Homeಮುಖಪುಟಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

ಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

- Advertisement -
- Advertisement -

ನಮ್ಮ ಅಪರೂಪದ ಶಿಕ್ಷಣ ಸಚಿವ ಬಿ.ಸಿ ನಾಗೇಶರಿಗೆ ಬಹಳ ಹಿಂದೆಯೇ ತಲೆಬಿಸಿಯಾಗಿ ಪುರೋಹಿತಶಾಹಿ ಪುನರುತ್ಥಾನದ ಸಲಕರಣೆಗಳನ್ನು ಶಿಕ್ಷಣ ಇಲಾಖೆಯ ಪಠ್ಯಪುಸ್ತಕದೊಳಕ್ಕೆ ತುರುಕಲು ಹೋಗಿ ತರಾಟೆಗೆ ಗುರಿಯಾಗಿದ್ದು ಇತಿಹಾಸ. ನಂತರ ಕೆಲವು ಪಠ್ಯಗಳನ್ನು ಸರಿಮಾಡಿದ ಬುಕ್‌ಲೆಟ್ ಒಂದನ್ನು ಶಾಲೆಗೊಂದರಂತೆ ಹಂಚಿಹೋಗಿದ್ದ ಮರ್ಯಾದೆಯನ್ನು ಉಳಿಸಿಕೊಳ್ಳಲು ಪ್ರಯತ್ನಪಟ್ಟ ಇವರು ಈಗ ಮಕ್ಕಳು ಒಂದೆಡೆ ಕುಳಿತು ಧ್ಯಾನ ಮಾಡಿ ನಂತರ ಪಾಠ ಓದಿಕೊಳ್ಳಬೇಕೆಂದು ಹಠ ಹಿಡಿದಿದ್ದಾರಂತಲ್ಲಾ. ಇಂತಹ ಆಲೋಚನೆಗೂ ಮೊದಲು ಇವರು ಸಕಾಲಕ್ಕೆ ಮಕ್ಕಳಿಗೆ ಪಠ್ಯ, ಬಟ್ಟೆ ಬೂಟ್ಸು ಇತ್ಯಾದಿ ಅಗತ್ಯಗಳನ್ನು ಒದಗಿಸುವುದನ್ನು ಬಿಟ್ಟು ಬಿಟ್ಟಿ ಸಲಹೆಯಾದ ಧ್ಯಾನದ ಸೂಚನೆ ಕಂಡುಕೇಳರಿಯದ ಹಾಸ್ಯಾಸ್ಪದ ಸಂಗತಿಯಾಗಿದೆಯಲ್ಲಾ. ಇವರು ಧ್ಯಾನ ಮಾಡಿ ಎಂದು ಹೇಳುತ್ತಿರುವ ಮಕ್ಕಳು ಒಂದು ಕ್ಷಣ ಎಲ್ಲೂ ನಿಲ್ಲದೆ ಹಕ್ಕಿ ಪಕ್ಷಿಗಳಂತೆ ಹಾರಾಡುವಂತವರು, ಜಿಂಕೆ ಮೊಲಗಳಂತೆ ನೆಗೆದಾಡುವಂತವರು; ಇದನ್ನ ಗ್ರಹಿಸಿದ ಈ ನಾಗೇಶ್ ತಮ್ಮ ವಠಾರದ ವೃದ್ಧರು ಕುಳಿತಿರುವುದನ್ನು ನೋಡಿ ಅದನ್ನೇ ಧ್ಯಾನ ಎಂದುಕೊಂಡು ಮಕ್ಕಳಿಗೂ ಬೋಧಿಸತೊಡಗಿದ್ದಾರೆ. ಒಂದು ವೇಳೆ ಧ್ಯಾನ ಆರಂಭಗೊಂಡರೆ ಅದರ ಆರಂಭಕ್ಕೊಂದು ಶ್ಲೋಕದ ಪ್ರಾರ್ಥನೆಯ ಸರ್ಕ್ಯುಲರ್ ಹೊರಡುತ್ತವೆ. ಆನಂತರ ಮತ್ತೊಂದು; ಧ್ಯಾನ ಮುಗಿಸಿದ ಮಕ್ಕಳಿಗೆಲ್ಲಾ ಎದೆಯ ಮೇಲೆ ಕೈಯಿಟ್ಟು ನಮಸ್ತೆ ಸದಾವತ್ಸಲೇ ಮಾತೃಭೂಮಿ ಎಂದು ಹೇಳಿಕೊಡುವುದಿಲ್ಲ ಎನ್ನುವುದು ಯಾವ ಗ್ಯಾರಂಟಿ ಎನ್ನಲಾಗುತ್ತಿದೆಯಲ್ಲಾ, ಥೂತ್ತೇರಿ.

******

ತುಮಕೂರಿನ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಹೆರಿಗೆ ಮಾಡಲು ದಾಖಲೆ ಕೇಳಿದ ವೈದ್ಯರ ನಡವಳಿಕೆಯಿಂದ ಕಂಗಾಲಾದ ತಾಯಿ, ತನ್ನ ದಾಖಲೆಯನ್ನೇ ಆಳಿಸಿ ಹೊರಟುಹೋಗಿದ್ದಾಳಲ್ಲಾ. ಅದೂ ಅವಳಿ ಮಕ್ಕಳಿಗೆ ಜನ್ಮ ನೀಡಿ; ಆ ಮಕ್ಕಳು ಅವ್ವನ ಹಾದಿ ಹಿಡಿದಿವೆ. ಹೃದಯ ಕಲಕುವ ಈ ಸಂಗತಿ ಕೇಳಿದ ಸುಧಾಕರ ಕೂಡಲೇ ತಮ್ಮ ಕೊಠಡಿ ಸೇರಿಕೊಂಡಿದ್ದರಿಂದ ಗಾಬರಿಗೊಂಡ ಹಿಂಬಾಲಕರು ಬಾಗಿಲ ಹೊರಗಿನಿಂದ ಕೂಗಿ “ಸಾರ್ ರಾಜಿನಾಮೆ ಬರೆಯಬೇಡಿ. ಆಸ್ಪತ್ರೆಯ ಡಾಕ್ಟರು ಮಾಡಿದ ಅಪರಾಧಕ್ಕೆ ನೀವು ಹೊಣೆಗಾರರಲ್ಲ” ಎಂದರಂತಲ್ಲಾ. ಆ ಕಡೆಯಿಂದ ಸುಧಾಕರ್ “ನಾನು ರಾಜಿನಾಮೆ ಬರೆಯುತ್ತಿಲ್ಲ, ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಶಿಶುಮರಣದ ದಾಖಲೆ ಹುಡುಕುತ್ತಿದ್ದೇನೆ” ಎಂದಾಗ ಹಿಂಬಾಲಕರು ಹಿಂಬದಿಯಿಂದ ಗಾಳಿಬಿಟ್ಟು ಸುಧಾರಿಸಿಕೊಂಡರಂತಲ್ಲಾ. ಇತ್ತ ತುಮಕೂರು ಸುದ್ದಿ ಬಿಟ್ಟು ಮಾರಿಕೊಂಡ ಮಾಧ್ಯಮದವರು ರೇಣುಕಾಚಾರ್ಯರ ತಮ್ಮನ ಮಗನ ದುರ್ಮರಣವನ್ನು ದಿನವಿಡೀ ತೋರುತ್ತಾ, ಸಾಲದೆಂಬಂತೆ ಸುದ್ದಿ ಸಂಗ್ರಹಿಸಲು ಮನೆಯ ಬಳಿಗೆ ಹೋದಾಗ, ರೇಣುಕಾಚಾರ್ಯ ನಾನು ಹಿಂದೂ ಪ್ರೇಮಿ ಮತ್ತು ಜಾತಿ ಪ್ರೇಮಿ, ಹಾಗಾಗಿ ಹಿಜಾಬ್ ವಿಷಯದಲ್ಲಿ ನನಗೆ ಬೆದರಿಕೆ ಕರೆ ಬಂದಿತ್ತು. ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಇದು ವೇಗದ ಅಪಘಾತ ಅಂತ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ಎಂದು ಪ್ರತಿ ಮಾತಿಗೂ ಒಂದೊಂದು ಗುಕ್ಕು ಉಣ್ಣುತ್ತಿದ್ದರಂತಲ್ಲಾ. ಹೀಗೆ ನಾಲ್ವರು ಮಹಿಳೆಯರು ಸರದಿಯಂತೆ ಅನ್ನದ ತುತ್ತು ಬಾಯಿಗೆ ಹಿಡಿಯುತ್ತಿದ್ದಾಗ ತೀರಿಕೊಂಡ ಚಂದ್ರಶೇಖರನ ತಂದೆ ತಾಯಿ ಮತ್ತು ಪೊಲೀಸರು ದಂಗುಬಡಿದು ನಿಂತಿದ್ದರಲ್ಲಾ. ಥೂತ್ತೇರಿ.

******

ರೇಣುಕಾಚಾರ್ಯರ ತಮ್ಮನ ಮಗ ಒಳ್ಳೆ ನಡವಳಿಕೆ ಹುಡುಗ; ತುಸು ಆಧ್ಯಾತ್ಮದ ಕಡೆ ಒಲವಿದ್ದವನು. ಇಂತಹವರಿಗೆಲ್ಲಾ ಗುರುವಿನಂತೆ ಕಾಣುವ ಗೌರಿಗದ್ದೆ ಗುರುನೋಡಿ ಬರುವಾಗ ತುಂಗಾ ಸೇತುವೆ ಮೇಲಿಂದ ಕೆಳಗೆ ಬಿದ್ದು ತೀರಿಕೊಂಡಿದ್ದಾನೆಂಬುದು ಪೊಲೀಸರ ಸಮೇತ ಜನಸಾಮಾನ್ಯರ ನಂಬುಗೆ. ಇಲ್ಲಿ ಅಸಂಖ್ಯಾತ ವೈರಿಗಳನ್ನ ಸೃಷ್ಟಿಸಿಕೊಂಡಿದ್ದವರು ರೇಣುಕಾಚಾರಿ. ಮೊದಲನೆಯದಾಗಿ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಮಡಗಿಕೊಂಡಿದ್ದಾರೆ ತನಿಖೆ ಮಾಡಿ ಎಂದಿದ್ದರು; ನನಗೆ ಮುಸ್ಲಿಮರ ಓಟು ಬೇಡ ಎಂದಿದ್ದರು; ಇನ್ನೊಂದೆಡೆ ಹಿಜಾಬ್ ವಿಷಯದಲ್ಲೂ ಅವರ ಬಾಯಿ ಸುಮ್ಮನಿರಲಿಲ್ಲ. ಆ ಕಾರಣವಾಗಿ ಬೆದರಿಕೆ ಕರೆ ಬಂದಿತ್ತೆಂದು ಅವರೇ ಹೇಳುತ್ತಾರೆ. ಇನ್ನ ಅವರ ಕುಟುಂಬ ಸದಸ್ಯರೊಬ್ಬರು ಸುಳ್ಳು ಸುಳ್ಳಾಗಿ ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಪಡೆದುದನ್ನ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅದೂ ಅಲ್ಲದೆ ಈಚೆಗೆ ಸರಕಾರಿ ಕರ್ಮಚಾರಿಗಳಿಗೆ ಒತ್ತಡ ತಂದು ನಿಂದಿಸಿ ಸುಳ್ಳುದಾಖಲೆ ಸೃಷ್ಟಿಮಾಡಿ ಸರಕಾರದ ಅನುದಾನ ಪಡೆಯಲು ಯತ್ನಿಸಿದರೆಂಬ ಆಪಾದನೆಯೂ ಇದೆ. ಇಷ್ಟು ಸಮಸ್ಯೆಗಳ ಗೋಜಲುಗಳನ್ನ ಸೃಷ್ಟಿಮಾಡಿಕೊಂಡಿರುವ ರೇಣುಕಾಚಾರಿ ಚಂದ್ರಶೇಖರನ ಸಾವಿನ ತನಿಖೆಗೆ ಬಂದ ಪೋಲೀಸರಿಗೆ ಅವಾಜುಹಾಕಿ, ನಿಮ್ಮ ತನಿಖೆಯೇ ಸರಿಯಿಲ್ಲ, ನನ್ನನ್ನ ತನಿಖೆ ಮಾಡಿ ಎಂದುಬಿಟ್ಟಿದ್ದಾರೆ. ಈ ಬಗ್ಗೆ ಹೊನ್ನಾಳಿ ಠಾಣೆಯ ಪೋಲಿಸರು ಪ್ರಾಥಮಿಕ ಹಂತದ ತನಿಖೆಯ ಮೊದಲ ಪ್ರಶ್ನೆಯಾಗಿ “ಸಾರ್ ಚಂದ್ರಶೇಖರನ ತಂದೆ ತಾಯಿ ದುಃಖದಲ್ಲಿಯೂ ಸಹಜವಾಗಿದ್ದರೂ ತಾವೇಕೆ ಭೂಮಿ ಆಕಾಶ ಒಂದು ಮಾಡಿ ಅಳುತ್ತಿದ್ದೀರಿ ಎಂಬ ಪ್ರಶ್ನೆಯನ್ನು ಕೇಳುವುದಕ್ಕೂ ಮೊದಲು, ನಿಮ್ಮ ತಲೆಯಲ್ಲಿರುವ ಕೊಲೆಗಾರ ಯಾರೆಂದು ಹೇಳಿಬಿಡಿ” ಎನ್ನಲಿದ್ದಾರಂತಲ್ಲಾ, ಥೂತ್ತೇರಿ.

******

ಅಧಿಕಾರ ವಿಕೇಂದ್ರೀಕರಣದ ಕನಸಿನಿಂದ ರೂಪುಗೊಂಡ ಮಂಡಲ ಪಂಚಾಯ್ತಿ ಅಧ್ಯಕ್ಷನ ಆಳ್ವಿಕೆಯಂತೆ ಒಂದು ಅವಧಿ ಮುಗಿಸಿತು. ವಾಸ್ತವವಾಗಿ ಪಟ್ಟಣ ಕೇಂದ್ರಿತವಾದ ಜನತಾಪಕ್ಷವನ್ನು ಹಳ್ಳಿಗಳಿಗೆ ತಲುಪಿಸುವ ಹುನ್ನಾರ ಕೂಡ ಈ ಪಂಚಾಯ್ತಿ ಕನಸಿನಲ್ಲಿತ್ತು. ನಂತರ ಬಂದ ಕಾಂಗ್ರೆಸ್ ಸರಕಾರದ ಫೋರ್ಪಡೆ ಮಂಡಲವನ್ನ ಒಡೆದು ಒಂದನ್ನ ಎರಡುಮಾಡಿ ಆರೂವರೆ ಸಾವಿರದಷ್ಟು ಗ್ರಾಮಪಂಚಾಯ್ತಿ ಮಾಡಿ ಆಡಳಿತಾಧಿಕಾರಿ ನೇಮಿಸಿದರು. ಹೆಬ್ಬೆಟ್ಟಿನ ಅಧ್ಯಕ್ಷರು ಬಂದು ಅಧಿಕಾರಿ ಹೇಳಿದ ಜಾಗಕ್ಕೆ ಒತ್ತಿ ಅದಕಿಷ್ಟು ಭಕ್ಷೀಸು ಈಸಿಕೊಂಡು ಕಾಲಹಾಕಿದರು. ಇದನ್ನು ನೋಡಿದ ಇತರೆ ಸದಸ್ಯರು ತಾವೂ ಕೈವೊಡ್ಡಿದರು. ಇದರಿಂದ ಸರಕಾರದಿಂದ ಬರುವ ಅನುದಾನವನ್ನು ಲಪಟಾಯಿಸಿ ಸದಸ್ಯರಿಗೆ ಹಂಚುತ್ತ ಕುಳಿತ ಪಿಡಿಓ ಭ್ರಷ್ಟತೆಯ ವಿಕೇಂದ್ರೀಕರಣದ ಪ್ರತಿನಿಧಿಯಾಗಿ ಪಂಚಾಯ್ತಿ ಆಫೀಸಿನಲ್ಲಿ ಕುಳಿತಿದ್ದಾನಲ್ಲಾ. ನರೇಗಾ ಉದ್ಯೋಗಖಾತ್ರಿಯಲ್ಲಿ ಬರುವ ಕೃಷಿಹೊಂಡದಂತಹ ಯಾವುದೇ ಕೆಲಸಗಳಲ್ಲಿ ಎಪ್ಪತ್ತು ಪರಸೆಂಟ್ ಖಟಾವು ಮಾಡುತ್ತಿರುವ ಪಿಡಿಓ ಕೇಳಿದರೆ, ಮೇಲಿನವರಿಗೆ ಕೊಡಬೇಕು ಎನ್ನುತ್ತಿದ್ದಾನೆ. ಇನ್ನ ರೆವಿನ್ಯೂ ಇಲಾಖೆ ಸುಲಿಗೆ ವಿಷಯದಲ್ಲಿ ತಹಸೀಲ್ದಾರ ಏಜೆಂಟರನ್ನ ಬಿಟ್ಟು ವಸೂಲಿಗೆ ಇಳಿದಿದ್ದಾನೆ. ಅವನನ್ನ ಕೇಳಿದರೂ ಮೇಲಿನವರಿಗೆ ಕೊಡಬೇಕು ಎನ್ನುತ್ತಾನೆ. ಮೇಲಿನವನು ಇನ್ನಾರೆಂದು ಶಾಸಕರಿಗೆ ಫೋನ್ ಮಾಡಿದರೆ ಆತ ವ್ಯಾಪ್ತಿಪ್ರದೇಶದ ಹೊರಗಿದ್ದಾನಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...