಷ ಬಿಜೆಪಿ ಎಂದೇ ಯಾವಾಗಲೂ ನಮೂದಿಸುವ ಇವಕ್ಕೆ ಬಿಜೆಪಿ ಶುದ್ಧ ಅಶಿಸ್ತಿನ ಪಕ್ಷ ಎಂಬುದು ತಿಳಿದೇ ಇಲ್ಲವಂತಲ್ಲ. ಅಲ್ಲದೆ ಬಿಜೆಪಿಗಳನ್ನ ಸಂಬೋಧಿಸಬೇಕಾದರೆ ಕೇಸರಿ ಕಲಿಗಳು, ಕೇಸರಿಪಡೆ ಎನ್ನುತ್ತಿದ್ದ ಇವಕ್ಕೆ ಆ ಕಲಿಗಳು ಕಿಸುಗೊಂಡು ಬಿದ್ದು ಕ್ಷೇತ್ರ ಮರೆತು ಅಲೆಯುತ್ತಿರುವುದೇ ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ವಿಕೃತಭಟ್ಟನ ವಿಕೃತ ಪುಸ್ತಕಗಳನ್ನು ಬಿಡುಗಡೆ ಮಾಡಲು ಹೋಗುವ ಸಿದ್ದರಾಮಯ್ಯನವರ ಬೌದ್ಧಿಕ ಪತನ ಆರಂಭವಾಗಲಿದೆಯಂತಲ್ಲಾ. ಏಕೆಂದರೆ ವಿಕೃತಭಟ್ಟನ ಇತಿಹಾಸವೇ ಹಾಗಿದೆ. ಈತ ಪತ್ರಿಕೆಯಲ್ಲಿ ಸಿದ್ದರಾಮಯ್ಯನ ಉಚ್ಛಾರಣೆ ಆಡಿಕೊಂಡ ದಾಖಲೆಯಿದೆ. ಸಿದ್ದುಗೆ ಶ,ಷ,ಸ,ಗಳ ವ್ಯತ್ಯಾಸ ಗೊತ್ತಿಲ್ಲವೆಂದು ಆಡಿಕೊಂಡ ಉದಾಹರಣೆಯಿದೆ. ಎಲ್ಲಕ್ಕಿಂತ ಹೆಚ್ಚಾಗಿ ಹೆಣ್ಣಿನ ದ್ವೇಷಿಯಾದ ಈತ ಗೌರಿ ಸಂಘಿಗಳ ಗುಂಡೇಟಿನಿಂದ ಹುತಾತ್ಮಳಾದಾಗ, “ಆಕೆ ಗುಂಡಿಗೆ ಬಲಿಯಾಗದೆ ಗುಂಡುಹಾಕಿ ಬಲಿಯಾಗಿದ್ದರೆ ಸಿಂಗಲ್ ಕಾಲಮ್ಮಿನ ಸುದ್ದಿಯಾಗುತ್ತಿದ್ದಳು” ಎಂದು ಬರೆದ. ಗೌರಿ ಸಿದ್ದು ಅಭಿಮಾನಿಯಾಗಿದ್ದರೆ ವಿಕೃತಭಟ್ಟ ಸಿದ್ದು ವಿರೋಧಿಯಾಗಿದ್ದ. ಗೌರಿ ಹುತಾತ್ಮಳಾದಾಗ ಸರಕಾರಿ ಗೌರವದೊಂದಿಗೆ ಸಂಸ್ಕಾರ ನೆರವೇರಿಸಿದ ಸಿದ್ದು ಆಕೆಗೆ ಗೌರವ ಕೊಡಲೋಸ್ಕರವಾಗಿಯಾದರೂ ವಿಕೃತಭಟ್ಟನ ಪುಸ್ತಕ ಬಿಡುಗಡೆಗೆ ಬಂದಿದ್ದ ಕರೆಯನ್ನು ನಿರಾಕರಿಸಬೇಕಿತ್ತು. ಸಿದ್ದುಗೆ ವಿರೋಧಿಗಳನ್ನ ಒಲಿಸಿಕೊಳ್ಳುವ ತಂತ್ರವಿದಾಗಿರಬಹುದು ಆದರೆ ಭಟ್ಟನ ವಿಷ ಹುಟ್ಟಿನಿಂದಲೇ ಬಂದಿದ್ದು. ಈತ ಹೆಣ್ಣಿನ ಬಗ್ಗೆ ಎಷ್ಟು ವಿಕೃತಿ ಮೆರೆದಿದ್ದಾನೆಂಬುದಕ್ಕೆ ಇನ್ನೂ ನೂರಾರು ಉದಾಹರಣೆಗಳಿವೆ. ಮಮತಾ ಬ್ಯಾನರ್ಜಿ ಮಂಚ್‌ಗೆ (ವೇದಿಕೆ) ಬರುವಂತೆ ಕರೆಕೊಟ್ಟಾಗ ಭಟ್ಟ ಮಂಚ್‌ಅನ್ನು ಮಂಚ ಎಂದು ತಿರುಚಿ ಬರೆದು ಮೋದಿ ವಿರೋಧಿಗಳಿಗೆ ಮಂಚಕ್ಕೆ ಬರುವಂತೆ ಮಮತಾ ಕರೆ ಎಂದು ವಿಕೃತ ಮೆರೆದ. ಆ ಮಟ್ಟಿನ ವಿಕೃತ ಭಟ್ಟನ ಮನಸ್ಸನ್ನ ಮುಂದೆ ಸಿದ್ದು ಬದಲಿಸಿದರೆ, ಆತನ ಪುಸ್ತಕ ಬಿಡುಗಡೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ. ಅದು ಸಾಧ್ಯವೇ, ಥೂತ್ತೇರಿ.

ಇದನ್ನೂ ಓದಿ: ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಒಂದು ಕಡೆ ಗೋಹತ್ಯೆ ನಿಷೇಧದ ಕಾಯಿದೆ ತಂದು ಗೋವುಗಳನ್ನೆಲ್ಲಾ ಗೋಶಾಲೆಗೆ ಹೊಡೆದು, ಅವು ನೀರು ಮೇವಿಲ್ಲದೆ ಸಾಯುತ್ತಿದ್ದರೂ, ಗೋರಕ್ಷಣೆಯ ಅನುದಾನ ಪಡೆಯುತ್ತ ಸುಳ್ಳು ಲೆಕ್ಕ ತೋರಿಸುತ್ತ ಗೋವಿನ ಹೆಸರಲ್ಲಿ ಕೊಳ್ಳೆಹೊಡೆಯುತ್ತ ಕುಳಿತಿರುವ ಬಿಜೆಪಿಗಳು ಗೋವುಗಳೆಲ್ಲಾ ಗೋಶಾಲೆ ಸೇರಿದ ಮೇಲೆ ಗೋಮಾಳವೇಕೆ ಎಂದು ಆರೆಸ್ಸೆಸ್ ಸಂಸ್ಥೆಗೆ ಖಾತೆಮಾಡಿ ಕೊಟ್ಟಿದ್ದಾರಂತಲ್ಲಾ. ಇದನ್ನ ಪತ್ತೆ ಹಚ್ಚಿದ ಸರಕಾರ ತಡೆಯೊಡ್ಡಿದರೆ ಚಡ್ಡಿಗಳ ಬದಲು ಪೈಜಾಮಿನ ಬೊಮ್ಮಾಯಿಂದ ಖಂಡನಾ ಹೇಳಿಕೆ ಕೊಡಿಸಿದ್ದಾರಲ್ಲಾ. ಒಂದೇ ಅವಧಿಗೆ ರಾಜ್ಯದ ಗೋಮಾಳಗಳನ್ನೆಲ್ಲಾ ಕಬಳಿಸಿ ಹೊರಟ ಬಿಜೆಪಿಗಳು ಕಬಳಿಸಿದ ಜಾಗದಲ್ಲಿ ಏನೇನು ಮಾಡಬೇಕೆಂದು ನೀಲಿನಕ್ಷೆಯ ತಯಾರಿ ನಡೆಸುತ್ತಿದ್ದಾಗ, ಕರ್ನಾಟಕದ ಕತೆಯೇ ಇಷ್ಟಿದ್ದರೆ ಇನ್ನು ದೇಶದ ನಾನಾ ಕಡೆಗಳಲ್ಲಿ ಸರ್ಕಾರ ನಡೆಸುತ್ತಿರುವ ಚೆಡ್ಡಿಗಳು ಇನ್ನೆಷ್ಟು ಭೂಮಿ ಲಪಟಾಯಿಸಿರಬಹುದೆಂಬುದು ಊಹೆಗೂ ಸಿಲುಕುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ಸದ್ಯಕ್ಕೆ ಸದನದ ವಿರೋಧಪಕ್ಷವನ್ನ ಆವರಿಸಿರುವ ಕುಮಾರಣ್ಣನವರು ಸದರಿ ಸರಕಾರದ ಎಲ್ಲ ನಡೆಗಳನ್ನು ಟೀಕಿಸುವ ಭರದಲ್ಲಿ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ವರ್ಗಾವಣೆ ಪಟ್ಟಿಯನ್ನ ಮರೆತು, ಈ ಸರಕಾರದ ವರ್ಗಾವಣೆ ದರಪಟ್ಟಿಯನ್ನ ಪತ್ರಿಕೆಗೆ ಬಿಡುಗಡೆ ಮಾಡಿದ್ದಲ್ಲದೆ ಸದನದಲ್ಲೂ ಬಿಡುಗಡೆಗೊಳಿಸಿದರಂತಲ್ಲಾ. ಆದರೇನು ಹಿಂದೆ ಕುಮಾರಣ್ಣನ ಸರಕಾರ ವರ್ಗಾವಣೆಗೆ ದರ ನಿಗದಿ ಮಾಡಿ ವಸೂಲಿ ಮಾಡಿದ್ದ ಪತ್ರಿಕಾ ವರದಿಯನ್ನೇ ಚಲುವರಾಯಸ್ವಾಮಿ ಬಿಡುಗಡೆ ಮಾಡಲಾಗಿ ಸಿಟ್ಟಾದ ಕುಮಾರಣ್ಣ ಜೆಡಿಎಸ್‌ಅನ್ನೆ ಬಿಜೆಪಿಯಲ್ಲಿ ಲೀನಗೊಳಿಸಿ ಅಧಿಕೃತ ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾರಂತಲ್ಲಾ. ಹಾಗೇನಾದರು ಆದರೆ ದೇವೇಗೌಡರು ಮಕ್ಕಳಿಗಾಗಿ ಕಟ್ಟಿಬೆಳೆಸಿದ ಪಾರ್ಟಿಯ ಕತೆಯೇನು ಎಂದು ನಿರಾಶ್ರಿತರಂತಾಗಿರುವ ಜೆಡಿಎಸ್‌ನವರು ಆತಂಕಗೊಂಡಿದ್ದಾರಂತಲ್ಲಾ. ಕುಮಾರಣ್ಣ ಪಂಚರತ್ನ ಮುಂದಿಟ್ಟುಕೊಂಡು ಕರ್ನಾಟಕ ಸುತ್ತುವಾಗ ನನಗೆ ನೀವು ನೂರ ಇಪ್ಪತ್ತುಮೂರು ಸೀಟು ಗೆಲ್ಲಿಸಿಕೊಡದಿದ್ದರೆ ಪಾರ್ಟಿಯನ್ನೆ ವಿಸರ್ಜನೆ ಮಾಡುತ್ತೇನೆ ಎಂದು ಶಪಥಗೈದಿದ್ದರು ಎಂದು ಕಾಂಗ್ರೆಸ್‌ನವರು ಪದೇಪದೇ ಆರೋಪಿಸುತ್ತಿದ್ದಾರೆ. ಈಗ ಕುಮಾರಣ್ಣ ಬಿಜೆಪಿ ಸೇರಿದರೆ ಪಾರ್ಟಿ ತಂತಾನೆ ವಿಸರ್ಜನೆಯಾಗುತ್ತದಂತಲ್ಲಾ. ಹಾಗೇನಾದರು ಆದರೆ ರೇವಣ್ಣ, ಜಿ.ಟಿ.ದೇವೇಗೌಡ ಇನ್ನು ಮುಂತಾದವರು ಸಿದ್ದು ಸನಿಹಕ್ಕೆ ಬಂದರೆ ಆಶ್ಚರ್ಯವಿಲ್ಲ. 123 ಸೀಟು ಬರದಿದ್ದರೆ ಪಾರ್ಟಿಯನ್ನೇ ವಿಸರ್ಜಿಸುವೆನೆಂದು ಕುಮಾರಸ್ವಾಮಿ ಹೇಳಿದ್ದರು ಎಂದು ಸದನದಲ್ಲಿಯೇ ಸಿದ್ದು ಹೇಳಿದ ಮಾತಿಗೆ ಕುಮಾರಣ್ಣನ ಕಡೆ ಇರುವ ನಾಗಮಂಗಲ ಕಡೆಯ ಕಾರ್ಯಕರ್ತರು, “ಹೌದು ಕುಮಾರಣ್ಣ ಅಂಗೇಳಿದ್ರು. ಆದ್ರೆ ಅಕಸ್ಮಾತ್ 19 ಸೀಟು ಬಂದ್ರೆ ವಿಸರ್ಜನೆ ಮಾಡ್ತಿನಿ ಅಂತ ಎಲ್ಲೇಳಿದ್ರು ಎಂದವಂತಲ್ಲಾ. ಇದಲ್ಲವೆ ಬಿಜೆಪಿ ಸೇರುವ ತಯಾರಿ, ಥೂತ್ತೇರಿ.

*****

ಬಿಜೆಪಿ ಜೊತೆ ಸೇರಿ ರಾಜಕೀಯ ಕೂಡಾವಳಿ ಜೀವನ ನಡೆಸಲು ಹೊರಟಿರುವ ಕುಮಾರಣ್ಣನ ಬಗ್ಗೆ ಸಹಜವಾಗಿ ಕರ್ನಾಟಕದ ಕೆಲ ಮನಸ್ಸುಗಳು ಮಮ್ಮಲ ಮರುಗಿವೆ. ಏಕೆಂದರೆ ಇದೇ ಕುಮಾರಣ್ಣ ಪ್ರಹ್ಲಾದ ಜೋಶಿ ಟೀಮನ್ನು ಪೇಶ್ವೆ ಸಂತತಿಗೆ ಹೋಲಿಸಿದ್ದರು ಮತ್ತು ಆರೆಸ್ಸೆಸ್ಸಿಗರ ಮೇಲೆ ದಾಳಿ ಮಾಡಿದ್ದರು. ಆದರೆ ಈಗ ಈ ಮಾತುಗಳು ಅರ್ಥ ಕಳೆದುಕೊಳ್ಳತೊಡಗಿವೆ. ಅಧಿಕಾರಕ್ಕಾಗಿ ಏನನ್ನಾದರೂ ಮಾಡುವ ಬಿಜೆಪಿಗಳಿಗೆ ಕುಮಾರಣ್ಣನೇ ಆದರ್ಶ, ಏಕೆಂದರೆ ಎಮ್ಮೆ ನಡಿಗೆಯಲ್ಲಿ ಹೋಗುತ್ತಿದ್ದ ಧರ್ಮಸಿಂಗ್ ಸರಕಾರ ಕೆಡವಿ ಮುಖ್ಯಮಂತ್ರಿಯಾದ ಕುಮಾರಣ್ಣನಿಗೆ ಕೆಲ ಸತ್ಯಸಂಗತಿಗಳು ಗೊತ್ತಿವೆ. ಅದೇನೆಂದರೆ ತಾನು ಯಾವತ್ತೂ ಜನಾಭಿಪ್ರಾಯದ ಮುಖ್ಯಮಂತ್ರಿಯಾಗಲೂ ಸಾಧ್ಯವಿಲ್ಲ ಎಂದು; ಒಂದೋ ಕಾಂಗೈ ತೆಕ್ಕೆಗೆ ಬೀಳಬೇಕು, ಇಲ್ಲ ಬಿಜೆಪಿ ಆಲಿಂಗನಕ್ಕೆ ಅರ್ಪಿಸಿಕೊಳ್ಳಬೇಕು. ಆದರೆ ಬಿಜೆಪಿಯದ್ದು ದೃತರಾಷ್ಟ್ರಲಿಂಗನ. ಅವರು ಕುಮಾರಣ್ಣನನ್ನ ಆಲಂಗಿಸಿ ಜೆಡಿಎಸ್ ಸಮಾಧಿಯ ಮೇಲೆ ಪಾಪಾಸು ಕಳ್ಳಿಯಂತೆ ಬೆಳೆಯಬಲ್ಲರಂತಲ್ಲಾ. ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆಯ ಉದಾಹರಣೆ ಕಣ್ಣಮುಂದೆಯಿದ್ದರೂ, ಕುಮಾರಸ್ವಾಮಿಯವರಿಗೆ ಅದು ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...