Homeಅಂಕಣಗಳುಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

ಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

- Advertisement -
- Advertisement -

ನಮ್ಮ ಜನಪ್ರಿಯ ರಾಜಕಾರಣಿಯಾದ ಎಲ್.ಆರ್ ಶಿವರಾಮೇಗೌಡರು ಮಾದೇಗೌಡರನ್ನು ಕಟುವಾಗಿ ಟೀಕಿಸಿ ಆ ಕಾರಣವಾಗಿ ಕುಮಾರಣ್ಣನವರಿಂದ ನಿಂತ ನಿಲುವಿನಲ್ಲೇ ಪಾರ್ಟಿಯಿಂದ ವಜಾ ಆದ ಘಟನೆ ಈಗ ಹಳೆಯದು. ಆದರೇನು ಶಿವರಾಮೇಗೌಡರು ಇಂತಹ ಪನಿಶ್ಮೆಂಟಿಗೆಲ್ಲಾ ಹೆದರುವವರಲ್ಲ. ಅವರು ಈ ಹಿಂದೆ ಗೆದ್ದಿರುವುದೇ ಪಕ್ಷೇತರರಾಗಿ; ’ಈಗಲೂ ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಲ್ಲುತ್ತೇನೆ. ಚಲುವರಾಯಸ್ವಾಮಿ ಮತ್ತು ಸುರೇಶ್‌ಗೌಡನ ಎದುರು ನನ್ನನ್ನು ಮತದಾರರು ಗೆಲ್ಲಿಸದಿದ್ದರೆ ಕೂಡಲೇ ಶಿರಶ್ಚೇದನ ಮಾಡಿಕೊಳ್ಳುತ್ತೆನೆಂದು’ ಹೆದರಿಸಿದ್ದಾರಲ್ಲಾ! ಸ್ವಾತಂತ್ರ್ಯ ಪಡೆಯುವುದಕ್ಕೇ ಹಲವು ವರ್ಷಗಳ ಮೊದಲು ಈ ದೇಶದಲ್ಲಿ ಸತಿಸಹಗಮನ ನಡಯುತ್ತಿತ್ತು. ಬಂಗಾಳದಲ್ಲಿಯೇ ವರ್ಷಕ್ಕೆ ಎಂಬತ್ತರಿಂದ ನೂರು ಜನ ಮಹಿಳೆಯರನ್ನು ಬೆಂಕಿಗೆ ದೂಡಲಾಗುತ್ತಿತ್ತು. ಜನ ಈ ದೃಶ್ಯವನ್ನು ಪದೇಪದೇ ನೋಡಿ ಮಾನವೀಯತೆಯನ್ನೆ ಕಳದುಕೊಂಡು ಮರುಗಟ್ಟಿಹೋಗಿದ್ದರು. ಆದುದರಿಂದ ಸತಿಸಹಗಮನ ಪದ್ಧತಿಯನ್ನು ನೋಡಲು ಯಾವಾಗಲೂ ಜಮಾಯಿಸುತ್ತಿದ್ದರು. ಅಂತದೇ ಮನಸ್ಥಿತಿಯ ಜನ ಈಗ ಹೆಚ್ಚಾಗಿರುವುದರಿಂದ, ದೇವೇಗೌಡರು ತಾವು ಸೋತಾಗ ಹಾಸನ ಜಿಲ್ಲೆಯನ್ನೇ ಬಹಿಷ್ಕರಿಸಿದಂತೆ, ಶಿವರಾಮೇಗೌಡರು ನಾಗಮಂಗಲದ ಕಡೆ ತಿರುಗಿ ನೋಡುವುದಿಲ್ಲ ಎಂದು ಶಪಥ ಬದಲಾಯಿಸಿಕೊಂಡರೆ ಒಳ್ಳೆಯದಲ್ಲವೆ, ಥೂತ್ತೇರಿ.

*****

ಈ ನೆಲದಲ್ಲಿ ಸದ್ಯಕ್ಕೆ ಎಂತಹ ವ್ಯಕ್ತಿಗಳಿಗೂ ಅಭಿಮಾನಿಗಳಿದ್ದಾರೆ. ಹೀಗಿರುವಾಗ ಗೌರಿಗದ್ದೆಯ ಅವಧೂತನಿಗೆ ಸಾವಿರಾರು ಮಂದಿ ಇರುವುದು ಅಚ್ಚರಿಯಲ್ಲ. ಈ ವಯಸ್ಸಿನಲ್ಲಿ ಇನ್ನೇನಾಗಬೇಕು ಎಂದು ಚಿಂತಿಸಬೇಕಾದ ದೇವೇಗೌಡರಿಂದ ಹಿಡಿದು ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಿ ಬಿಜೆಪಿಗಳ ಇ.ಡೀ ಈಡಿಯಟ್‌ಗಳಿಗೆ ತಕ್ಕ ಉತ್ತರ ಕೊಡಲು ಕಾದಿರುವ ಡಿ.ಕೆ ಶಿವಕುಮಾರ್ ಜೊತೆಗೆ, ಶಿವಕುಮಾರ್ ಅಭಿಮಾನಿಗಳೂ ಕೂಡ ಅವಧೂತನ ಅಭಿಮಾನಿಗಳಾಗಿರುವುದು ಅಚ್ಚರಿಯಲ್ಲ. ಕಳೆದ ಶತಮಾನದಲ್ಲಿ ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದು ಕರೆಕೊಟ್ಟು ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಋಷಿಕವಿ ಕುವೆಂಪುರವರ ಸಂಬಂಧಿಗಳು ನಾವೆಂದು ಕಿರೀಟ ಧರಿಸಿ ಮೆರೆಯುತ್ತಿದ್ದ ಮೂರ್ಖರೆಲ್ಲಾ ಗೌರಿಗದ್ದೆ ಅವಧೂತನ ಪಾದಕ್ಕೆ ಬಿದ್ದು ಕುವೆಂಪು ಹೆಸರಿಗೆ ಮಸಿ ಬಳಿದಿವೆಯಂತಲ್ಲಾ. ಹಾಗೆ ನೋಡಿದರೆ ಕುವೆಂಪುರವರ ವಿಚಾರಧಾರೆಗೆ, ಮಂತ್ರ ಮಾಂಗಲ್ಯದ ಕಲ್ಪನೆಗೆ ಈ ಮಲೆನಾಡಿಗರು ತಿಲಾಂಜಲಿಯಿತ್ತು ಬಹಳ ವರ್ಷಗಳಾಗಿವೆ. ಆದ್ದರಿಂದ ಈ ಮಂದಮತಿಗಳು ನಾವು ಕುವೆಂಪು ಪ್ರದೇಶದವರು ಅವರ ಸಂಬಂಧಿಗಳು ಎಂದು ಹೇಳಿಕೊಳ್ಳುವುದನ್ನ ನಿಲ್ಲಿಸಿದರೆ ಅದೇ ಕುವೆಂಪುರವರಿಗೆ ಕೊಡುವ ಗೌರವ ಎಂದು ಕುವೆಂಪುರವರನ್ನು ನಿಜವಾಗಿ ಅನುಸರಿಸುವವರ ಸಲಹೆಯಾಗಿದೆಯಂತಲ್ಲಾ, ಥೂತ್ತೇರಿ.

*****

ಶ್ರೇಷ್ಠ ಸಂವಿಧಾನ ಪಡೆದಿರುವ ನಮ್ಮ ವ್ಯವಸ್ಥೆಯಲ್ಲಿ ಕಾನೂನಿಗಿಂತ ಧರ್ಮವೇ ದೊಡ್ಡದೆಂದು ಪ್ರತಿಪಾದಿಸಿದ ಚಿತ್ರದುರ್ಗ ಪ್ರದೇಶದ ಜಗದ್ಗುರುವೊಬ್ಬರು ಅದನ್ನೇ ಅಧಿಕೃತಗೊಳಿಸುತ್ತ ಹೊರಟಿದ್ದಾರಲ್ಲಾ. ಅದೂ ಕೂಡ ತಾನೇ ನಡೆಸುತ್ತಿರುವ ಅನಧಿಕೃತ ನ್ಯಾಯಾಲಯದ ಉದಾಹರಣೆಗಳನ್ನ ಉದಾಹರಿಸುತ್ತ! ಅದಷ್ಟೇ ಅಲ್ಲ ಅವರ ಮಾತನ್ನು ಅಲ್ಲಗಳೆದವರನ್ನು ನಿಂದಿಸಲು ಭಕ್ತಾದಿಗಳನ್ನ ಪ್ರಚೋದಿಸುತ್ತ. ಇಲ್ಲಿ ಪೊಲೀಸ್ ಠಾಣೆ, ನ್ಯಾಯಾಲಯ, ವಕೀಲರ ಅಗತ್ಯವೇ ಇಲ್ಲ; ಬದಲಿಗೆ ಧರ್ಮದ ಮಾನದಂಡದಿಂದಲೇ ಜಾದೂ ಮಾಡಬಹುದು. ಇರಲಿ ಗುರುಗಳು ಕಾನೂನಿಗೆ ತಿಲಾಂಜಲಿ ಇಟ್ಟ ಫಲವಾಗಿಯೇ ಏನೋ ತರಳಬಾಳು ಕೇಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರವ ಆರೋಪದ ಮೇಲೆ ಬಿಬಿಎಂಪಿ ಆಯುಕ್ತರ ವಿರುದ್ದ ಲೋಕಾಯುಕ್ತಕ್ಕೆ ದೂರು ಹೋಗಿದೆ. ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ ತರಳಬಾಳು ಮಠವು ಆರ್.ಟಿ ನಗರದಲ್ಲಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಜಿ.ಬಿ ವೆಂಕಟೇಶ್‌ರವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮುಂದೆ ಬುದ್ಧಿಯವರು ಪ್ರತಿಪಾದಿಸಿದ ಧರ್ಮದ ಸೆಕ್ಷೆನ್‌ಗಳನ್ನೇ ಬಳಸಿ ಹೋರಾಡುತ್ತಾರೋ ಅಥವಾ ಕಾನೂನು ಸಮರಕ್ಕೆ ತಲೆಬಾಗುತ್ತಾರೋ ಎಂಬುದು ಕುತೂಹಲಕ್ಕೆಡೆಮಾಡಿದೆಯಲ್ಲಾ, ಥೂತ್ತೇರಿ.

*****

ದೆಹಲಿಯಿಂದ ಇಲ್ಲಿಯವರೆಗೆ ಈ ದೇಶದ ವ್ಯವಸ್ಥೆಯೇ ಹಾಳಾಗಿಹೋಗಿದೆ. ಆದರೂ ಬಿಜೆಪಿಗಳು ಮತ್ತೆ ಚುನಾವಣೆಯಲ್ಲಿ ಗೆದ್ದುಬರುವ ಆತ್ಮವಿಶ್ವಾಸಕ್ಕೆ ಕಾರಣವೇನು ಎಂಬುದಕ್ಕೆ ಸಾಕ್ಷಾಧಾರವಾಗಿ ಬೆಂಗಳೂರಲ್ಲಿ ನಡೆದಿರುವ ಮತಪೆಟ್ಟಿಗೆ ಕನ್ನದ ಹಗರಣ ಹೊರಬಿದ್ದಿದೆಯಲ್ಲಾ. ಯಾವುದೇ ಸರ್ಕಾರ ಬರಲಿ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಸರಕಾರ ರಚನೆ ಮಾಡುವ ಸಂಚಿನ ಭರವಸೆಯಿಂದ ಬೀಗುತ್ತಿರುವ ಬಿಜೆಪಿಗಳ ತಮಗೆ ಮತಹಾಕದವರನ್ನು ಮತದಾರರ ಪಟ್ಟಿಯಿಂದಲೇ ಕಿತ್ತು ಬಿಸಾಡುವ ಷಡ್ಯಂತ್ರ ರೂಪಿಸಿದ್ದಾರಂತಲ್ಲಾ. ಇಂತಹ ಯಾವ ಸಂಚೂ ಇಲ್ಲದೆ ಈ ದೇಶ ಇರುವವರೆಗೂ ನಾವು ಅಧಿಕಾರದಲ್ಲಿರುತ್ತೇವೆಂದು ಭಾವಿಸಿ ಆರಾಮವಾಗಿದ್ದ ಕಾಂಗೈಗಳಿಗೆ ಬಿಜೆಪಿ ಸಂಚಿಗೆ ಪ್ರತಿತಂತ್ರವೇ ಹೊಳೆಯದೆ ಪ್ರತಿಭಟನೆಗೆ ಸ್ಪಷ್ಟ ಕಾರಣವೂ ಹೊಳೆಯದೆ ಕಂಗಾಲಾಗಿ ಕೂತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...