Homeಅಂಕಣಗಳುತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

ತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

- Advertisement -
- Advertisement -

ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇಶದಲ್ಲಿ ಸ್ವಾತಂತ್ರ್ಯದ ಹರಣವಾಗಿತ್ತು; ಮಾಧ್ಯಮಗಳ ಕತ್ತು ಹಿಸುಕಲಾಗಿತ್ತು. ಬಲೆ ಹಾಕಿ ಹಂದಿಗಳನ್ನು ಹಿಡಿದಂತೆ ವಿರೋಧ ಪಕ್ಷದವರನ್ನೆಲ್ಲಾ ಅರೆಸ್ಟು ಮಾಡಿ ಜೈಲಿಗೆ ಹಾಕಲಾಗಿತ್ತು; ಇಂಥ ಮಾತುಗಳ ಶಂಖವಾದ್ಯವನ್ನು ತುರ್ತುಪರಿಸ್ಥಿತಿ ತೆರವುಗೊಂಡಾಗಿನಿಂದ ಬಿಜೆಪಿಗಳು ಪ್ರತಿ ವರ್ಷ ಊದೂತ್ತ ಬಂದಿದ್ದಾರೆ. ಒಂದಿಷ್ಟು ಒಳನೋಟ ಬೀರಿ ಗ್ರಹಿಸಿದ್ದಾದರೆ ತುರ್ತು ಸ್ಥಿತಿಯ ಗರ್ಭದಲ್ಲೇ ಬಿಜೆಪಿಯ ಭ್ರೂಣಾವಸ್ಥೆ ಬಲಿತು ಆ ನಂತರ ಅದು ಕಮಲವಾಗಿ ಅರಳಿದ್ದು ಕಟುಸತ್ಯವಾಗಿ ಕಾಣುತ್ತಿದೆಯಲ್ಲಾ. ತುರ್ತುಪರಿಸ್ಥಿತಿಯಲ್ಲಿ ವಿರೋಧಪಕ್ಷದವರೆಲ್ಲಾ ಜೈಲಿನಲ್ಲಿ ಒಟ್ಟಾಗಿ ಕುಳಿತು ಚರ್ಚಿಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ತುರ್ತುಪರಿಸ್ಥಿತಿ ತೆರವುಗೊಂಡು ಎಲ್ಲರೂ ಹೊರಬಂದಮೇಲೆ ಜೆ.ಪಿ.ಯವರು (ಜಯಪ್ರಕಾಶ ನಾರಾಯಣ) ನೀವೆಲ್ಲಾ ನಿಮ್ಮನಿಮ್ಮ ಚಹರೆ ಮತ್ತು ಬಾವುಟ ಬಿಸಾಡಿ ನೇಗಿಲು ಹೊತ್ತ ರೈತನ ಪಕ್ಷದ ಮುಂದಾಳತ್ವದಲ್ಲಿ ಒಂದಾಗಲು ಕರೆಕೊಟ್ಟ ಕೂಡಲೇ ಬಹುತೇಕ ಎಲ್ಲರೂ ಹಾಗೇ ಮಾಡಿದರು; ಆದರೆ ಬಿಜೆಪಿಗಳು ಜನಸಂಘದ ದೀಪ ಆರಿಸಿ ಬಂದರೂ ಚೆಡ್ಡಿ ದೊಣ್ಣೆಯನ್ನ ಹಾಗೇ ಉಳಿಸಿಕೊಂಡು ಬಂದಿದ್ದರಂತಲ್ಲಾ, ಥೂತ್ತೇರಿ.

****

ಜೆ.ಪಿ. ಕರೆಯಂತೆ ನೇಗಿಲುಹೊತ್ತ ರೈತನ ಪಕ್ಷ ಭಾರತದಲ್ಲಿ ಜಯಭೇರಿ ಭಾರಿಸಿ ಹದಿನೆಂಟು ತಿಂಗಳ ಕಾಲ ಆಡಳಿತ ನಡೆಸಿತು. ಅಷ್ಟರಲ್ಲಿ ದೀಪ ಆರಿಸಿ ಬಂದ ಜನರ ಚೇಷ್ಟೆಗಳು ಆರಂಭವಾದವು. ಅವರು ಜನತಾಪಕ್ಷದ ಸದಸ್ಯತ್ವದ ಜೊತೆಗೇ ಆರೆಸ್ಸೆಸ್ ಸದಸ್ಯತ್ವವನ್ನು ನಿಭಾಯಿಸುತ್ತಾ ಜನತಾ ಪಕ್ಷಕ್ಕೆ ಜನಿವಾರ ತೊಡಿಸಹೊರಟಿದ್ದು ಎಲ್ಲರನ್ನ ದಂಗುಬಡಿಸಿತು. ಈ ಗಲಭೆಯ ಸಮಯವನ್ನು ಸದುಪಯೋಗಪಡಿಸಿಕೊಂಡ ರಾಜನಾರಾಯಣನವರ ಬಣ ಪ್ರಧಾನಿ ಮೊರಾರ್ಜಿ ಅವರನ್ನ ಇಳಿಸಿ ಚರಣಸಿಂಗರನ್ನು ಪ್ರಧಾನಿ ಮಾಡುವಲ್ಲಿ ಯಶಸ್ವಿಯಾಯಿತಾದರೂ, ಅದಕ್ಕೆ ಇಂದಿರಾಗಾಂಧಿ ಬೆಂಬಲ ಬೇಕಾಯಿತು! ಆಗ ಜನತಾ ಪಕ್ಷ ಚಿಂದಿಯಾಗಿ ಹೋಯಿತು. ಇತ್ತ ವಾಜಪೇಯಿ ಟೀಮು ಭಾರತೀಯ ಜನತಾಪಕ್ಷ ಸ್ಥಾಪಿಸಿಕೊಂಡು ಕಮಲ ಚಿಹ್ನೆ ಪಡೆದು ಜನತಾಪಕ್ಷದೊಳಗಡೆ ಪಡೆದುಕೊಂಡ ಶಕ್ತಿಯನ್ನು ವೃದ್ಧಿಸಿಕೊಂಡು ಬೆಳೆಯುತ್ತಲೇ ಹೋಯ್ತು. ಜೆ.ಪಿ. ನೀವೆಲ್ಲಾ ನಿಮ್ಮನಿಮ್ಮ ಪಕ್ಷ ವಿಸರ್ಜಿಸಿ ನೇಗಿಲು ಹೊತ್ತ ರೈತನ ಜೊತೆಗೆ ಬನ್ನಿ ಎಂದು ಕರೆಕೊಡುವಾಗ, ಗಾಂಧಿ ಕೊಂದ ಆಪಾದನೆಯ ಸಂಘಟನೆಯ ಜೊತೆಗೆ ಸಂಬಂಧ ಹೊಂದಿದ್ದ ಜನಸಂಘದ ಹೊರತಾಗಿ ಎಲ್ಲರೂ ಬನ್ನಿ ಎಂದು ಹೇಳಿದ್ದರೆ ಈ ದೇಶದ ಚರಿತ್ರೆಯೇ ಬದಲಾಗುತ್ತಿತ್ತಲ್ಲವಾ, ಥೂತ್ತೇರಿ.

****

ದೇಶದ ಮಹಾನಾಯಕರು ವಿವೇಚನೆಯಿಲ್ಲದೆ ನಡೆದುಕೊಂಡ ತಪ್ಪಿಗೆ ದೇಶವೇ ಪರಿತಪಿಸಬೇಕಾಗುತ್ತದೆ ಎಂಬುದಕ್ಕೆ ಜೆ.ಪಿ. ತೆಗೆದುಕೊಂಡ ಆತುರದ ತೀರ್ಮಾನವೇ ಪ್ರಮುಖ ಉದಾಹರಣೆ. ಅದು ಇಂದು ತನ್ನ ದುಷ್ಪರಿಣಾಮದ ಫಲಕೊಡುತ್ತಿದೆ. ನಿಜವಾಗಿಯೂ ಭಾರತೀಯ ಜನತಾಪಕ್ಷದವರು ತುರ್ತುಸ್ಥಿತಿಯನ್ನ ಸ್ಮರಿಸಿಕೊಳ್ಳಬೇಕು, ಅಲ್ಲದೆ ತಮ್ಮ ಪಾರ್ಟಿ ಆಫೀಸುಗಳಲ್ಲಿ ಮತ್ತು ನಾಗಪುರದ ಕೇಂದ್ರ ಕಚೇರಿಯಲ್ಲಿ ಜೆ.ಪಿ. ಮತ್ತು ಇಂದಿರಾಗಾಂಧಿಯವರ ಫೋಟೋ ಹಾಕಿಕೊಂಡು ಪ್ರಾರ್ಥಿಸಬೇಕು. ಇವರಿಬ್ಬರ ವಿವೇಚನೆಯಿಲ್ಲದ ತೀರ್ಮಾನಗಳಿಂದ ಅರಳಿದ ಕಮಲ ಪಕ್ಷದಿಂದ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇಂದು ನೆಲೆಸಿದೆ. ಇಡೀ ದೇಶವೇ ಕ್ಷೋಭೆಯಿಂದ ನಲುಗುತ್ತಿದೆ, ಮಣಿಪುರ ಸರ್ವನಾಶದ ದಾರಿಯಲ್ಲಿದೆ. ಇಂತಹ ಘಟನೆಗಳಿಂದ ವಿಚಲಿತರಾಗದ ನಮ್ಮ ಪ್ರಧಾನಿಯವರು ಸ್ಥಿತಪ್ರಜ್ಞತೆಯಿಂದ ಯೋಗ ಮಾಡಿಕೊಂಡು ಇಡೀ ಪ್ರಪಂಚದ ಗಮನ ಸೆಳೆದಿದ್ದಾರೆ. ಮಾರಿಕೊಂಡ ಮಾಧ್ಯಮದವರೂ ವಾರಗಟ್ಟಲೆ ಮೋದಿಯ ಯೋಗ ತೋರಿಸಿ ಎಲ್ಲರೂ ಯೋಗದಿಂದ ವಿಮುಕ್ತರಾಗುವಂತೆ ಮಾಡಿದ್ದಾರಂತಲ್ಲಾ, ಥೂತ್ತೇರಿ.

****

ನಿಜವಾಗಿಯೂ ಒಂದು ಕಾಲದ ಬಿಜೆಪಿಯು ಅಂದರೆ ವಾಜಪೇಯಿ ಕಾಲದ ಬಿಜೆಪಿ ಈಗಿನಂತಿರಲಿಲ್ಲವಂತಲ್ಲಾ. ಕೆಲವರಾದರೂ ಪ್ರಾಮಾಣಿಕರು ಅವರ ಜೊತೆಗೆ ಇದ್ದರಂತಲ್ಲಾ. ಚುನಾವಣೆ ಬಂದರೆ ಕುಬೇರರ ಬಳಿ ಭಿಕ್ಷೆ ಬೇಡಿ ಅದರಲ್ಲೇ ಚಿತ್ರಾನ್ನ ತಿಂದು, ಶರಭತ್ತು ಕುಡಿದು, ಹ್ಯಾಂಡ್ ಬಿಲ್ ಹಾಕಿಸಿಕೊಂಡು ಹಂಚಿ ಚುನಾವಣೆ ಮುಗಿಸುತ್ತಿದ್ದರು. ಫಲಿತಾಂಶ ಬಂದಾಗ “ಈ ಬಾರಿ ಐದುನೂರು ಓಟು ನಮ್ಮ ಪಾರ್ಟಿಗೆ ಜಾಸ್ತಿ ಬಂದಿವೆ” ಎಂದುಕೊಂಡು ಮನೆಗೆ ಹೋಗುತ್ತಿದ್ದರು. ಅದು ಎ.ಕೆ ಸುಬ್ಬಯ್ಯನವರ ಕಾಲ. ಯಾವಾಗ ಎಡೂರಪ್ಪನವರ ಕಾಲ ಶುರುವಾಯಿತೊ ಆಗ ಉದ್ಘಾಟನೆಗೊಂಡ ಭ್ರಷ್ಟಾಚಾರ ಇಡೀ ದೇಶವನ್ನೇ ದಂಗುಬಡಿಸಿತು. ಬಿಜೆಪಿ ಕಚೇರಿಗಳೇ ಮೀಟಿಂಗು ಮಾಡಿ, ನಮ್ಮ ಪಕ್ಷದವರು ಹಣ ಮಾಡುವುದನ್ನು ಯಾರೂ ತಡೆಯಬೇಡಿ, ಅದರ ವಿರುದ್ಧ ಹೇಳಿಕೆ ಕೊಡಬೇಡಿ ಎಂದಕೂಡಲೇ ಎಡೂರಪ್ಪ ಪಾರ್ಟಿ ಹಿತಕ್ಕಾಗಿ ಎರ್ರಾ ಬಿರ್ರಿ ಹಣ ಸಂಗ್ರಹಿಸಿ, ಕೊನೆಗೆ ಆರೋಪ ವಹಿಸಿಕೊಂಡು ಜೈಲಿಗೂ ಹೋಗಿಬಂದರಂತಲ್ಲಾ, ಥೂತ್ತೇರಿ.

****

ಮುಂದೆ ಮೋದಿ ಸರಕಾರವನ್ನು ಕಿತ್ತು ಮಡಗಬೇಕಾದರೆ ನಾವೆಲ್ಲಾ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಇಪ್ಪತ್ತೊಂದು ವಿವಿಧ ಪಕ್ಷಗಳೂ ಒಂದೆಡೆ ಸೇರಿ ಚರ್ಚಿಸಿ ಬರಖಾಸ್ತ ಆದರಂತಲ್ಲಾ. ಈ ಸಭೆಗೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಗೈರುಹಾಜರಾದದ್ದು ಸುದ್ದಿಯಾಗಲಿಲ್ಲ; ಈಗಿನ ಸರ್ಕಾರ ಕಟ್ಟಿಸಿ ಮೋದಿಯವರು ಉದ್ಘಾಟಿಸಿದ ಹೊಸ ಪಾರ್ಲಿಮೆಂಟ್ ನೋಡಲು ದೇವೇಗೌಡರು ಹೋಗಿದ್ದರು. ಹಿಂದೆ ದೇವೇಗೌಡರನ್ನು ಪ್ರಧಾನಿ ಮಾಡಬೇಕಾದ ಸಮಯದಲ್ಲಿ ಇಷ್ಟೇ ಪಕ್ಷಗಳು ಒಂದೆಡೆ ಸೇರಿ ಚರ್ಚಿಸಿದ್ದವು. ಆ ಸಭೆಯಲ್ಲಿ ಬಿಜೆಪಿ ಇರಲಿಲ್ಲ. ಜ್ಯೋತಿ ಬಸು ಪ್ರಧಾನಿಯಾಗಲು ಪಾರ್ಟಿ ಬಿಡಲಿಲ್ಲ. ವಿ.ಪಿ ಸಿಂಗ್ ತಪ್ಪಿಸಿಕೊಂಡರು. ಆಗ ಎಲ್ಲ ವಿರೋಧಪಕ್ಷಗಳು ಸೇರಿಕೊಂಡು ದೇವೇಗೌಡರನ್ನು ಪ್ರಧಾನಿಯಾಗಿ ಆರಿಸಿದರು. ಇಂತಹ ಯಾವ ಉಪಕಾರದ ಸ್ಮರಣೆಯಿಲ್ಲದ ಗೌಡರ ನಡೆ, ಅವರು ಈ ಹಿಂದೆ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಹಾಕಿದ ಪಾತ್ರಕ್ಕೆ ಸಾಕ್ಷಿ ನುಡಿಯುತ್ತಿದೆಯಂತಲ್ಲಾ, ಥೂತ್ತೇರಿ.

****

ಯಾವಾಗ ದೇವೇಗೌಡರು ಬಹಿರಂಗವಾಗಿಯೇ ಮೋದಿ ಪರವಾಗಿ ಚಾವಲ ಬೀಸತೊಡಗಿದರೋ, ಆ ಕೂಡಲೇ ಕುಮಾರಣ್ಣ ಕಾಂಗೈ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳತೊಡಗಿದ್ದಾರಲ್ಲಾ. ವಾಸ್ತವವಾಗಿ ಪಂಚರತ್ನ ಭಾಗ್ಯ ಪ್ರಕಟಿಸಿ ಕರ್ನಾಟಕವನ್ನು ಗರಗರ ತಿರುಗಿ ಬರಬರ ಬಂದವರು, ತಾವು ಮಾಡಬೇಕಿದ್ದಂತಹ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಾರ್ಟಿಯಾದರೂ ತರುತ್ತಿದೆಯಲ್ಲಾ ಎಂದು ಮೆಚ್ಚುಗೆ ಸೂಚಿಸಬಹುದಿತ್ತು. ಆದರೆ ಅದು ಅವರಿಂದ ಸಾಧ್ಯವಾಗುತ್ತಿಲ್ಲ. ದೇವೇಗೌಡರು ಏನೇ ಮಾಡಿದರೂ ಅದು ಮಗನ ರಾಜಕಾರಣದ ಭವಿಷ್ಯ ಕುರಿತ ಹುನ್ನಾರದ ಸೂತ್ರವಿದ್ದಂತೆ. ಅಂತಹ ಸೂತ್ರದಲ್ಲಿ ಸಿಕ್ಕಿ ಒದ್ದಾಡುತ್ತಿರುವ ಕುಮಾರಣ್ಣ ಯಾವ ಮಾತನ್ನಾಡಿದರೂ ಹಾಸ್ಯಾಸ್ಪದವಾಗುತ್ತಿದೆ. ಒಂಥರದಲ್ಲಿ ಅದು ಶೋಭಾ ಕರಂದ್ಲಾಜೆ, ಎಡೂರಪ್ಪ, ಆಶೋಕ್ ಇತ್ಯಾದಿಗಳ ದನಿಯಂತೆಯೂ ಕೇಳುತ್ತಿದೆ. ಹೀಗೇ ಆದರೆ ಕುಮಾರಣ್ಣ ಹಿಂದೆ ಹೋಗುವುದು ಹೇಗೆಂದು ದಳದ ಕೆಲವರು ಯೋಚಿಸುತ್ತಿದ್ದಾರಂತಲ್ಲಾ. ಇಂತಹ ಆಲೋಚನೆ ಮತ್ತು ಕಾರ್ಯಕರ್ತರ ಅಸಮಾಧಾನಗಳ ಕಡೆ ಕಿವಿಗೊಟ್ಟಿದ್ದರೆ ಕುಮಾರಣ್ಣನಿಗೆ ಇಪ್ಪತ್ತೊಂಬತ್ತು ಸೀಟಾದರೂ ಬರುತ್ತಿದ್ದವಂತಲ್ಲಾ ಥೂತ್ತೇರಿ.


ಇದನ್ನೂ ಓದಿ: ಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...