Homeಅಂಕಣಗಳು'ಬಿಟ್ಟಿ ಸವಲತ್ತಿ'ನ ಬಗ್ಗೆ ಬುದ್ದಿಯವರು ಸಿಟ್ಟಾಗಿದ್ದಾರಲ್ಲಾ!

‘ಬಿಟ್ಟಿ ಸವಲತ್ತಿ’ನ ಬಗ್ಗೆ ಬುದ್ದಿಯವರು ಸಿಟ್ಟಾಗಿದ್ದಾರಲ್ಲಾ!

- Advertisement -
- Advertisement -

ಮೋದಿ ಪ್ರಧಾನಿಯಾಗಿ ಮೆರೆದಿದ್ದು ಹೇಗೆಂಬುಂವುದನ್ನು ಅರ್ಥ ಮಾಡಿಕೊಳ್ಳಲು ಅದರ ಹಿಂದಿನ ಆಡಳಿತ ನೋಡಬೇಕು. ಹತ್ತು ವರ್ಷ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅರ್ಥಶಾಸ್ತ್ರಜ್ಞನಾಗಿ ಹೆಚ್ಚು ವರ್ತಿಸಿದರೇ ಹೊರತು, ಪ್ರಧಾನಿಯ ಕುರ್ಚಿಯ ವರ್ಚಸ್ಸಿಗೆ ಆತುಕುಳಿತವರಲ್ಲ. ಜನಮೆಚ್ಚಿಸುವ ಮಾತನಾಡಲಿಲ್ಲ. ಸುಳ್ಳುಗಳನ್ನು ಹೇಳಲಿಲ್ಲ. ಪ್ರಪಂಚವೇ ಗೌರವಿಸುವ ಪ್ರಧಾನಿಯಾಗಿದ್ದರು. ಅವರು ಕೂಡ ಕೆಲವೊಂದು ವಿಷಯಗಳಿಗೆ ಪ್ರತಿಕ್ರಿಯಿಸದೆ ಮೌನವಾಗಿದ್ದರು; ಅವರೆದುರು ಬಾಯಿಗೆ ಬಂದಂತೆ ಮೋಹಕವಾಗಿ ಮಾತನಾಡುವ ಮೋದಿಯನ್ನು ಪ್ರಧಾನಿಯಾಗಿ ಮೆರೆಸಲಾಯ್ತು. ಏನೇನೋ ಕಾರಣಗಳಿಂದ ದೇಶ ಆರ್ಥಿಕವಾಗಿ ಹಳ್ಳ ಹಿಡಿಯುವಾಗಲೂ ಮನಮೋಹನ್ ಸಿಂಗ್ ಗಟ್ಟಿಯಾಗಿ ಮಾತನಾಡಲಿಲ್ಲ. ಸಂಘಟಿತ ಲೂಟಿ ಎಂದು ಗೊಣಗಿಕೊಂಡರು. ಆದರೆ ಮೋದಿಯವರಂತೂ, ಕೆಲವು ಭೀಕರ ಘಟನೆಗಳಿಗೂ ಪ್ರತಿಕ್ರಿಯಿಸಲಿಲ್ಲ; ಭಾರತವನ್ನೇ ಅಲ್ಲಾಡಿಸಿದ ಕರಾಳ ಕೃಷಿ ಕಾಯ್ದೆ ವಿರೋಧೀ ಚಳವಳಿಗೆ ಪ್ರತಿಕ್ರಿಯಿಸಲಿಲ್ಲ. 750 ಜನ ರೈತರು ಸತ್ತಾಗಲೂ ತುಟಿ ಬಿಚ್ಚಲಿಲ್ಲ. ಈಗಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯರಾಗಿರುವ ಕುಸ್ತಿಪಟುಗಳ ಮೇಲೆ ಬೆಚ್ಚುವಂತಹ ಲೈಂಗಿಕ ಹಗರಣ ನಡೆದಿದ್ದರೂ, ಪ್ರಧಾನಿ ಆರೋಪಿಯ ಜೊತೆಯಲ್ಲೇ ಮೌನವಾಗಿ ನಿಂತಿರುವುದಲ್ಲದೆ, ಬ್ರಿಜ್ ಭೂಷಣ್ ಶಕ್ತಿ ಪ್ರದರ್ಶನದ ಬಗ್ಗೆ ಕೂಡ ಮೌನವಾಗಿದ್ದಾರೆ. ಸೂಕ್ಷ್ಮವಾಗಿ ನೋಡಿದರೆ ಬಿಜೆಪಿಗಳು ಮಾಡುವ ಅಪರಾಧಗಳ ಆರೋಪದ ವಿಷಯದಲ್ಲಿ ಈವರೆಗೆ ಬಾಯಿ ಬಿಡದೆ ಮೋದಿ ಮೌನವಾಗಿದ್ದಾರಲ್ಲಾ, ಥೂತ್ತೇರಿ.

****

ಮಂಡ್ಯದ ಕರ್ನಾಟಕ ಸಂಘದ ಜಯಪ್ರಕಾಶ್ ಗೌಡರು ಹೊಸದಾಗಿ ಗೆದ್ದು ಬಂದ ಶಾಸಕ ಮಂತ್ರಿಗಳಿಗೆ ಅಭಿನಂದನಾ ಸಭೆ ಮಾಡಿದರು. ಪಿ.ಇ.ಎಸ್ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಶಂಕರೇಗೌಡರು ಮಾತನಾಡುತ್ತ ರಸ್ತೆಗಳು ನಮ್ಮ ಕಾಲ ಕೆಳಗೆ ಇರಬೇಕು, ಅದುಬಿಟ್ಟು ತಲೆಯಮೇಲೆ ಇರಬಾರದು, ಮಂಡ್ಯದಲ್ಲಿ ಹೀಗಾಗಿದೆ ಎಂದರು. ಇದಕ್ಕುತ್ತರವಾಗಿ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ಶಂಕರೇಗೌಡರು ಅಭಿವೃದ್ಧಿ ಕೆಲಸಗಳನ್ನ ಟೀಕಿಸದೆ ಮೆಚ್ಚಿಕೊಳ್ಳಬೇಕೆಂದರು. ಈ ನರೇಂದ್ರ ಸ್ವಾಮಿಗೆ ಸ್ವಲ್ಪ ತಿಳಿವಳಿಕೆ ಹೇಳುವುದಾದರೆ, ಅಭಿವೃದ್ಧಿ ಎಂದರೆ ಏನು? ಅದು ಯಾರಿಗೆ ಬೇಕಾಗಿದೆ? ಅದರಿಂದ ಆಗುತ್ತಿರುವ ಅನಾಹುತಗಳೇನು? ಎಂಬುದೇ ಅವರಿಗೆ ತಿಳಿದಿಲ್ಲವಲ್ಲ, ಥೂತ್ತೇರಿ.

****

ಮಂಡ್ಯವನ್ನ ಸೀಳಿಕೊಂಡು ಹೋಗಿರುವ ಬೈಪಾಸ್ ರಸ್ತೆಯಲ್ಲಿ, ಬೆಂಗಳೂರು ಮೈಸೂರ ನಡುವೆ ಕೇವಲ ಒಂದೂವರೆ ಗಂಟೆ ಜರ್ನಿಯಾಗಿದೆ. ಆಯ್ತು ಬೇಗ ಮೈಸೂರಿಗೆ ಹೋಗಿ ನೀವು ಮಾಡುವುದೇನು, ಅದೇನು ವಾಣಿಜ್ಯ ನಗರಿಯೇ ಅಥವಾ ಕೈಗಾರಿಕೆಯ ಬೀಡೆ ಇಲ್ಲ ಬಾಂಬೆ ತರದ ನಗರವೇ? ಬೆಂಗಳೂರಿಂದ ವೇಗದಲ್ಲಿ ಮೈಸೂರು ತಲುಪುವ ತವಕದಲ್ಲಿ ಹೋದವರ ಪೈಕಿ ಈಗಾಗಲೇ ನೂರಾರು ಜನ ಅಂತರ್ಧಾನವಾಗಿದ್ದಾರೆ! ಬೆಂಗಳೂರು ಮೈಸೂರು ನಡುವೆಯಿದ್ದ ಹೋಟೆಲುಗಳು ಡಲ್ಲಾಗಿವೆ. ಕೆಲವೆಡೆ ಇರುವ ರಸ್ತೆಯನ್ನ ಅಗಲಮಾಡಿ ನಗರಗಳು ಸಿಕ್ಕಾಗ ಹತ್ತು ಇಪ್ಪತ್ತು ಕಿ.ಮೀ ವೇಗ ನಿಯಮ ಮಾಡಿದ್ದಾರೆ. ಈ ಐತಿಹಾಸಿಕ ರಸ್ತೆ ಎಲ್ಲ ಊರುಗಳಿಗೂ ಒಂದು ’ಶೋಭೆ’ ತಂದಿರುವುದು, ನಮ್ಮ ಅಭಿವೃದ್ಧಿ ಜನಜೀವನವನ್ನು ಅಸಹನೀಯಗೊಳಿಸುವ ಮತ್ತು ಪರಿಸರನಾಶದ ಹಾಗೂ ಸಂಸ್ಕೃತಿ ನಾಶದ ಪ್ರತೀಕವಾಗಿ ಎಂಬರ್ಥದಲ್ಲಿ ಮಾತನಾಡಿದ ಶಂಕರೇಗೌಡರ ಇಂಗಿತ ನರೇಂದ್ರಸ್ವಾಮಿಯವರಿಗೆ ಅರ್ಥವಾಗಬೇಕಾದರೆ, ಶಂಕರೇಗೌಡರಿಂದ ಈ ಮೊದಲೇ ಪಾಠ ಹೇಳಿಸಿಕೊಳ್ಳಬೇಕಿತ್ತು. ಅಭಿವೃದ್ಧಿ ಕೆಲಸಗಳ ಕಮಿಶನ್ ಪಡೆವ ರಾಜಕಾರಣಿಗಳೆಲ್ಲಾ ಹೀಗೇ ಮಾತನಾಡುವುದಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

****

ನಮ್ಮ ನಡುವಿನ ಜಗದ್ಗುರುವೊಬ್ಬರು ಸಿದ್ದರಾಮಯ್ಯನವರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಬಿಟ್ಟಿ ಸಲಹೆ ಕೊಟ್ಟಿದ್ದಾರಲ್ಲಾ. ಬುದ್ದಿಯವರು ಕೊಟ್ಟ ಬೋಧನೆ ಪ್ರಕಾರ ಜನರಿಗೆ ಬಿಟ್ಟಿ ಸವಲತ್ತಿಗಿಂತ ದುಡಿದು ತಿನ್ನುವ ಕಾಯಕ ಜೀವನ ರೂಪಿಸಬೇಕಿತ್ತು. ಈಗಿನ ಕಾರ್ಯಕ್ರಮಗಳಿಂದ ಜನ ಸೋಮಾರಿಗಳಾಗಿ ಕಾಯಕ ಜೀವನದಿಂದ ವಿಮುಖರಾಗುತ್ತಾರೆ ಎಂದಿದ್ದಾರೆ. ಸುವರ್ಣಾಕ್ಷರದಲ್ಲಿ ಬರೆದು ರಸ್ತೆ ಪಕ್ಕದಲ್ಲಿ ಅಂಟಿಸಬಹುದಾದ ಈ ಉಪದೇಶಾಮೃತ ನೀಡಿದೆ ಬುದ್ದಿಯವರು ಈವರೆಗೂ ಬದುಕಿದ್ದುದ್ದು ಮಠದ ಬಿಟ್ಟಿ ಸವಲತ್ತಿನಿಂದ ಅಲ್ಲವೆ? ಬಿಟ್ಟಿ ಸವಲತ್ತನ್ನು ಅನುಭವಿಸಿ ಪೂಜ್ಯರು ಸೋಮಾರಿಗಳಾದುದನ್ನ ನಾವಂತೂ ನೋಡಿಲ್ಲ. ಸಮಯಕ್ಕೆ ಸರಿಯಾಗಿ ಪ್ರಸಾದ ಸ್ವೀಕರಿಸಿ ಬೋಧನೆಗೆ ತಯಾರಾಗುವ ಜಗದ್ಗುರುಗಳು ಜನರಿಗೆ ದುಡಿದು ತಿನ್ನುವ ಕೆಲಸಗಳನ್ನ ರೂಪಿಸಿ ಅದನ್ನ ಸರಕಾರದ ಗಮನಕ್ಕೆ ತರಬೇಕಿತ್ತು. ಅದು ಈವರೆಗೆ ಆಗಿಲ್ಲ. ಅವರೂ ಕೂಡ ಸರಕಾರದ ಅನುದಾನಕ್ಕೆ ಕಾಯುವಂತಾಗಿದ್ದಾರೆ. ಈಗ ಸಿದ್ದರಾಮಯ್ಯನವರ ಸರಕಾರ ಮಾಡಬೇಕಾದ ತುರ್ತಿನ ಕೆಲಸ ಯಾವುದೆಂದರೆ ಈ ಮಠಗಳು ಅನಾಯಾಸವಾಗಿ ಪಡೆಯುತ್ತಿರುವ ಅನುದಾನದ ಭಿಕ್ಷೆಯನ್ನು ನಿಲ್ಲಿಸುವುದು. ಜಗದ್ಗುರುಗಳೂ ರಾಜಕಾರಣಿಗಳಾಗಿ ಪರಿವರ್ತನೆಯಾಗಿರುವ ಈ ಸಮಯದಲ್ಲಿ ಅದು ಅದಷ್ಟು ಸುಲಭವಲ್ಲವಂತಲ್ಲಾ, ಥೂತ್ತೇರಿ.

****

ಇದೇ ಹನ್ನೊಂದನೇ ತಾರೀಕಿನಿಂದ ಸರಕಾರ ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಎಲ್ಲೆಂದರಲ್ಲಿ ಹೋಗಿ ಬರುವ ಉಚಿತ ಸವಲತ್ತನ್ನು ಕರುಣಿಸಿದೆಯಲ್ಲಾ. ನಮ್ಮ ಪುರಾಣ ಸದೃಶ ಧರ್ಮದಲ್ಲಿ ಹೆಣ್ಣನ್ನು ಎಂದೂ ಸಹಜವಾಗಿ ಮತ್ತು ಸಮಾನವಾಗಿ ಕಂಡಿಲ್ಲ. ಹೀಗೆ ಕಾಣದವರ ಹೊಟ್ಟೆಗೆ ಸುಣ್ಣ ಹುಯ್ದಂತೆ ಮಾಡುವ ಈ ಕಾರ್ಯಕ್ರಮ ಸಹಜವಾಗಿಯೇ ವಿಕೃತ ಮನಸ್ಸಿನವರಿಗೆ ಶಾನೆ ಸುದ್ದಿಯಾಗಿದೆಯಂತಲ್ಲಾ. ಮಹಿಳೆಯರಾಗಿ ಮಹಿಳಾ ಸವಲತ್ತನ್ನು ಟೀಕಿಸುವ ಕಮಲ ಪ್ರಿಯ ಮಹಿಳೆಯರು ಸಿದ್ದು ಸರಕಾರದ ವಿರುದ್ಧ ಸ್ವಾಭಿಮಾನ ಮೆರೆದು ಟಿಕೆಟ್ ತೆಗೆದುಕೊಂಡರೆ ಎಷ್ಟು ಚೆಂದ ಅಲ್ಲವೆ. ಇಂಥವರ ಬಾಯಿಗಳಿಂದಲೇ ಬಂದ ಮಾತುಗಳನ್ನು ದಾಖಲಿಸುವುದಾದರೆ, ’ಇನ್ನು ಹೆಂಗಸರು ಎಲ್ಲೆಂದರಲ್ಲಿ ತಿರುಗುತ್ತಾರೆ, ಮನೆಯನ್ನು ಸೇರುವುದಿಲ್ಲ, ಗಂಡನ ಮಾತು ಕೇಳುವುದಿಲ್ಲ’ ಎನ್ನತೊಡಗಿದ್ದಾರಲ್ಲ. ಸರಿಯಾಗಿ ಕಣ್ಣುಬಿಟ್ಟು ನೋಡಿದರೆ ಸಾಮಾನ್ಯವಾಗಿ ಯಾವ ಹೆಂಗಸೂ ವಿನಾಕಾರಣ ಎಲ್ಲೂ ಸುತ್ತುವುದಿಲ್ಲ. ಈ ಸಮಾಜ ಆಧಾರಸ್ಥಂಭಗಳೆಂದುಕೊಂಡು ಕುಟುಂಬವನ್ನು ನಿರ್ವಹಿಸುವ ಮಹಿಳೆ, ಮುಫತ್ತಾಗೆ ಪಡೆದ ಸವಲತ್ತು ಯಾವುದೆಂದರೆ ಈವರೆಗೆ ಗಂಡಂದಿರನ್ನು ತಿರುಗಲುಬಿಟ್ಟು ಗಾಣದ ಎತ್ತಿನಂತೆ ಮನೆ ನಿರ್ವಹಿಸಿದ್ದಷ್ಟೇ! ಇದೆಲ್ಲಕ್ಕಿಂತ ಬಸ್ಸಿನಲ್ಲಿ ಹೋಗುವ, ಅದೂ ಮೂರು ಬಸ್ಸು ಬದಲಾಯಿಸಿ ಕೂಲಿ ಮಾಡಿ ಬದುಕುತ್ತಿದ್ದ ಬೆಂಗಳೂರಿನ ಮಹಿಳೆಯರ ಕೂಲಿ ಹಣ ಹಾಗೇ ಉಳಿಯುತ್ತದೆ. ಆ ಹಣದಲ್ಲಿ ಕುಟುಂಬವನ್ನು ಕಟ್ಟುತ್ತಾಳೆ. ಎಲ್ಲಿಯಾದರೂ ಹೋಗಿ ಬರಲು ಗಂಡನ ಬಳಿ ಬಸ್ ಚಾರ್ಜಿಗಾಗಿ ಬೇಡುತ್ತಿದ್ದ ಮಹಿಳೆ ಇನ್ನು ಮುಂದೆ ಈ ತನ್ನ ದೈನೇಸಿ ಬದುಕನ್ನು ಬದಲಿಸಿಕೊಳ್ಳುತ್ತಾಳೆ. ಆದರೆ, ಈಗ ನೀಡಿರುವ ಈ ಸವಲತ್ತು, ಪುರೋಹಿತಶಾಹಿ ಭಟ್ಟರುಗಳಿಗೆ ಸಂಭ್ರಮ ಮತ್ತು ಆಶ್ಚರ್ಯವನ್ನು ಹುಟ್ಟಿಸಿದೆಯಂತಲ್ಲಾ. ಮುಂದೆ ಪುಣ್ಯಕ್ಷೇತ್ರಗಳ ಹುಂಡಿ, ಮಂಗಳಾರತಿ ತಟ್ಟೆ ತುಂಬಲಿವೆಯಂತಲ್ಲಾ. ಹಾಗಾಗಿ ಅವರೆಲ್ಲಾ ಸಿದ್ದರಾಮಯ್ಯನವರ ಈ ಕಾರ್ಯಕ್ರಮವನ್ನು ಕೊಂಡಾಡತೊಡಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...