Homeಅಂಕಣಗಳುತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

ತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

- Advertisement -
- Advertisement -

ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇಶದಲ್ಲಿ ಸ್ವಾತಂತ್ರ್ಯದ ಹರಣವಾಗಿತ್ತು; ಮಾಧ್ಯಮಗಳ ಕತ್ತು ಹಿಸುಕಲಾಗಿತ್ತು. ಬಲೆ ಹಾಕಿ ಹಂದಿಗಳನ್ನು ಹಿಡಿದಂತೆ ವಿರೋಧ ಪಕ್ಷದವರನ್ನೆಲ್ಲಾ ಅರೆಸ್ಟು ಮಾಡಿ ಜೈಲಿಗೆ ಹಾಕಲಾಗಿತ್ತು; ಇಂಥ ಮಾತುಗಳ ಶಂಖವಾದ್ಯವನ್ನು ತುರ್ತುಪರಿಸ್ಥಿತಿ ತೆರವುಗೊಂಡಾಗಿನಿಂದ ಬಿಜೆಪಿಗಳು ಪ್ರತಿ ವರ್ಷ ಊದೂತ್ತ ಬಂದಿದ್ದಾರೆ. ಒಂದಿಷ್ಟು ಒಳನೋಟ ಬೀರಿ ಗ್ರಹಿಸಿದ್ದಾದರೆ ತುರ್ತು ಸ್ಥಿತಿಯ ಗರ್ಭದಲ್ಲೇ ಬಿಜೆಪಿಯ ಭ್ರೂಣಾವಸ್ಥೆ ಬಲಿತು ಆ ನಂತರ ಅದು ಕಮಲವಾಗಿ ಅರಳಿದ್ದು ಕಟುಸತ್ಯವಾಗಿ ಕಾಣುತ್ತಿದೆಯಲ್ಲಾ. ತುರ್ತುಪರಿಸ್ಥಿತಿಯಲ್ಲಿ ವಿರೋಧಪಕ್ಷದವರೆಲ್ಲಾ ಜೈಲಿನಲ್ಲಿ ಒಟ್ಟಾಗಿ ಕುಳಿತು ಚರ್ಚಿಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ತುರ್ತುಪರಿಸ್ಥಿತಿ ತೆರವುಗೊಂಡು ಎಲ್ಲರೂ ಹೊರಬಂದಮೇಲೆ ಜೆ.ಪಿ.ಯವರು (ಜಯಪ್ರಕಾಶ ನಾರಾಯಣ) ನೀವೆಲ್ಲಾ ನಿಮ್ಮನಿಮ್ಮ ಚಹರೆ ಮತ್ತು ಬಾವುಟ ಬಿಸಾಡಿ ನೇಗಿಲು ಹೊತ್ತ ರೈತನ ಪಕ್ಷದ ಮುಂದಾಳತ್ವದಲ್ಲಿ ಒಂದಾಗಲು ಕರೆಕೊಟ್ಟ ಕೂಡಲೇ ಬಹುತೇಕ ಎಲ್ಲರೂ ಹಾಗೇ ಮಾಡಿದರು; ಆದರೆ ಬಿಜೆಪಿಗಳು ಜನಸಂಘದ ದೀಪ ಆರಿಸಿ ಬಂದರೂ ಚೆಡ್ಡಿ ದೊಣ್ಣೆಯನ್ನ ಹಾಗೇ ಉಳಿಸಿಕೊಂಡು ಬಂದಿದ್ದರಂತಲ್ಲಾ, ಥೂತ್ತೇರಿ.

****

ಜೆ.ಪಿ. ಕರೆಯಂತೆ ನೇಗಿಲುಹೊತ್ತ ರೈತನ ಪಕ್ಷ ಭಾರತದಲ್ಲಿ ಜಯಭೇರಿ ಭಾರಿಸಿ ಹದಿನೆಂಟು ತಿಂಗಳ ಕಾಲ ಆಡಳಿತ ನಡೆಸಿತು. ಅಷ್ಟರಲ್ಲಿ ದೀಪ ಆರಿಸಿ ಬಂದ ಜನರ ಚೇಷ್ಟೆಗಳು ಆರಂಭವಾದವು. ಅವರು ಜನತಾಪಕ್ಷದ ಸದಸ್ಯತ್ವದ ಜೊತೆಗೇ ಆರೆಸ್ಸೆಸ್ ಸದಸ್ಯತ್ವವನ್ನು ನಿಭಾಯಿಸುತ್ತಾ ಜನತಾ ಪಕ್ಷಕ್ಕೆ ಜನಿವಾರ ತೊಡಿಸಹೊರಟಿದ್ದು ಎಲ್ಲರನ್ನ ದಂಗುಬಡಿಸಿತು. ಈ ಗಲಭೆಯ ಸಮಯವನ್ನು ಸದುಪಯೋಗಪಡಿಸಿಕೊಂಡ ರಾಜನಾರಾಯಣನವರ ಬಣ ಪ್ರಧಾನಿ ಮೊರಾರ್ಜಿ ಅವರನ್ನ ಇಳಿಸಿ ಚರಣಸಿಂಗರನ್ನು ಪ್ರಧಾನಿ ಮಾಡುವಲ್ಲಿ ಯಶಸ್ವಿಯಾಯಿತಾದರೂ, ಅದಕ್ಕೆ ಇಂದಿರಾಗಾಂಧಿ ಬೆಂಬಲ ಬೇಕಾಯಿತು! ಆಗ ಜನತಾ ಪಕ್ಷ ಚಿಂದಿಯಾಗಿ ಹೋಯಿತು. ಇತ್ತ ವಾಜಪೇಯಿ ಟೀಮು ಭಾರತೀಯ ಜನತಾಪಕ್ಷ ಸ್ಥಾಪಿಸಿಕೊಂಡು ಕಮಲ ಚಿಹ್ನೆ ಪಡೆದು ಜನತಾಪಕ್ಷದೊಳಗಡೆ ಪಡೆದುಕೊಂಡ ಶಕ್ತಿಯನ್ನು ವೃದ್ಧಿಸಿಕೊಂಡು ಬೆಳೆಯುತ್ತಲೇ ಹೋಯ್ತು. ಜೆ.ಪಿ. ನೀವೆಲ್ಲಾ ನಿಮ್ಮನಿಮ್ಮ ಪಕ್ಷ ವಿಸರ್ಜಿಸಿ ನೇಗಿಲು ಹೊತ್ತ ರೈತನ ಜೊತೆಗೆ ಬನ್ನಿ ಎಂದು ಕರೆಕೊಡುವಾಗ, ಗಾಂಧಿ ಕೊಂದ ಆಪಾದನೆಯ ಸಂಘಟನೆಯ ಜೊತೆಗೆ ಸಂಬಂಧ ಹೊಂದಿದ್ದ ಜನಸಂಘದ ಹೊರತಾಗಿ ಎಲ್ಲರೂ ಬನ್ನಿ ಎಂದು ಹೇಳಿದ್ದರೆ ಈ ದೇಶದ ಚರಿತ್ರೆಯೇ ಬದಲಾಗುತ್ತಿತ್ತಲ್ಲವಾ, ಥೂತ್ತೇರಿ.

****

ದೇಶದ ಮಹಾನಾಯಕರು ವಿವೇಚನೆಯಿಲ್ಲದೆ ನಡೆದುಕೊಂಡ ತಪ್ಪಿಗೆ ದೇಶವೇ ಪರಿತಪಿಸಬೇಕಾಗುತ್ತದೆ ಎಂಬುದಕ್ಕೆ ಜೆ.ಪಿ. ತೆಗೆದುಕೊಂಡ ಆತುರದ ತೀರ್ಮಾನವೇ ಪ್ರಮುಖ ಉದಾಹರಣೆ. ಅದು ಇಂದು ತನ್ನ ದುಷ್ಪರಿಣಾಮದ ಫಲಕೊಡುತ್ತಿದೆ. ನಿಜವಾಗಿಯೂ ಭಾರತೀಯ ಜನತಾಪಕ್ಷದವರು ತುರ್ತುಸ್ಥಿತಿಯನ್ನ ಸ್ಮರಿಸಿಕೊಳ್ಳಬೇಕು, ಅಲ್ಲದೆ ತಮ್ಮ ಪಾರ್ಟಿ ಆಫೀಸುಗಳಲ್ಲಿ ಮತ್ತು ನಾಗಪುರದ ಕೇಂದ್ರ ಕಚೇರಿಯಲ್ಲಿ ಜೆ.ಪಿ. ಮತ್ತು ಇಂದಿರಾಗಾಂಧಿಯವರ ಫೋಟೋ ಹಾಕಿಕೊಂಡು ಪ್ರಾರ್ಥಿಸಬೇಕು. ಇವರಿಬ್ಬರ ವಿವೇಚನೆಯಿಲ್ಲದ ತೀರ್ಮಾನಗಳಿಂದ ಅರಳಿದ ಕಮಲ ಪಕ್ಷದಿಂದ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇಂದು ನೆಲೆಸಿದೆ. ಇಡೀ ದೇಶವೇ ಕ್ಷೋಭೆಯಿಂದ ನಲುಗುತ್ತಿದೆ, ಮಣಿಪುರ ಸರ್ವನಾಶದ ದಾರಿಯಲ್ಲಿದೆ. ಇಂತಹ ಘಟನೆಗಳಿಂದ ವಿಚಲಿತರಾಗದ ನಮ್ಮ ಪ್ರಧಾನಿಯವರು ಸ್ಥಿತಪ್ರಜ್ಞತೆಯಿಂದ ಯೋಗ ಮಾಡಿಕೊಂಡು ಇಡೀ ಪ್ರಪಂಚದ ಗಮನ ಸೆಳೆದಿದ್ದಾರೆ. ಮಾರಿಕೊಂಡ ಮಾಧ್ಯಮದವರೂ ವಾರಗಟ್ಟಲೆ ಮೋದಿಯ ಯೋಗ ತೋರಿಸಿ ಎಲ್ಲರೂ ಯೋಗದಿಂದ ವಿಮುಕ್ತರಾಗುವಂತೆ ಮಾಡಿದ್ದಾರಂತಲ್ಲಾ, ಥೂತ್ತೇರಿ.

****

ನಿಜವಾಗಿಯೂ ಒಂದು ಕಾಲದ ಬಿಜೆಪಿಯು ಅಂದರೆ ವಾಜಪೇಯಿ ಕಾಲದ ಬಿಜೆಪಿ ಈಗಿನಂತಿರಲಿಲ್ಲವಂತಲ್ಲಾ. ಕೆಲವರಾದರೂ ಪ್ರಾಮಾಣಿಕರು ಅವರ ಜೊತೆಗೆ ಇದ್ದರಂತಲ್ಲಾ. ಚುನಾವಣೆ ಬಂದರೆ ಕುಬೇರರ ಬಳಿ ಭಿಕ್ಷೆ ಬೇಡಿ ಅದರಲ್ಲೇ ಚಿತ್ರಾನ್ನ ತಿಂದು, ಶರಭತ್ತು ಕುಡಿದು, ಹ್ಯಾಂಡ್ ಬಿಲ್ ಹಾಕಿಸಿಕೊಂಡು ಹಂಚಿ ಚುನಾವಣೆ ಮುಗಿಸುತ್ತಿದ್ದರು. ಫಲಿತಾಂಶ ಬಂದಾಗ “ಈ ಬಾರಿ ಐದುನೂರು ಓಟು ನಮ್ಮ ಪಾರ್ಟಿಗೆ ಜಾಸ್ತಿ ಬಂದಿವೆ” ಎಂದುಕೊಂಡು ಮನೆಗೆ ಹೋಗುತ್ತಿದ್ದರು. ಅದು ಎ.ಕೆ ಸುಬ್ಬಯ್ಯನವರ ಕಾಲ. ಯಾವಾಗ ಎಡೂರಪ್ಪನವರ ಕಾಲ ಶುರುವಾಯಿತೊ ಆಗ ಉದ್ಘಾಟನೆಗೊಂಡ ಭ್ರಷ್ಟಾಚಾರ ಇಡೀ ದೇಶವನ್ನೇ ದಂಗುಬಡಿಸಿತು. ಬಿಜೆಪಿ ಕಚೇರಿಗಳೇ ಮೀಟಿಂಗು ಮಾಡಿ, ನಮ್ಮ ಪಕ್ಷದವರು ಹಣ ಮಾಡುವುದನ್ನು ಯಾರೂ ತಡೆಯಬೇಡಿ, ಅದರ ವಿರುದ್ಧ ಹೇಳಿಕೆ ಕೊಡಬೇಡಿ ಎಂದಕೂಡಲೇ ಎಡೂರಪ್ಪ ಪಾರ್ಟಿ ಹಿತಕ್ಕಾಗಿ ಎರ್ರಾ ಬಿರ್ರಿ ಹಣ ಸಂಗ್ರಹಿಸಿ, ಕೊನೆಗೆ ಆರೋಪ ವಹಿಸಿಕೊಂಡು ಜೈಲಿಗೂ ಹೋಗಿಬಂದರಂತಲ್ಲಾ, ಥೂತ್ತೇರಿ.

****

ಮುಂದೆ ಮೋದಿ ಸರಕಾರವನ್ನು ಕಿತ್ತು ಮಡಗಬೇಕಾದರೆ ನಾವೆಲ್ಲಾ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಇಪ್ಪತ್ತೊಂದು ವಿವಿಧ ಪಕ್ಷಗಳೂ ಒಂದೆಡೆ ಸೇರಿ ಚರ್ಚಿಸಿ ಬರಖಾಸ್ತ ಆದರಂತಲ್ಲಾ. ಈ ಸಭೆಗೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಗೈರುಹಾಜರಾದದ್ದು ಸುದ್ದಿಯಾಗಲಿಲ್ಲ; ಈಗಿನ ಸರ್ಕಾರ ಕಟ್ಟಿಸಿ ಮೋದಿಯವರು ಉದ್ಘಾಟಿಸಿದ ಹೊಸ ಪಾರ್ಲಿಮೆಂಟ್ ನೋಡಲು ದೇವೇಗೌಡರು ಹೋಗಿದ್ದರು. ಹಿಂದೆ ದೇವೇಗೌಡರನ್ನು ಪ್ರಧಾನಿ ಮಾಡಬೇಕಾದ ಸಮಯದಲ್ಲಿ ಇಷ್ಟೇ ಪಕ್ಷಗಳು ಒಂದೆಡೆ ಸೇರಿ ಚರ್ಚಿಸಿದ್ದವು. ಆ ಸಭೆಯಲ್ಲಿ ಬಿಜೆಪಿ ಇರಲಿಲ್ಲ. ಜ್ಯೋತಿ ಬಸು ಪ್ರಧಾನಿಯಾಗಲು ಪಾರ್ಟಿ ಬಿಡಲಿಲ್ಲ. ವಿ.ಪಿ ಸಿಂಗ್ ತಪ್ಪಿಸಿಕೊಂಡರು. ಆಗ ಎಲ್ಲ ವಿರೋಧಪಕ್ಷಗಳು ಸೇರಿಕೊಂಡು ದೇವೇಗೌಡರನ್ನು ಪ್ರಧಾನಿಯಾಗಿ ಆರಿಸಿದರು. ಇಂತಹ ಯಾವ ಉಪಕಾರದ ಸ್ಮರಣೆಯಿಲ್ಲದ ಗೌಡರ ನಡೆ, ಅವರು ಈ ಹಿಂದೆ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಹಾಕಿದ ಪಾತ್ರಕ್ಕೆ ಸಾಕ್ಷಿ ನುಡಿಯುತ್ತಿದೆಯಂತಲ್ಲಾ, ಥೂತ್ತೇರಿ.

****

ಯಾವಾಗ ದೇವೇಗೌಡರು ಬಹಿರಂಗವಾಗಿಯೇ ಮೋದಿ ಪರವಾಗಿ ಚಾವಲ ಬೀಸತೊಡಗಿದರೋ, ಆ ಕೂಡಲೇ ಕುಮಾರಣ್ಣ ಕಾಂಗೈ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳತೊಡಗಿದ್ದಾರಲ್ಲಾ. ವಾಸ್ತವವಾಗಿ ಪಂಚರತ್ನ ಭಾಗ್ಯ ಪ್ರಕಟಿಸಿ ಕರ್ನಾಟಕವನ್ನು ಗರಗರ ತಿರುಗಿ ಬರಬರ ಬಂದವರು, ತಾವು ಮಾಡಬೇಕಿದ್ದಂತಹ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಾರ್ಟಿಯಾದರೂ ತರುತ್ತಿದೆಯಲ್ಲಾ ಎಂದು ಮೆಚ್ಚುಗೆ ಸೂಚಿಸಬಹುದಿತ್ತು. ಆದರೆ ಅದು ಅವರಿಂದ ಸಾಧ್ಯವಾಗುತ್ತಿಲ್ಲ. ದೇವೇಗೌಡರು ಏನೇ ಮಾಡಿದರೂ ಅದು ಮಗನ ರಾಜಕಾರಣದ ಭವಿಷ್ಯ ಕುರಿತ ಹುನ್ನಾರದ ಸೂತ್ರವಿದ್ದಂತೆ. ಅಂತಹ ಸೂತ್ರದಲ್ಲಿ ಸಿಕ್ಕಿ ಒದ್ದಾಡುತ್ತಿರುವ ಕುಮಾರಣ್ಣ ಯಾವ ಮಾತನ್ನಾಡಿದರೂ ಹಾಸ್ಯಾಸ್ಪದವಾಗುತ್ತಿದೆ. ಒಂಥರದಲ್ಲಿ ಅದು ಶೋಭಾ ಕರಂದ್ಲಾಜೆ, ಎಡೂರಪ್ಪ, ಆಶೋಕ್ ಇತ್ಯಾದಿಗಳ ದನಿಯಂತೆಯೂ ಕೇಳುತ್ತಿದೆ. ಹೀಗೇ ಆದರೆ ಕುಮಾರಣ್ಣ ಹಿಂದೆ ಹೋಗುವುದು ಹೇಗೆಂದು ದಳದ ಕೆಲವರು ಯೋಚಿಸುತ್ತಿದ್ದಾರಂತಲ್ಲಾ. ಇಂತಹ ಆಲೋಚನೆ ಮತ್ತು ಕಾರ್ಯಕರ್ತರ ಅಸಮಾಧಾನಗಳ ಕಡೆ ಕಿವಿಗೊಟ್ಟಿದ್ದರೆ ಕುಮಾರಣ್ಣನಿಗೆ ಇಪ್ಪತ್ತೊಂಬತ್ತು ಸೀಟಾದರೂ ಬರುತ್ತಿದ್ದವಂತಲ್ಲಾ ಥೂತ್ತೇರಿ.


ಇದನ್ನೂ ಓದಿ: ಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...