Homeಮುಖಪುಟಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

ಧ್ಯಾನ ಬೇಕಾಗಿರುವುದು ಶಿಕ್ಷಣ ಸಚಿವರಿಗೆ

- Advertisement -
- Advertisement -

ನಮ್ಮ ಅಪರೂಪದ ಶಿಕ್ಷಣ ಸಚಿವ ಬಿ.ಸಿ ನಾಗೇಶರಿಗೆ ಬಹಳ ಹಿಂದೆಯೇ ತಲೆಬಿಸಿಯಾಗಿ ಪುರೋಹಿತಶಾಹಿ ಪುನರುತ್ಥಾನದ ಸಲಕರಣೆಗಳನ್ನು ಶಿಕ್ಷಣ ಇಲಾಖೆಯ ಪಠ್ಯಪುಸ್ತಕದೊಳಕ್ಕೆ ತುರುಕಲು ಹೋಗಿ ತರಾಟೆಗೆ ಗುರಿಯಾಗಿದ್ದು ಇತಿಹಾಸ. ನಂತರ ಕೆಲವು ಪಠ್ಯಗಳನ್ನು ಸರಿಮಾಡಿದ ಬುಕ್‌ಲೆಟ್ ಒಂದನ್ನು ಶಾಲೆಗೊಂದರಂತೆ ಹಂಚಿಹೋಗಿದ್ದ ಮರ್ಯಾದೆಯನ್ನು ಉಳಿಸಿಕೊಳ್ಳಲು ಪ್ರಯತ್ನಪಟ್ಟ ಇವರು ಈಗ ಮಕ್ಕಳು ಒಂದೆಡೆ ಕುಳಿತು ಧ್ಯಾನ ಮಾಡಿ ನಂತರ ಪಾಠ ಓದಿಕೊಳ್ಳಬೇಕೆಂದು ಹಠ ಹಿಡಿದಿದ್ದಾರಂತಲ್ಲಾ. ಇಂತಹ ಆಲೋಚನೆಗೂ ಮೊದಲು ಇವರು ಸಕಾಲಕ್ಕೆ ಮಕ್ಕಳಿಗೆ ಪಠ್ಯ, ಬಟ್ಟೆ ಬೂಟ್ಸು ಇತ್ಯಾದಿ ಅಗತ್ಯಗಳನ್ನು ಒದಗಿಸುವುದನ್ನು ಬಿಟ್ಟು ಬಿಟ್ಟಿ ಸಲಹೆಯಾದ ಧ್ಯಾನದ ಸೂಚನೆ ಕಂಡುಕೇಳರಿಯದ ಹಾಸ್ಯಾಸ್ಪದ ಸಂಗತಿಯಾಗಿದೆಯಲ್ಲಾ. ಇವರು ಧ್ಯಾನ ಮಾಡಿ ಎಂದು ಹೇಳುತ್ತಿರುವ ಮಕ್ಕಳು ಒಂದು ಕ್ಷಣ ಎಲ್ಲೂ ನಿಲ್ಲದೆ ಹಕ್ಕಿ ಪಕ್ಷಿಗಳಂತೆ ಹಾರಾಡುವಂತವರು, ಜಿಂಕೆ ಮೊಲಗಳಂತೆ ನೆಗೆದಾಡುವಂತವರು; ಇದನ್ನ ಗ್ರಹಿಸಿದ ಈ ನಾಗೇಶ್ ತಮ್ಮ ವಠಾರದ ವೃದ್ಧರು ಕುಳಿತಿರುವುದನ್ನು ನೋಡಿ ಅದನ್ನೇ ಧ್ಯಾನ ಎಂದುಕೊಂಡು ಮಕ್ಕಳಿಗೂ ಬೋಧಿಸತೊಡಗಿದ್ದಾರೆ. ಒಂದು ವೇಳೆ ಧ್ಯಾನ ಆರಂಭಗೊಂಡರೆ ಅದರ ಆರಂಭಕ್ಕೊಂದು ಶ್ಲೋಕದ ಪ್ರಾರ್ಥನೆಯ ಸರ್ಕ್ಯುಲರ್ ಹೊರಡುತ್ತವೆ. ಆನಂತರ ಮತ್ತೊಂದು; ಧ್ಯಾನ ಮುಗಿಸಿದ ಮಕ್ಕಳಿಗೆಲ್ಲಾ ಎದೆಯ ಮೇಲೆ ಕೈಯಿಟ್ಟು ನಮಸ್ತೆ ಸದಾವತ್ಸಲೇ ಮಾತೃಭೂಮಿ ಎಂದು ಹೇಳಿಕೊಡುವುದಿಲ್ಲ ಎನ್ನುವುದು ಯಾವ ಗ್ಯಾರಂಟಿ ಎನ್ನಲಾಗುತ್ತಿದೆಯಲ್ಲಾ, ಥೂತ್ತೇರಿ.

******

ತುಮಕೂರಿನ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಹೆರಿಗೆ ಮಾಡಲು ದಾಖಲೆ ಕೇಳಿದ ವೈದ್ಯರ ನಡವಳಿಕೆಯಿಂದ ಕಂಗಾಲಾದ ತಾಯಿ, ತನ್ನ ದಾಖಲೆಯನ್ನೇ ಆಳಿಸಿ ಹೊರಟುಹೋಗಿದ್ದಾಳಲ್ಲಾ. ಅದೂ ಅವಳಿ ಮಕ್ಕಳಿಗೆ ಜನ್ಮ ನೀಡಿ; ಆ ಮಕ್ಕಳು ಅವ್ವನ ಹಾದಿ ಹಿಡಿದಿವೆ. ಹೃದಯ ಕಲಕುವ ಈ ಸಂಗತಿ ಕೇಳಿದ ಸುಧಾಕರ ಕೂಡಲೇ ತಮ್ಮ ಕೊಠಡಿ ಸೇರಿಕೊಂಡಿದ್ದರಿಂದ ಗಾಬರಿಗೊಂಡ ಹಿಂಬಾಲಕರು ಬಾಗಿಲ ಹೊರಗಿನಿಂದ ಕೂಗಿ “ಸಾರ್ ರಾಜಿನಾಮೆ ಬರೆಯಬೇಡಿ. ಆಸ್ಪತ್ರೆಯ ಡಾಕ್ಟರು ಮಾಡಿದ ಅಪರಾಧಕ್ಕೆ ನೀವು ಹೊಣೆಗಾರರಲ್ಲ” ಎಂದರಂತಲ್ಲಾ. ಆ ಕಡೆಯಿಂದ ಸುಧಾಕರ್ “ನಾನು ರಾಜಿನಾಮೆ ಬರೆಯುತ್ತಿಲ್ಲ, ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಶಿಶುಮರಣದ ದಾಖಲೆ ಹುಡುಕುತ್ತಿದ್ದೇನೆ” ಎಂದಾಗ ಹಿಂಬಾಲಕರು ಹಿಂಬದಿಯಿಂದ ಗಾಳಿಬಿಟ್ಟು ಸುಧಾರಿಸಿಕೊಂಡರಂತಲ್ಲಾ. ಇತ್ತ ತುಮಕೂರು ಸುದ್ದಿ ಬಿಟ್ಟು ಮಾರಿಕೊಂಡ ಮಾಧ್ಯಮದವರು ರೇಣುಕಾಚಾರ್ಯರ ತಮ್ಮನ ಮಗನ ದುರ್ಮರಣವನ್ನು ದಿನವಿಡೀ ತೋರುತ್ತಾ, ಸಾಲದೆಂಬಂತೆ ಸುದ್ದಿ ಸಂಗ್ರಹಿಸಲು ಮನೆಯ ಬಳಿಗೆ ಹೋದಾಗ, ರೇಣುಕಾಚಾರ್ಯ ನಾನು ಹಿಂದೂ ಪ್ರೇಮಿ ಮತ್ತು ಜಾತಿ ಪ್ರೇಮಿ, ಹಾಗಾಗಿ ಹಿಜಾಬ್ ವಿಷಯದಲ್ಲಿ ನನಗೆ ಬೆದರಿಕೆ ಕರೆ ಬಂದಿತ್ತು. ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಇದು ವೇಗದ ಅಪಘಾತ ಅಂತ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ಎಂದು ಪ್ರತಿ ಮಾತಿಗೂ ಒಂದೊಂದು ಗುಕ್ಕು ಉಣ್ಣುತ್ತಿದ್ದರಂತಲ್ಲಾ. ಹೀಗೆ ನಾಲ್ವರು ಮಹಿಳೆಯರು ಸರದಿಯಂತೆ ಅನ್ನದ ತುತ್ತು ಬಾಯಿಗೆ ಹಿಡಿಯುತ್ತಿದ್ದಾಗ ತೀರಿಕೊಂಡ ಚಂದ್ರಶೇಖರನ ತಂದೆ ತಾಯಿ ಮತ್ತು ಪೊಲೀಸರು ದಂಗುಬಡಿದು ನಿಂತಿದ್ದರಲ್ಲಾ. ಥೂತ್ತೇರಿ.

******

ರೇಣುಕಾಚಾರ್ಯರ ತಮ್ಮನ ಮಗ ಒಳ್ಳೆ ನಡವಳಿಕೆ ಹುಡುಗ; ತುಸು ಆಧ್ಯಾತ್ಮದ ಕಡೆ ಒಲವಿದ್ದವನು. ಇಂತಹವರಿಗೆಲ್ಲಾ ಗುರುವಿನಂತೆ ಕಾಣುವ ಗೌರಿಗದ್ದೆ ಗುರುನೋಡಿ ಬರುವಾಗ ತುಂಗಾ ಸೇತುವೆ ಮೇಲಿಂದ ಕೆಳಗೆ ಬಿದ್ದು ತೀರಿಕೊಂಡಿದ್ದಾನೆಂಬುದು ಪೊಲೀಸರ ಸಮೇತ ಜನಸಾಮಾನ್ಯರ ನಂಬುಗೆ. ಇಲ್ಲಿ ಅಸಂಖ್ಯಾತ ವೈರಿಗಳನ್ನ ಸೃಷ್ಟಿಸಿಕೊಂಡಿದ್ದವರು ರೇಣುಕಾಚಾರಿ. ಮೊದಲನೆಯದಾಗಿ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಮಡಗಿಕೊಂಡಿದ್ದಾರೆ ತನಿಖೆ ಮಾಡಿ ಎಂದಿದ್ದರು; ನನಗೆ ಮುಸ್ಲಿಮರ ಓಟು ಬೇಡ ಎಂದಿದ್ದರು; ಇನ್ನೊಂದೆಡೆ ಹಿಜಾಬ್ ವಿಷಯದಲ್ಲೂ ಅವರ ಬಾಯಿ ಸುಮ್ಮನಿರಲಿಲ್ಲ. ಆ ಕಾರಣವಾಗಿ ಬೆದರಿಕೆ ಕರೆ ಬಂದಿತ್ತೆಂದು ಅವರೇ ಹೇಳುತ್ತಾರೆ. ಇನ್ನ ಅವರ ಕುಟುಂಬ ಸದಸ್ಯರೊಬ್ಬರು ಸುಳ್ಳು ಸುಳ್ಳಾಗಿ ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಪಡೆದುದನ್ನ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅದೂ ಅಲ್ಲದೆ ಈಚೆಗೆ ಸರಕಾರಿ ಕರ್ಮಚಾರಿಗಳಿಗೆ ಒತ್ತಡ ತಂದು ನಿಂದಿಸಿ ಸುಳ್ಳುದಾಖಲೆ ಸೃಷ್ಟಿಮಾಡಿ ಸರಕಾರದ ಅನುದಾನ ಪಡೆಯಲು ಯತ್ನಿಸಿದರೆಂಬ ಆಪಾದನೆಯೂ ಇದೆ. ಇಷ್ಟು ಸಮಸ್ಯೆಗಳ ಗೋಜಲುಗಳನ್ನ ಸೃಷ್ಟಿಮಾಡಿಕೊಂಡಿರುವ ರೇಣುಕಾಚಾರಿ ಚಂದ್ರಶೇಖರನ ಸಾವಿನ ತನಿಖೆಗೆ ಬಂದ ಪೋಲೀಸರಿಗೆ ಅವಾಜುಹಾಕಿ, ನಿಮ್ಮ ತನಿಖೆಯೇ ಸರಿಯಿಲ್ಲ, ನನ್ನನ್ನ ತನಿಖೆ ಮಾಡಿ ಎಂದುಬಿಟ್ಟಿದ್ದಾರೆ. ಈ ಬಗ್ಗೆ ಹೊನ್ನಾಳಿ ಠಾಣೆಯ ಪೋಲಿಸರು ಪ್ರಾಥಮಿಕ ಹಂತದ ತನಿಖೆಯ ಮೊದಲ ಪ್ರಶ್ನೆಯಾಗಿ “ಸಾರ್ ಚಂದ್ರಶೇಖರನ ತಂದೆ ತಾಯಿ ದುಃಖದಲ್ಲಿಯೂ ಸಹಜವಾಗಿದ್ದರೂ ತಾವೇಕೆ ಭೂಮಿ ಆಕಾಶ ಒಂದು ಮಾಡಿ ಅಳುತ್ತಿದ್ದೀರಿ ಎಂಬ ಪ್ರಶ್ನೆಯನ್ನು ಕೇಳುವುದಕ್ಕೂ ಮೊದಲು, ನಿಮ್ಮ ತಲೆಯಲ್ಲಿರುವ ಕೊಲೆಗಾರ ಯಾರೆಂದು ಹೇಳಿಬಿಡಿ” ಎನ್ನಲಿದ್ದಾರಂತಲ್ಲಾ, ಥೂತ್ತೇರಿ.

******

ಅಧಿಕಾರ ವಿಕೇಂದ್ರೀಕರಣದ ಕನಸಿನಿಂದ ರೂಪುಗೊಂಡ ಮಂಡಲ ಪಂಚಾಯ್ತಿ ಅಧ್ಯಕ್ಷನ ಆಳ್ವಿಕೆಯಂತೆ ಒಂದು ಅವಧಿ ಮುಗಿಸಿತು. ವಾಸ್ತವವಾಗಿ ಪಟ್ಟಣ ಕೇಂದ್ರಿತವಾದ ಜನತಾಪಕ್ಷವನ್ನು ಹಳ್ಳಿಗಳಿಗೆ ತಲುಪಿಸುವ ಹುನ್ನಾರ ಕೂಡ ಈ ಪಂಚಾಯ್ತಿ ಕನಸಿನಲ್ಲಿತ್ತು. ನಂತರ ಬಂದ ಕಾಂಗ್ರೆಸ್ ಸರಕಾರದ ಫೋರ್ಪಡೆ ಮಂಡಲವನ್ನ ಒಡೆದು ಒಂದನ್ನ ಎರಡುಮಾಡಿ ಆರೂವರೆ ಸಾವಿರದಷ್ಟು ಗ್ರಾಮಪಂಚಾಯ್ತಿ ಮಾಡಿ ಆಡಳಿತಾಧಿಕಾರಿ ನೇಮಿಸಿದರು. ಹೆಬ್ಬೆಟ್ಟಿನ ಅಧ್ಯಕ್ಷರು ಬಂದು ಅಧಿಕಾರಿ ಹೇಳಿದ ಜಾಗಕ್ಕೆ ಒತ್ತಿ ಅದಕಿಷ್ಟು ಭಕ್ಷೀಸು ಈಸಿಕೊಂಡು ಕಾಲಹಾಕಿದರು. ಇದನ್ನು ನೋಡಿದ ಇತರೆ ಸದಸ್ಯರು ತಾವೂ ಕೈವೊಡ್ಡಿದರು. ಇದರಿಂದ ಸರಕಾರದಿಂದ ಬರುವ ಅನುದಾನವನ್ನು ಲಪಟಾಯಿಸಿ ಸದಸ್ಯರಿಗೆ ಹಂಚುತ್ತ ಕುಳಿತ ಪಿಡಿಓ ಭ್ರಷ್ಟತೆಯ ವಿಕೇಂದ್ರೀಕರಣದ ಪ್ರತಿನಿಧಿಯಾಗಿ ಪಂಚಾಯ್ತಿ ಆಫೀಸಿನಲ್ಲಿ ಕುಳಿತಿದ್ದಾನಲ್ಲಾ. ನರೇಗಾ ಉದ್ಯೋಗಖಾತ್ರಿಯಲ್ಲಿ ಬರುವ ಕೃಷಿಹೊಂಡದಂತಹ ಯಾವುದೇ ಕೆಲಸಗಳಲ್ಲಿ ಎಪ್ಪತ್ತು ಪರಸೆಂಟ್ ಖಟಾವು ಮಾಡುತ್ತಿರುವ ಪಿಡಿಓ ಕೇಳಿದರೆ, ಮೇಲಿನವರಿಗೆ ಕೊಡಬೇಕು ಎನ್ನುತ್ತಿದ್ದಾನೆ. ಇನ್ನ ರೆವಿನ್ಯೂ ಇಲಾಖೆ ಸುಲಿಗೆ ವಿಷಯದಲ್ಲಿ ತಹಸೀಲ್ದಾರ ಏಜೆಂಟರನ್ನ ಬಿಟ್ಟು ವಸೂಲಿಗೆ ಇಳಿದಿದ್ದಾನೆ. ಅವನನ್ನ ಕೇಳಿದರೂ ಮೇಲಿನವರಿಗೆ ಕೊಡಬೇಕು ಎನ್ನುತ್ತಾನೆ. ಮೇಲಿನವನು ಇನ್ನಾರೆಂದು ಶಾಸಕರಿಗೆ ಫೋನ್ ಮಾಡಿದರೆ ಆತ ವ್ಯಾಪ್ತಿಪ್ರದೇಶದ ಹೊರಗಿದ್ದಾನಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...