Homeಅಂಕಣಗಳು'ಬಿಟ್ಟಿ ಸವಲತ್ತಿ'ನ ಬಗ್ಗೆ ಬುದ್ದಿಯವರು ಸಿಟ್ಟಾಗಿದ್ದಾರಲ್ಲಾ!

‘ಬಿಟ್ಟಿ ಸವಲತ್ತಿ’ನ ಬಗ್ಗೆ ಬುದ್ದಿಯವರು ಸಿಟ್ಟಾಗಿದ್ದಾರಲ್ಲಾ!

- Advertisement -
- Advertisement -

ಮೋದಿ ಪ್ರಧಾನಿಯಾಗಿ ಮೆರೆದಿದ್ದು ಹೇಗೆಂಬುಂವುದನ್ನು ಅರ್ಥ ಮಾಡಿಕೊಳ್ಳಲು ಅದರ ಹಿಂದಿನ ಆಡಳಿತ ನೋಡಬೇಕು. ಹತ್ತು ವರ್ಷ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅರ್ಥಶಾಸ್ತ್ರಜ್ಞನಾಗಿ ಹೆಚ್ಚು ವರ್ತಿಸಿದರೇ ಹೊರತು, ಪ್ರಧಾನಿಯ ಕುರ್ಚಿಯ ವರ್ಚಸ್ಸಿಗೆ ಆತುಕುಳಿತವರಲ್ಲ. ಜನಮೆಚ್ಚಿಸುವ ಮಾತನಾಡಲಿಲ್ಲ. ಸುಳ್ಳುಗಳನ್ನು ಹೇಳಲಿಲ್ಲ. ಪ್ರಪಂಚವೇ ಗೌರವಿಸುವ ಪ್ರಧಾನಿಯಾಗಿದ್ದರು. ಅವರು ಕೂಡ ಕೆಲವೊಂದು ವಿಷಯಗಳಿಗೆ ಪ್ರತಿಕ್ರಿಯಿಸದೆ ಮೌನವಾಗಿದ್ದರು; ಅವರೆದುರು ಬಾಯಿಗೆ ಬಂದಂತೆ ಮೋಹಕವಾಗಿ ಮಾತನಾಡುವ ಮೋದಿಯನ್ನು ಪ್ರಧಾನಿಯಾಗಿ ಮೆರೆಸಲಾಯ್ತು. ಏನೇನೋ ಕಾರಣಗಳಿಂದ ದೇಶ ಆರ್ಥಿಕವಾಗಿ ಹಳ್ಳ ಹಿಡಿಯುವಾಗಲೂ ಮನಮೋಹನ್ ಸಿಂಗ್ ಗಟ್ಟಿಯಾಗಿ ಮಾತನಾಡಲಿಲ್ಲ. ಸಂಘಟಿತ ಲೂಟಿ ಎಂದು ಗೊಣಗಿಕೊಂಡರು. ಆದರೆ ಮೋದಿಯವರಂತೂ, ಕೆಲವು ಭೀಕರ ಘಟನೆಗಳಿಗೂ ಪ್ರತಿಕ್ರಿಯಿಸಲಿಲ್ಲ; ಭಾರತವನ್ನೇ ಅಲ್ಲಾಡಿಸಿದ ಕರಾಳ ಕೃಷಿ ಕಾಯ್ದೆ ವಿರೋಧೀ ಚಳವಳಿಗೆ ಪ್ರತಿಕ್ರಿಯಿಸಲಿಲ್ಲ. 750 ಜನ ರೈತರು ಸತ್ತಾಗಲೂ ತುಟಿ ಬಿಚ್ಚಲಿಲ್ಲ. ಈಗಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯರಾಗಿರುವ ಕುಸ್ತಿಪಟುಗಳ ಮೇಲೆ ಬೆಚ್ಚುವಂತಹ ಲೈಂಗಿಕ ಹಗರಣ ನಡೆದಿದ್ದರೂ, ಪ್ರಧಾನಿ ಆರೋಪಿಯ ಜೊತೆಯಲ್ಲೇ ಮೌನವಾಗಿ ನಿಂತಿರುವುದಲ್ಲದೆ, ಬ್ರಿಜ್ ಭೂಷಣ್ ಶಕ್ತಿ ಪ್ರದರ್ಶನದ ಬಗ್ಗೆ ಕೂಡ ಮೌನವಾಗಿದ್ದಾರೆ. ಸೂಕ್ಷ್ಮವಾಗಿ ನೋಡಿದರೆ ಬಿಜೆಪಿಗಳು ಮಾಡುವ ಅಪರಾಧಗಳ ಆರೋಪದ ವಿಷಯದಲ್ಲಿ ಈವರೆಗೆ ಬಾಯಿ ಬಿಡದೆ ಮೋದಿ ಮೌನವಾಗಿದ್ದಾರಲ್ಲಾ, ಥೂತ್ತೇರಿ.

****

ಮಂಡ್ಯದ ಕರ್ನಾಟಕ ಸಂಘದ ಜಯಪ್ರಕಾಶ್ ಗೌಡರು ಹೊಸದಾಗಿ ಗೆದ್ದು ಬಂದ ಶಾಸಕ ಮಂತ್ರಿಗಳಿಗೆ ಅಭಿನಂದನಾ ಸಭೆ ಮಾಡಿದರು. ಪಿ.ಇ.ಎಸ್ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಶಂಕರೇಗೌಡರು ಮಾತನಾಡುತ್ತ ರಸ್ತೆಗಳು ನಮ್ಮ ಕಾಲ ಕೆಳಗೆ ಇರಬೇಕು, ಅದುಬಿಟ್ಟು ತಲೆಯಮೇಲೆ ಇರಬಾರದು, ಮಂಡ್ಯದಲ್ಲಿ ಹೀಗಾಗಿದೆ ಎಂದರು. ಇದಕ್ಕುತ್ತರವಾಗಿ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ಶಂಕರೇಗೌಡರು ಅಭಿವೃದ್ಧಿ ಕೆಲಸಗಳನ್ನ ಟೀಕಿಸದೆ ಮೆಚ್ಚಿಕೊಳ್ಳಬೇಕೆಂದರು. ಈ ನರೇಂದ್ರ ಸ್ವಾಮಿಗೆ ಸ್ವಲ್ಪ ತಿಳಿವಳಿಕೆ ಹೇಳುವುದಾದರೆ, ಅಭಿವೃದ್ಧಿ ಎಂದರೆ ಏನು? ಅದು ಯಾರಿಗೆ ಬೇಕಾಗಿದೆ? ಅದರಿಂದ ಆಗುತ್ತಿರುವ ಅನಾಹುತಗಳೇನು? ಎಂಬುದೇ ಅವರಿಗೆ ತಿಳಿದಿಲ್ಲವಲ್ಲ, ಥೂತ್ತೇರಿ.

****

ಮಂಡ್ಯವನ್ನ ಸೀಳಿಕೊಂಡು ಹೋಗಿರುವ ಬೈಪಾಸ್ ರಸ್ತೆಯಲ್ಲಿ, ಬೆಂಗಳೂರು ಮೈಸೂರ ನಡುವೆ ಕೇವಲ ಒಂದೂವರೆ ಗಂಟೆ ಜರ್ನಿಯಾಗಿದೆ. ಆಯ್ತು ಬೇಗ ಮೈಸೂರಿಗೆ ಹೋಗಿ ನೀವು ಮಾಡುವುದೇನು, ಅದೇನು ವಾಣಿಜ್ಯ ನಗರಿಯೇ ಅಥವಾ ಕೈಗಾರಿಕೆಯ ಬೀಡೆ ಇಲ್ಲ ಬಾಂಬೆ ತರದ ನಗರವೇ? ಬೆಂಗಳೂರಿಂದ ವೇಗದಲ್ಲಿ ಮೈಸೂರು ತಲುಪುವ ತವಕದಲ್ಲಿ ಹೋದವರ ಪೈಕಿ ಈಗಾಗಲೇ ನೂರಾರು ಜನ ಅಂತರ್ಧಾನವಾಗಿದ್ದಾರೆ! ಬೆಂಗಳೂರು ಮೈಸೂರು ನಡುವೆಯಿದ್ದ ಹೋಟೆಲುಗಳು ಡಲ್ಲಾಗಿವೆ. ಕೆಲವೆಡೆ ಇರುವ ರಸ್ತೆಯನ್ನ ಅಗಲಮಾಡಿ ನಗರಗಳು ಸಿಕ್ಕಾಗ ಹತ್ತು ಇಪ್ಪತ್ತು ಕಿ.ಮೀ ವೇಗ ನಿಯಮ ಮಾಡಿದ್ದಾರೆ. ಈ ಐತಿಹಾಸಿಕ ರಸ್ತೆ ಎಲ್ಲ ಊರುಗಳಿಗೂ ಒಂದು ’ಶೋಭೆ’ ತಂದಿರುವುದು, ನಮ್ಮ ಅಭಿವೃದ್ಧಿ ಜನಜೀವನವನ್ನು ಅಸಹನೀಯಗೊಳಿಸುವ ಮತ್ತು ಪರಿಸರನಾಶದ ಹಾಗೂ ಸಂಸ್ಕೃತಿ ನಾಶದ ಪ್ರತೀಕವಾಗಿ ಎಂಬರ್ಥದಲ್ಲಿ ಮಾತನಾಡಿದ ಶಂಕರೇಗೌಡರ ಇಂಗಿತ ನರೇಂದ್ರಸ್ವಾಮಿಯವರಿಗೆ ಅರ್ಥವಾಗಬೇಕಾದರೆ, ಶಂಕರೇಗೌಡರಿಂದ ಈ ಮೊದಲೇ ಪಾಠ ಹೇಳಿಸಿಕೊಳ್ಳಬೇಕಿತ್ತು. ಅಭಿವೃದ್ಧಿ ಕೆಲಸಗಳ ಕಮಿಶನ್ ಪಡೆವ ರಾಜಕಾರಣಿಗಳೆಲ್ಲಾ ಹೀಗೇ ಮಾತನಾಡುವುದಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

****

ನಮ್ಮ ನಡುವಿನ ಜಗದ್ಗುರುವೊಬ್ಬರು ಸಿದ್ದರಾಮಯ್ಯನವರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಬಿಟ್ಟಿ ಸಲಹೆ ಕೊಟ್ಟಿದ್ದಾರಲ್ಲಾ. ಬುದ್ದಿಯವರು ಕೊಟ್ಟ ಬೋಧನೆ ಪ್ರಕಾರ ಜನರಿಗೆ ಬಿಟ್ಟಿ ಸವಲತ್ತಿಗಿಂತ ದುಡಿದು ತಿನ್ನುವ ಕಾಯಕ ಜೀವನ ರೂಪಿಸಬೇಕಿತ್ತು. ಈಗಿನ ಕಾರ್ಯಕ್ರಮಗಳಿಂದ ಜನ ಸೋಮಾರಿಗಳಾಗಿ ಕಾಯಕ ಜೀವನದಿಂದ ವಿಮುಖರಾಗುತ್ತಾರೆ ಎಂದಿದ್ದಾರೆ. ಸುವರ್ಣಾಕ್ಷರದಲ್ಲಿ ಬರೆದು ರಸ್ತೆ ಪಕ್ಕದಲ್ಲಿ ಅಂಟಿಸಬಹುದಾದ ಈ ಉಪದೇಶಾಮೃತ ನೀಡಿದೆ ಬುದ್ದಿಯವರು ಈವರೆಗೂ ಬದುಕಿದ್ದುದ್ದು ಮಠದ ಬಿಟ್ಟಿ ಸವಲತ್ತಿನಿಂದ ಅಲ್ಲವೆ? ಬಿಟ್ಟಿ ಸವಲತ್ತನ್ನು ಅನುಭವಿಸಿ ಪೂಜ್ಯರು ಸೋಮಾರಿಗಳಾದುದನ್ನ ನಾವಂತೂ ನೋಡಿಲ್ಲ. ಸಮಯಕ್ಕೆ ಸರಿಯಾಗಿ ಪ್ರಸಾದ ಸ್ವೀಕರಿಸಿ ಬೋಧನೆಗೆ ತಯಾರಾಗುವ ಜಗದ್ಗುರುಗಳು ಜನರಿಗೆ ದುಡಿದು ತಿನ್ನುವ ಕೆಲಸಗಳನ್ನ ರೂಪಿಸಿ ಅದನ್ನ ಸರಕಾರದ ಗಮನಕ್ಕೆ ತರಬೇಕಿತ್ತು. ಅದು ಈವರೆಗೆ ಆಗಿಲ್ಲ. ಅವರೂ ಕೂಡ ಸರಕಾರದ ಅನುದಾನಕ್ಕೆ ಕಾಯುವಂತಾಗಿದ್ದಾರೆ. ಈಗ ಸಿದ್ದರಾಮಯ್ಯನವರ ಸರಕಾರ ಮಾಡಬೇಕಾದ ತುರ್ತಿನ ಕೆಲಸ ಯಾವುದೆಂದರೆ ಈ ಮಠಗಳು ಅನಾಯಾಸವಾಗಿ ಪಡೆಯುತ್ತಿರುವ ಅನುದಾನದ ಭಿಕ್ಷೆಯನ್ನು ನಿಲ್ಲಿಸುವುದು. ಜಗದ್ಗುರುಗಳೂ ರಾಜಕಾರಣಿಗಳಾಗಿ ಪರಿವರ್ತನೆಯಾಗಿರುವ ಈ ಸಮಯದಲ್ಲಿ ಅದು ಅದಷ್ಟು ಸುಲಭವಲ್ಲವಂತಲ್ಲಾ, ಥೂತ್ತೇರಿ.

****

ಇದೇ ಹನ್ನೊಂದನೇ ತಾರೀಕಿನಿಂದ ಸರಕಾರ ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಎಲ್ಲೆಂದರಲ್ಲಿ ಹೋಗಿ ಬರುವ ಉಚಿತ ಸವಲತ್ತನ್ನು ಕರುಣಿಸಿದೆಯಲ್ಲಾ. ನಮ್ಮ ಪುರಾಣ ಸದೃಶ ಧರ್ಮದಲ್ಲಿ ಹೆಣ್ಣನ್ನು ಎಂದೂ ಸಹಜವಾಗಿ ಮತ್ತು ಸಮಾನವಾಗಿ ಕಂಡಿಲ್ಲ. ಹೀಗೆ ಕಾಣದವರ ಹೊಟ್ಟೆಗೆ ಸುಣ್ಣ ಹುಯ್ದಂತೆ ಮಾಡುವ ಈ ಕಾರ್ಯಕ್ರಮ ಸಹಜವಾಗಿಯೇ ವಿಕೃತ ಮನಸ್ಸಿನವರಿಗೆ ಶಾನೆ ಸುದ್ದಿಯಾಗಿದೆಯಂತಲ್ಲಾ. ಮಹಿಳೆಯರಾಗಿ ಮಹಿಳಾ ಸವಲತ್ತನ್ನು ಟೀಕಿಸುವ ಕಮಲ ಪ್ರಿಯ ಮಹಿಳೆಯರು ಸಿದ್ದು ಸರಕಾರದ ವಿರುದ್ಧ ಸ್ವಾಭಿಮಾನ ಮೆರೆದು ಟಿಕೆಟ್ ತೆಗೆದುಕೊಂಡರೆ ಎಷ್ಟು ಚೆಂದ ಅಲ್ಲವೆ. ಇಂಥವರ ಬಾಯಿಗಳಿಂದಲೇ ಬಂದ ಮಾತುಗಳನ್ನು ದಾಖಲಿಸುವುದಾದರೆ, ’ಇನ್ನು ಹೆಂಗಸರು ಎಲ್ಲೆಂದರಲ್ಲಿ ತಿರುಗುತ್ತಾರೆ, ಮನೆಯನ್ನು ಸೇರುವುದಿಲ್ಲ, ಗಂಡನ ಮಾತು ಕೇಳುವುದಿಲ್ಲ’ ಎನ್ನತೊಡಗಿದ್ದಾರಲ್ಲ. ಸರಿಯಾಗಿ ಕಣ್ಣುಬಿಟ್ಟು ನೋಡಿದರೆ ಸಾಮಾನ್ಯವಾಗಿ ಯಾವ ಹೆಂಗಸೂ ವಿನಾಕಾರಣ ಎಲ್ಲೂ ಸುತ್ತುವುದಿಲ್ಲ. ಈ ಸಮಾಜ ಆಧಾರಸ್ಥಂಭಗಳೆಂದುಕೊಂಡು ಕುಟುಂಬವನ್ನು ನಿರ್ವಹಿಸುವ ಮಹಿಳೆ, ಮುಫತ್ತಾಗೆ ಪಡೆದ ಸವಲತ್ತು ಯಾವುದೆಂದರೆ ಈವರೆಗೆ ಗಂಡಂದಿರನ್ನು ತಿರುಗಲುಬಿಟ್ಟು ಗಾಣದ ಎತ್ತಿನಂತೆ ಮನೆ ನಿರ್ವಹಿಸಿದ್ದಷ್ಟೇ! ಇದೆಲ್ಲಕ್ಕಿಂತ ಬಸ್ಸಿನಲ್ಲಿ ಹೋಗುವ, ಅದೂ ಮೂರು ಬಸ್ಸು ಬದಲಾಯಿಸಿ ಕೂಲಿ ಮಾಡಿ ಬದುಕುತ್ತಿದ್ದ ಬೆಂಗಳೂರಿನ ಮಹಿಳೆಯರ ಕೂಲಿ ಹಣ ಹಾಗೇ ಉಳಿಯುತ್ತದೆ. ಆ ಹಣದಲ್ಲಿ ಕುಟುಂಬವನ್ನು ಕಟ್ಟುತ್ತಾಳೆ. ಎಲ್ಲಿಯಾದರೂ ಹೋಗಿ ಬರಲು ಗಂಡನ ಬಳಿ ಬಸ್ ಚಾರ್ಜಿಗಾಗಿ ಬೇಡುತ್ತಿದ್ದ ಮಹಿಳೆ ಇನ್ನು ಮುಂದೆ ಈ ತನ್ನ ದೈನೇಸಿ ಬದುಕನ್ನು ಬದಲಿಸಿಕೊಳ್ಳುತ್ತಾಳೆ. ಆದರೆ, ಈಗ ನೀಡಿರುವ ಈ ಸವಲತ್ತು, ಪುರೋಹಿತಶಾಹಿ ಭಟ್ಟರುಗಳಿಗೆ ಸಂಭ್ರಮ ಮತ್ತು ಆಶ್ಚರ್ಯವನ್ನು ಹುಟ್ಟಿಸಿದೆಯಂತಲ್ಲಾ. ಮುಂದೆ ಪುಣ್ಯಕ್ಷೇತ್ರಗಳ ಹುಂಡಿ, ಮಂಗಳಾರತಿ ತಟ್ಟೆ ತುಂಬಲಿವೆಯಂತಲ್ಲಾ. ಹಾಗಾಗಿ ಅವರೆಲ್ಲಾ ಸಿದ್ದರಾಮಯ್ಯನವರ ಈ ಕಾರ್ಯಕ್ರಮವನ್ನು ಕೊಂಡಾಡತೊಡಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...