Homeಅಂಕಣಗಳುತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

ತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

- Advertisement -
- Advertisement -

ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇಶದಲ್ಲಿ ಸ್ವಾತಂತ್ರ್ಯದ ಹರಣವಾಗಿತ್ತು; ಮಾಧ್ಯಮಗಳ ಕತ್ತು ಹಿಸುಕಲಾಗಿತ್ತು. ಬಲೆ ಹಾಕಿ ಹಂದಿಗಳನ್ನು ಹಿಡಿದಂತೆ ವಿರೋಧ ಪಕ್ಷದವರನ್ನೆಲ್ಲಾ ಅರೆಸ್ಟು ಮಾಡಿ ಜೈಲಿಗೆ ಹಾಕಲಾಗಿತ್ತು; ಇಂಥ ಮಾತುಗಳ ಶಂಖವಾದ್ಯವನ್ನು ತುರ್ತುಪರಿಸ್ಥಿತಿ ತೆರವುಗೊಂಡಾಗಿನಿಂದ ಬಿಜೆಪಿಗಳು ಪ್ರತಿ ವರ್ಷ ಊದೂತ್ತ ಬಂದಿದ್ದಾರೆ. ಒಂದಿಷ್ಟು ಒಳನೋಟ ಬೀರಿ ಗ್ರಹಿಸಿದ್ದಾದರೆ ತುರ್ತು ಸ್ಥಿತಿಯ ಗರ್ಭದಲ್ಲೇ ಬಿಜೆಪಿಯ ಭ್ರೂಣಾವಸ್ಥೆ ಬಲಿತು ಆ ನಂತರ ಅದು ಕಮಲವಾಗಿ ಅರಳಿದ್ದು ಕಟುಸತ್ಯವಾಗಿ ಕಾಣುತ್ತಿದೆಯಲ್ಲಾ. ತುರ್ತುಪರಿಸ್ಥಿತಿಯಲ್ಲಿ ವಿರೋಧಪಕ್ಷದವರೆಲ್ಲಾ ಜೈಲಿನಲ್ಲಿ ಒಟ್ಟಾಗಿ ಕುಳಿತು ಚರ್ಚಿಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ತುರ್ತುಪರಿಸ್ಥಿತಿ ತೆರವುಗೊಂಡು ಎಲ್ಲರೂ ಹೊರಬಂದಮೇಲೆ ಜೆ.ಪಿ.ಯವರು (ಜಯಪ್ರಕಾಶ ನಾರಾಯಣ) ನೀವೆಲ್ಲಾ ನಿಮ್ಮನಿಮ್ಮ ಚಹರೆ ಮತ್ತು ಬಾವುಟ ಬಿಸಾಡಿ ನೇಗಿಲು ಹೊತ್ತ ರೈತನ ಪಕ್ಷದ ಮುಂದಾಳತ್ವದಲ್ಲಿ ಒಂದಾಗಲು ಕರೆಕೊಟ್ಟ ಕೂಡಲೇ ಬಹುತೇಕ ಎಲ್ಲರೂ ಹಾಗೇ ಮಾಡಿದರು; ಆದರೆ ಬಿಜೆಪಿಗಳು ಜನಸಂಘದ ದೀಪ ಆರಿಸಿ ಬಂದರೂ ಚೆಡ್ಡಿ ದೊಣ್ಣೆಯನ್ನ ಹಾಗೇ ಉಳಿಸಿಕೊಂಡು ಬಂದಿದ್ದರಂತಲ್ಲಾ, ಥೂತ್ತೇರಿ.

****

ಜೆ.ಪಿ. ಕರೆಯಂತೆ ನೇಗಿಲುಹೊತ್ತ ರೈತನ ಪಕ್ಷ ಭಾರತದಲ್ಲಿ ಜಯಭೇರಿ ಭಾರಿಸಿ ಹದಿನೆಂಟು ತಿಂಗಳ ಕಾಲ ಆಡಳಿತ ನಡೆಸಿತು. ಅಷ್ಟರಲ್ಲಿ ದೀಪ ಆರಿಸಿ ಬಂದ ಜನರ ಚೇಷ್ಟೆಗಳು ಆರಂಭವಾದವು. ಅವರು ಜನತಾಪಕ್ಷದ ಸದಸ್ಯತ್ವದ ಜೊತೆಗೇ ಆರೆಸ್ಸೆಸ್ ಸದಸ್ಯತ್ವವನ್ನು ನಿಭಾಯಿಸುತ್ತಾ ಜನತಾ ಪಕ್ಷಕ್ಕೆ ಜನಿವಾರ ತೊಡಿಸಹೊರಟಿದ್ದು ಎಲ್ಲರನ್ನ ದಂಗುಬಡಿಸಿತು. ಈ ಗಲಭೆಯ ಸಮಯವನ್ನು ಸದುಪಯೋಗಪಡಿಸಿಕೊಂಡ ರಾಜನಾರಾಯಣನವರ ಬಣ ಪ್ರಧಾನಿ ಮೊರಾರ್ಜಿ ಅವರನ್ನ ಇಳಿಸಿ ಚರಣಸಿಂಗರನ್ನು ಪ್ರಧಾನಿ ಮಾಡುವಲ್ಲಿ ಯಶಸ್ವಿಯಾಯಿತಾದರೂ, ಅದಕ್ಕೆ ಇಂದಿರಾಗಾಂಧಿ ಬೆಂಬಲ ಬೇಕಾಯಿತು! ಆಗ ಜನತಾ ಪಕ್ಷ ಚಿಂದಿಯಾಗಿ ಹೋಯಿತು. ಇತ್ತ ವಾಜಪೇಯಿ ಟೀಮು ಭಾರತೀಯ ಜನತಾಪಕ್ಷ ಸ್ಥಾಪಿಸಿಕೊಂಡು ಕಮಲ ಚಿಹ್ನೆ ಪಡೆದು ಜನತಾಪಕ್ಷದೊಳಗಡೆ ಪಡೆದುಕೊಂಡ ಶಕ್ತಿಯನ್ನು ವೃದ್ಧಿಸಿಕೊಂಡು ಬೆಳೆಯುತ್ತಲೇ ಹೋಯ್ತು. ಜೆ.ಪಿ. ನೀವೆಲ್ಲಾ ನಿಮ್ಮನಿಮ್ಮ ಪಕ್ಷ ವಿಸರ್ಜಿಸಿ ನೇಗಿಲು ಹೊತ್ತ ರೈತನ ಜೊತೆಗೆ ಬನ್ನಿ ಎಂದು ಕರೆಕೊಡುವಾಗ, ಗಾಂಧಿ ಕೊಂದ ಆಪಾದನೆಯ ಸಂಘಟನೆಯ ಜೊತೆಗೆ ಸಂಬಂಧ ಹೊಂದಿದ್ದ ಜನಸಂಘದ ಹೊರತಾಗಿ ಎಲ್ಲರೂ ಬನ್ನಿ ಎಂದು ಹೇಳಿದ್ದರೆ ಈ ದೇಶದ ಚರಿತ್ರೆಯೇ ಬದಲಾಗುತ್ತಿತ್ತಲ್ಲವಾ, ಥೂತ್ತೇರಿ.

****

ದೇಶದ ಮಹಾನಾಯಕರು ವಿವೇಚನೆಯಿಲ್ಲದೆ ನಡೆದುಕೊಂಡ ತಪ್ಪಿಗೆ ದೇಶವೇ ಪರಿತಪಿಸಬೇಕಾಗುತ್ತದೆ ಎಂಬುದಕ್ಕೆ ಜೆ.ಪಿ. ತೆಗೆದುಕೊಂಡ ಆತುರದ ತೀರ್ಮಾನವೇ ಪ್ರಮುಖ ಉದಾಹರಣೆ. ಅದು ಇಂದು ತನ್ನ ದುಷ್ಪರಿಣಾಮದ ಫಲಕೊಡುತ್ತಿದೆ. ನಿಜವಾಗಿಯೂ ಭಾರತೀಯ ಜನತಾಪಕ್ಷದವರು ತುರ್ತುಸ್ಥಿತಿಯನ್ನ ಸ್ಮರಿಸಿಕೊಳ್ಳಬೇಕು, ಅಲ್ಲದೆ ತಮ್ಮ ಪಾರ್ಟಿ ಆಫೀಸುಗಳಲ್ಲಿ ಮತ್ತು ನಾಗಪುರದ ಕೇಂದ್ರ ಕಚೇರಿಯಲ್ಲಿ ಜೆ.ಪಿ. ಮತ್ತು ಇಂದಿರಾಗಾಂಧಿಯವರ ಫೋಟೋ ಹಾಕಿಕೊಂಡು ಪ್ರಾರ್ಥಿಸಬೇಕು. ಇವರಿಬ್ಬರ ವಿವೇಚನೆಯಿಲ್ಲದ ತೀರ್ಮಾನಗಳಿಂದ ಅರಳಿದ ಕಮಲ ಪಕ್ಷದಿಂದ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇಂದು ನೆಲೆಸಿದೆ. ಇಡೀ ದೇಶವೇ ಕ್ಷೋಭೆಯಿಂದ ನಲುಗುತ್ತಿದೆ, ಮಣಿಪುರ ಸರ್ವನಾಶದ ದಾರಿಯಲ್ಲಿದೆ. ಇಂತಹ ಘಟನೆಗಳಿಂದ ವಿಚಲಿತರಾಗದ ನಮ್ಮ ಪ್ರಧಾನಿಯವರು ಸ್ಥಿತಪ್ರಜ್ಞತೆಯಿಂದ ಯೋಗ ಮಾಡಿಕೊಂಡು ಇಡೀ ಪ್ರಪಂಚದ ಗಮನ ಸೆಳೆದಿದ್ದಾರೆ. ಮಾರಿಕೊಂಡ ಮಾಧ್ಯಮದವರೂ ವಾರಗಟ್ಟಲೆ ಮೋದಿಯ ಯೋಗ ತೋರಿಸಿ ಎಲ್ಲರೂ ಯೋಗದಿಂದ ವಿಮುಕ್ತರಾಗುವಂತೆ ಮಾಡಿದ್ದಾರಂತಲ್ಲಾ, ಥೂತ್ತೇರಿ.

****

ನಿಜವಾಗಿಯೂ ಒಂದು ಕಾಲದ ಬಿಜೆಪಿಯು ಅಂದರೆ ವಾಜಪೇಯಿ ಕಾಲದ ಬಿಜೆಪಿ ಈಗಿನಂತಿರಲಿಲ್ಲವಂತಲ್ಲಾ. ಕೆಲವರಾದರೂ ಪ್ರಾಮಾಣಿಕರು ಅವರ ಜೊತೆಗೆ ಇದ್ದರಂತಲ್ಲಾ. ಚುನಾವಣೆ ಬಂದರೆ ಕುಬೇರರ ಬಳಿ ಭಿಕ್ಷೆ ಬೇಡಿ ಅದರಲ್ಲೇ ಚಿತ್ರಾನ್ನ ತಿಂದು, ಶರಭತ್ತು ಕುಡಿದು, ಹ್ಯಾಂಡ್ ಬಿಲ್ ಹಾಕಿಸಿಕೊಂಡು ಹಂಚಿ ಚುನಾವಣೆ ಮುಗಿಸುತ್ತಿದ್ದರು. ಫಲಿತಾಂಶ ಬಂದಾಗ “ಈ ಬಾರಿ ಐದುನೂರು ಓಟು ನಮ್ಮ ಪಾರ್ಟಿಗೆ ಜಾಸ್ತಿ ಬಂದಿವೆ” ಎಂದುಕೊಂಡು ಮನೆಗೆ ಹೋಗುತ್ತಿದ್ದರು. ಅದು ಎ.ಕೆ ಸುಬ್ಬಯ್ಯನವರ ಕಾಲ. ಯಾವಾಗ ಎಡೂರಪ್ಪನವರ ಕಾಲ ಶುರುವಾಯಿತೊ ಆಗ ಉದ್ಘಾಟನೆಗೊಂಡ ಭ್ರಷ್ಟಾಚಾರ ಇಡೀ ದೇಶವನ್ನೇ ದಂಗುಬಡಿಸಿತು. ಬಿಜೆಪಿ ಕಚೇರಿಗಳೇ ಮೀಟಿಂಗು ಮಾಡಿ, ನಮ್ಮ ಪಕ್ಷದವರು ಹಣ ಮಾಡುವುದನ್ನು ಯಾರೂ ತಡೆಯಬೇಡಿ, ಅದರ ವಿರುದ್ಧ ಹೇಳಿಕೆ ಕೊಡಬೇಡಿ ಎಂದಕೂಡಲೇ ಎಡೂರಪ್ಪ ಪಾರ್ಟಿ ಹಿತಕ್ಕಾಗಿ ಎರ್ರಾ ಬಿರ್ರಿ ಹಣ ಸಂಗ್ರಹಿಸಿ, ಕೊನೆಗೆ ಆರೋಪ ವಹಿಸಿಕೊಂಡು ಜೈಲಿಗೂ ಹೋಗಿಬಂದರಂತಲ್ಲಾ, ಥೂತ್ತೇರಿ.

****

ಮುಂದೆ ಮೋದಿ ಸರಕಾರವನ್ನು ಕಿತ್ತು ಮಡಗಬೇಕಾದರೆ ನಾವೆಲ್ಲಾ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಇಪ್ಪತ್ತೊಂದು ವಿವಿಧ ಪಕ್ಷಗಳೂ ಒಂದೆಡೆ ಸೇರಿ ಚರ್ಚಿಸಿ ಬರಖಾಸ್ತ ಆದರಂತಲ್ಲಾ. ಈ ಸಭೆಗೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಗೈರುಹಾಜರಾದದ್ದು ಸುದ್ದಿಯಾಗಲಿಲ್ಲ; ಈಗಿನ ಸರ್ಕಾರ ಕಟ್ಟಿಸಿ ಮೋದಿಯವರು ಉದ್ಘಾಟಿಸಿದ ಹೊಸ ಪಾರ್ಲಿಮೆಂಟ್ ನೋಡಲು ದೇವೇಗೌಡರು ಹೋಗಿದ್ದರು. ಹಿಂದೆ ದೇವೇಗೌಡರನ್ನು ಪ್ರಧಾನಿ ಮಾಡಬೇಕಾದ ಸಮಯದಲ್ಲಿ ಇಷ್ಟೇ ಪಕ್ಷಗಳು ಒಂದೆಡೆ ಸೇರಿ ಚರ್ಚಿಸಿದ್ದವು. ಆ ಸಭೆಯಲ್ಲಿ ಬಿಜೆಪಿ ಇರಲಿಲ್ಲ. ಜ್ಯೋತಿ ಬಸು ಪ್ರಧಾನಿಯಾಗಲು ಪಾರ್ಟಿ ಬಿಡಲಿಲ್ಲ. ವಿ.ಪಿ ಸಿಂಗ್ ತಪ್ಪಿಸಿಕೊಂಡರು. ಆಗ ಎಲ್ಲ ವಿರೋಧಪಕ್ಷಗಳು ಸೇರಿಕೊಂಡು ದೇವೇಗೌಡರನ್ನು ಪ್ರಧಾನಿಯಾಗಿ ಆರಿಸಿದರು. ಇಂತಹ ಯಾವ ಉಪಕಾರದ ಸ್ಮರಣೆಯಿಲ್ಲದ ಗೌಡರ ನಡೆ, ಅವರು ಈ ಹಿಂದೆ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಹಾಕಿದ ಪಾತ್ರಕ್ಕೆ ಸಾಕ್ಷಿ ನುಡಿಯುತ್ತಿದೆಯಂತಲ್ಲಾ, ಥೂತ್ತೇರಿ.

****

ಯಾವಾಗ ದೇವೇಗೌಡರು ಬಹಿರಂಗವಾಗಿಯೇ ಮೋದಿ ಪರವಾಗಿ ಚಾವಲ ಬೀಸತೊಡಗಿದರೋ, ಆ ಕೂಡಲೇ ಕುಮಾರಣ್ಣ ಕಾಂಗೈ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳತೊಡಗಿದ್ದಾರಲ್ಲಾ. ವಾಸ್ತವವಾಗಿ ಪಂಚರತ್ನ ಭಾಗ್ಯ ಪ್ರಕಟಿಸಿ ಕರ್ನಾಟಕವನ್ನು ಗರಗರ ತಿರುಗಿ ಬರಬರ ಬಂದವರು, ತಾವು ಮಾಡಬೇಕಿದ್ದಂತಹ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಾರ್ಟಿಯಾದರೂ ತರುತ್ತಿದೆಯಲ್ಲಾ ಎಂದು ಮೆಚ್ಚುಗೆ ಸೂಚಿಸಬಹುದಿತ್ತು. ಆದರೆ ಅದು ಅವರಿಂದ ಸಾಧ್ಯವಾಗುತ್ತಿಲ್ಲ. ದೇವೇಗೌಡರು ಏನೇ ಮಾಡಿದರೂ ಅದು ಮಗನ ರಾಜಕಾರಣದ ಭವಿಷ್ಯ ಕುರಿತ ಹುನ್ನಾರದ ಸೂತ್ರವಿದ್ದಂತೆ. ಅಂತಹ ಸೂತ್ರದಲ್ಲಿ ಸಿಕ್ಕಿ ಒದ್ದಾಡುತ್ತಿರುವ ಕುಮಾರಣ್ಣ ಯಾವ ಮಾತನ್ನಾಡಿದರೂ ಹಾಸ್ಯಾಸ್ಪದವಾಗುತ್ತಿದೆ. ಒಂಥರದಲ್ಲಿ ಅದು ಶೋಭಾ ಕರಂದ್ಲಾಜೆ, ಎಡೂರಪ್ಪ, ಆಶೋಕ್ ಇತ್ಯಾದಿಗಳ ದನಿಯಂತೆಯೂ ಕೇಳುತ್ತಿದೆ. ಹೀಗೇ ಆದರೆ ಕುಮಾರಣ್ಣ ಹಿಂದೆ ಹೋಗುವುದು ಹೇಗೆಂದು ದಳದ ಕೆಲವರು ಯೋಚಿಸುತ್ತಿದ್ದಾರಂತಲ್ಲಾ. ಇಂತಹ ಆಲೋಚನೆ ಮತ್ತು ಕಾರ್ಯಕರ್ತರ ಅಸಮಾಧಾನಗಳ ಕಡೆ ಕಿವಿಗೊಟ್ಟಿದ್ದರೆ ಕುಮಾರಣ್ಣನಿಗೆ ಇಪ್ಪತ್ತೊಂಬತ್ತು ಸೀಟಾದರೂ ಬರುತ್ತಿದ್ದವಂತಲ್ಲಾ ಥೂತ್ತೇರಿ.


ಇದನ್ನೂ ಓದಿ: ಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...