Homeಅಂಕಣಗಳುಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

ಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

- Advertisement -
- Advertisement -

ನಮ್ಮ ಜನಪ್ರಿಯ ರಾಜಕಾರಣಿಯಾದ ಎಲ್.ಆರ್ ಶಿವರಾಮೇಗೌಡರು ಮಾದೇಗೌಡರನ್ನು ಕಟುವಾಗಿ ಟೀಕಿಸಿ ಆ ಕಾರಣವಾಗಿ ಕುಮಾರಣ್ಣನವರಿಂದ ನಿಂತ ನಿಲುವಿನಲ್ಲೇ ಪಾರ್ಟಿಯಿಂದ ವಜಾ ಆದ ಘಟನೆ ಈಗ ಹಳೆಯದು. ಆದರೇನು ಶಿವರಾಮೇಗೌಡರು ಇಂತಹ ಪನಿಶ್ಮೆಂಟಿಗೆಲ್ಲಾ ಹೆದರುವವರಲ್ಲ. ಅವರು ಈ ಹಿಂದೆ ಗೆದ್ದಿರುವುದೇ ಪಕ್ಷೇತರರಾಗಿ; ’ಈಗಲೂ ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಲ್ಲುತ್ತೇನೆ. ಚಲುವರಾಯಸ್ವಾಮಿ ಮತ್ತು ಸುರೇಶ್‌ಗೌಡನ ಎದುರು ನನ್ನನ್ನು ಮತದಾರರು ಗೆಲ್ಲಿಸದಿದ್ದರೆ ಕೂಡಲೇ ಶಿರಶ್ಚೇದನ ಮಾಡಿಕೊಳ್ಳುತ್ತೆನೆಂದು’ ಹೆದರಿಸಿದ್ದಾರಲ್ಲಾ! ಸ್ವಾತಂತ್ರ್ಯ ಪಡೆಯುವುದಕ್ಕೇ ಹಲವು ವರ್ಷಗಳ ಮೊದಲು ಈ ದೇಶದಲ್ಲಿ ಸತಿಸಹಗಮನ ನಡಯುತ್ತಿತ್ತು. ಬಂಗಾಳದಲ್ಲಿಯೇ ವರ್ಷಕ್ಕೆ ಎಂಬತ್ತರಿಂದ ನೂರು ಜನ ಮಹಿಳೆಯರನ್ನು ಬೆಂಕಿಗೆ ದೂಡಲಾಗುತ್ತಿತ್ತು. ಜನ ಈ ದೃಶ್ಯವನ್ನು ಪದೇಪದೇ ನೋಡಿ ಮಾನವೀಯತೆಯನ್ನೆ ಕಳದುಕೊಂಡು ಮರುಗಟ್ಟಿಹೋಗಿದ್ದರು. ಆದುದರಿಂದ ಸತಿಸಹಗಮನ ಪದ್ಧತಿಯನ್ನು ನೋಡಲು ಯಾವಾಗಲೂ ಜಮಾಯಿಸುತ್ತಿದ್ದರು. ಅಂತದೇ ಮನಸ್ಥಿತಿಯ ಜನ ಈಗ ಹೆಚ್ಚಾಗಿರುವುದರಿಂದ, ದೇವೇಗೌಡರು ತಾವು ಸೋತಾಗ ಹಾಸನ ಜಿಲ್ಲೆಯನ್ನೇ ಬಹಿಷ್ಕರಿಸಿದಂತೆ, ಶಿವರಾಮೇಗೌಡರು ನಾಗಮಂಗಲದ ಕಡೆ ತಿರುಗಿ ನೋಡುವುದಿಲ್ಲ ಎಂದು ಶಪಥ ಬದಲಾಯಿಸಿಕೊಂಡರೆ ಒಳ್ಳೆಯದಲ್ಲವೆ, ಥೂತ್ತೇರಿ.

*****

ಈ ನೆಲದಲ್ಲಿ ಸದ್ಯಕ್ಕೆ ಎಂತಹ ವ್ಯಕ್ತಿಗಳಿಗೂ ಅಭಿಮಾನಿಗಳಿದ್ದಾರೆ. ಹೀಗಿರುವಾಗ ಗೌರಿಗದ್ದೆಯ ಅವಧೂತನಿಗೆ ಸಾವಿರಾರು ಮಂದಿ ಇರುವುದು ಅಚ್ಚರಿಯಲ್ಲ. ಈ ವಯಸ್ಸಿನಲ್ಲಿ ಇನ್ನೇನಾಗಬೇಕು ಎಂದು ಚಿಂತಿಸಬೇಕಾದ ದೇವೇಗೌಡರಿಂದ ಹಿಡಿದು ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಿ ಬಿಜೆಪಿಗಳ ಇ.ಡೀ ಈಡಿಯಟ್‌ಗಳಿಗೆ ತಕ್ಕ ಉತ್ತರ ಕೊಡಲು ಕಾದಿರುವ ಡಿ.ಕೆ ಶಿವಕುಮಾರ್ ಜೊತೆಗೆ, ಶಿವಕುಮಾರ್ ಅಭಿಮಾನಿಗಳೂ ಕೂಡ ಅವಧೂತನ ಅಭಿಮಾನಿಗಳಾಗಿರುವುದು ಅಚ್ಚರಿಯಲ್ಲ. ಕಳೆದ ಶತಮಾನದಲ್ಲಿ ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದು ಕರೆಕೊಟ್ಟು ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಋಷಿಕವಿ ಕುವೆಂಪುರವರ ಸಂಬಂಧಿಗಳು ನಾವೆಂದು ಕಿರೀಟ ಧರಿಸಿ ಮೆರೆಯುತ್ತಿದ್ದ ಮೂರ್ಖರೆಲ್ಲಾ ಗೌರಿಗದ್ದೆ ಅವಧೂತನ ಪಾದಕ್ಕೆ ಬಿದ್ದು ಕುವೆಂಪು ಹೆಸರಿಗೆ ಮಸಿ ಬಳಿದಿವೆಯಂತಲ್ಲಾ. ಹಾಗೆ ನೋಡಿದರೆ ಕುವೆಂಪುರವರ ವಿಚಾರಧಾರೆಗೆ, ಮಂತ್ರ ಮಾಂಗಲ್ಯದ ಕಲ್ಪನೆಗೆ ಈ ಮಲೆನಾಡಿಗರು ತಿಲಾಂಜಲಿಯಿತ್ತು ಬಹಳ ವರ್ಷಗಳಾಗಿವೆ. ಆದ್ದರಿಂದ ಈ ಮಂದಮತಿಗಳು ನಾವು ಕುವೆಂಪು ಪ್ರದೇಶದವರು ಅವರ ಸಂಬಂಧಿಗಳು ಎಂದು ಹೇಳಿಕೊಳ್ಳುವುದನ್ನ ನಿಲ್ಲಿಸಿದರೆ ಅದೇ ಕುವೆಂಪುರವರಿಗೆ ಕೊಡುವ ಗೌರವ ಎಂದು ಕುವೆಂಪುರವರನ್ನು ನಿಜವಾಗಿ ಅನುಸರಿಸುವವರ ಸಲಹೆಯಾಗಿದೆಯಂತಲ್ಲಾ, ಥೂತ್ತೇರಿ.

*****

ಶ್ರೇಷ್ಠ ಸಂವಿಧಾನ ಪಡೆದಿರುವ ನಮ್ಮ ವ್ಯವಸ್ಥೆಯಲ್ಲಿ ಕಾನೂನಿಗಿಂತ ಧರ್ಮವೇ ದೊಡ್ಡದೆಂದು ಪ್ರತಿಪಾದಿಸಿದ ಚಿತ್ರದುರ್ಗ ಪ್ರದೇಶದ ಜಗದ್ಗುರುವೊಬ್ಬರು ಅದನ್ನೇ ಅಧಿಕೃತಗೊಳಿಸುತ್ತ ಹೊರಟಿದ್ದಾರಲ್ಲಾ. ಅದೂ ಕೂಡ ತಾನೇ ನಡೆಸುತ್ತಿರುವ ಅನಧಿಕೃತ ನ್ಯಾಯಾಲಯದ ಉದಾಹರಣೆಗಳನ್ನ ಉದಾಹರಿಸುತ್ತ! ಅದಷ್ಟೇ ಅಲ್ಲ ಅವರ ಮಾತನ್ನು ಅಲ್ಲಗಳೆದವರನ್ನು ನಿಂದಿಸಲು ಭಕ್ತಾದಿಗಳನ್ನ ಪ್ರಚೋದಿಸುತ್ತ. ಇಲ್ಲಿ ಪೊಲೀಸ್ ಠಾಣೆ, ನ್ಯಾಯಾಲಯ, ವಕೀಲರ ಅಗತ್ಯವೇ ಇಲ್ಲ; ಬದಲಿಗೆ ಧರ್ಮದ ಮಾನದಂಡದಿಂದಲೇ ಜಾದೂ ಮಾಡಬಹುದು. ಇರಲಿ ಗುರುಗಳು ಕಾನೂನಿಗೆ ತಿಲಾಂಜಲಿ ಇಟ್ಟ ಫಲವಾಗಿಯೇ ಏನೋ ತರಳಬಾಳು ಕೇಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರವ ಆರೋಪದ ಮೇಲೆ ಬಿಬಿಎಂಪಿ ಆಯುಕ್ತರ ವಿರುದ್ದ ಲೋಕಾಯುಕ್ತಕ್ಕೆ ದೂರು ಹೋಗಿದೆ. ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ ತರಳಬಾಳು ಮಠವು ಆರ್.ಟಿ ನಗರದಲ್ಲಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಜಿ.ಬಿ ವೆಂಕಟೇಶ್‌ರವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮುಂದೆ ಬುದ್ಧಿಯವರು ಪ್ರತಿಪಾದಿಸಿದ ಧರ್ಮದ ಸೆಕ್ಷೆನ್‌ಗಳನ್ನೇ ಬಳಸಿ ಹೋರಾಡುತ್ತಾರೋ ಅಥವಾ ಕಾನೂನು ಸಮರಕ್ಕೆ ತಲೆಬಾಗುತ್ತಾರೋ ಎಂಬುದು ಕುತೂಹಲಕ್ಕೆಡೆಮಾಡಿದೆಯಲ್ಲಾ, ಥೂತ್ತೇರಿ.

*****

ದೆಹಲಿಯಿಂದ ಇಲ್ಲಿಯವರೆಗೆ ಈ ದೇಶದ ವ್ಯವಸ್ಥೆಯೇ ಹಾಳಾಗಿಹೋಗಿದೆ. ಆದರೂ ಬಿಜೆಪಿಗಳು ಮತ್ತೆ ಚುನಾವಣೆಯಲ್ಲಿ ಗೆದ್ದುಬರುವ ಆತ್ಮವಿಶ್ವಾಸಕ್ಕೆ ಕಾರಣವೇನು ಎಂಬುದಕ್ಕೆ ಸಾಕ್ಷಾಧಾರವಾಗಿ ಬೆಂಗಳೂರಲ್ಲಿ ನಡೆದಿರುವ ಮತಪೆಟ್ಟಿಗೆ ಕನ್ನದ ಹಗರಣ ಹೊರಬಿದ್ದಿದೆಯಲ್ಲಾ. ಯಾವುದೇ ಸರ್ಕಾರ ಬರಲಿ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಸರಕಾರ ರಚನೆ ಮಾಡುವ ಸಂಚಿನ ಭರವಸೆಯಿಂದ ಬೀಗುತ್ತಿರುವ ಬಿಜೆಪಿಗಳ ತಮಗೆ ಮತಹಾಕದವರನ್ನು ಮತದಾರರ ಪಟ್ಟಿಯಿಂದಲೇ ಕಿತ್ತು ಬಿಸಾಡುವ ಷಡ್ಯಂತ್ರ ರೂಪಿಸಿದ್ದಾರಂತಲ್ಲಾ. ಇಂತಹ ಯಾವ ಸಂಚೂ ಇಲ್ಲದೆ ಈ ದೇಶ ಇರುವವರೆಗೂ ನಾವು ಅಧಿಕಾರದಲ್ಲಿರುತ್ತೇವೆಂದು ಭಾವಿಸಿ ಆರಾಮವಾಗಿದ್ದ ಕಾಂಗೈಗಳಿಗೆ ಬಿಜೆಪಿ ಸಂಚಿಗೆ ಪ್ರತಿತಂತ್ರವೇ ಹೊಳೆಯದೆ ಪ್ರತಿಭಟನೆಗೆ ಸ್ಪಷ್ಟ ಕಾರಣವೂ ಹೊಳೆಯದೆ ಕಂಗಾಲಾಗಿ ಕೂತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...