Homeಮುಖಪುಟಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

ಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

- Advertisement -
- Advertisement -

ನಮ್ಮ ಅಪರೂಪದ ಶಿಕ್ಷಣ ಸಚಿವ ಬಿ.ಸಿ ನಾಗೇಶರಿಗೆ ಬಹಳ ಹಿಂದೆಯೇ ತಲೆಬಿಸಿಯಾಗಿ ಪುರೋಹಿತಶಾಹಿ ಪುನರುತ್ಥಾನದ ಸಲಕರಣೆಗಳನ್ನು ಶಿಕ್ಷಣ ಇಲಾಖೆಯ ಪಠ್ಯಪುಸ್ತಕದೊಳಕ್ಕೆ ತುರುಕಲು ಹೋಗಿ ತರಾಟೆಗೆ ಗುರಿಯಾಗಿದ್ದು ಇತಿಹಾಸ. ನಂತರ ಕೆಲವು ಪಠ್ಯಗಳನ್ನು ಸರಿಮಾಡಿದ ಬುಕ್‌ಲೆಟ್ ಒಂದನ್ನು ಶಾಲೆಗೊಂದರಂತೆ ಹಂಚಿಹೋಗಿದ್ದ ಮರ್ಯಾದೆಯನ್ನು ಉಳಿಸಿಕೊಳ್ಳಲು ಪ್ರಯತ್ನಪಟ್ಟ ಇವರು ಈಗ ಮಕ್ಕಳು ಒಂದೆಡೆ ಕುಳಿತು ಧ್ಯಾನ ಮಾಡಿ ನಂತರ ಪಾಠ ಓದಿಕೊಳ್ಳಬೇಕೆಂದು ಹಠ ಹಿಡಿದಿದ್ದಾರಂತಲ್ಲಾ. ಇಂತಹ ಆಲೋಚನೆಗೂ ಮೊದಲು ಇವರು ಸಕಾಲಕ್ಕೆ ಮಕ್ಕಳಿಗೆ ಪಠ್ಯ, ಬಟ್ಟೆ ಬೂಟ್ಸು ಇತ್ಯಾದಿ ಅಗತ್ಯಗಳನ್ನು ಒದಗಿಸುವುದನ್ನು ಬಿಟ್ಟು ಬಿಟ್ಟಿ ಸಲಹೆಯಾದ ಧ್ಯಾನದ ಸೂಚನೆ ಕಂಡುಕೇಳರಿಯದ ಹಾಸ್ಯಾಸ್ಪದ ಸಂಗತಿಯಾಗಿದೆಯಲ್ಲಾ. ಇವರು ಧ್ಯಾನ ಮಾಡಿ ಎಂದು ಹೇಳುತ್ತಿರುವ ಮಕ್ಕಳು ಒಂದು ಕ್ಷಣ ಎಲ್ಲೂ ನಿಲ್ಲದೆ ಹಕ್ಕಿ ಪಕ್ಷಿಗಳಂತೆ ಹಾರಾಡುವಂತವರು, ಜಿಂಕೆ ಮೊಲಗಳಂತೆ ನೆಗೆದಾಡುವಂತವರು; ಇದನ್ನ ಗ್ರಹಿಸಿದ ಈ ನಾಗೇಶ್ ತಮ್ಮ ವಠಾರದ ವೃದ್ಧರು ಕುಳಿತಿರುವುದನ್ನು ನೋಡಿ ಅದನ್ನೇ ಧ್ಯಾನ ಎಂದುಕೊಂಡು ಮಕ್ಕಳಿಗೂ ಬೋಧಿಸತೊಡಗಿದ್ದಾರೆ. ಒಂದು ವೇಳೆ ಧ್ಯಾನ ಆರಂಭಗೊಂಡರೆ ಅದರ ಆರಂಭಕ್ಕೊಂದು ಶ್ಲೋಕದ ಪ್ರಾರ್ಥನೆಯ ಸರ್ಕ್ಯುಲರ್ ಹೊರಡುತ್ತವೆ. ಆನಂತರ ಮತ್ತೊಂದು; ಧ್ಯಾನ ಮುಗಿಸಿದ ಮಕ್ಕಳಿಗೆಲ್ಲಾ ಎದೆಯ ಮೇಲೆ ಕೈಯಿಟ್ಟು ನಮಸ್ತೆ ಸದಾವತ್ಸಲೇ ಮಾತೃಭೂಮಿ ಎಂದು ಹೇಳಿಕೊಡುವುದಿಲ್ಲ ಎನ್ನುವುದು ಯಾವ ಗ್ಯಾರಂಟಿ ಎನ್ನಲಾಗುತ್ತಿದೆಯಲ್ಲಾ, ಥೂತ್ತೇರಿ.

******

ತುಮಕೂರಿನ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಹೆರಿಗೆ ಮಾಡಲು ದಾಖಲೆ ಕೇಳಿದ ವೈದ್ಯರ ನಡವಳಿಕೆಯಿಂದ ಕಂಗಾಲಾದ ತಾಯಿ, ತನ್ನ ದಾಖಲೆಯನ್ನೇ ಆಳಿಸಿ ಹೊರಟುಹೋಗಿದ್ದಾಳಲ್ಲಾ. ಅದೂ ಅವಳಿ ಮಕ್ಕಳಿಗೆ ಜನ್ಮ ನೀಡಿ; ಆ ಮಕ್ಕಳು ಅವ್ವನ ಹಾದಿ ಹಿಡಿದಿವೆ. ಹೃದಯ ಕಲಕುವ ಈ ಸಂಗತಿ ಕೇಳಿದ ಸುಧಾಕರ ಕೂಡಲೇ ತಮ್ಮ ಕೊಠಡಿ ಸೇರಿಕೊಂಡಿದ್ದರಿಂದ ಗಾಬರಿಗೊಂಡ ಹಿಂಬಾಲಕರು ಬಾಗಿಲ ಹೊರಗಿನಿಂದ ಕೂಗಿ “ಸಾರ್ ರಾಜಿನಾಮೆ ಬರೆಯಬೇಡಿ. ಆಸ್ಪತ್ರೆಯ ಡಾಕ್ಟರು ಮಾಡಿದ ಅಪರಾಧಕ್ಕೆ ನೀವು ಹೊಣೆಗಾರರಲ್ಲ” ಎಂದರಂತಲ್ಲಾ. ಆ ಕಡೆಯಿಂದ ಸುಧಾಕರ್ “ನಾನು ರಾಜಿನಾಮೆ ಬರೆಯುತ್ತಿಲ್ಲ, ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಶಿಶುಮರಣದ ದಾಖಲೆ ಹುಡುಕುತ್ತಿದ್ದೇನೆ” ಎಂದಾಗ ಹಿಂಬಾಲಕರು ಹಿಂಬದಿಯಿಂದ ಗಾಳಿಬಿಟ್ಟು ಸುಧಾರಿಸಿಕೊಂಡರಂತಲ್ಲಾ. ಇತ್ತ ತುಮಕೂರು ಸುದ್ದಿ ಬಿಟ್ಟು ಮಾರಿಕೊಂಡ ಮಾಧ್ಯಮದವರು ರೇಣುಕಾಚಾರ್ಯರ ತಮ್ಮನ ಮಗನ ದುರ್ಮರಣವನ್ನು ದಿನವಿಡೀ ತೋರುತ್ತಾ, ಸಾಲದೆಂಬಂತೆ ಸುದ್ದಿ ಸಂಗ್ರಹಿಸಲು ಮನೆಯ ಬಳಿಗೆ ಹೋದಾಗ, ರೇಣುಕಾಚಾರ್ಯ ನಾನು ಹಿಂದೂ ಪ್ರೇಮಿ ಮತ್ತು ಜಾತಿ ಪ್ರೇಮಿ, ಹಾಗಾಗಿ ಹಿಜಾಬ್ ವಿಷಯದಲ್ಲಿ ನನಗೆ ಬೆದರಿಕೆ ಕರೆ ಬಂದಿತ್ತು. ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಇದು ವೇಗದ ಅಪಘಾತ ಅಂತ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ಎಂದು ಪ್ರತಿ ಮಾತಿಗೂ ಒಂದೊಂದು ಗುಕ್ಕು ಉಣ್ಣುತ್ತಿದ್ದರಂತಲ್ಲಾ. ಹೀಗೆ ನಾಲ್ವರು ಮಹಿಳೆಯರು ಸರದಿಯಂತೆ ಅನ್ನದ ತುತ್ತು ಬಾಯಿಗೆ ಹಿಡಿಯುತ್ತಿದ್ದಾಗ ತೀರಿಕೊಂಡ ಚಂದ್ರಶೇಖರನ ತಂದೆ ತಾಯಿ ಮತ್ತು ಪೊಲೀಸರು ದಂಗುಬಡಿದು ನಿಂತಿದ್ದರಲ್ಲಾ. ಥೂತ್ತೇರಿ.

******

ರೇಣುಕಾಚಾರ್ಯರ ತಮ್ಮನ ಮಗ ಒಳ್ಳೆ ನಡವಳಿಕೆ ಹುಡುಗ; ತುಸು ಆಧ್ಯಾತ್ಮದ ಕಡೆ ಒಲವಿದ್ದವನು. ಇಂತಹವರಿಗೆಲ್ಲಾ ಗುರುವಿನಂತೆ ಕಾಣುವ ಗೌರಿಗದ್ದೆ ಗುರುನೋಡಿ ಬರುವಾಗ ತುಂಗಾ ಸೇತುವೆ ಮೇಲಿಂದ ಕೆಳಗೆ ಬಿದ್ದು ತೀರಿಕೊಂಡಿದ್ದಾನೆಂಬುದು ಪೊಲೀಸರ ಸಮೇತ ಜನಸಾಮಾನ್ಯರ ನಂಬುಗೆ. ಇಲ್ಲಿ ಅಸಂಖ್ಯಾತ ವೈರಿಗಳನ್ನ ಸೃಷ್ಟಿಸಿಕೊಂಡಿದ್ದವರು ರೇಣುಕಾಚಾರಿ. ಮೊದಲನೆಯದಾಗಿ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಮಡಗಿಕೊಂಡಿದ್ದಾರೆ ತನಿಖೆ ಮಾಡಿ ಎಂದಿದ್ದರು; ನನಗೆ ಮುಸ್ಲಿಮರ ಓಟು ಬೇಡ ಎಂದಿದ್ದರು; ಇನ್ನೊಂದೆಡೆ ಹಿಜಾಬ್ ವಿಷಯದಲ್ಲೂ ಅವರ ಬಾಯಿ ಸುಮ್ಮನಿರಲಿಲ್ಲ. ಆ ಕಾರಣವಾಗಿ ಬೆದರಿಕೆ ಕರೆ ಬಂದಿತ್ತೆಂದು ಅವರೇ ಹೇಳುತ್ತಾರೆ. ಇನ್ನ ಅವರ ಕುಟುಂಬ ಸದಸ್ಯರೊಬ್ಬರು ಸುಳ್ಳು ಸುಳ್ಳಾಗಿ ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಪಡೆದುದನ್ನ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅದೂ ಅಲ್ಲದೆ ಈಚೆಗೆ ಸರಕಾರಿ ಕರ್ಮಚಾರಿಗಳಿಗೆ ಒತ್ತಡ ತಂದು ನಿಂದಿಸಿ ಸುಳ್ಳುದಾಖಲೆ ಸೃಷ್ಟಿಮಾಡಿ ಸರಕಾರದ ಅನುದಾನ ಪಡೆಯಲು ಯತ್ನಿಸಿದರೆಂಬ ಆಪಾದನೆಯೂ ಇದೆ. ಇಷ್ಟು ಸಮಸ್ಯೆಗಳ ಗೋಜಲುಗಳನ್ನ ಸೃಷ್ಟಿಮಾಡಿಕೊಂಡಿರುವ ರೇಣುಕಾಚಾರಿ ಚಂದ್ರಶೇಖರನ ಸಾವಿನ ತನಿಖೆಗೆ ಬಂದ ಪೋಲೀಸರಿಗೆ ಅವಾಜುಹಾಕಿ, ನಿಮ್ಮ ತನಿಖೆಯೇ ಸರಿಯಿಲ್ಲ, ನನ್ನನ್ನ ತನಿಖೆ ಮಾಡಿ ಎಂದುಬಿಟ್ಟಿದ್ದಾರೆ. ಈ ಬಗ್ಗೆ ಹೊನ್ನಾಳಿ ಠಾಣೆಯ ಪೋಲಿಸರು ಪ್ರಾಥಮಿಕ ಹಂತದ ತನಿಖೆಯ ಮೊದಲ ಪ್ರಶ್ನೆಯಾಗಿ “ಸಾರ್ ಚಂದ್ರಶೇಖರನ ತಂದೆ ತಾಯಿ ದುಃಖದಲ್ಲಿಯೂ ಸಹಜವಾಗಿದ್ದರೂ ತಾವೇಕೆ ಭೂಮಿ ಆಕಾಶ ಒಂದು ಮಾಡಿ ಅಳುತ್ತಿದ್ದೀರಿ ಎಂಬ ಪ್ರಶ್ನೆಯನ್ನು ಕೇಳುವುದಕ್ಕೂ ಮೊದಲು, ನಿಮ್ಮ ತಲೆಯಲ್ಲಿರುವ ಕೊಲೆಗಾರ ಯಾರೆಂದು ಹೇಳಿಬಿಡಿ” ಎನ್ನಲಿದ್ದಾರಂತಲ್ಲಾ, ಥೂತ್ತೇರಿ.

******

ಅಧಿಕಾರ ವಿಕೇಂದ್ರೀಕರಣದ ಕನಸಿನಿಂದ ರೂಪುಗೊಂಡ ಮಂಡಲ ಪಂಚಾಯ್ತಿ ಅಧ್ಯಕ್ಷನ ಆಳ್ವಿಕೆಯಂತೆ ಒಂದು ಅವಧಿ ಮುಗಿಸಿತು. ವಾಸ್ತವವಾಗಿ ಪಟ್ಟಣ ಕೇಂದ್ರಿತವಾದ ಜನತಾಪಕ್ಷವನ್ನು ಹಳ್ಳಿಗಳಿಗೆ ತಲುಪಿಸುವ ಹುನ್ನಾರ ಕೂಡ ಈ ಪಂಚಾಯ್ತಿ ಕನಸಿನಲ್ಲಿತ್ತು. ನಂತರ ಬಂದ ಕಾಂಗ್ರೆಸ್ ಸರಕಾರದ ಫೋರ್ಪಡೆ ಮಂಡಲವನ್ನ ಒಡೆದು ಒಂದನ್ನ ಎರಡುಮಾಡಿ ಆರೂವರೆ ಸಾವಿರದಷ್ಟು ಗ್ರಾಮಪಂಚಾಯ್ತಿ ಮಾಡಿ ಆಡಳಿತಾಧಿಕಾರಿ ನೇಮಿಸಿದರು. ಹೆಬ್ಬೆಟ್ಟಿನ ಅಧ್ಯಕ್ಷರು ಬಂದು ಅಧಿಕಾರಿ ಹೇಳಿದ ಜಾಗಕ್ಕೆ ಒತ್ತಿ ಅದಕಿಷ್ಟು ಭಕ್ಷೀಸು ಈಸಿಕೊಂಡು ಕಾಲಹಾಕಿದರು. ಇದನ್ನು ನೋಡಿದ ಇತರೆ ಸದಸ್ಯರು ತಾವೂ ಕೈವೊಡ್ಡಿದರು. ಇದರಿಂದ ಸರಕಾರದಿಂದ ಬರುವ ಅನುದಾನವನ್ನು ಲಪಟಾಯಿಸಿ ಸದಸ್ಯರಿಗೆ ಹಂಚುತ್ತ ಕುಳಿತ ಪಿಡಿಓ ಭ್ರಷ್ಟತೆಯ ವಿಕೇಂದ್ರೀಕರಣದ ಪ್ರತಿನಿಧಿಯಾಗಿ ಪಂಚಾಯ್ತಿ ಆಫೀಸಿನಲ್ಲಿ ಕುಳಿತಿದ್ದಾನಲ್ಲಾ. ನರೇಗಾ ಉದ್ಯೋಗಖಾತ್ರಿಯಲ್ಲಿ ಬರುವ ಕೃಷಿಹೊಂಡದಂತಹ ಯಾವುದೇ ಕೆಲಸಗಳಲ್ಲಿ ಎಪ್ಪತ್ತು ಪರಸೆಂಟ್ ಖಟಾವು ಮಾಡುತ್ತಿರುವ ಪಿಡಿಓ ಕೇಳಿದರೆ, ಮೇಲಿನವರಿಗೆ ಕೊಡಬೇಕು ಎನ್ನುತ್ತಿದ್ದಾನೆ. ಇನ್ನ ರೆವಿನ್ಯೂ ಇಲಾಖೆ ಸುಲಿಗೆ ವಿಷಯದಲ್ಲಿ ತಹಸೀಲ್ದಾರ ಏಜೆಂಟರನ್ನ ಬಿಟ್ಟು ವಸೂಲಿಗೆ ಇಳಿದಿದ್ದಾನೆ. ಅವನನ್ನ ಕೇಳಿದರೂ ಮೇಲಿನವರಿಗೆ ಕೊಡಬೇಕು ಎನ್ನುತ್ತಾನೆ. ಮೇಲಿನವನು ಇನ್ನಾರೆಂದು ಶಾಸಕರಿಗೆ ಫೋನ್ ಮಾಡಿದರೆ ಆತ ವ್ಯಾಪ್ತಿಪ್ರದೇಶದ ಹೊರಗಿದ್ದಾನಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...