Homeಅಂಕಣಗಳುಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

- Advertisement -
- Advertisement -

ಸಾಮಾನ್ಯ ಮನುಷ್ಯನೂ ಕೂಡ ಅಸಹ್ಯ ಪಟ್ಟುಕೊಳ್ಳುವುದು ಯಾವುದಕ್ಕೆಂದರೆ ಅನವಶ್ಯಕವಾದ ಭಟ್ಟಂಗಿತನಕ್ಕಂತಲ್ಲಾ. ಅದು ಯಂಗೋ ಏನೋ ಭಟ್ಟಂಗಿಗಳು ಎಡೂರಪ್ಪನನ್ನು ರಾಜಾಹುಲಿ ಎಂದು ಕರೆದುಬಿಟ್ಟವು. ಸೂಕ್ಷ್ಮಜ್ಞರು ಆಲೋಚಿಸಿದಾಗ ಎಡೂರಪ್ಪ ಬರಿ ಹುಲಿಯಷ್ಟೆ; ಏಕೆಂದರೆ ಇಪ್ಪತ್ತಮೂರು ದಿನ ಕಂಬಿ ಹಿಂದೆ ಇದ್ದ ಈ ಹುಲಿ, ಬಿಡುಗಡೆಯ ನಂತರ ಕಾಡಿಗೇ ಕಾಂಪೌಂಡ್ ಹಾಕಿ ದಕ್ಕಿಸಿಕೊಂಡಿತು. ಜೊತೆಗೆ ಪತ್ರಕರ್ತರಿಗೂ ಮನೆ, ಸೈಟು ಮಾಡಿಕೊಟ್ಟಾಗ ಅವರೆಲ್ಲಾ ರಾಜಾಹುಲಿಯೆಂಬ ಬಿರುದು ಬರೆದುಕೊಟ್ಟರು. ಈಗ ರಾಜಾಹುಲಿಯ ಹಲ್ಲು ಮತ್ತು ಉಗುರುಗಳನ್ನ ಬಿಜೆಪಿಗಳು ಕಿತ್ತು ಕೂರಿಸಿವೆ. ಆದರೂ ನಿರಾಶೆಗೊಳ್ಳದೆ ಭಟ್ಟಂಗಿ ಮಾಧ್ಯಮದವರು ಯಡ್ಡಿ ಮಗನನ್ನಾಗಲೇ ಮರಿ ರಾಜಾಹುಲಿ ಎಂದು ನಾಮಕರಣ ಮಾಡಿ, ಸದನವನ್ನು ನಡುಗಿಸಿದ ಮರಿ ರಾಜಾಹುಲಿ ಎಂದು ನರಿಗಳಂತೆ ಊಳಿಟ್ಟಿವೆ. ಈ ಭಟ್ಟಂಗಿಗಳ ಬತ್ತಳಿಕೆಯಲ್ಲಿ ಇನ್ನು ಎಂತೆಂತಹ ಪದಪುಂಜಗಳಿವೆಯೆಂದರೆ, ಶಿಸ್ತಿನ ಪಕ್ಷ ಬಿಜೆಪಿ ಎಂದೇ ಯಾವಾಗಲೂ ನಮೂದಿಸುವ ಇವಕ್ಕೆ ಬಿಜೆಪಿ ಶುದ್ಧ ಅಶಿಸ್ತಿನ ಪಕ್ಷ ಎಂಬುದು ತಿಳಿದೇ ಇಲ್ಲವಂತಲ್ಲ. ಅಲ್ಲದೆ ಬಿಜೆಪಿಗಳನ್ನ ಸಂಬೋಧಿಸಬೇಕಾದರೆ ಕೇಸರಿ ಕಲಿಗಳು, ಕೇಸರಿಪಡೆ ಎನ್ನುತ್ತಿದ್ದ ಇವಕ್ಕೆ ಆ ಕಲಿಗಳು ಕಿಸುಗೊಂಡು ಬಿದ್ದು ಕ್ಷೇತ್ರ ಮರೆತು ಅಲೆಯುತ್ತಿರುವುದೇ ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ವಿಕೃತಭಟ್ಟನ ವಿಕೃತ ಪುಸ್ತಕಗಳನ್ನು ಬಿಡುಗಡೆ ಮಾಡಲು ಹೋಗುವ ಸಿದ್ದರಾಮಯ್ಯನವರ ಬೌದ್ಧಿಕ ಪತನ ಆರಂಭವಾಗಲಿದೆಯಂತಲ್ಲಾ. ಏಕೆಂದರೆ ವಿಕೃತಭಟ್ಟನ ಇತಿಹಾಸವೇ ಹಾಗಿದೆ. ಈತ ಪತ್ರಿಕೆಯಲ್ಲಿ ಸಿದ್ದರಾಮಯ್ಯನ ಉಚ್ಛಾರಣೆ ಆಡಿಕೊಂಡ ದಾಖಲೆಯಿದೆ. ಸಿದ್ದುಗೆ ಶ,ಷ,ಸ,ಗಳ ವ್ಯತ್ಯಾಸ ಗೊತ್ತಿಲ್ಲವೆಂದು ಆಡಿಕೊಂಡ ಉದಾಹರಣೆಯಿದೆ. ಎಲ್ಲಕ್ಕಿಂತ ಹೆಚ್ಚಾಗಿ ಹೆಣ್ಣಿನ ದ್ವೇಷಿಯಾದ ಈತ ಗೌರಿ ಸಂಘಿಗಳ ಗುಂಡೇಟಿನಿಂದ ಹುತಾತ್ಮಳಾದಾಗ, “ಆಕೆ ಗುಂಡಿಗೆ ಬಲಿಯಾಗದೆ ಗುಂಡುಹಾಕಿ ಬಲಿಯಾಗಿದ್ದರೆ ಸಿಂಗಲ್ ಕಾಲಮ್ಮಿನ ಸುದ್ದಿಯಾಗುತ್ತಿದ್ದಳು” ಎಂದು ಬರೆದ. ಗೌರಿ ಸಿದ್ದು ಅಭಿಮಾನಿಯಾಗಿದ್ದರೆ ವಿಕೃತಭಟ್ಟ ಸಿದ್ದು ವಿರೋಧಿಯಾಗಿದ್ದ. ಗೌರಿ ಹುತಾತ್ಮಳಾದಾಗ ಸರಕಾರಿ ಗೌರವದೊಂದಿಗೆ ಸಂಸ್ಕಾರ ನೆರವೇರಿಸಿದ ಸಿದ್ದು ಆಕೆಗೆ ಗೌರವ ಕೊಡಲೋಸ್ಕರವಾಗಿಯಾದರೂ ವಿಕೃತಭಟ್ಟನ ಪುಸ್ತಕ ಬಿಡುಗಡೆಗೆ ಬಂದಿದ್ದ ಕರೆಯನ್ನು ನಿರಾಕರಿಸಬೇಕಿತ್ತು. ಸಿದ್ದುಗೆ ವಿರೋಧಿಗಳನ್ನ ಒಲಿಸಿಕೊಳ್ಳುವ ತಂತ್ರವಿದಾಗಿರಬಹುದು ಆದರೆ ಭಟ್ಟನ ವಿಷ ಹುಟ್ಟಿನಿಂದಲೇ ಬಂದಿದ್ದು. ಈತ ಹೆಣ್ಣಿನ ಬಗ್ಗೆ ಎಷ್ಟು ವಿಕೃತಿ ಮೆರೆದಿದ್ದಾನೆಂಬುದಕ್ಕೆ ಇನ್ನೂ ನೂರಾರು ಉದಾಹರಣೆಗಳಿವೆ. ಮಮತಾ ಬ್ಯಾನರ್ಜಿ ಮಂಚ್‌ಗೆ (ವೇದಿಕೆ) ಬರುವಂತೆ ಕರೆಕೊಟ್ಟಾಗ ಭಟ್ಟ ಮಂಚ್‌ಅನ್ನು ಮಂಚ ಎಂದು ತಿರುಚಿ ಬರೆದು ಮೋದಿ ವಿರೋಧಿಗಳಿಗೆ ಮಂಚಕ್ಕೆ ಬರುವಂತೆ ಮಮತಾ ಕರೆ ಎಂದು ವಿಕೃತ ಮೆರೆದ. ಆ ಮಟ್ಟಿನ ವಿಕೃತ ಭಟ್ಟನ ಮನಸ್ಸನ್ನ ಮುಂದೆ ಸಿದ್ದು ಬದಲಿಸಿದರೆ, ಆತನ ಪುಸ್ತಕ ಬಿಡುಗಡೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ. ಅದು ಸಾಧ್ಯವೇ, ಥೂತ್ತೇರಿ.

ಇದನ್ನೂ ಓದಿ: ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಒಂದು ಕಡೆ ಗೋಹತ್ಯೆ ನಿಷೇಧದ ಕಾಯಿದೆ ತಂದು ಗೋವುಗಳನ್ನೆಲ್ಲಾ ಗೋಶಾಲೆಗೆ ಹೊಡೆದು, ಅವು ನೀರು ಮೇವಿಲ್ಲದೆ ಸಾಯುತ್ತಿದ್ದರೂ, ಗೋರಕ್ಷಣೆಯ ಅನುದಾನ ಪಡೆಯುತ್ತ ಸುಳ್ಳು ಲೆಕ್ಕ ತೋರಿಸುತ್ತ ಗೋವಿನ ಹೆಸರಲ್ಲಿ ಕೊಳ್ಳೆಹೊಡೆಯುತ್ತ ಕುಳಿತಿರುವ ಬಿಜೆಪಿಗಳು ಗೋವುಗಳೆಲ್ಲಾ ಗೋಶಾಲೆ ಸೇರಿದ ಮೇಲೆ ಗೋಮಾಳವೇಕೆ ಎಂದು ಆರೆಸ್ಸೆಸ್ ಸಂಸ್ಥೆಗೆ ಖಾತೆಮಾಡಿ ಕೊಟ್ಟಿದ್ದಾರಂತಲ್ಲಾ. ಇದನ್ನ ಪತ್ತೆ ಹಚ್ಚಿದ ಸರಕಾರ ತಡೆಯೊಡ್ಡಿದರೆ ಚಡ್ಡಿಗಳ ಬದಲು ಪೈಜಾಮಿನ ಬೊಮ್ಮಾಯಿಂದ ಖಂಡನಾ ಹೇಳಿಕೆ ಕೊಡಿಸಿದ್ದಾರಲ್ಲಾ. ಒಂದೇ ಅವಧಿಗೆ ರಾಜ್ಯದ ಗೋಮಾಳಗಳನ್ನೆಲ್ಲಾ ಕಬಳಿಸಿ ಹೊರಟ ಬಿಜೆಪಿಗಳು ಕಬಳಿಸಿದ ಜಾಗದಲ್ಲಿ ಏನೇನು ಮಾಡಬೇಕೆಂದು ನೀಲಿನಕ್ಷೆಯ ತಯಾರಿ ನಡೆಸುತ್ತಿದ್ದಾಗ, ಕರ್ನಾಟಕದ ಕತೆಯೇ ಇಷ್ಟಿದ್ದರೆ ಇನ್ನು ದೇಶದ ನಾನಾ ಕಡೆಗಳಲ್ಲಿ ಸರ್ಕಾರ ನಡೆಸುತ್ತಿರುವ ಚೆಡ್ಡಿಗಳು ಇನ್ನೆಷ್ಟು ಭೂಮಿ ಲಪಟಾಯಿಸಿರಬಹುದೆಂಬುದು ಊಹೆಗೂ ಸಿಲುಕುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ಸದ್ಯಕ್ಕೆ ಸದನದ ವಿರೋಧಪಕ್ಷವನ್ನ ಆವರಿಸಿರುವ ಕುಮಾರಣ್ಣನವರು ಸದರಿ ಸರಕಾರದ ಎಲ್ಲ ನಡೆಗಳನ್ನು ಟೀಕಿಸುವ ಭರದಲ್ಲಿ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ವರ್ಗಾವಣೆ ಪಟ್ಟಿಯನ್ನ ಮರೆತು, ಈ ಸರಕಾರದ ವರ್ಗಾವಣೆ ದರಪಟ್ಟಿಯನ್ನ ಪತ್ರಿಕೆಗೆ ಬಿಡುಗಡೆ ಮಾಡಿದ್ದಲ್ಲದೆ ಸದನದಲ್ಲೂ ಬಿಡುಗಡೆಗೊಳಿಸಿದರಂತಲ್ಲಾ. ಆದರೇನು ಹಿಂದೆ ಕುಮಾರಣ್ಣನ ಸರಕಾರ ವರ್ಗಾವಣೆಗೆ ದರ ನಿಗದಿ ಮಾಡಿ ವಸೂಲಿ ಮಾಡಿದ್ದ ಪತ್ರಿಕಾ ವರದಿಯನ್ನೇ ಚಲುವರಾಯಸ್ವಾಮಿ ಬಿಡುಗಡೆ ಮಾಡಲಾಗಿ ಸಿಟ್ಟಾದ ಕುಮಾರಣ್ಣ ಜೆಡಿಎಸ್‌ಅನ್ನೆ ಬಿಜೆಪಿಯಲ್ಲಿ ಲೀನಗೊಳಿಸಿ ಅಧಿಕೃತ ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾರಂತಲ್ಲಾ. ಹಾಗೇನಾದರು ಆದರೆ ದೇವೇಗೌಡರು ಮಕ್ಕಳಿಗಾಗಿ ಕಟ್ಟಿಬೆಳೆಸಿದ ಪಾರ್ಟಿಯ ಕತೆಯೇನು ಎಂದು ನಿರಾಶ್ರಿತರಂತಾಗಿರುವ ಜೆಡಿಎಸ್‌ನವರು ಆತಂಕಗೊಂಡಿದ್ದಾರಂತಲ್ಲಾ. ಕುಮಾರಣ್ಣ ಪಂಚರತ್ನ ಮುಂದಿಟ್ಟುಕೊಂಡು ಕರ್ನಾಟಕ ಸುತ್ತುವಾಗ ನನಗೆ ನೀವು ನೂರ ಇಪ್ಪತ್ತುಮೂರು ಸೀಟು ಗೆಲ್ಲಿಸಿಕೊಡದಿದ್ದರೆ ಪಾರ್ಟಿಯನ್ನೆ ವಿಸರ್ಜನೆ ಮಾಡುತ್ತೇನೆ ಎಂದು ಶಪಥಗೈದಿದ್ದರು ಎಂದು ಕಾಂಗ್ರೆಸ್‌ನವರು ಪದೇಪದೇ ಆರೋಪಿಸುತ್ತಿದ್ದಾರೆ. ಈಗ ಕುಮಾರಣ್ಣ ಬಿಜೆಪಿ ಸೇರಿದರೆ ಪಾರ್ಟಿ ತಂತಾನೆ ವಿಸರ್ಜನೆಯಾಗುತ್ತದಂತಲ್ಲಾ. ಹಾಗೇನಾದರು ಆದರೆ ರೇವಣ್ಣ, ಜಿ.ಟಿ.ದೇವೇಗೌಡ ಇನ್ನು ಮುಂತಾದವರು ಸಿದ್ದು ಸನಿಹಕ್ಕೆ ಬಂದರೆ ಆಶ್ಚರ್ಯವಿಲ್ಲ. 123 ಸೀಟು ಬರದಿದ್ದರೆ ಪಾರ್ಟಿಯನ್ನೇ ವಿಸರ್ಜಿಸುವೆನೆಂದು ಕುಮಾರಸ್ವಾಮಿ ಹೇಳಿದ್ದರು ಎಂದು ಸದನದಲ್ಲಿಯೇ ಸಿದ್ದು ಹೇಳಿದ ಮಾತಿಗೆ ಕುಮಾರಣ್ಣನ ಕಡೆ ಇರುವ ನಾಗಮಂಗಲ ಕಡೆಯ ಕಾರ್ಯಕರ್ತರು, “ಹೌದು ಕುಮಾರಣ್ಣ ಅಂಗೇಳಿದ್ರು. ಆದ್ರೆ ಅಕಸ್ಮಾತ್ 19 ಸೀಟು ಬಂದ್ರೆ ವಿಸರ್ಜನೆ ಮಾಡ್ತಿನಿ ಅಂತ ಎಲ್ಲೇಳಿದ್ರು ಎಂದವಂತಲ್ಲಾ. ಇದಲ್ಲವೆ ಬಿಜೆಪಿ ಸೇರುವ ತಯಾರಿ, ಥೂತ್ತೇರಿ.

*****

ಬಿಜೆಪಿ ಜೊತೆ ಸೇರಿ ರಾಜಕೀಯ ಕೂಡಾವಳಿ ಜೀವನ ನಡೆಸಲು ಹೊರಟಿರುವ ಕುಮಾರಣ್ಣನ ಬಗ್ಗೆ ಸಹಜವಾಗಿ ಕರ್ನಾಟಕದ ಕೆಲ ಮನಸ್ಸುಗಳು ಮಮ್ಮಲ ಮರುಗಿವೆ. ಏಕೆಂದರೆ ಇದೇ ಕುಮಾರಣ್ಣ ಪ್ರಹ್ಲಾದ ಜೋಶಿ ಟೀಮನ್ನು ಪೇಶ್ವೆ ಸಂತತಿಗೆ ಹೋಲಿಸಿದ್ದರು ಮತ್ತು ಆರೆಸ್ಸೆಸ್ಸಿಗರ ಮೇಲೆ ದಾಳಿ ಮಾಡಿದ್ದರು. ಆದರೆ ಈಗ ಈ ಮಾತುಗಳು ಅರ್ಥ ಕಳೆದುಕೊಳ್ಳತೊಡಗಿವೆ. ಅಧಿಕಾರಕ್ಕಾಗಿ ಏನನ್ನಾದರೂ ಮಾಡುವ ಬಿಜೆಪಿಗಳಿಗೆ ಕುಮಾರಣ್ಣನೇ ಆದರ್ಶ, ಏಕೆಂದರೆ ಎಮ್ಮೆ ನಡಿಗೆಯಲ್ಲಿ ಹೋಗುತ್ತಿದ್ದ ಧರ್ಮಸಿಂಗ್ ಸರಕಾರ ಕೆಡವಿ ಮುಖ್ಯಮಂತ್ರಿಯಾದ ಕುಮಾರಣ್ಣನಿಗೆ ಕೆಲ ಸತ್ಯಸಂಗತಿಗಳು ಗೊತ್ತಿವೆ. ಅದೇನೆಂದರೆ ತಾನು ಯಾವತ್ತೂ ಜನಾಭಿಪ್ರಾಯದ ಮುಖ್ಯಮಂತ್ರಿಯಾಗಲೂ ಸಾಧ್ಯವಿಲ್ಲ ಎಂದು; ಒಂದೋ ಕಾಂಗೈ ತೆಕ್ಕೆಗೆ ಬೀಳಬೇಕು, ಇಲ್ಲ ಬಿಜೆಪಿ ಆಲಿಂಗನಕ್ಕೆ ಅರ್ಪಿಸಿಕೊಳ್ಳಬೇಕು. ಆದರೆ ಬಿಜೆಪಿಯದ್ದು ದೃತರಾಷ್ಟ್ರಲಿಂಗನ. ಅವರು ಕುಮಾರಣ್ಣನನ್ನ ಆಲಂಗಿಸಿ ಜೆಡಿಎಸ್ ಸಮಾಧಿಯ ಮೇಲೆ ಪಾಪಾಸು ಕಳ್ಳಿಯಂತೆ ಬೆಳೆಯಬಲ್ಲರಂತಲ್ಲಾ. ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆಯ ಉದಾಹರಣೆ ಕಣ್ಣಮುಂದೆಯಿದ್ದರೂ, ಕುಮಾರಸ್ವಾಮಿಯವರಿಗೆ ಅದು ಕಾಣುತ್ತಿಲ್ಲವಂತಲ್ಲಾ, ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...