Homeಅಂಕಣಗಳುಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

ಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

- Advertisement -
- Advertisement -

ನಮ್ಮ ಜನಪ್ರಿಯ ರಾಜಕಾರಣಿಯಾದ ಎಲ್.ಆರ್ ಶಿವರಾಮೇಗೌಡರು ಮಾದೇಗೌಡರನ್ನು ಕಟುವಾಗಿ ಟೀಕಿಸಿ ಆ ಕಾರಣವಾಗಿ ಕುಮಾರಣ್ಣನವರಿಂದ ನಿಂತ ನಿಲುವಿನಲ್ಲೇ ಪಾರ್ಟಿಯಿಂದ ವಜಾ ಆದ ಘಟನೆ ಈಗ ಹಳೆಯದು. ಆದರೇನು ಶಿವರಾಮೇಗೌಡರು ಇಂತಹ ಪನಿಶ್ಮೆಂಟಿಗೆಲ್ಲಾ ಹೆದರುವವರಲ್ಲ. ಅವರು ಈ ಹಿಂದೆ ಗೆದ್ದಿರುವುದೇ ಪಕ್ಷೇತರರಾಗಿ; ’ಈಗಲೂ ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಲ್ಲುತ್ತೇನೆ. ಚಲುವರಾಯಸ್ವಾಮಿ ಮತ್ತು ಸುರೇಶ್‌ಗೌಡನ ಎದುರು ನನ್ನನ್ನು ಮತದಾರರು ಗೆಲ್ಲಿಸದಿದ್ದರೆ ಕೂಡಲೇ ಶಿರಶ್ಚೇದನ ಮಾಡಿಕೊಳ್ಳುತ್ತೆನೆಂದು’ ಹೆದರಿಸಿದ್ದಾರಲ್ಲಾ! ಸ್ವಾತಂತ್ರ್ಯ ಪಡೆಯುವುದಕ್ಕೇ ಹಲವು ವರ್ಷಗಳ ಮೊದಲು ಈ ದೇಶದಲ್ಲಿ ಸತಿಸಹಗಮನ ನಡಯುತ್ತಿತ್ತು. ಬಂಗಾಳದಲ್ಲಿಯೇ ವರ್ಷಕ್ಕೆ ಎಂಬತ್ತರಿಂದ ನೂರು ಜನ ಮಹಿಳೆಯರನ್ನು ಬೆಂಕಿಗೆ ದೂಡಲಾಗುತ್ತಿತ್ತು. ಜನ ಈ ದೃಶ್ಯವನ್ನು ಪದೇಪದೇ ನೋಡಿ ಮಾನವೀಯತೆಯನ್ನೆ ಕಳದುಕೊಂಡು ಮರುಗಟ್ಟಿಹೋಗಿದ್ದರು. ಆದುದರಿಂದ ಸತಿಸಹಗಮನ ಪದ್ಧತಿಯನ್ನು ನೋಡಲು ಯಾವಾಗಲೂ ಜಮಾಯಿಸುತ್ತಿದ್ದರು. ಅಂತದೇ ಮನಸ್ಥಿತಿಯ ಜನ ಈಗ ಹೆಚ್ಚಾಗಿರುವುದರಿಂದ, ದೇವೇಗೌಡರು ತಾವು ಸೋತಾಗ ಹಾಸನ ಜಿಲ್ಲೆಯನ್ನೇ ಬಹಿಷ್ಕರಿಸಿದಂತೆ, ಶಿವರಾಮೇಗೌಡರು ನಾಗಮಂಗಲದ ಕಡೆ ತಿರುಗಿ ನೋಡುವುದಿಲ್ಲ ಎಂದು ಶಪಥ ಬದಲಾಯಿಸಿಕೊಂಡರೆ ಒಳ್ಳೆಯದಲ್ಲವೆ, ಥೂತ್ತೇರಿ.

*****

ಈ ನೆಲದಲ್ಲಿ ಸದ್ಯಕ್ಕೆ ಎಂತಹ ವ್ಯಕ್ತಿಗಳಿಗೂ ಅಭಿಮಾನಿಗಳಿದ್ದಾರೆ. ಹೀಗಿರುವಾಗ ಗೌರಿಗದ್ದೆಯ ಅವಧೂತನಿಗೆ ಸಾವಿರಾರು ಮಂದಿ ಇರುವುದು ಅಚ್ಚರಿಯಲ್ಲ. ಈ ವಯಸ್ಸಿನಲ್ಲಿ ಇನ್ನೇನಾಗಬೇಕು ಎಂದು ಚಿಂತಿಸಬೇಕಾದ ದೇವೇಗೌಡರಿಂದ ಹಿಡಿದು ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಿ ಬಿಜೆಪಿಗಳ ಇ.ಡೀ ಈಡಿಯಟ್‌ಗಳಿಗೆ ತಕ್ಕ ಉತ್ತರ ಕೊಡಲು ಕಾದಿರುವ ಡಿ.ಕೆ ಶಿವಕುಮಾರ್ ಜೊತೆಗೆ, ಶಿವಕುಮಾರ್ ಅಭಿಮಾನಿಗಳೂ ಕೂಡ ಅವಧೂತನ ಅಭಿಮಾನಿಗಳಾಗಿರುವುದು ಅಚ್ಚರಿಯಲ್ಲ. ಕಳೆದ ಶತಮಾನದಲ್ಲಿ ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದು ಕರೆಕೊಟ್ಟು ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಋಷಿಕವಿ ಕುವೆಂಪುರವರ ಸಂಬಂಧಿಗಳು ನಾವೆಂದು ಕಿರೀಟ ಧರಿಸಿ ಮೆರೆಯುತ್ತಿದ್ದ ಮೂರ್ಖರೆಲ್ಲಾ ಗೌರಿಗದ್ದೆ ಅವಧೂತನ ಪಾದಕ್ಕೆ ಬಿದ್ದು ಕುವೆಂಪು ಹೆಸರಿಗೆ ಮಸಿ ಬಳಿದಿವೆಯಂತಲ್ಲಾ. ಹಾಗೆ ನೋಡಿದರೆ ಕುವೆಂಪುರವರ ವಿಚಾರಧಾರೆಗೆ, ಮಂತ್ರ ಮಾಂಗಲ್ಯದ ಕಲ್ಪನೆಗೆ ಈ ಮಲೆನಾಡಿಗರು ತಿಲಾಂಜಲಿಯಿತ್ತು ಬಹಳ ವರ್ಷಗಳಾಗಿವೆ. ಆದ್ದರಿಂದ ಈ ಮಂದಮತಿಗಳು ನಾವು ಕುವೆಂಪು ಪ್ರದೇಶದವರು ಅವರ ಸಂಬಂಧಿಗಳು ಎಂದು ಹೇಳಿಕೊಳ್ಳುವುದನ್ನ ನಿಲ್ಲಿಸಿದರೆ ಅದೇ ಕುವೆಂಪುರವರಿಗೆ ಕೊಡುವ ಗೌರವ ಎಂದು ಕುವೆಂಪುರವರನ್ನು ನಿಜವಾಗಿ ಅನುಸರಿಸುವವರ ಸಲಹೆಯಾಗಿದೆಯಂತಲ್ಲಾ, ಥೂತ್ತೇರಿ.

*****

ಶ್ರೇಷ್ಠ ಸಂವಿಧಾನ ಪಡೆದಿರುವ ನಮ್ಮ ವ್ಯವಸ್ಥೆಯಲ್ಲಿ ಕಾನೂನಿಗಿಂತ ಧರ್ಮವೇ ದೊಡ್ಡದೆಂದು ಪ್ರತಿಪಾದಿಸಿದ ಚಿತ್ರದುರ್ಗ ಪ್ರದೇಶದ ಜಗದ್ಗುರುವೊಬ್ಬರು ಅದನ್ನೇ ಅಧಿಕೃತಗೊಳಿಸುತ್ತ ಹೊರಟಿದ್ದಾರಲ್ಲಾ. ಅದೂ ಕೂಡ ತಾನೇ ನಡೆಸುತ್ತಿರುವ ಅನಧಿಕೃತ ನ್ಯಾಯಾಲಯದ ಉದಾಹರಣೆಗಳನ್ನ ಉದಾಹರಿಸುತ್ತ! ಅದಷ್ಟೇ ಅಲ್ಲ ಅವರ ಮಾತನ್ನು ಅಲ್ಲಗಳೆದವರನ್ನು ನಿಂದಿಸಲು ಭಕ್ತಾದಿಗಳನ್ನ ಪ್ರಚೋದಿಸುತ್ತ. ಇಲ್ಲಿ ಪೊಲೀಸ್ ಠಾಣೆ, ನ್ಯಾಯಾಲಯ, ವಕೀಲರ ಅಗತ್ಯವೇ ಇಲ್ಲ; ಬದಲಿಗೆ ಧರ್ಮದ ಮಾನದಂಡದಿಂದಲೇ ಜಾದೂ ಮಾಡಬಹುದು. ಇರಲಿ ಗುರುಗಳು ಕಾನೂನಿಗೆ ತಿಲಾಂಜಲಿ ಇಟ್ಟ ಫಲವಾಗಿಯೇ ಏನೋ ತರಳಬಾಳು ಕೇಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರವ ಆರೋಪದ ಮೇಲೆ ಬಿಬಿಎಂಪಿ ಆಯುಕ್ತರ ವಿರುದ್ದ ಲೋಕಾಯುಕ್ತಕ್ಕೆ ದೂರು ಹೋಗಿದೆ. ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ ತರಳಬಾಳು ಮಠವು ಆರ್.ಟಿ ನಗರದಲ್ಲಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಜಿ.ಬಿ ವೆಂಕಟೇಶ್‌ರವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮುಂದೆ ಬುದ್ಧಿಯವರು ಪ್ರತಿಪಾದಿಸಿದ ಧರ್ಮದ ಸೆಕ್ಷೆನ್‌ಗಳನ್ನೇ ಬಳಸಿ ಹೋರಾಡುತ್ತಾರೋ ಅಥವಾ ಕಾನೂನು ಸಮರಕ್ಕೆ ತಲೆಬಾಗುತ್ತಾರೋ ಎಂಬುದು ಕುತೂಹಲಕ್ಕೆಡೆಮಾಡಿದೆಯಲ್ಲಾ, ಥೂತ್ತೇರಿ.

*****

ದೆಹಲಿಯಿಂದ ಇಲ್ಲಿಯವರೆಗೆ ಈ ದೇಶದ ವ್ಯವಸ್ಥೆಯೇ ಹಾಳಾಗಿಹೋಗಿದೆ. ಆದರೂ ಬಿಜೆಪಿಗಳು ಮತ್ತೆ ಚುನಾವಣೆಯಲ್ಲಿ ಗೆದ್ದುಬರುವ ಆತ್ಮವಿಶ್ವಾಸಕ್ಕೆ ಕಾರಣವೇನು ಎಂಬುದಕ್ಕೆ ಸಾಕ್ಷಾಧಾರವಾಗಿ ಬೆಂಗಳೂರಲ್ಲಿ ನಡೆದಿರುವ ಮತಪೆಟ್ಟಿಗೆ ಕನ್ನದ ಹಗರಣ ಹೊರಬಿದ್ದಿದೆಯಲ್ಲಾ. ಯಾವುದೇ ಸರ್ಕಾರ ಬರಲಿ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಸರಕಾರ ರಚನೆ ಮಾಡುವ ಸಂಚಿನ ಭರವಸೆಯಿಂದ ಬೀಗುತ್ತಿರುವ ಬಿಜೆಪಿಗಳ ತಮಗೆ ಮತಹಾಕದವರನ್ನು ಮತದಾರರ ಪಟ್ಟಿಯಿಂದಲೇ ಕಿತ್ತು ಬಿಸಾಡುವ ಷಡ್ಯಂತ್ರ ರೂಪಿಸಿದ್ದಾರಂತಲ್ಲಾ. ಇಂತಹ ಯಾವ ಸಂಚೂ ಇಲ್ಲದೆ ಈ ದೇಶ ಇರುವವರೆಗೂ ನಾವು ಅಧಿಕಾರದಲ್ಲಿರುತ್ತೇವೆಂದು ಭಾವಿಸಿ ಆರಾಮವಾಗಿದ್ದ ಕಾಂಗೈಗಳಿಗೆ ಬಿಜೆಪಿ ಸಂಚಿಗೆ ಪ್ರತಿತಂತ್ರವೇ ಹೊಳೆಯದೆ ಪ್ರತಿಭಟನೆಗೆ ಸ್ಪಷ್ಟ ಕಾರಣವೂ ಹೊಳೆಯದೆ ಕಂಗಾಲಾಗಿ ಕೂತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...