Homeಮುಖಪುಟಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

ಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

- Advertisement -
- Advertisement -

ನಮ್ಮ ಅಪರೂಪದ ಶಿಕ್ಷಣ ಸಚಿವ ಬಿ.ಸಿ ನಾಗೇಶರಿಗೆ ಬಹಳ ಹಿಂದೆಯೇ ತಲೆಬಿಸಿಯಾಗಿ ಪುರೋಹಿತಶಾಹಿ ಪುನರುತ್ಥಾನದ ಸಲಕರಣೆಗಳನ್ನು ಶಿಕ್ಷಣ ಇಲಾಖೆಯ ಪಠ್ಯಪುಸ್ತಕದೊಳಕ್ಕೆ ತುರುಕಲು ಹೋಗಿ ತರಾಟೆಗೆ ಗುರಿಯಾಗಿದ್ದು ಇತಿಹಾಸ. ನಂತರ ಕೆಲವು ಪಠ್ಯಗಳನ್ನು ಸರಿಮಾಡಿದ ಬುಕ್‌ಲೆಟ್ ಒಂದನ್ನು ಶಾಲೆಗೊಂದರಂತೆ ಹಂಚಿಹೋಗಿದ್ದ ಮರ್ಯಾದೆಯನ್ನು ಉಳಿಸಿಕೊಳ್ಳಲು ಪ್ರಯತ್ನಪಟ್ಟ ಇವರು ಈಗ ಮಕ್ಕಳು ಒಂದೆಡೆ ಕುಳಿತು ಧ್ಯಾನ ಮಾಡಿ ನಂತರ ಪಾಠ ಓದಿಕೊಳ್ಳಬೇಕೆಂದು ಹಠ ಹಿಡಿದಿದ್ದಾರಂತಲ್ಲಾ. ಇಂತಹ ಆಲೋಚನೆಗೂ ಮೊದಲು ಇವರು ಸಕಾಲಕ್ಕೆ ಮಕ್ಕಳಿಗೆ ಪಠ್ಯ, ಬಟ್ಟೆ ಬೂಟ್ಸು ಇತ್ಯಾದಿ ಅಗತ್ಯಗಳನ್ನು ಒದಗಿಸುವುದನ್ನು ಬಿಟ್ಟು ಬಿಟ್ಟಿ ಸಲಹೆಯಾದ ಧ್ಯಾನದ ಸೂಚನೆ ಕಂಡುಕೇಳರಿಯದ ಹಾಸ್ಯಾಸ್ಪದ ಸಂಗತಿಯಾಗಿದೆಯಲ್ಲಾ. ಇವರು ಧ್ಯಾನ ಮಾಡಿ ಎಂದು ಹೇಳುತ್ತಿರುವ ಮಕ್ಕಳು ಒಂದು ಕ್ಷಣ ಎಲ್ಲೂ ನಿಲ್ಲದೆ ಹಕ್ಕಿ ಪಕ್ಷಿಗಳಂತೆ ಹಾರಾಡುವಂತವರು, ಜಿಂಕೆ ಮೊಲಗಳಂತೆ ನೆಗೆದಾಡುವಂತವರು; ಇದನ್ನ ಗ್ರಹಿಸಿದ ಈ ನಾಗೇಶ್ ತಮ್ಮ ವಠಾರದ ವೃದ್ಧರು ಕುಳಿತಿರುವುದನ್ನು ನೋಡಿ ಅದನ್ನೇ ಧ್ಯಾನ ಎಂದುಕೊಂಡು ಮಕ್ಕಳಿಗೂ ಬೋಧಿಸತೊಡಗಿದ್ದಾರೆ. ಒಂದು ವೇಳೆ ಧ್ಯಾನ ಆರಂಭಗೊಂಡರೆ ಅದರ ಆರಂಭಕ್ಕೊಂದು ಶ್ಲೋಕದ ಪ್ರಾರ್ಥನೆಯ ಸರ್ಕ್ಯುಲರ್ ಹೊರಡುತ್ತವೆ. ಆನಂತರ ಮತ್ತೊಂದು; ಧ್ಯಾನ ಮುಗಿಸಿದ ಮಕ್ಕಳಿಗೆಲ್ಲಾ ಎದೆಯ ಮೇಲೆ ಕೈಯಿಟ್ಟು ನಮಸ್ತೆ ಸದಾವತ್ಸಲೇ ಮಾತೃಭೂಮಿ ಎಂದು ಹೇಳಿಕೊಡುವುದಿಲ್ಲ ಎನ್ನುವುದು ಯಾವ ಗ್ಯಾರಂಟಿ ಎನ್ನಲಾಗುತ್ತಿದೆಯಲ್ಲಾ, ಥೂತ್ತೇರಿ.

******

ತುಮಕೂರಿನ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಹೆರಿಗೆ ಮಾಡಲು ದಾಖಲೆ ಕೇಳಿದ ವೈದ್ಯರ ನಡವಳಿಕೆಯಿಂದ ಕಂಗಾಲಾದ ತಾಯಿ, ತನ್ನ ದಾಖಲೆಯನ್ನೇ ಆಳಿಸಿ ಹೊರಟುಹೋಗಿದ್ದಾಳಲ್ಲಾ. ಅದೂ ಅವಳಿ ಮಕ್ಕಳಿಗೆ ಜನ್ಮ ನೀಡಿ; ಆ ಮಕ್ಕಳು ಅವ್ವನ ಹಾದಿ ಹಿಡಿದಿವೆ. ಹೃದಯ ಕಲಕುವ ಈ ಸಂಗತಿ ಕೇಳಿದ ಸುಧಾಕರ ಕೂಡಲೇ ತಮ್ಮ ಕೊಠಡಿ ಸೇರಿಕೊಂಡಿದ್ದರಿಂದ ಗಾಬರಿಗೊಂಡ ಹಿಂಬಾಲಕರು ಬಾಗಿಲ ಹೊರಗಿನಿಂದ ಕೂಗಿ “ಸಾರ್ ರಾಜಿನಾಮೆ ಬರೆಯಬೇಡಿ. ಆಸ್ಪತ್ರೆಯ ಡಾಕ್ಟರು ಮಾಡಿದ ಅಪರಾಧಕ್ಕೆ ನೀವು ಹೊಣೆಗಾರರಲ್ಲ” ಎಂದರಂತಲ್ಲಾ. ಆ ಕಡೆಯಿಂದ ಸುಧಾಕರ್ “ನಾನು ರಾಜಿನಾಮೆ ಬರೆಯುತ್ತಿಲ್ಲ, ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಶಿಶುಮರಣದ ದಾಖಲೆ ಹುಡುಕುತ್ತಿದ್ದೇನೆ” ಎಂದಾಗ ಹಿಂಬಾಲಕರು ಹಿಂಬದಿಯಿಂದ ಗಾಳಿಬಿಟ್ಟು ಸುಧಾರಿಸಿಕೊಂಡರಂತಲ್ಲಾ. ಇತ್ತ ತುಮಕೂರು ಸುದ್ದಿ ಬಿಟ್ಟು ಮಾರಿಕೊಂಡ ಮಾಧ್ಯಮದವರು ರೇಣುಕಾಚಾರ್ಯರ ತಮ್ಮನ ಮಗನ ದುರ್ಮರಣವನ್ನು ದಿನವಿಡೀ ತೋರುತ್ತಾ, ಸಾಲದೆಂಬಂತೆ ಸುದ್ದಿ ಸಂಗ್ರಹಿಸಲು ಮನೆಯ ಬಳಿಗೆ ಹೋದಾಗ, ರೇಣುಕಾಚಾರ್ಯ ನಾನು ಹಿಂದೂ ಪ್ರೇಮಿ ಮತ್ತು ಜಾತಿ ಪ್ರೇಮಿ, ಹಾಗಾಗಿ ಹಿಜಾಬ್ ವಿಷಯದಲ್ಲಿ ನನಗೆ ಬೆದರಿಕೆ ಕರೆ ಬಂದಿತ್ತು. ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಇದು ವೇಗದ ಅಪಘಾತ ಅಂತ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ಎಂದು ಪ್ರತಿ ಮಾತಿಗೂ ಒಂದೊಂದು ಗುಕ್ಕು ಉಣ್ಣುತ್ತಿದ್ದರಂತಲ್ಲಾ. ಹೀಗೆ ನಾಲ್ವರು ಮಹಿಳೆಯರು ಸರದಿಯಂತೆ ಅನ್ನದ ತುತ್ತು ಬಾಯಿಗೆ ಹಿಡಿಯುತ್ತಿದ್ದಾಗ ತೀರಿಕೊಂಡ ಚಂದ್ರಶೇಖರನ ತಂದೆ ತಾಯಿ ಮತ್ತು ಪೊಲೀಸರು ದಂಗುಬಡಿದು ನಿಂತಿದ್ದರಲ್ಲಾ. ಥೂತ್ತೇರಿ.

******

ರೇಣುಕಾಚಾರ್ಯರ ತಮ್ಮನ ಮಗ ಒಳ್ಳೆ ನಡವಳಿಕೆ ಹುಡುಗ; ತುಸು ಆಧ್ಯಾತ್ಮದ ಕಡೆ ಒಲವಿದ್ದವನು. ಇಂತಹವರಿಗೆಲ್ಲಾ ಗುರುವಿನಂತೆ ಕಾಣುವ ಗೌರಿಗದ್ದೆ ಗುರುನೋಡಿ ಬರುವಾಗ ತುಂಗಾ ಸೇತುವೆ ಮೇಲಿಂದ ಕೆಳಗೆ ಬಿದ್ದು ತೀರಿಕೊಂಡಿದ್ದಾನೆಂಬುದು ಪೊಲೀಸರ ಸಮೇತ ಜನಸಾಮಾನ್ಯರ ನಂಬುಗೆ. ಇಲ್ಲಿ ಅಸಂಖ್ಯಾತ ವೈರಿಗಳನ್ನ ಸೃಷ್ಟಿಸಿಕೊಂಡಿದ್ದವರು ರೇಣುಕಾಚಾರಿ. ಮೊದಲನೆಯದಾಗಿ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಮಡಗಿಕೊಂಡಿದ್ದಾರೆ ತನಿಖೆ ಮಾಡಿ ಎಂದಿದ್ದರು; ನನಗೆ ಮುಸ್ಲಿಮರ ಓಟು ಬೇಡ ಎಂದಿದ್ದರು; ಇನ್ನೊಂದೆಡೆ ಹಿಜಾಬ್ ವಿಷಯದಲ್ಲೂ ಅವರ ಬಾಯಿ ಸುಮ್ಮನಿರಲಿಲ್ಲ. ಆ ಕಾರಣವಾಗಿ ಬೆದರಿಕೆ ಕರೆ ಬಂದಿತ್ತೆಂದು ಅವರೇ ಹೇಳುತ್ತಾರೆ. ಇನ್ನ ಅವರ ಕುಟುಂಬ ಸದಸ್ಯರೊಬ್ಬರು ಸುಳ್ಳು ಸುಳ್ಳಾಗಿ ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಪಡೆದುದನ್ನ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅದೂ ಅಲ್ಲದೆ ಈಚೆಗೆ ಸರಕಾರಿ ಕರ್ಮಚಾರಿಗಳಿಗೆ ಒತ್ತಡ ತಂದು ನಿಂದಿಸಿ ಸುಳ್ಳುದಾಖಲೆ ಸೃಷ್ಟಿಮಾಡಿ ಸರಕಾರದ ಅನುದಾನ ಪಡೆಯಲು ಯತ್ನಿಸಿದರೆಂಬ ಆಪಾದನೆಯೂ ಇದೆ. ಇಷ್ಟು ಸಮಸ್ಯೆಗಳ ಗೋಜಲುಗಳನ್ನ ಸೃಷ್ಟಿಮಾಡಿಕೊಂಡಿರುವ ರೇಣುಕಾಚಾರಿ ಚಂದ್ರಶೇಖರನ ಸಾವಿನ ತನಿಖೆಗೆ ಬಂದ ಪೋಲೀಸರಿಗೆ ಅವಾಜುಹಾಕಿ, ನಿಮ್ಮ ತನಿಖೆಯೇ ಸರಿಯಿಲ್ಲ, ನನ್ನನ್ನ ತನಿಖೆ ಮಾಡಿ ಎಂದುಬಿಟ್ಟಿದ್ದಾರೆ. ಈ ಬಗ್ಗೆ ಹೊನ್ನಾಳಿ ಠಾಣೆಯ ಪೋಲಿಸರು ಪ್ರಾಥಮಿಕ ಹಂತದ ತನಿಖೆಯ ಮೊದಲ ಪ್ರಶ್ನೆಯಾಗಿ “ಸಾರ್ ಚಂದ್ರಶೇಖರನ ತಂದೆ ತಾಯಿ ದುಃಖದಲ್ಲಿಯೂ ಸಹಜವಾಗಿದ್ದರೂ ತಾವೇಕೆ ಭೂಮಿ ಆಕಾಶ ಒಂದು ಮಾಡಿ ಅಳುತ್ತಿದ್ದೀರಿ ಎಂಬ ಪ್ರಶ್ನೆಯನ್ನು ಕೇಳುವುದಕ್ಕೂ ಮೊದಲು, ನಿಮ್ಮ ತಲೆಯಲ್ಲಿರುವ ಕೊಲೆಗಾರ ಯಾರೆಂದು ಹೇಳಿಬಿಡಿ” ಎನ್ನಲಿದ್ದಾರಂತಲ್ಲಾ, ಥೂತ್ತೇರಿ.

******

ಅಧಿಕಾರ ವಿಕೇಂದ್ರೀಕರಣದ ಕನಸಿನಿಂದ ರೂಪುಗೊಂಡ ಮಂಡಲ ಪಂಚಾಯ್ತಿ ಅಧ್ಯಕ್ಷನ ಆಳ್ವಿಕೆಯಂತೆ ಒಂದು ಅವಧಿ ಮುಗಿಸಿತು. ವಾಸ್ತವವಾಗಿ ಪಟ್ಟಣ ಕೇಂದ್ರಿತವಾದ ಜನತಾಪಕ್ಷವನ್ನು ಹಳ್ಳಿಗಳಿಗೆ ತಲುಪಿಸುವ ಹುನ್ನಾರ ಕೂಡ ಈ ಪಂಚಾಯ್ತಿ ಕನಸಿನಲ್ಲಿತ್ತು. ನಂತರ ಬಂದ ಕಾಂಗ್ರೆಸ್ ಸರಕಾರದ ಫೋರ್ಪಡೆ ಮಂಡಲವನ್ನ ಒಡೆದು ಒಂದನ್ನ ಎರಡುಮಾಡಿ ಆರೂವರೆ ಸಾವಿರದಷ್ಟು ಗ್ರಾಮಪಂಚಾಯ್ತಿ ಮಾಡಿ ಆಡಳಿತಾಧಿಕಾರಿ ನೇಮಿಸಿದರು. ಹೆಬ್ಬೆಟ್ಟಿನ ಅಧ್ಯಕ್ಷರು ಬಂದು ಅಧಿಕಾರಿ ಹೇಳಿದ ಜಾಗಕ್ಕೆ ಒತ್ತಿ ಅದಕಿಷ್ಟು ಭಕ್ಷೀಸು ಈಸಿಕೊಂಡು ಕಾಲಹಾಕಿದರು. ಇದನ್ನು ನೋಡಿದ ಇತರೆ ಸದಸ್ಯರು ತಾವೂ ಕೈವೊಡ್ಡಿದರು. ಇದರಿಂದ ಸರಕಾರದಿಂದ ಬರುವ ಅನುದಾನವನ್ನು ಲಪಟಾಯಿಸಿ ಸದಸ್ಯರಿಗೆ ಹಂಚುತ್ತ ಕುಳಿತ ಪಿಡಿಓ ಭ್ರಷ್ಟತೆಯ ವಿಕೇಂದ್ರೀಕರಣದ ಪ್ರತಿನಿಧಿಯಾಗಿ ಪಂಚಾಯ್ತಿ ಆಫೀಸಿನಲ್ಲಿ ಕುಳಿತಿದ್ದಾನಲ್ಲಾ. ನರೇಗಾ ಉದ್ಯೋಗಖಾತ್ರಿಯಲ್ಲಿ ಬರುವ ಕೃಷಿಹೊಂಡದಂತಹ ಯಾವುದೇ ಕೆಲಸಗಳಲ್ಲಿ ಎಪ್ಪತ್ತು ಪರಸೆಂಟ್ ಖಟಾವು ಮಾಡುತ್ತಿರುವ ಪಿಡಿಓ ಕೇಳಿದರೆ, ಮೇಲಿನವರಿಗೆ ಕೊಡಬೇಕು ಎನ್ನುತ್ತಿದ್ದಾನೆ. ಇನ್ನ ರೆವಿನ್ಯೂ ಇಲಾಖೆ ಸುಲಿಗೆ ವಿಷಯದಲ್ಲಿ ತಹಸೀಲ್ದಾರ ಏಜೆಂಟರನ್ನ ಬಿಟ್ಟು ವಸೂಲಿಗೆ ಇಳಿದಿದ್ದಾನೆ. ಅವನನ್ನ ಕೇಳಿದರೂ ಮೇಲಿನವರಿಗೆ ಕೊಡಬೇಕು ಎನ್ನುತ್ತಾನೆ. ಮೇಲಿನವನು ಇನ್ನಾರೆಂದು ಶಾಸಕರಿಗೆ ಫೋನ್ ಮಾಡಿದರೆ ಆತ ವ್ಯಾಪ್ತಿಪ್ರದೇಶದ ಹೊರಗಿದ್ದಾನಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...